ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.
ಪ್ರತಿಭೆಗೆ ವಯಸ್ಸಿನ ಮಿತಿಯಿಲ್ಲಾ ಎನ್ನುದಕ್ಕೆ ಭಟ್ಕಳ ತಾಲೂಕಿನ ತೆಂಗಿನಗುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪುನೀತ್ ವೆಂಕಟೇಶ ಗೊಂಡ ಉದಾಹರಣೆಯಾಗಿದ್ದಾನೆ. ಹೌದು, 12 ರಿಂದ 14ರ ಆಸು ಪಾಸಿನ ಪೋರ ಈ ಪುನೀತ್ ಮಾಡಿದ ಆವಿಷ್ಕಾರವನ್ನು ನೀವು ಕೇಳಿದರೇ ಶಾಕ್ ಆಗ್ತೀರಾ.
ಭಟ್ಕಳ ತಾಲೂಕಿನ ತೆಂಗಿನಗುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇನ್ನು 6ನೇ ಕ್ಲಾಸ್ ಓದುತ್ತಿರುವ ಪುನೀತ್ ಹಾಗೂ ಆತನ ಸಹಪಾಠಿಗಳು ಸೇರಿ ನೀರಿನಲ್ಲಿ ಚಲಿಸುವ ಬೈಸಿಕಲ್ನನ್ನು ಆವಿಷ್ಕಾರ ಮಾಡಿ ಅದೇ ಸೈಕಲ್ ನಿಂದ ಯಶಸ್ವಿಯಾಗಿ ಇಲ್ಲಿನ ವೆಂಕಟಾಪುರ ನದಿ ದಾಟಿ ಎಲ್ಲರಿಗೆ ಉಬ್ಬೆರುವಂತೆ ಮಾಡಿದ್ದಾನೆ.
ಈ ಆವಿಷ್ಕಾರವನ್ನು ಖ್ಯಾತ ವಿಜ್ಞಾನಿ ಆರ್ಕಿಮಿಡೀಸ್ ತತ್ವದ ತೇಲುವಿಕೆಯ ಅನ್ವಯ ಸೈಕಲ್ ಮತ್ತು ನಾಲ್ಕು ಕ್ಯಾನುಗಳನ್ನು ಬಳಸಿ ಅತ್ಯಂತ ಕಡಿಮೆ ಹಣದಲ್ಲಿ ನೀರಿನ ಮೇಲೆ ಚಲಿಸುವ ಸೈಕಲ್ ತಯಾರಿಸಲಾಗಿದೆ.
ಸ್ವಚ್ಛ ಭಾರತ ಅಭಿಯಾನದ ಬೆಂಬಲವಾಗಿ ಈ ಆವಿಷ್ಕಾರ ರೂಪಿಸಿದ್ದು, ಮುಂಭಾಗದಲ್ಲಿ ಜಾಳಿಗಳನ್ನು ಜೋಡಿಸಿ, ಕಸ ಕಡ್ಡಿಗಳನ್ನು ತೀರದಲ್ಲಿ ಸಂಗ್ರಹಿಸಿ ತೆಗೆಯಬಹುದಾಗಿದೆ. ಸೈಕಲನ್ನು ಸ್ವಲ್ಪ ಮಾತ್ರ ಬದಲಾವಣೆ ಮಾಡಿಕೊಂಡು ಕಬ್ಬಿಣದ ಪಟ್ಟಿಯ ಮೂಲಕ ನಾಲ್ಕು ಕಡೆಗಳಲ್ಲಿ ನೀರಿನ ಕ್ಯಾನ್ ಅಳವಡಿಸಲಾಗಿದೆ.
ಕ್ಯಾನ್ ಆಳಡಡಿಕೆಯ ಮುನ್ನ ಗಾಳಿಯನ್ನು ತುಂಬಿ ಸೀಲ್ ಮಾಡಲಾಗಿದೆ ಮಾತ್ರವಲ್ಲದೆ ಕಬ್ಬಿಣದ ಪಟ್ಟಿಗೆ ಅದನ್ನು ರಬ್ಬರಿನಿಂದ ಬಿಗಿಯಲಾಗಿದೆ. ಮುಂದಿನ ಚಕ್ರವನ್ನು ಸ್ಟೇರಿಂಗ್ ಆಗಿ ಬಳಸುವಂತೆ ಸೈಕಲ್ ಚೈನ್ ಬಳಸಲಾಗಿದ್ದು, ಯಾವ ದಿಕ್ಕಿನಲ್ಲಾದರೂ ಸೈಕಲ್ ತಿರುಗಿಸುವ ವ್ಯವಸ್ಥೆ ಮಾಡಲಾಗಿದೆ.
ಈ ಆವಿಷ್ಕಾರದ ಹಿಂದಿನ ಮುಖ್ಯ ಉದ್ದೇಶವೆಂದರೆ ನೀರಿನಲ್ಲಿ ತೇಲುವ ಎಲ್ಲ ಕಸಗಳನ್ನು ಜಾಳಿ ಸಹಾಯದಿಂದ ಸಂಗ್ರಹ ಮಾಡಿ ದಡಕ್ಕೆ ಹಾಕಬಹುದು ಎನ್ನುವ ಸಾಧನೆಯನ್ನು ಪುನೀತ್ ಮಾಡಿದ್ದಾನೆ. ಚಿಕ್ಕ ವಯಸ್ಸಿನಲ್ಲೇ ಸಾಧನೆ ಮಾಡಿದ ಪುನೀತ್ ತನ್ನ ಸಾಧನೆಗೆ ಸಹಕಾರ ನೀಡಿದ್ದು ಸಹಪಾಠಿಗಳು ಹಾಗೂ ಶಿಕ್ಷಕರು ಎಂದು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾನೆ.
ಈ ಆವಿಷ್ಕಾರದ ಹಿಂದೆ ಇರುವ ಮುಖ್ಯ ಕಾರಣವೆಂದರೆ ಶಾಲೆಯ ಶಿಕ್ಷಕ ಅನಂತ ಮೋಗೇರ ಕೊಟ್ಟ ಪ್ರೇರಣೆ , ಈ ಪ್ರೇರಣೆಯಿಂದಲೇ ಸಾಧನೆ ಮಾಡಿದ್ದೇನೆ ಮತ್ತು ಸ್ವಚ್ಛ ಭಾರತ್ ಸಂದೇಶವನ್ನು ಸಾರಲು ಈ ಸೈಕಲ್ ಸಹಕಾರಿಯಾಗಲಿದೆ ಎಂಬುದು ಪುನೀತ್ ಮನದಾಳದ ಮಾತು.
ವಿದ್ಯಾರ್ಥಿ ಪುನೀತ್ ಇತ್ತೀಚೆಗಷ್ಟೇ ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಇನಸ್ಪೈರ್ಡ್ ಅವಾರ್ಡ್ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅತ್ಯುತ್ತಮವಾಗಿ ಭಾಗವಹಿಸಿ ಇದೀಗ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈ ಆವಿಷ್ಕಾರದಿಂದ ಆಯ್ಕೆಗೆ ಕಾರಣವು ಹೌದು.
ಡಿಸೆಂಬರ್. 7ರಂದು ದೆಹಲಿಯಲ್ಲಿ ಸ್ಪರ್ಧೆ ರಾಷ್ಟ್ರಮಟ್ಟದ ಸ್ಪರ್ಧೆ ಡಿಸೆಂಬರ್. 7ರಂದು ದೆಹಲಿಯಲ್ಲಿ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಪುನೀತ್ ಸೈಕಲ್ ಹೊಡೆಯುವುದರ ಮೂಲಕ ಸ್ವಚ್ಚ್ ಭಾರತ್ ಸಂದೇಶವನ್ನು ಸಾರಲಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಚ್ಚ ವೆಂಕಟ್…..ತಮ್ಮ ಯಡವಟ್ಟುಗಳಿಂದಲೇ ಫೇಮಸ್ ಆದವರು. ಜೊತೆಗೆ ಬಿಗ್ ಬಾಸ್ಗೆ ಹೋಗಿ ಮತ್ತಷ್ಟು ಹೆಸರು ಮಾಡಿದ್ರು. ಕಾವೇರಿ ನೀರು, ಕನ್ನಡ ಭಾಷೆ ಬಗ್ಗೆ ಹೇಳುತ್ತಾ, ಒಂದೆರಡು ಚಿತ್ರಗಳನ್ನೂ ಮಾಡಿ, ಮಾತ್ ಮಾತಿಗೂ ನನ್ನ ಎಕ್ಕಡ ಎಂದು ಡೈಲಾಗ್ ಡೆಲವರಿ ಮಾಡುತ್ತಿದ್ದವರು ಹುಚ್ಚಾ ವೆಂಕಟ್. ಒಂದಿಲ್ಲೊಂದು ಗಲಾಟೆ ಮಾಡಿಕೊಳ್ತಾ, ಸುದ್ದಿಯಲ್ಲಿದ್ದ ಹುಚ್ಚ ವೆಂಕಟ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಚೆನ್ನೈನ ಬೀದಿಗಳಲ್ಲಿ ಹುಚ್ಚ ವೆಂಕಟ್ ಬರಿಗಾಲಲ್ಲಿ ಓಡಾಡ್ತಿರೋ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅವರ ಕಾಲಲ್ಲಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್ಗೆ…
ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.
ಮಿಶನ್ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್ಗಳು ನಿರ್ಧರಿಸಬಹುದಾಗಿದೆ.