ಜ್ಯೋತಿಷ್ಯ

150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣದಿಂದ ಯಾವ ರಾಶಿಗೆ ಏನು ಫಲ..?ತಿಳಿಯಲು ಈ ಲೇಖನ ಓದಿ..

5808

ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.

ಖಂಡಗ್ರಾಸ ಚಂದ್ರಗ್ರಹಣ ಜನವರಿ 31, 2018 ರಂದು | ಯಾವ ರಾಶಿಗೆ ಏನು ಫಲ:-

ಇದೇ ತಿಂಗಳು ಅಂದರೆ ಜನವರಿ 31ರ ಬುಧವಾರದಂದು ಖಂಡಗ್ರಾಸ ಚಂದ್ರಗ್ರಹಣ ಇದ್ದು, ಅಶ್ಲೇಷ ನಕ್ಷತ್ರದಲ್ಲಿ ಚಂದ್ರನಿಗೆ ಪೂರ್ಣ ರಾಹು ಗ್ರಹಣವು ಗ್ರಸ್ತೋದಯವಾಗಿ ಗೋಚರವಾಗುತ್ತದೆ. ಅಂದು ಸಂಜೆ 5.17ಕ್ಕೆ ಗ್ರಹಣದ ಸ್ಪರ್ಶ ಕಾಲ ಆಗಲಿದ್ದು, ರಾತ್ರಿ 7.19ಕ್ಕೆ ಗ್ರಹಣ ಮಧ್ಯಕಾಲವಾಗಲಿದ್ದು, ರಾತ್ರಿ 8.41ಕ್ಕೆ ಗ್ರಹಣ ಮೋಕ್ಷ ಆಗಲಿದೆ.

ಗ್ರಹಣ ಕಾಲದ ವಿಶೇಷ ಸೂಚನೆಗಳು:-

* ಗ್ರಹಣದ ಆರಂಭ ಹಾಗೂ ಬಿಟ್ಟ ನಂತರ ಉಟ್ಟ ಬಟ್ಟೆಯಲ್ಲಿ ಸ್ನಾನ ಮಾಡಬೇಕು

* ಗ್ರಹಣ ದೋಷ ಇರುವವರು ಚಂದ್ರ ಬಿಂಬ ಹಾಗೂ ಅಕ್ಕಿಯನ್ನು ದಾನ ಮಾಡಬೇಕು

ಮೇಷ:

ಮೇಷ ರಾಶಿಯವರಿಗೆ ಹಲವು ಬಗೆಯಲ್ಲಿ ಸಮಸ್ಯೆಗಳು ಕಾಣುತ್ತಿವೆ. ನೀವೇ ಹುಡುಕಿಕೊಂಡು ಹೋಗಿ, ಸಮಸ್ಯೆಗೆ ಸಿಲುಕುವ ಸಂಭವವೂ ಇದೆ. ಹೊಸ ಸಾಹಸಗಳಿಗೆ ಕೈ ಹಾಕಲೇ ಬೇಡಿ.

ಎಲ್ಲವೂ ಸಮಸ್ಯೆ ಎಂಬುದನ್ನೇ ಸೂಚಿಸುತ್ತಿದೆ ಆದ್ದರಿಂದ ಈ ಲೇಖನದಲ್ಲಿ ತಿಳಿಸಿರುವಂತೆ ಪರಿಹಾರವನ್ನು ಕಡ್ಡಾಯವಾಗಿ ಅನುಸರಿಸಿ.  ಅತಿ ಮುಖ್ಯವಾದ ಕೆಲಸಗಳಿಗೆ ಮಾತ್ರ ಪ್ರಾಮುಖ್ಯತೆ ಕೊಡಿರಿ. ದಿಢೀರ್‌ ಪ್ರಯಾಣ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವುದು.

ವೃಷಭ:-

ಈ ಗ್ರಹಣದಿಂದ ವೃಷಭ ರಾಶಿಯವರಿಗೆ ಕೆಲ ಶುಭ ಫಲಗಳನ್ನು ಹೇಳಬಹುದಾಗಿದೆ. ಅದರಲ್ಲೂ ಹಣಕಾಸಿನ ಅನುಕೂಲಗಳು ಗೋಚರಿಸುತ್ತಿವೆ. ಅಚ್ಚರಿಯ ಧನಾಗಮಗಳಿಗೆ ಸಿದ್ಧವಾಗಿರಿ. ಅನಿರೀಕ್ಷೆತ ಧನಪ್ರಾಪ್ತಿ.

ಅದು ಕೂಡ ನಿಮ್ಮ ಎಂದಿನ ಆದಾಯ ಮೂಲವಲ್ಲ. ಇದು ಹೊಸದಾದ ಆದಾಯ ಮೂಲದಿಂದ ಸಿಗುವ ಧನಲಾಭ.

ಮಿಥುನ:

ಈ ರಾಶಿಯವರಿಗೆ ಚಂದ್ರಗ್ರಹಣದ ಫಲಿತಾಂಶ ದಿಂದ ಒಳ್ಳೆಯದು ಮತ್ತು ಕೆಟ್ಟದ್ದು ಎರಡು ಸಹ ಲಭಿಸುತ್ತವೆ. ತುಂಬ ಸಾಮಾನ್ಯವಾಗಿ ಕಂಡುಬರುವುದು ಆರ್ಥಿಕ ನಷ್ಟ. ಯಾರಿಗಾದರೂ ಸಾಲ ಕೊಡಲಿಕ್ಕೆ ಹೋಗಬೇಡಿ.

ರಿಸ್ಕ್ ಇರುವಂಥ ಹೂಡಿಕೆಯಂತೂ ಮಾಡಲೇಬೇಡಿ. ಒಟ್ಟಾರೆ ಹಣಕಾಸಿನ ವ್ಯವಹಾರದಲ್ಲಿ ಬಹಳ ಎಚ್ಚರವಾಗಿರಬೇಕು.

ಕರ್ಕಾಟಕ :-

ಎಲ್ಲದಕ್ಕೂ ಹಿರಿಯರ ಮಾರ್ಗದರ್ಶನ ಪಡೆಯುವುದರಿಂದ ಬಲಬರಲಿದೆ.ಏನಾಗುತ್ತಿದೆ ಅಂತಲೇ ಗೊತ್ತಾಗದಂಥ ಸನ್ನಿವೇಶ ನಿಮ್ಮದು.

ಏಕೆ ತೊಂದರೆ ಆಗುತ್ತಿದೆ, ಇಂಥ ಸನ್ನಿವೇಶದಲ್ಲಿ ಸಿಕ್ಕಿಬಿದ್ದಿದ್ದು ಹೇಗೆ ಎಂದು ಗೊತ್ತಾಗುವಷ್ಟರಲ್ಲಿ ತಲೆ ಹಾರಿ ಹೋಗಿರುತ್ತದೆ.

 ಸಿಂಹ:

ಈ ದಿನ ವೈಯಕ್ತಿಕ ಸಮಸ್ಯೆಗಳ ನಿರ್ವಹಣೆಗೆ ಅಧಿಕ ಪ್ರಯತ್ನ ಬೇಡ ತಾನಾಗಿಯೇ ಪರಿಹಾರಗೊಳ್ಳಲಿದೆ. ಹಣಕಾಸಿನ ವಿಚಾರವಾಗಿ ಎಷ್ಟು ಹುಷಾರಾಗಿರುತ್ತೀರೋ ಅಷ್ಟು ಒಳ್ಳೆಯದು.

ದಿಢೀರ್ ನಷ್ಟ ತಂದೊಡ್ಡುವ ಗ್ರಹಣ ಇದು. ತುರ್ತು ಯೋಜನೆಗೆ ಕೈ ಹಾಕಲು ಹೋಗಬೇಡಿ. ಹಣ ಕಾಸಿನ ವಿಷಯಕ್ಕೆ ಸಂಬಂಧಿಸಿದ್ದು ಅನ್ನೋವಾಗ ಒಂದಕ್ಕೆ ಎರಡು ಸಲ ಪರಿಶೀಲಿಸಿ, ಸಹಿ ಮಾಡಿ. ಇನ್ನೊಬ್ಬರನ್ನು ಕುರುಡಾಗಿ ನಂಬಬೇಡಿ.

ಕನ್ಯಾ :-

ಹಣ ತರುವ ಅವಕಾಶಗಳು ಬರುವಾಗ ನೀವಾಗಿಯೇ ಅದನ್ನು ನಿರಾಕರಿಸಬೇಡಿ. ಮುಖ್ಯವಾಗಿ ನಿಮ್ಮ ಪ್ರತಿಭೆ ಯಾವುದರಲ್ಲಿದೆ ಆ ವಿಚಾರವಾಗಿಯೇ ಕೆಲ ಅವಕಾಶಗಳು ಹುಡುಕಿಕೊಂಡು ಬಂದು ಬಾಗಿಲು ತಟ್ಟುತ್ತವೆ.

ಈ ಗ್ರಹಣದಿಂದ ನಿಮಗೆ ಶುಭ ಫಲಗಳು ಇವೆ. ಅದರ ಸದುಪಯೋಗ ಮಾಡಿಕೊಳ್ಳಬೇಕಷ್ಟೇ.

ತುಲಾ:

ಚಂದ್ರ ಗ್ರಹಣದ ಫಲಿತಾಂಶ ಶುಭವಾಗಿದೆ. ಕುಟುಂಬದಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಲಿದೆ. ಕುಟುಂಬದಲ್ಲಿನ ಹಿರಿಯರ ಸಹಕಾರ ಮತ್ತು ಸ್ನೇಹಿತರಿಂದ ದೈಹಿಕ ಬಲ, ಆರ್ಥಿಕ ಬಲ ಹೆಚ್ಚಲಿದೆ.

ಸಹಾಯ ಅನ್ನೋದರ ಜತೆಗೆ ನಿಮಗೆ ಬೇಕಾದ ಸಹಕಾರ ದೊರೆಯುತ್ತದೆ.

ವೃಶ್ಚಿಕ :-

ವೃಶ್ಚಿಕ ರಾಶಿಯವರು ತಮ್ಮ ವರ್ಚಸ್ಸು ಹಾಗೂ ಸಮಾಜದಲ್ಲಿನ ಗೌರವದ ಬಗ್ಗೆ ಎಚ್ಚರ ವಹಿಸಬೇಕು. ಏಕೆಂದರೆ ಈ ಗ್ರಹಣವು ನಷ್ಟ ಮತ್ತು ಅವಮಾನವನ್ನು ಸೂಚಿಸುತ್ತಿದೆ. ದುಷ್ಟ ಆಲೋಚನೆ ಇರುವ ಜನರಿಂದ ದೂರ ಇರಿ.ನಿಮ್ಮ ಹೆಸರು ಹಾಳು ಮಾಡಬಹುದಾದ ಚಟುವಟಿಕೆಯಿಂದ ದೂರ ಇರಿ.

ಧನಸ್ಸು:

ಈ ಗ್ರಹಣವು ಅತ್ಯಂತ ಕೆಡಕು ತರುವುದು ನಿಮ್ಮ ರಾಶಿಗೆ ಎಚ್ಚರ ಎಚ್ಚರ!. ಆದ್ದರಿಂದ ಈ ತಿಂಗಳಿಡೀ ದೂರ ಪ್ರಯಾಣ ಮಾಡಲೇಬೇಡಿ.

ಮನೆಯಲ್ಲಿ ಕೂಡ ವಿದ್ಯುತ್ ಉಪಕರಣ, ಗ್ಯಾಸ್ ಸ್ಟೌ ಇತ್ಯಾದಿಗಳ ಬಗ್ಗೆ ಎಚ್ಚರವಿರಲಿ. ಯಾವುದೇ ಅಪಾಯಕ್ಕೆ ನೀವಾಗಿಯೇ ಕೈ ಹಾಕದಿರುವುದು ಉತ್ತಮ. ತಾಳ್ಮೆಯ ವರ್ತನೆಗೆ ನಿಧಾನ ಶುಭ ವೆನಿಸಲಿದೆ.

ಮಕರ :-

ನಿಮ್ಮ ರಾಶಿಯಿಂದ ಏಳನೇ ಮನೆಯಲ್ಲಿ ಗ್ರಹಣ ಸಂಭವಿಸುತ್ತಿದೆ. ಅಂದರೆ ಅದು ಕಳತ್ರ ಸ್ಥಾನ. ಆದ್ದರಿಂದ ಬಾಳ ಸಂಗಾತಿಯೊಂದಿಗೆ ಯಾವುದೇ ವಿಚಾರದಲ್ಲಿ ಜಗಳ ಮಾಡಿಕೊಳ್ಳುವುದಕ್ಕೆ ಹೋಗಬೇಡಿ. ಅವರನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳುವುದಕ್ಕೆ ಪ್ರಯತ್ನಿಸಿ.ಆ ಮೂಲಕ ಯಾವುದೇ ಬಿಕ್ಕಟ್ಟು ಎದುರಾಗದಂತೆ ಎಚ್ಚರ ವಹಿಸಿ.

ಕುಂಭ:-

ನಿಮ್ಮ ರಾಶಿಗೆ ಸಂತೋಷದ ಫಲಿತಾಂಶ ಕೊಡುತ್ತದೆ ಚಂದ್ರ ಗ್ರಹಣ. ಹೊಸ ಉದ್ಯೋಗಿಗಳಿಗೆ ಔದ್ಯೋಗಿಕ ರಂಗದಲ್ಲಿ ಅನುಕೂಲ, ಪ್ರಗತಿ ಇದೆ. ನಿಮ್ಮ ವಯಕ್ತಿಕ ಸಂಬಂಧಗಳು ವೃದ್ಧಿಯಾಗುತ್ತವೆ. ಎಲ್ಲದರಲ್ಲೂ ಗೌರವ-ಮನ್ನಣೆಗಳು ಹೆಚ್ಚಾಗುತ್ತವೆ.

ಸಾಮಾಜಿಕ ಬದುಕಿನಲ್ಲಿ ಮಿಂಚುತ್ತೀರಿ. ಒಟ್ಟಿನಲ್ಲಿ ಈ ಗ್ರಹಣದಿಂದ ನಿಮಗೆ ಶುಭ ಫಲಗಳೇ ಜಾಸ್ತಿ.

ಮೀನ:-

ಮೀನ ರಾಶಿಯವರಿಗೆ ಈ ಬಾರಿಯ ಗ್ರಹಣ ಅಂಥ ಶುಭವಲ್ಲ. ಇದರಿಂದ ಆಗುವ ಮುಖ್ಯ ಸಮಸ್ಯೆ ಅಂದರೆ, ಮಾನಸಿಕ ಒತ್ತಡ.

ಅದರಲ್ಲೂ ನಾನಾ ಬಗೆಯ ಸಮಸ್ಯೆ ಹಾಗೂ ಸವಾಲುಗಳು ಎದುರಾಗುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ, ಸ್ಪೂರ್ತಿ

    ಅಂಬುಲೆನ್ಸ್‌ಗೆ ದಾರಿ ತೋರಿದ ಹುಡ್ಗ, ತಮ್ಮನ ಪ್ರಾಣ ಉಳಿಸಿದ ಸೋದರಿಗೆ ಶೌರ್ಯ ಪ್ರಶಸ್ತಿ ಪುರಸ್ಕಾರ.

    ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…

  • ಜ್ಯೋತಿಷ್ಯ

    ಶುಕ್ರವಾರದ ಶುಭ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…

  • ದೇಶ-ವಿದೇಶ

    ಭಾರತದ ಕಾಳಧನಿಕರಲ್ಲಿ ನಡುಕ ಹುಟ್ಟಿಸಿದೆ, 2018ರ ಸ್ವಿಸ್ ಬ್ಯಾಂಕ್’ನ ಈ ನಿರ್ಧಾರ ? ಮುಂದೆ ಓದಿ…..

    ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್

  • ಜ್ಯೋತಿಷ್ಯ, ಭವಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(27 ಡಿಸೆಂಬರ್, 2018) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬದ ಸದಸ್ಯರು ನಿಮ್ಮ ಜೀವನದಲ್ಲಿ ಒಂದು…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಶುಭಾವಾಗುತ್ತೋ, ಅಶುಭಾವಾಗುತ್ತೋ ನೋಡಿ ತಿಳಿಯಿರಿ…

    ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…