ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.

ಪ್ರತಿಭೆಗೆ ವಯಸ್ಸಿನ ಮಿತಿಯಿಲ್ಲಾ ಎನ್ನುದಕ್ಕೆ ಭಟ್ಕಳ ತಾಲೂಕಿನ ತೆಂಗಿನಗುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪುನೀತ್ ವೆಂಕಟೇಶ ಗೊಂಡ ಉದಾಹರಣೆಯಾಗಿದ್ದಾನೆ. ಹೌದು, 12 ರಿಂದ 14ರ ಆಸು ಪಾಸಿನ ಪೋರ ಈ ಪುನೀತ್ ಮಾಡಿದ ಆವಿಷ್ಕಾರವನ್ನು ನೀವು ಕೇಳಿದರೇ ಶಾಕ್ ಆಗ್ತೀರಾ.

ಭಟ್ಕಳ ತಾಲೂಕಿನ ತೆಂಗಿನಗುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇನ್ನು 6ನೇ ಕ್ಲಾಸ್ ಓದುತ್ತಿರುವ ಪುನೀತ್ ಹಾಗೂ ಆತನ ಸಹಪಾಠಿಗಳು ಸೇರಿ ನೀರಿನಲ್ಲಿ ಚಲಿಸುವ ಬೈಸಿಕಲ್ನನ್ನು ಆವಿಷ್ಕಾರ ಮಾಡಿ ಅದೇ ಸೈಕಲ್ ನಿಂದ ಯಶಸ್ವಿಯಾಗಿ ಇಲ್ಲಿನ ವೆಂಕಟಾಪುರ ನದಿ ದಾಟಿ ಎಲ್ಲರಿಗೆ ಉಬ್ಬೆರುವಂತೆ ಮಾಡಿದ್ದಾನೆ.

ಈ ಆವಿಷ್ಕಾರವನ್ನು ಖ್ಯಾತ ವಿಜ್ಞಾನಿ ಆರ್ಕಿಮಿಡೀಸ್ ತತ್ವದ ತೇಲುವಿಕೆಯ ಅನ್ವಯ ಸೈಕಲ್ ಮತ್ತು ನಾಲ್ಕು ಕ್ಯಾನುಗಳನ್ನು ಬಳಸಿ ಅತ್ಯಂತ ಕಡಿಮೆ ಹಣದಲ್ಲಿ ನೀರಿನ ಮೇಲೆ ಚಲಿಸುವ ಸೈಕಲ್ ತಯಾರಿಸಲಾಗಿದೆ.
ಸ್ವಚ್ಛ ಭಾರತ ಅಭಿಯಾನದ ಬೆಂಬಲವಾಗಿ ಈ ಆವಿಷ್ಕಾರ ರೂಪಿಸಿದ್ದು, ಮುಂಭಾಗದಲ್ಲಿ ಜಾಳಿಗಳನ್ನು ಜೋಡಿಸಿ, ಕಸ ಕಡ್ಡಿಗಳನ್ನು ತೀರದಲ್ಲಿ ಸಂಗ್ರಹಿಸಿ ತೆಗೆಯಬಹುದಾಗಿದೆ. ಸೈಕಲನ್ನು ಸ್ವಲ್ಪ ಮಾತ್ರ ಬದಲಾವಣೆ ಮಾಡಿಕೊಂಡು ಕಬ್ಬಿಣದ ಪಟ್ಟಿಯ ಮೂಲಕ ನಾಲ್ಕು ಕಡೆಗಳಲ್ಲಿ ನೀರಿನ ಕ್ಯಾನ್ ಅಳವಡಿಸಲಾಗಿದೆ.
ಕ್ಯಾನ್ ಆಳಡಡಿಕೆಯ ಮುನ್ನ ಗಾಳಿಯನ್ನು ತುಂಬಿ ಸೀಲ್ ಮಾಡಲಾಗಿದೆ ಮಾತ್ರವಲ್ಲದೆ ಕಬ್ಬಿಣದ ಪಟ್ಟಿಗೆ ಅದನ್ನು ರಬ್ಬರಿನಿಂದ ಬಿಗಿಯಲಾಗಿದೆ. ಮುಂದಿನ ಚಕ್ರವನ್ನು ಸ್ಟೇರಿಂಗ್ ಆಗಿ ಬಳಸುವಂತೆ ಸೈಕಲ್ ಚೈನ್ ಬಳಸಲಾಗಿದ್ದು, ಯಾವ ದಿಕ್ಕಿನಲ್ಲಾದರೂ ಸೈಕಲ್ ತಿರುಗಿಸುವ ವ್ಯವಸ್ಥೆ ಮಾಡಲಾಗಿದೆ.
ಈ ಆವಿಷ್ಕಾರದ ಹಿಂದಿನ ಮುಖ್ಯ ಉದ್ದೇಶವೆಂದರೆ ನೀರಿನಲ್ಲಿ ತೇಲುವ ಎಲ್ಲ ಕಸಗಳನ್ನು ಜಾಳಿ ಸಹಾಯದಿಂದ ಸಂಗ್ರಹ ಮಾಡಿ ದಡಕ್ಕೆ ಹಾಕಬಹುದು ಎನ್ನುವ ಸಾಧನೆಯನ್ನು ಪುನೀತ್ ಮಾಡಿದ್ದಾನೆ. ಚಿಕ್ಕ ವಯಸ್ಸಿನಲ್ಲೇ ಸಾಧನೆ ಮಾಡಿದ ಪುನೀತ್ ತನ್ನ ಸಾಧನೆಗೆ ಸಹಕಾರ ನೀಡಿದ್ದು ಸಹಪಾಠಿಗಳು ಹಾಗೂ ಶಿಕ್ಷಕರು ಎಂದು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾನೆ.
ಈ ಆವಿಷ್ಕಾರದ ಹಿಂದೆ ಇರುವ ಮುಖ್ಯ ಕಾರಣವೆಂದರೆ ಶಾಲೆಯ ಶಿಕ್ಷಕ ಅನಂತ ಮೋಗೇರ ಕೊಟ್ಟ ಪ್ರೇರಣೆ , ಈ ಪ್ರೇರಣೆಯಿಂದಲೇ ಸಾಧನೆ ಮಾಡಿದ್ದೇನೆ ಮತ್ತು ಸ್ವಚ್ಛ ಭಾರತ್ ಸಂದೇಶವನ್ನು ಸಾರಲು ಈ ಸೈಕಲ್ ಸಹಕಾರಿಯಾಗಲಿದೆ ಎಂಬುದು ಪುನೀತ್ ಮನದಾಳದ ಮಾತು.

ವಿದ್ಯಾರ್ಥಿ ಪುನೀತ್ ಇತ್ತೀಚೆಗಷ್ಟೇ ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಇನಸ್ಪೈರ್ಡ್ ಅವಾರ್ಡ್ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅತ್ಯುತ್ತಮವಾಗಿ ಭಾಗವಹಿಸಿ ಇದೀಗ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈ ಆವಿಷ್ಕಾರದಿಂದ ಆಯ್ಕೆಗೆ ಕಾರಣವು ಹೌದು.
ಡಿಸೆಂಬರ್. 7ರಂದು ದೆಹಲಿಯಲ್ಲಿ ಸ್ಪರ್ಧೆ ರಾಷ್ಟ್ರಮಟ್ಟದ ಸ್ಪರ್ಧೆ ಡಿಸೆಂಬರ್. 7ರಂದು ದೆಹಲಿಯಲ್ಲಿ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಪುನೀತ್ ಸೈಕಲ್ ಹೊಡೆಯುವುದರ ಮೂಲಕ ಸ್ವಚ್ಚ್ ಭಾರತ್ ಸಂದೇಶವನ್ನು ಸಾರಲಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ್ಯಾಪರ್,…
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…