ತಂತ್ರಜ್ಞಾನ

10ನೇ ತರಗತಿ ಬಾಲಕನ 5 ಕೋಟಿ ಒಪ್ಪಂದ !ಈ ಲೇಖನಿ ಓದಿ ಶಾಕ್ ಆಗ್ತೀರಾ…

8693

ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.

ಹರ್ಷವರ್ಧನ್ 14 ವರ್ಷದ  ಬಾಲಕ, ಗುಜರಾತ್’ನಲ್ಲಿ ನಡೆಯುತ್ತಿರುವ ವೈಬ್ರಂಟ್‌ ಜಾಗತಿಕ ಶೃಂಗಸಭೆಯಲ್ಲಿ ತಾನು ಡಿಸೈನ್ ಮಾಡಿದ ಡ್ರೋನ್ ಅನ್ನು ಪ್ರದರ್ಶನಕ್ಕೆ ತಂದಿದ್ದನು. ಈ ಡ್ರೋನ್  ಕಾರ್ಯವನ್ನು ಗಮನಿಸಿದ ಗುಜರಾತ್ ಸರ್ಕಾರ ತಮಗೆ ಅಂತಹ ಡ್ರೋನ್ ಬೇಕೆಂದು ಆತನ ಜೊತೆ ಬರೊಬ್ಬರಿ 5 ಕೋಟಿ ರೂಪಾಯಿಗಳ ಒಪ್ಪಂದ ಮಾಡಿಕೊಂಡಿದೆ.

ಈ ಡ್ರೋನ್ ಮಾಡುವ ಕೆಲಸ :- ಯುದ್ಧ ಪ್ರದೇಶಗಳಲ್ಲಿ, ಗಡಿ ಪ್ರದೇಶಗಳಲ್ಲಿ ಅಡಗಿಸಿ ಇಟ್ಟಿರುವ ಮದ್ದುಗುಂಡುಗಳನ್ನು ಗುರ್ತಿಸಿ, ಅವುಗಳನ್ನು ನಿಷ್ಕ್ರಿಯಗೊಳಿಸಲು ಉಪಯೋಗಿಸುವ ಮೂರು ವಿಧದ ಡ್ರೋನ್’ಗಳನ್ನು ಈ ಪುಟ್ಟ ಪೋರ ತಯಾರಿಸಿದ್ದಾನೆ.

ಈ ಆಲೋಚನೆ ಬಂದಿದ್ದು ಹೇಗೆ?

ಕಳೆದ ಒಂದು ವರ್ಷದಿಂದ ತಾನು ಇಂತಹ ಡ್ತೋನ್’ಗಳನ್ನು ನಿರ್ಮಿಸುತ್ತಿದ್ದು, ಟಿವಿ ನೋಡುವಾಗ ತುಂಬಾ ಜನ ಸೈನಿಕರು ಸ್ಪೋಟಕಗಳಿಂದ ಸಾವನ್ನಪ್ಪುವುದು, ತೀವ್ರವಾಗಿ ಗಾಯಗೊಳ್ಳುವುದನ್ನು ನೋಡಿ ಈ ಆಲೋಚನೆ ಬಂದಿರುವುದಾಗಿ ತಿಳಿಸಿದ್ದಾನೆ. ಈ ಮೂರು ವಿಧದ ಡ್ರೋನ್’ಗಳನ್ನು ತಯಾರಿಸಲು 5 ಲಕ್ಷ ರೂಪಾಯಿ ಖರ್ಚು ಮಾಡಿರುವುದಾಗಿ ತಿಳಿಸಿದ್ದಾನೆ.

ಡ್ರೋನ್’ನಲ್ಲಿ ಏನೇನಿದೆ :-

ಈ ಡ್ರೋನ್’ನಲ್ಲಿ ಇನ್‌ಫ್ರಾರೆಡ್, ಆರ್’ಜಿಬಿ ಸೆನ್ಸರ್ ಇರುತ್ತದೆ ಎಂದೂ, ಜೊತೆಗೆ ಥರ್ಮಲ್ ಮೀಟರ್, 21 ಮೇಗಾಪಿಕ್ಸಲ್ ಕ್ಯಾಮರ, ಮೆಕಾನಿಕಲ್ ಷಟ್ಟರ್ ಇರುತ್ತದೆ ಎಂದು ಹರ್ಷವರ್ಧನ್ ತಿಳಿಸಿದ್ದಾನೆ.

ಡ್ರೋನ್ ಕಾರ್ಯ ಹೇಗಿರುತ್ತೆ :-

ಇವುಗಳ ಸಹಾಯದಿಂದ ಹೈ ರಿಜಲ್ಯೂಷನ್ ಫೋಟೋಗಳನ್ನು ತೆಗೆದು ಕಳುಹಿಸುತ್ತದೆ ಎಂದು ವಿವರಿಸಿದ. ಭೂಮಿಯಿಂದ 2 ಅಡಿ ಗುರುತನ್ನು, 8 ಚದರ ಮೀಟರ್ ಪರಿಧಿಯಲ್ಲಿರುವ ಎಲ್ಲಾ ಜಾಗವನ್ನು ಈ ಡ್ರೋನ್ ಕವರ್ ಮಾಡುತ್ತದೆ. ಆ ಜಾಗದಲ್ಲಿ ಎಲ್ಲಿಯಾದರೂ ಸ್ಪೋಟಕಗಳು ಕಂಡು ಬಂದರೆ ತಕ್ಷಣ ಬೇಸ್ ಸ್ಟೇಷನ್’ಗೆ ಕಳುಹಿಸುತ್ತದೆ. ಇದರಲ್ಲಿ 50 ಗ್ರಾಂಗಳು ತೂಕದ ಬಾಂಬ್ ಒಂದು ಇದ್ದು, ಅದು ಸ್ಫೋಟಕಗಳನ್ನು ಧ್ವಂಸ ಮಾಡುತ್ತದೆ. ತನ್ನ ಕಂಪನಿ ಏರೋಬಾಟಿಕ್ಸ್ ಹೆಸರಿನಲ್ಲಿ ಈ ಡ್ರೋನ್ ಅನ್ನು ಈಗಾಗಲೇ ಪೇಟೆಂಟ್ ಸಹ ರಿಜಿಸ್ಟ್ರಾರ್ ಮಾಡಿಸಿದ್ದಾನೆ ಈ ಬಾಲಕ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಒಂದೆ ಕೀ ಬಳಸಿ ಕದ್ದ ಪೋರ……!

    ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್‌ಗಳ ಮೆಕ್ಯಾನಿಕ್‌ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್‌ನ ನಿವಾಸಿ ನವೀನ್‌ ಅಲಿಯಾಸ್‌ ಡಿಯೋ ನವೀನ್‌ (19) ಸಿಕ್ಕಿ ಬಿದ್ದವ. ಈತನ ಸಹಚರ…

  • ಜ್ಯೋತಿಷ್ಯ

    ಸ್ವಾಮಿ ಅಯ್ಯಪ್ಪನನ್ನು ಈ ದಿನ ಭಕ್ತಿಯಿಂದ ಸ್ಮರಿಸುತ್ತಾ, ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…

  • ಉಪಯುಕ್ತ ಮಾಹಿತಿ

    ರೆಫ್ರಿಜರೇಟರ್, ಏರ್‍ಕಂಡಿಷನರ್,ಫ್ರಿಜ್‍ನಂಥ ಗೃಹೋಪಯೋಗಿ ಸಾಧನಗಳು ಕಡಿಮೆ ಬೆಲೆಯಲ್ಲಿ ದೊರಿಯಳಿವೆ..!ತಿಳಿಯಲು ಇದನ್ನು ಓದಿ..

    ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್‍ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್‍ಮೆಷಿನ್, ಫ್ರಿಜ್‍ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ.

  • ಸುದ್ದಿ

    ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತಾಡಿದ್ದೇಕೆ.! ಶ್ರುತಿ ತಾಯಿ ಸಭೆಯಲ್ಲಿದ್ದ ಮಹಿಳೆಯರಿಗೆಳಿದ ಮಾತೇನು ಗೊತ್ತಾ?

    ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್‌ನಲ್ಲಿ ಫೇಸ್‌ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…

  • ಸುದ್ದಿ

    ಟೀ ಕುಡಿಯಲು ದುಡ್ಡಿಲ್ಲದೆ ಪರದಾಡ್ತಿದ್ದ ನಟಿ ಮನೆಯಲ್ಲಿ ದೇವರ ಫೋಟೊ ಬದಲು ಸಲ್ಮಾನ್ ಫೋಟೋ..!ಯಾಕೆ ಗೊತ್ತಾ?

    ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್‌ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….

  • ಸುದ್ದಿ

    ಇಂದು ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ..ಎಲ್ಲಿ ಗೊತ್ತ ?

    ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…