ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್ಗಳ ಮೆಕ್ಯಾನಿಕ್ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್ನ ನಿವಾಸಿ ನವೀನ್ ಅಲಿಯಾಸ್ ಡಿಯೋ ನವೀನ್ (19) ಸಿಕ್ಕಿ ಬಿದ್ದವ. ಈತನ ಸಹಚರ ಮಾಗಡಿ ಸಮೀಪದ ಕುಣಿಗಾನಹಳ್ಳಿಯ ನಾರಾಯಣ ಅಲಿಯಾಸ್ ನಾರಾಯಣನನ್ನು ಕೂಡ ಬಂಧಿಸಲಾಗಿದೆ.

ಡಿಯೋ ನವೀನ ಸ್ಕೂಟರ್ ಮತ್ತು ಮೊಪೆಡ್ಗಳನ್ನು ರಿಪೇರಿ ಮಾಡುವುದರಲ್ಲಿ ಪಳಗಿದ ಕೈ. ಸಣ್ಣ ವಯಸ್ಸಿನಲ್ಲೇ ಗ್ಯಾರೇಜಿಗೆ ಸೇರಿ ರಿಪೇರಿ ಕೆಲಸ ಕಲಿತಿದ್ದ ಈತ, ಯಾವುದೇ ಕಂಪನಿಯ ಯಾವುದೇ ಸ್ಕೂಟರ್ ಆದರೂ ಕೆಲವೇ ನಿಮಿಷಗಳಲ್ಲಿ ಬಿಚ್ಚಿ ಮತ್ತೆ ಹೊಸದಾಗಿ ಫಿಟ್ ಮಾಡುವಷ್ಟು ಕೆಲಸ ಕಲಿತಿದ್ದ. ಬಹುತೇಕ ಕಂಪನಿಯ ದ್ವಿಚಕ್ರ ವಾಹನಗಳ ಲಾಕ್ ವ್ಯವಸ್ಥೆಯನ್ನು ಚೆನ್ನಾಗಿ ಅರಿತುಕೊಂಡಿದ್ದ.

ಈ ತಿಳಿವಳಿಕೆಯನ್ನೇ ಕಳ್ಳತನಕ್ಕೆ ಬಳಸಿಕೊಂಡ. ಒಂದು ಕಂಪನಿಯ ಲಾಕ್ಗೂ ಮತ್ತೊಂದು ಕಂಪನಿಯ ಲಾಕ್ಗೂ ಇರುವ ಸಣ್ಣ ಪುಟ್ಟ ವ್ಯತ್ಯಾಸವನ್ನು ತನ್ನ ಮೆಕಾನಿಕ್ ವೃತ್ತಿ ಅನುಭವದಿಂದಲೇ ಕಲಿತಿದ್ದ ,ಈತ ಎಲ್ಲಾ ವಾಹನಕ್ಕೂ ಅನ್ವಯವಾಗುವ ನಕಲಿ ಕೀಯನ್ನು ಸಿದ್ದಪಡಿಸಿಕೊಂಡಿದ್ದ. ಇದೇ ಕೀ ಬಳಸಿ ಸಲೀಸಾಗಿ ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ. ಮಾಗಡಿಯ ಸ್ನೇಹಿತ ನಾರಾಯಣ ಅಲಿಯಾಸ್ ನಾಣಿಯನ್ನು ಕೃತ್ಯಕ್ಕೆ ಜತೆಯಾಗಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕುರುಬರಹಳ್ಳಿ ಸಮೀಪದ ಸತ್ಯನಾರಾಯಣ ಲೇಔಟ್ ನಿವಾಸಿ ಶರತ್ ಎನ್ನುವವರು ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ ಆಗಿತ್ತು. ಘಟನಾ ಸ್ಥಳದ ಸುತ್ತ ಮುತ್ತ ಇರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ ಬಳಿಕ ಕೇವಲ 10 ಸೆಕೆಂಡುಗಳಲ್ಲಿ ಸಲೀಸಾಗಿ ನಕಲಿ ಕೀ ಬಳಸಿ ವಾಹನ ಕದ್ದಿದ್ದು ಗೊತ್ತಾಗಿತ್ತು. ಬಳಿಕ ಈತನ ಚಹರೆ ಪತ್ತೆ ಹಚ್ಚಿ ತನಿಖೆ ಮುಂದುವರೆಸಿದಾಗ ಸಿಕ್ಕಿ ಬಿದ್ದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇವರ ಬಂಧನದಿಂದ ಮಹಾಲಕ್ಷ್ಮಿಲೇಔಟ್ನ 5 ಪ್ರಕರಣಗಳು ಸೇರಿದಂತೆ ಹನುಮಂತನಗರ, ಬಸವೇಶ್ವರನಗರ, ಬ್ಯಾಡರಹಳ್ಳಿ, ಅನ್ನಪೂರ್ಣೇಶ್ವರಿ ಲೇಔಟ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ 23 ವಾಹನ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….
Kotilingeshwara temple is situated in Kammasandra village in Kolar district , Karnataka. In the temple premises more than million of lingas were installed since 1980.
ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.
ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.
ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ. ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…