ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್ಗಳ ಮೆಕ್ಯಾನಿಕ್ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್ನ ನಿವಾಸಿ ನವೀನ್ ಅಲಿಯಾಸ್ ಡಿಯೋ ನವೀನ್ (19) ಸಿಕ್ಕಿ ಬಿದ್ದವ. ಈತನ ಸಹಚರ ಮಾಗಡಿ ಸಮೀಪದ ಕುಣಿಗಾನಹಳ್ಳಿಯ ನಾರಾಯಣ ಅಲಿಯಾಸ್ ನಾರಾಯಣನನ್ನು ಕೂಡ ಬಂಧಿಸಲಾಗಿದೆ.

ಡಿಯೋ ನವೀನ ಸ್ಕೂಟರ್ ಮತ್ತು ಮೊಪೆಡ್ಗಳನ್ನು ರಿಪೇರಿ ಮಾಡುವುದರಲ್ಲಿ ಪಳಗಿದ ಕೈ. ಸಣ್ಣ ವಯಸ್ಸಿನಲ್ಲೇ ಗ್ಯಾರೇಜಿಗೆ ಸೇರಿ ರಿಪೇರಿ ಕೆಲಸ ಕಲಿತಿದ್ದ ಈತ, ಯಾವುದೇ ಕಂಪನಿಯ ಯಾವುದೇ ಸ್ಕೂಟರ್ ಆದರೂ ಕೆಲವೇ ನಿಮಿಷಗಳಲ್ಲಿ ಬಿಚ್ಚಿ ಮತ್ತೆ ಹೊಸದಾಗಿ ಫಿಟ್ ಮಾಡುವಷ್ಟು ಕೆಲಸ ಕಲಿತಿದ್ದ. ಬಹುತೇಕ ಕಂಪನಿಯ ದ್ವಿಚಕ್ರ ವಾಹನಗಳ ಲಾಕ್ ವ್ಯವಸ್ಥೆಯನ್ನು ಚೆನ್ನಾಗಿ ಅರಿತುಕೊಂಡಿದ್ದ.

ಈ ತಿಳಿವಳಿಕೆಯನ್ನೇ ಕಳ್ಳತನಕ್ಕೆ ಬಳಸಿಕೊಂಡ. ಒಂದು ಕಂಪನಿಯ ಲಾಕ್ಗೂ ಮತ್ತೊಂದು ಕಂಪನಿಯ ಲಾಕ್ಗೂ ಇರುವ ಸಣ್ಣ ಪುಟ್ಟ ವ್ಯತ್ಯಾಸವನ್ನು ತನ್ನ ಮೆಕಾನಿಕ್ ವೃತ್ತಿ ಅನುಭವದಿಂದಲೇ ಕಲಿತಿದ್ದ ,ಈತ ಎಲ್ಲಾ ವಾಹನಕ್ಕೂ ಅನ್ವಯವಾಗುವ ನಕಲಿ ಕೀಯನ್ನು ಸಿದ್ದಪಡಿಸಿಕೊಂಡಿದ್ದ. ಇದೇ ಕೀ ಬಳಸಿ ಸಲೀಸಾಗಿ ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ. ಮಾಗಡಿಯ ಸ್ನೇಹಿತ ನಾರಾಯಣ ಅಲಿಯಾಸ್ ನಾಣಿಯನ್ನು ಕೃತ್ಯಕ್ಕೆ ಜತೆಯಾಗಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕುರುಬರಹಳ್ಳಿ ಸಮೀಪದ ಸತ್ಯನಾರಾಯಣ ಲೇಔಟ್ ನಿವಾಸಿ ಶರತ್ ಎನ್ನುವವರು ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ ಆಗಿತ್ತು. ಘಟನಾ ಸ್ಥಳದ ಸುತ್ತ ಮುತ್ತ ಇರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ ಬಳಿಕ ಕೇವಲ 10 ಸೆಕೆಂಡುಗಳಲ್ಲಿ ಸಲೀಸಾಗಿ ನಕಲಿ ಕೀ ಬಳಸಿ ವಾಹನ ಕದ್ದಿದ್ದು ಗೊತ್ತಾಗಿತ್ತು. ಬಳಿಕ ಈತನ ಚಹರೆ ಪತ್ತೆ ಹಚ್ಚಿ ತನಿಖೆ ಮುಂದುವರೆಸಿದಾಗ ಸಿಕ್ಕಿ ಬಿದ್ದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇವರ ಬಂಧನದಿಂದ ಮಹಾಲಕ್ಷ್ಮಿಲೇಔಟ್ನ 5 ಪ್ರಕರಣಗಳು ಸೇರಿದಂತೆ ಹನುಮಂತನಗರ, ಬಸವೇಶ್ವರನಗರ, ಬ್ಯಾಡರಹಳ್ಳಿ, ಅನ್ನಪೂರ್ಣೇಶ್ವರಿ ಲೇಔಟ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ 23 ವಾಹನ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…
ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…