ರೆಸಿಪಿ

15 ನಿಮಿಷಗಳಲ್ಲಿ ಫಟಾಫಟ್ ‘ಎಗ್ ಪಲಾವ್’ ಮಾಡೋದು ಹೇಗೆ ಗೊತ್ತಾ..?

375

ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…

ಬೇಕಾದ ಪದಾರ್ಥಗಳು :

*ಅನ್ನ – 2 ಕಪ್

*ಮೊಟ್ಟೆ- 2

*ಈರುಳ್ಳಿ- 2 (ಕತ್ತರಿಸಿದಂತಹುದು)

*ಬೆಳ್ಳುಳ್ಳಿ- 4 ತುಂಡುಗಳು (ಕತ್ತರಿಸಿದಂತಹುದು)

*ಟೊಮೇಟೊ – 2 (ಕತ್ತರಿಸಿದಂತಹುದು)

*ಹಸಿ ಮೆಣಸಿನಕಾಯಿ- 2 (ಕತ್ತರಿಸಿದಂತಹುದು)

*ತಾಜಾ ಅವರೆ ಕಾಳು – 1/4 ಕಪ್

*ಅರಿಶಿನ ಪುಡಿ- 1/2

*ಖಾರದ ಪುಡಿ- 1 ಟೀ.ಚಮಚ

*ಕರಿ ಮೆಣಸಿನ ಪುಡಿ – 1 ಟೀ.ಚಮಚ

*ಗರಂ ಮಸಾಲ ಪುಡಿ- 1 ಟೀ.ಚಮಚ

*ಉರಿದ ಎಳ್ಳಿನ ಪುಡಿ – 1 ಟೀ.ಚಮಚ

*ಉಪ್ಪು- ರುಚಿಗೆ ತಕ್ಕಷ್ಟು

ತಯಾರಿಸುವ ವಿಧಾನ :

*ಬಾಣಲೆಯ ಮೇಲೆ ಎಣ್ಣೆಯನ್ನು ಹಾಕಿ, ಅದರಲ್ಲಿ ಈರುಳ್ಳಿಗಳನ್ನು ಹಾಕಿಕೊಂಡು ಹೊಂಬಣ್ಣ ಬರುವವರೆಗೆ ಉರಿಯಿರಿ. *ನಂತರ ಕತ್ತರಿಸಿದ ಬೆಳ್ಳುಳ್ಳಿಗಳನ್ನು ಸೇರಿಸಿ, ಕೆಲವು ಕ್ಷಣಗಳವರೆಗೆ ಉರಿಯಿರಿ.

*ಮೊಟ್ಟೆಗಳನ್ನು ಹುಷಾರಾಗಿ ಒಡೆದು, ಬಾಣಲೆಗೆ ಹಾಕಿ. ಮೊಟ್ಟೆಗಳನ್ನು ಚೆನ್ನಾಗಿ ಮಿಶ್ರಣ ಮಾಡುತ್ತ ಬೇಯಿಸಿ.

*ಈಗ ಉಪ್ಪು, ಕರಿ ಮೆಣಸು, ಅರಿಶಿನ ಪುಡಿ, ಖಾರದ ಪುಡಿ, ಹಸಿ ಮೆಣಸಿನ ಕಾಯಿ, ಟೊಮೇಟೊಗಳನ್ನೆಲ್ಲಾ ಹಾಕಿ 3-4 ನಿಮಿಷಗಳ ಕಾಲ ಬೇಯಿಸಿ.

*ಇನ್ನು ಈ ಮಿಶ್ರಣಕ್ಕೆ ಅನ್ನವನ್ನು ಹಾಕಿ ಚೆನ್ನಾಗಿ ಬೆರೆಸಿ. ನಂತರ ಗರಂ ಮಸಾಲ ಪುಡಿಯನ್ನು ಬೆರೆಸಿ, ಚೆನ್ನಾಗಿ ಮಿಶ್ರಣ ಮಾಡಿ.

*ಇದೆಲ್ಲ ಮುಗಿದ ಮೇಲೆ, ಒಲೆಯನ್ನು ಆರಿಸಿ. ಈ ಖಾದ್ಯದ ಮೇಲೆ ಎಳ್ಳು ಪುಡಿಯನ್ನು ಚಿಮುಕಿಸಿ. ಬಿಸಿಯಾಗಿರುವಾಗಲೆ ಬಡಿಸಿ. ಈಗ ನೋಡಿ ರುಚಿ ರುಚಿಯಾದ ಮೊಟ್ಟೆ ಪುಲಾವ್ ನಿಮ್ಮ ಮುಂದೆ ಸಿದ್ಧವಾಗಿರುತ್ತದೆ. ಇದನ್ನು ಸಾರಿನ ಜೊತೆಗೆ ಅಥವಾ ಸಾರಿಲ್ಲದೆ ಬೇಕಾದರು ಸೇವಿಸಬಹುದು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಮಹಿಳೆಯರು ಕಾಲುಂಗುರವನ್ನು ದರಿಸುವುದರಿಂದ ಆಗುವ ಉಪಯೋಗಗಳು ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.

  • ರಾಜಕೀಯ

    ಚಾಮರಾಜ ಕ್ಷೇತ್ರದಿಂದ ಈ ಬಾರಿ ಹರೀಶ್ ಗೌಡರು!ಇದುವರೆಗೂ ನಡೆದ ಚುನಾವಣೆಯಲ್ಲಿ ಗೆದ್ದವರು,ಸೋತವರ ವಿವರ ಇಲ್ಲಿದೆ ನೋಡಿ…

    ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.

  • ಸಿನಿಮಾ

    ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ದೀಪಿಕಾ ಜೊತೆ ಇಲ್ಲಿವರೆಗೂ ಸಿನಿಮಾ ಮಾಡಿಲ್ಲ ಯಾಕೆ.?ಸಲ್ಮಾನ್ ಕೊಟ್ಟ ಉತ್ತರ ಏನ್ ಗೊತ್ತಾ?

    ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬಿ ಅಂತ್ಯಕ್ರಿಯೆಗೆ, ರಮ್ಯ ಬಾರದೆ ಇರಲು ಕಾರಣವೇ ಇದು!

    ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…

  • ಸುದ್ದಿ

    ಮೋದಿ ಹೆಲಿಕಾಪ್ಟರ್ ಚೆಕ್ ಮಾಡಿ ಅಮಾನತು ಆಗಿದ್ದ ಚುನಾವಣಾ ಅಧಿಕಾರಿ..!ಅಮಾನತು ಆದೇಶ ಏನಾಯ್ತು..?

    ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು.  ಅಮಾನತಿನ…

  • ಸೌಂದರ್ಯ

    ಮೆಂತೆ ಕಾಳು ಬಳಸಿ ನಿಮ್ಮ ‘ಸೌಂದರ್ಯವನ್ನು’ ಹೆಚ್ಚಿಸಿಕೊಳ್ಳಿ

    ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…