ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.

ಪ್ರತಿಭೆಗೆ ವಯಸ್ಸಿನ ಮಿತಿಯಿಲ್ಲಾ ಎನ್ನುದಕ್ಕೆ ಭಟ್ಕಳ ತಾಲೂಕಿನ ತೆಂಗಿನಗುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪುನೀತ್ ವೆಂಕಟೇಶ ಗೊಂಡ ಉದಾಹರಣೆಯಾಗಿದ್ದಾನೆ. ಹೌದು, 12 ರಿಂದ 14ರ ಆಸು ಪಾಸಿನ ಪೋರ ಈ ಪುನೀತ್ ಮಾಡಿದ ಆವಿಷ್ಕಾರವನ್ನು ನೀವು ಕೇಳಿದರೇ ಶಾಕ್ ಆಗ್ತೀರಾ.

ಭಟ್ಕಳ ತಾಲೂಕಿನ ತೆಂಗಿನಗುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇನ್ನು 6ನೇ ಕ್ಲಾಸ್ ಓದುತ್ತಿರುವ ಪುನೀತ್ ಹಾಗೂ ಆತನ ಸಹಪಾಠಿಗಳು ಸೇರಿ ನೀರಿನಲ್ಲಿ ಚಲಿಸುವ ಬೈಸಿಕಲ್ನನ್ನು ಆವಿಷ್ಕಾರ ಮಾಡಿ ಅದೇ ಸೈಕಲ್ ನಿಂದ ಯಶಸ್ವಿಯಾಗಿ ಇಲ್ಲಿನ ವೆಂಕಟಾಪುರ ನದಿ ದಾಟಿ ಎಲ್ಲರಿಗೆ ಉಬ್ಬೆರುವಂತೆ ಮಾಡಿದ್ದಾನೆ.

ಈ ಆವಿಷ್ಕಾರವನ್ನು ಖ್ಯಾತ ವಿಜ್ಞಾನಿ ಆರ್ಕಿಮಿಡೀಸ್ ತತ್ವದ ತೇಲುವಿಕೆಯ ಅನ್ವಯ ಸೈಕಲ್ ಮತ್ತು ನಾಲ್ಕು ಕ್ಯಾನುಗಳನ್ನು ಬಳಸಿ ಅತ್ಯಂತ ಕಡಿಮೆ ಹಣದಲ್ಲಿ ನೀರಿನ ಮೇಲೆ ಚಲಿಸುವ ಸೈಕಲ್ ತಯಾರಿಸಲಾಗಿದೆ.
ಸ್ವಚ್ಛ ಭಾರತ ಅಭಿಯಾನದ ಬೆಂಬಲವಾಗಿ ಈ ಆವಿಷ್ಕಾರ ರೂಪಿಸಿದ್ದು, ಮುಂಭಾಗದಲ್ಲಿ ಜಾಳಿಗಳನ್ನು ಜೋಡಿಸಿ, ಕಸ ಕಡ್ಡಿಗಳನ್ನು ತೀರದಲ್ಲಿ ಸಂಗ್ರಹಿಸಿ ತೆಗೆಯಬಹುದಾಗಿದೆ. ಸೈಕಲನ್ನು ಸ್ವಲ್ಪ ಮಾತ್ರ ಬದಲಾವಣೆ ಮಾಡಿಕೊಂಡು ಕಬ್ಬಿಣದ ಪಟ್ಟಿಯ ಮೂಲಕ ನಾಲ್ಕು ಕಡೆಗಳಲ್ಲಿ ನೀರಿನ ಕ್ಯಾನ್ ಅಳವಡಿಸಲಾಗಿದೆ.
ಕ್ಯಾನ್ ಆಳಡಡಿಕೆಯ ಮುನ್ನ ಗಾಳಿಯನ್ನು ತುಂಬಿ ಸೀಲ್ ಮಾಡಲಾಗಿದೆ ಮಾತ್ರವಲ್ಲದೆ ಕಬ್ಬಿಣದ ಪಟ್ಟಿಗೆ ಅದನ್ನು ರಬ್ಬರಿನಿಂದ ಬಿಗಿಯಲಾಗಿದೆ. ಮುಂದಿನ ಚಕ್ರವನ್ನು ಸ್ಟೇರಿಂಗ್ ಆಗಿ ಬಳಸುವಂತೆ ಸೈಕಲ್ ಚೈನ್ ಬಳಸಲಾಗಿದ್ದು, ಯಾವ ದಿಕ್ಕಿನಲ್ಲಾದರೂ ಸೈಕಲ್ ತಿರುಗಿಸುವ ವ್ಯವಸ್ಥೆ ಮಾಡಲಾಗಿದೆ.
ಈ ಆವಿಷ್ಕಾರದ ಹಿಂದಿನ ಮುಖ್ಯ ಉದ್ದೇಶವೆಂದರೆ ನೀರಿನಲ್ಲಿ ತೇಲುವ ಎಲ್ಲ ಕಸಗಳನ್ನು ಜಾಳಿ ಸಹಾಯದಿಂದ ಸಂಗ್ರಹ ಮಾಡಿ ದಡಕ್ಕೆ ಹಾಕಬಹುದು ಎನ್ನುವ ಸಾಧನೆಯನ್ನು ಪುನೀತ್ ಮಾಡಿದ್ದಾನೆ. ಚಿಕ್ಕ ವಯಸ್ಸಿನಲ್ಲೇ ಸಾಧನೆ ಮಾಡಿದ ಪುನೀತ್ ತನ್ನ ಸಾಧನೆಗೆ ಸಹಕಾರ ನೀಡಿದ್ದು ಸಹಪಾಠಿಗಳು ಹಾಗೂ ಶಿಕ್ಷಕರು ಎಂದು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾನೆ.
ಈ ಆವಿಷ್ಕಾರದ ಹಿಂದೆ ಇರುವ ಮುಖ್ಯ ಕಾರಣವೆಂದರೆ ಶಾಲೆಯ ಶಿಕ್ಷಕ ಅನಂತ ಮೋಗೇರ ಕೊಟ್ಟ ಪ್ರೇರಣೆ , ಈ ಪ್ರೇರಣೆಯಿಂದಲೇ ಸಾಧನೆ ಮಾಡಿದ್ದೇನೆ ಮತ್ತು ಸ್ವಚ್ಛ ಭಾರತ್ ಸಂದೇಶವನ್ನು ಸಾರಲು ಈ ಸೈಕಲ್ ಸಹಕಾರಿಯಾಗಲಿದೆ ಎಂಬುದು ಪುನೀತ್ ಮನದಾಳದ ಮಾತು.

ವಿದ್ಯಾರ್ಥಿ ಪುನೀತ್ ಇತ್ತೀಚೆಗಷ್ಟೇ ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಇನಸ್ಪೈರ್ಡ್ ಅವಾರ್ಡ್ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅತ್ಯುತ್ತಮವಾಗಿ ಭಾಗವಹಿಸಿ ಇದೀಗ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈ ಆವಿಷ್ಕಾರದಿಂದ ಆಯ್ಕೆಗೆ ಕಾರಣವು ಹೌದು.
ಡಿಸೆಂಬರ್. 7ರಂದು ದೆಹಲಿಯಲ್ಲಿ ಸ್ಪರ್ಧೆ ರಾಷ್ಟ್ರಮಟ್ಟದ ಸ್ಪರ್ಧೆ ಡಿಸೆಂಬರ್. 7ರಂದು ದೆಹಲಿಯಲ್ಲಿ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಪುನೀತ್ ಸೈಕಲ್ ಹೊಡೆಯುವುದರ ಮೂಲಕ ಸ್ವಚ್ಚ್ ಭಾರತ್ ಸಂದೇಶವನ್ನು ಸಾರಲಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…
ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ ಘೋಷ ವಾಕ್ಯಗಳಿದ್ದ 250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ ಸುಲಲಿತ ಸಂಚಾರ ಮತ್ತು ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…
ಇವತ್ತೂ ಕೂಡಾ ಮಂಡ್ಯದಲ್ಲಿ ದರ್ಶನ್ ಪ್ರಚಾರದ ಅಬ್ಬರ ಜೋರಾಗಿದೆ. ಪ್ರಚಾರದ ವೇಳೆ ಮಾತನಾಡಿದ ಡಿ ಬಾಸ್, ದರ್ಶನ್ ಅಂತವರು ಯಾರೇ ಬಂದ್ರೂ, ಇನ್ನೂ ನೂರು ವರ್ಷ ನಾಲ್ಕು ಹೆಸರುಗಳನ್ನು ಅಳಿಸಲಾಗುವುದಿಲ್ಲ ಅಂತಾ ಹೇಳಿದ್ದಾರೆ. ನಟಸಾರ್ವಭೌಮ ರಾಜ್ ಕುಮಾರ್, ಶಂಕರ್ ನಾಗ್, ಅಂಬರೀಷ್, ವಿಷ್ಣುವರ್ಧನ್ ಅವರ ಹೆಸರುಗಳನ್ನು ಅಭಿಮಾನಿಗಳ ಮನಸ್ಸಿನಿಂದ ಅಳಿಸಲು ಸಾಧ್ಯವಿಲ್ಲ ಎಂದ್ರು. ಈ ಹಿಂದೆ ಮಂಡ್ಯದಲ್ಲಿ ಅಪ್ಪಾಜಿಗೆ ಅವಕಾಶ ಕೊಟ್ಟಿದ್ದೀರಿ, ಇನ್ಮುಂದೆ ಅಮ್ಮನಿಗೂ ಅವಕಾಶ ಕೊಡಿ ಅಂತಾ ಮತ ಯಾಚಿಸಿದ್ದಾರೆ. ಇದೇ ವೇಳೆ ಸುಮಲತಾ ಕ್ರಮ…
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ
ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…