ಉಪಯುಕ್ತ ಮಾಹಿತಿ

14 ವಾಹನಗಳನ್ನು ಓಡಿಸಿ ದಾಖಲೆ ಬರೆದ 2ನೇ ತರಗತಿ ವಿದ್ಯಾರ್ಥಿ! ಮೈಸೂರಿನ ಈ ಸಾಹಸಿ ಬಗ್ಗೆ ತಿಳಿಯಲು ಇಲ್ಲಿ ನೋಡಿ…

304

7 ವರ್ಷದ  ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ  ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ.

2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್ ಶಾಲೆಯ ಆವರಣದಲ್ಲಿ ಒಟು 14 ವಾಹನಗಳನ್ನು ಚಾಲನೆ ಮಾಡಿದ್ದಾಳೆ.

ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನ ತೀರ್ಪುಗಾರ ಸಂತೋಷ್ ಅಗರ್ವಾರ್ ಅವರ ಉಪಸ್ಥಿತಿಯಲ್ಲಿ ರಿಫಾ ತಸ್ಕೀನ್ ವಾಹನ ಚಾಲನೆ ಮಾಡಿದಳು, ಲಾರಿ, ಆಂಬುಲೆನ್ಸ್, ದ್ವಿಚಕ್ರ ವಾಹನ ಹಾಗೂ ಕಾರು ಸೇರಿದಂತೆ 14 ವಿವಿಧ ವಾಹನಗಳನ್ನು ಓಡಿಸಿದ್ದಾಳೆ. ಈ ಮೂಲಕ ಅತಿ ಕಿರಿಯ ವಯಸ್ಸಿನಲ್ಲಿ ಬಹುಚಕ್ರ ವಾಹನ ಚಾಲನೆ ಮಾಡಿದ ಬಾಲಕಿ ಎಂಬ ಕೀರ್ತಿಗೆ ತಸ್ಕಿ ನ್ ಪಾತ್ರಳಾಗಿದ್ದಾಳೆಂದು ಸಂತೋಷ್ಅಗರ್ವಾಲ್ ಅವರು ಘೋಷಣೆ  ಮಾಡಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಅಧಿಕೃತ ವೆಬ್ ಸೈಟ್ನಲ್ಲಿ ಬಾಲಕಿಯ ಹೆಸರನ್ನು ಸೇರ್ಪಡೆಗೊಳಿಸಲಾಗುತ್ತದೆ.  2018-19ನೇ ಸಾಲಿನ ವಾರ್ಷಿಕ ನಿಯತಕಾಲಿಕೆಯಲ್ಲೂ ಬಾಲಕಿಯ ಹೆಸರನ್ನು ಪ್ರಕಟಿಸಲಾಗುತ್ತದೆ ಎಂದು ಅಗರ್ವಾಲ್ ಅವರು ತಿಳಿಸಿದ್ದಾರೆ. ದಾಖಲೆ ಬರೆದಿರುವ ರಿಫಾಗೆ ಪ್ರಸ್ತುತ ತಾತ್ಕಾಲಿಕ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ. ಮುಖ್ಯ ಪ್ರಮಾಣಪತ್ರವನ್ನು ಮುಂದಿನ 2 ವಾರಗಳಲ್ಲಿ ನೀಡಲಾಗುತ್ತದೆ. ವಾಹನಗಳ ಸಂಖ್ಯೆಗಳು, ದಾಖಲೆಯ ಪ್ರಾಮುಖ್ಯತೆ ಸೇರಿದಂತೆ ಇನ್ನಿತರೆ ಮಾಹಿತಿಗಳನ್ನು ಸ್ಥಳೀಯ ಸಾರಿಗೆ ಕಚೇರಿಯಿಂದ ಮಾಹಿತಿಗಳನ್ನು ಪಡೆದು, ಸ್ಥಳೀಯ ಶಾಸಕರ ಅನುಮತಿ ಪತ್ರ ಪಡೆದ ಬಳಿಕ ನೀಡಲಾಗುತ್ತದೆ ಎಂದಿದ್ದಾರೆ.

ತಾನು ಬರೆದಿರುವ ದಾಖಲೆಗೆ ಬಾಲಕಿ ರಿಫಾ ಸಂತಸವನ್ನು ವ್ಯಕ್ತಪಡಿಸಿದ್ದು, ಭವಿಷ್ಯದಲ್ಲಿ ನಾನು ಯುದ್ಧ ಪೈಲಟ್ ಆಗಬೇಕೆಂದು ಬಯಸಿದ್ದೇನೆಂದು ಹೇಳಿಕೊಂಡಿದ್ದಾಳೆ, ಭಾರತೀಯ ವಾಯು ಸೇನಗೆ ಸೇರ್ಪಡೆಗೊಳ್ಳಲು ಪುತ್ರಿ ಬಯಸಿದ್ದಾಳೆಂದು ರಿಫಾ ತಂದೆ ತಜುದ್ದೀನ್ ಅವರು ಹೇಳಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೊಸದಾಗಿ ಪ್ರದರ್ಶಿತವಾದ ಎವಾನ್ ಎಲೆಕ್ಟ್ರಿಕ್ ಸ್ಕೂಟರ್ ಇದರ ವೈಶಿಷ್ಯತೆ ಏನು ಗೊತ್ತಾ,.!

    ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್‍‍ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್‍‍ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್‍, ಸಿಂಗಲ್ ಜಾರ್ಜ್‍‍ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್‍‍ಶಿಪ್ ಸ್ಕೂಟರ್ 72 ವಿ 22ಎ‍ಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ. ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…

  • ಜೀವನಶೈಲಿ

    ಮಹಿಳೆಯರು ಕಾಲುಂಗುರವನ್ನು ದರಿಸುವುದರಿಂದ ಆಗುವ ಉಪಯೋಗಗಳು ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.

  • ಗ್ಯಾಜೆಟ್

    ಇನ್ನು ಮುಂದೆ ಸಮುದ್ರದಾಳದಲ್ಲಿ ಕೂಡ ಫೋನ್ ಮಾಡಬಹುದು!!!

    ಸರ್ಕಾರಿ ಒಡೆತನದ ಬಿಎಸ್ಎನ್‌ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.

  • Health

    ಬೇವು ಬೆಲ್ಲದ ರಹಸ್ಯ ಗೊತ್ತಾದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ. ನೋಡಿ!

    ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…

  • ಆಧ್ಯಾತ್ಮ

    ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

    ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…