ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.
ಇದೇ ತಿಂಗಳು ಅಂದರೆ ಜನವರಿ 31ರ ಬುಧವಾರದಂದು ಖಂಡಗ್ರಾಸ ಚಂದ್ರಗ್ರಹಣ ಇದ್ದು, ಅಶ್ಲೇಷ ನಕ್ಷತ್ರದಲ್ಲಿ ಚಂದ್ರನಿಗೆ ಪೂರ್ಣ ರಾಹು ಗ್ರಹಣವು ಗ್ರಸ್ತೋದಯವಾಗಿ ಗೋಚರವಾಗುತ್ತದೆ. ಅಂದು ಸಂಜೆ 5.17ಕ್ಕೆ ಗ್ರಹಣದ ಸ್ಪರ್ಶ ಕಾಲ ಆಗಲಿದ್ದು, ರಾತ್ರಿ 7.19ಕ್ಕೆ ಗ್ರಹಣ ಮಧ್ಯಕಾಲವಾಗಲಿದ್ದು, ರಾತ್ರಿ 8.41ಕ್ಕೆ ಗ್ರಹಣ ಮೋಕ್ಷ ಆಗಲಿದೆ.
* ಗ್ರಹಣದ ಆರಂಭ ಹಾಗೂ ಬಿಟ್ಟ ನಂತರ ಉಟ್ಟ ಬಟ್ಟೆಯಲ್ಲಿ ಸ್ನಾನ ಮಾಡಬೇಕು
* ಗ್ರಹಣ ದೋಷ ಇರುವವರು ಚಂದ್ರ ಬಿಂಬ ಹಾಗೂ ಅಕ್ಕಿಯನ್ನು ದಾನ ಮಾಡಬೇಕು
ಮೇಷ ರಾಶಿಯವರಿಗೆ ಹಲವು ಬಗೆಯಲ್ಲಿ ಸಮಸ್ಯೆಗಳು ಕಾಣುತ್ತಿವೆ. ನೀವೇ ಹುಡುಕಿಕೊಂಡು ಹೋಗಿ, ಸಮಸ್ಯೆಗೆ ಸಿಲುಕುವ ಸಂಭವವೂ ಇದೆ. ಹೊಸ ಸಾಹಸಗಳಿಗೆ ಕೈ ಹಾಕಲೇ ಬೇಡಿ.
ಎಲ್ಲವೂ ಸಮಸ್ಯೆ ಎಂಬುದನ್ನೇ ಸೂಚಿಸುತ್ತಿದೆ ಆದ್ದರಿಂದ ಈ ಲೇಖನದಲ್ಲಿ ತಿಳಿಸಿರುವಂತೆ ಪರಿಹಾರವನ್ನು ಕಡ್ಡಾಯವಾಗಿ ಅನುಸರಿಸಿ. ಅತಿ ಮುಖ್ಯವಾದ ಕೆಲಸಗಳಿಗೆ ಮಾತ್ರ ಪ್ರಾಮುಖ್ಯತೆ ಕೊಡಿರಿ. ದಿಢೀರ್ ಪ್ರಯಾಣ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವುದು.
ಈ ಗ್ರಹಣದಿಂದ ವೃಷಭ ರಾಶಿಯವರಿಗೆ ಕೆಲ ಶುಭ ಫಲಗಳನ್ನು ಹೇಳಬಹುದಾಗಿದೆ. ಅದರಲ್ಲೂ ಹಣಕಾಸಿನ ಅನುಕೂಲಗಳು ಗೋಚರಿಸುತ್ತಿವೆ. ಅಚ್ಚರಿಯ ಧನಾಗಮಗಳಿಗೆ ಸಿದ್ಧವಾಗಿರಿ. ಅನಿರೀಕ್ಷೆತ ಧನಪ್ರಾಪ್ತಿ.
ಅದು ಕೂಡ ನಿಮ್ಮ ಎಂದಿನ ಆದಾಯ ಮೂಲವಲ್ಲ. ಇದು ಹೊಸದಾದ ಆದಾಯ ಮೂಲದಿಂದ ಸಿಗುವ ಧನಲಾಭ.
ಈ ರಾಶಿಯವರಿಗೆ ಚಂದ್ರಗ್ರಹಣದ ಫಲಿತಾಂಶ ದಿಂದ ಒಳ್ಳೆಯದು ಮತ್ತು ಕೆಟ್ಟದ್ದು ಎರಡು ಸಹ ಲಭಿಸುತ್ತವೆ. ತುಂಬ ಸಾಮಾನ್ಯವಾಗಿ ಕಂಡುಬರುವುದು ಆರ್ಥಿಕ ನಷ್ಟ. ಯಾರಿಗಾದರೂ ಸಾಲ ಕೊಡಲಿಕ್ಕೆ ಹೋಗಬೇಡಿ.
ರಿಸ್ಕ್ ಇರುವಂಥ ಹೂಡಿಕೆಯಂತೂ ಮಾಡಲೇಬೇಡಿ. ಒಟ್ಟಾರೆ ಹಣಕಾಸಿನ ವ್ಯವಹಾರದಲ್ಲಿ ಬಹಳ ಎಚ್ಚರವಾಗಿರಬೇಕು.
ಎಲ್ಲದಕ್ಕೂ ಹಿರಿಯರ ಮಾರ್ಗದರ್ಶನ ಪಡೆಯುವುದರಿಂದ ಬಲಬರಲಿದೆ.ಏನಾಗುತ್ತಿದೆ ಅಂತಲೇ ಗೊತ್ತಾಗದಂಥ ಸನ್ನಿವೇಶ ನಿಮ್ಮದು.
ಏಕೆ ತೊಂದರೆ ಆಗುತ್ತಿದೆ, ಇಂಥ ಸನ್ನಿವೇಶದಲ್ಲಿ ಸಿಕ್ಕಿಬಿದ್ದಿದ್ದು ಹೇಗೆ ಎಂದು ಗೊತ್ತಾಗುವಷ್ಟರಲ್ಲಿ ತಲೆ ಹಾರಿ ಹೋಗಿರುತ್ತದೆ.
ಈ ದಿನ ವೈಯಕ್ತಿಕ ಸಮಸ್ಯೆಗಳ ನಿರ್ವಹಣೆಗೆ ಅಧಿಕ ಪ್ರಯತ್ನ ಬೇಡ ತಾನಾಗಿಯೇ ಪರಿಹಾರಗೊಳ್ಳಲಿದೆ. ಹಣಕಾಸಿನ ವಿಚಾರವಾಗಿ ಎಷ್ಟು ಹುಷಾರಾಗಿರುತ್ತೀರೋ ಅಷ್ಟು ಒಳ್ಳೆಯದು.
ದಿಢೀರ್ ನಷ್ಟ ತಂದೊಡ್ಡುವ ಗ್ರಹಣ ಇದು. ತುರ್ತು ಯೋಜನೆಗೆ ಕೈ ಹಾಕಲು ಹೋಗಬೇಡಿ. ಹಣ ಕಾಸಿನ ವಿಷಯಕ್ಕೆ ಸಂಬಂಧಿಸಿದ್ದು ಅನ್ನೋವಾಗ ಒಂದಕ್ಕೆ ಎರಡು ಸಲ ಪರಿಶೀಲಿಸಿ, ಸಹಿ ಮಾಡಿ. ಇನ್ನೊಬ್ಬರನ್ನು ಕುರುಡಾಗಿ ನಂಬಬೇಡಿ.
ಹಣ ತರುವ ಅವಕಾಶಗಳು ಬರುವಾಗ ನೀವಾಗಿಯೇ ಅದನ್ನು ನಿರಾಕರಿಸಬೇಡಿ. ಮುಖ್ಯವಾಗಿ ನಿಮ್ಮ ಪ್ರತಿಭೆ ಯಾವುದರಲ್ಲಿದೆ ಆ ವಿಚಾರವಾಗಿಯೇ ಕೆಲ ಅವಕಾಶಗಳು ಹುಡುಕಿಕೊಂಡು ಬಂದು ಬಾಗಿಲು ತಟ್ಟುತ್ತವೆ.
ಈ ಗ್ರಹಣದಿಂದ ನಿಮಗೆ ಶುಭ ಫಲಗಳು ಇವೆ. ಅದರ ಸದುಪಯೋಗ ಮಾಡಿಕೊಳ್ಳಬೇಕಷ್ಟೇ.
ಚಂದ್ರ ಗ್ರಹಣದ ಫಲಿತಾಂಶ ಶುಭವಾಗಿದೆ. ಕುಟುಂಬದಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಲಿದೆ. ಕುಟುಂಬದಲ್ಲಿನ ಹಿರಿಯರ ಸಹಕಾರ ಮತ್ತು ಸ್ನೇಹಿತರಿಂದ ದೈಹಿಕ ಬಲ, ಆರ್ಥಿಕ ಬಲ ಹೆಚ್ಚಲಿದೆ.
ಸಹಾಯ ಅನ್ನೋದರ ಜತೆಗೆ ನಿಮಗೆ ಬೇಕಾದ ಸಹಕಾರ ದೊರೆಯುತ್ತದೆ.
ವೃಶ್ಚಿಕ ರಾಶಿಯವರು ತಮ್ಮ ವರ್ಚಸ್ಸು ಹಾಗೂ ಸಮಾಜದಲ್ಲಿನ ಗೌರವದ ಬಗ್ಗೆ ಎಚ್ಚರ ವಹಿಸಬೇಕು. ಏಕೆಂದರೆ ಈ ಗ್ರಹಣವು ನಷ್ಟ ಮತ್ತು ಅವಮಾನವನ್ನು ಸೂಚಿಸುತ್ತಿದೆ. ದುಷ್ಟ ಆಲೋಚನೆ ಇರುವ ಜನರಿಂದ ದೂರ ಇರಿ.ನಿಮ್ಮ ಹೆಸರು ಹಾಳು ಮಾಡಬಹುದಾದ ಚಟುವಟಿಕೆಯಿಂದ ದೂರ ಇರಿ.
ಈ ಗ್ರಹಣವು ಅತ್ಯಂತ ಕೆಡಕು ತರುವುದು ನಿಮ್ಮ ರಾಶಿಗೆ ಎಚ್ಚರ ಎಚ್ಚರ!. ಆದ್ದರಿಂದ ಈ ತಿಂಗಳಿಡೀ ದೂರ ಪ್ರಯಾಣ ಮಾಡಲೇಬೇಡಿ.
ಮನೆಯಲ್ಲಿ ಕೂಡ ವಿದ್ಯುತ್ ಉಪಕರಣ, ಗ್ಯಾಸ್ ಸ್ಟೌ ಇತ್ಯಾದಿಗಳ ಬಗ್ಗೆ ಎಚ್ಚರವಿರಲಿ. ಯಾವುದೇ ಅಪಾಯಕ್ಕೆ ನೀವಾಗಿಯೇ ಕೈ ಹಾಕದಿರುವುದು ಉತ್ತಮ. ತಾಳ್ಮೆಯ ವರ್ತನೆಗೆ ನಿಧಾನ ಶುಭ ವೆನಿಸಲಿದೆ.
ನಿಮ್ಮ ರಾಶಿಯಿಂದ ಏಳನೇ ಮನೆಯಲ್ಲಿ ಗ್ರಹಣ ಸಂಭವಿಸುತ್ತಿದೆ. ಅಂದರೆ ಅದು ಕಳತ್ರ ಸ್ಥಾನ. ಆದ್ದರಿಂದ ಬಾಳ ಸಂಗಾತಿಯೊಂದಿಗೆ ಯಾವುದೇ ವಿಚಾರದಲ್ಲಿ ಜಗಳ ಮಾಡಿಕೊಳ್ಳುವುದಕ್ಕೆ ಹೋಗಬೇಡಿ. ಅವರನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳುವುದಕ್ಕೆ ಪ್ರಯತ್ನಿಸಿ.ಆ ಮೂಲಕ ಯಾವುದೇ ಬಿಕ್ಕಟ್ಟು ಎದುರಾಗದಂತೆ ಎಚ್ಚರ ವಹಿಸಿ.
ನಿಮ್ಮ ರಾಶಿಗೆ ಸಂತೋಷದ ಫಲಿತಾಂಶ ಕೊಡುತ್ತದೆ ಚಂದ್ರ ಗ್ರಹಣ. ಹೊಸ ಉದ್ಯೋಗಿಗಳಿಗೆ ಔದ್ಯೋಗಿಕ ರಂಗದಲ್ಲಿ ಅನುಕೂಲ, ಪ್ರಗತಿ ಇದೆ. ನಿಮ್ಮ ವಯಕ್ತಿಕ ಸಂಬಂಧಗಳು ವೃದ್ಧಿಯಾಗುತ್ತವೆ. ಎಲ್ಲದರಲ್ಲೂ ಗೌರವ-ಮನ್ನಣೆಗಳು ಹೆಚ್ಚಾಗುತ್ತವೆ.
ಸಾಮಾಜಿಕ ಬದುಕಿನಲ್ಲಿ ಮಿಂಚುತ್ತೀರಿ. ಒಟ್ಟಿನಲ್ಲಿ ಈ ಗ್ರಹಣದಿಂದ ನಿಮಗೆ ಶುಭ ಫಲಗಳೇ ಜಾಸ್ತಿ.
ಮೀನ ರಾಶಿಯವರಿಗೆ ಈ ಬಾರಿಯ ಗ್ರಹಣ ಅಂಥ ಶುಭವಲ್ಲ. ಇದರಿಂದ ಆಗುವ ಮುಖ್ಯ ಸಮಸ್ಯೆ ಅಂದರೆ, ಮಾನಸಿಕ ಒತ್ತಡ.
ಅದರಲ್ಲೂ ನಾನಾ ಬಗೆಯ ಸಮಸ್ಯೆ ಹಾಗೂ ಸವಾಲುಗಳು ಎದುರಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….
ಯಲಹಂಕ ಸಾಂಪ್ರದಾಯಿಕ ಸಿರಿಯನ್ನು ಹೊಂದಿರುವ ಕ್ಷೇತ್ರ. ಈ ಹಿಂದೆ 2008ರ ನಂತರ ಇಂದು ಪ್ರತಿಷ್ಠಿತ ಕ್ಷೇತ್ರವಾಗಿ ಮಾರ್ಪಟ್ಟಿದೆ.
ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…
ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…
ಐವತ್ತು ವರ್ಷಗಳ ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…