ಜ್ಯೋತಿಷ್ಯ

150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣದಿಂದ ಯಾವ ರಾಶಿಗೆ ಏನು ಫಲ..?ತಿಳಿಯಲು ಈ ಲೇಖನ ಓದಿ..

5816

ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.

ಖಂಡಗ್ರಾಸ ಚಂದ್ರಗ್ರಹಣ ಜನವರಿ 31, 2018 ರಂದು | ಯಾವ ರಾಶಿಗೆ ಏನು ಫಲ:-

ಇದೇ ತಿಂಗಳು ಅಂದರೆ ಜನವರಿ 31ರ ಬುಧವಾರದಂದು ಖಂಡಗ್ರಾಸ ಚಂದ್ರಗ್ರಹಣ ಇದ್ದು, ಅಶ್ಲೇಷ ನಕ್ಷತ್ರದಲ್ಲಿ ಚಂದ್ರನಿಗೆ ಪೂರ್ಣ ರಾಹು ಗ್ರಹಣವು ಗ್ರಸ್ತೋದಯವಾಗಿ ಗೋಚರವಾಗುತ್ತದೆ. ಅಂದು ಸಂಜೆ 5.17ಕ್ಕೆ ಗ್ರಹಣದ ಸ್ಪರ್ಶ ಕಾಲ ಆಗಲಿದ್ದು, ರಾತ್ರಿ 7.19ಕ್ಕೆ ಗ್ರಹಣ ಮಧ್ಯಕಾಲವಾಗಲಿದ್ದು, ರಾತ್ರಿ 8.41ಕ್ಕೆ ಗ್ರಹಣ ಮೋಕ್ಷ ಆಗಲಿದೆ.

ಗ್ರಹಣ ಕಾಲದ ವಿಶೇಷ ಸೂಚನೆಗಳು:-

* ಗ್ರಹಣದ ಆರಂಭ ಹಾಗೂ ಬಿಟ್ಟ ನಂತರ ಉಟ್ಟ ಬಟ್ಟೆಯಲ್ಲಿ ಸ್ನಾನ ಮಾಡಬೇಕು

* ಗ್ರಹಣ ದೋಷ ಇರುವವರು ಚಂದ್ರ ಬಿಂಬ ಹಾಗೂ ಅಕ್ಕಿಯನ್ನು ದಾನ ಮಾಡಬೇಕು

ಮೇಷ:

ಮೇಷ ರಾಶಿಯವರಿಗೆ ಹಲವು ಬಗೆಯಲ್ಲಿ ಸಮಸ್ಯೆಗಳು ಕಾಣುತ್ತಿವೆ. ನೀವೇ ಹುಡುಕಿಕೊಂಡು ಹೋಗಿ, ಸಮಸ್ಯೆಗೆ ಸಿಲುಕುವ ಸಂಭವವೂ ಇದೆ. ಹೊಸ ಸಾಹಸಗಳಿಗೆ ಕೈ ಹಾಕಲೇ ಬೇಡಿ.

ಎಲ್ಲವೂ ಸಮಸ್ಯೆ ಎಂಬುದನ್ನೇ ಸೂಚಿಸುತ್ತಿದೆ ಆದ್ದರಿಂದ ಈ ಲೇಖನದಲ್ಲಿ ತಿಳಿಸಿರುವಂತೆ ಪರಿಹಾರವನ್ನು ಕಡ್ಡಾಯವಾಗಿ ಅನುಸರಿಸಿ.  ಅತಿ ಮುಖ್ಯವಾದ ಕೆಲಸಗಳಿಗೆ ಮಾತ್ರ ಪ್ರಾಮುಖ್ಯತೆ ಕೊಡಿರಿ. ದಿಢೀರ್‌ ಪ್ರಯಾಣ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವುದು.

ವೃಷಭ:-

ಈ ಗ್ರಹಣದಿಂದ ವೃಷಭ ರಾಶಿಯವರಿಗೆ ಕೆಲ ಶುಭ ಫಲಗಳನ್ನು ಹೇಳಬಹುದಾಗಿದೆ. ಅದರಲ್ಲೂ ಹಣಕಾಸಿನ ಅನುಕೂಲಗಳು ಗೋಚರಿಸುತ್ತಿವೆ. ಅಚ್ಚರಿಯ ಧನಾಗಮಗಳಿಗೆ ಸಿದ್ಧವಾಗಿರಿ. ಅನಿರೀಕ್ಷೆತ ಧನಪ್ರಾಪ್ತಿ.

ಅದು ಕೂಡ ನಿಮ್ಮ ಎಂದಿನ ಆದಾಯ ಮೂಲವಲ್ಲ. ಇದು ಹೊಸದಾದ ಆದಾಯ ಮೂಲದಿಂದ ಸಿಗುವ ಧನಲಾಭ.

ಮಿಥುನ:

ಈ ರಾಶಿಯವರಿಗೆ ಚಂದ್ರಗ್ರಹಣದ ಫಲಿತಾಂಶ ದಿಂದ ಒಳ್ಳೆಯದು ಮತ್ತು ಕೆಟ್ಟದ್ದು ಎರಡು ಸಹ ಲಭಿಸುತ್ತವೆ. ತುಂಬ ಸಾಮಾನ್ಯವಾಗಿ ಕಂಡುಬರುವುದು ಆರ್ಥಿಕ ನಷ್ಟ. ಯಾರಿಗಾದರೂ ಸಾಲ ಕೊಡಲಿಕ್ಕೆ ಹೋಗಬೇಡಿ.

ರಿಸ್ಕ್ ಇರುವಂಥ ಹೂಡಿಕೆಯಂತೂ ಮಾಡಲೇಬೇಡಿ. ಒಟ್ಟಾರೆ ಹಣಕಾಸಿನ ವ್ಯವಹಾರದಲ್ಲಿ ಬಹಳ ಎಚ್ಚರವಾಗಿರಬೇಕು.

ಕರ್ಕಾಟಕ :-

ಎಲ್ಲದಕ್ಕೂ ಹಿರಿಯರ ಮಾರ್ಗದರ್ಶನ ಪಡೆಯುವುದರಿಂದ ಬಲಬರಲಿದೆ.ಏನಾಗುತ್ತಿದೆ ಅಂತಲೇ ಗೊತ್ತಾಗದಂಥ ಸನ್ನಿವೇಶ ನಿಮ್ಮದು.

ಏಕೆ ತೊಂದರೆ ಆಗುತ್ತಿದೆ, ಇಂಥ ಸನ್ನಿವೇಶದಲ್ಲಿ ಸಿಕ್ಕಿಬಿದ್ದಿದ್ದು ಹೇಗೆ ಎಂದು ಗೊತ್ತಾಗುವಷ್ಟರಲ್ಲಿ ತಲೆ ಹಾರಿ ಹೋಗಿರುತ್ತದೆ.

 ಸಿಂಹ:

ಈ ದಿನ ವೈಯಕ್ತಿಕ ಸಮಸ್ಯೆಗಳ ನಿರ್ವಹಣೆಗೆ ಅಧಿಕ ಪ್ರಯತ್ನ ಬೇಡ ತಾನಾಗಿಯೇ ಪರಿಹಾರಗೊಳ್ಳಲಿದೆ. ಹಣಕಾಸಿನ ವಿಚಾರವಾಗಿ ಎಷ್ಟು ಹುಷಾರಾಗಿರುತ್ತೀರೋ ಅಷ್ಟು ಒಳ್ಳೆಯದು.

ದಿಢೀರ್ ನಷ್ಟ ತಂದೊಡ್ಡುವ ಗ್ರಹಣ ಇದು. ತುರ್ತು ಯೋಜನೆಗೆ ಕೈ ಹಾಕಲು ಹೋಗಬೇಡಿ. ಹಣ ಕಾಸಿನ ವಿಷಯಕ್ಕೆ ಸಂಬಂಧಿಸಿದ್ದು ಅನ್ನೋವಾಗ ಒಂದಕ್ಕೆ ಎರಡು ಸಲ ಪರಿಶೀಲಿಸಿ, ಸಹಿ ಮಾಡಿ. ಇನ್ನೊಬ್ಬರನ್ನು ಕುರುಡಾಗಿ ನಂಬಬೇಡಿ.

ಕನ್ಯಾ :-

ಹಣ ತರುವ ಅವಕಾಶಗಳು ಬರುವಾಗ ನೀವಾಗಿಯೇ ಅದನ್ನು ನಿರಾಕರಿಸಬೇಡಿ. ಮುಖ್ಯವಾಗಿ ನಿಮ್ಮ ಪ್ರತಿಭೆ ಯಾವುದರಲ್ಲಿದೆ ಆ ವಿಚಾರವಾಗಿಯೇ ಕೆಲ ಅವಕಾಶಗಳು ಹುಡುಕಿಕೊಂಡು ಬಂದು ಬಾಗಿಲು ತಟ್ಟುತ್ತವೆ.

ಈ ಗ್ರಹಣದಿಂದ ನಿಮಗೆ ಶುಭ ಫಲಗಳು ಇವೆ. ಅದರ ಸದುಪಯೋಗ ಮಾಡಿಕೊಳ್ಳಬೇಕಷ್ಟೇ.

ತುಲಾ:

ಚಂದ್ರ ಗ್ರಹಣದ ಫಲಿತಾಂಶ ಶುಭವಾಗಿದೆ. ಕುಟುಂಬದಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಲಿದೆ. ಕುಟುಂಬದಲ್ಲಿನ ಹಿರಿಯರ ಸಹಕಾರ ಮತ್ತು ಸ್ನೇಹಿತರಿಂದ ದೈಹಿಕ ಬಲ, ಆರ್ಥಿಕ ಬಲ ಹೆಚ್ಚಲಿದೆ.

ಸಹಾಯ ಅನ್ನೋದರ ಜತೆಗೆ ನಿಮಗೆ ಬೇಕಾದ ಸಹಕಾರ ದೊರೆಯುತ್ತದೆ.

ವೃಶ್ಚಿಕ :-

ವೃಶ್ಚಿಕ ರಾಶಿಯವರು ತಮ್ಮ ವರ್ಚಸ್ಸು ಹಾಗೂ ಸಮಾಜದಲ್ಲಿನ ಗೌರವದ ಬಗ್ಗೆ ಎಚ್ಚರ ವಹಿಸಬೇಕು. ಏಕೆಂದರೆ ಈ ಗ್ರಹಣವು ನಷ್ಟ ಮತ್ತು ಅವಮಾನವನ್ನು ಸೂಚಿಸುತ್ತಿದೆ. ದುಷ್ಟ ಆಲೋಚನೆ ಇರುವ ಜನರಿಂದ ದೂರ ಇರಿ.ನಿಮ್ಮ ಹೆಸರು ಹಾಳು ಮಾಡಬಹುದಾದ ಚಟುವಟಿಕೆಯಿಂದ ದೂರ ಇರಿ.

ಧನಸ್ಸು:

ಈ ಗ್ರಹಣವು ಅತ್ಯಂತ ಕೆಡಕು ತರುವುದು ನಿಮ್ಮ ರಾಶಿಗೆ ಎಚ್ಚರ ಎಚ್ಚರ!. ಆದ್ದರಿಂದ ಈ ತಿಂಗಳಿಡೀ ದೂರ ಪ್ರಯಾಣ ಮಾಡಲೇಬೇಡಿ.

ಮನೆಯಲ್ಲಿ ಕೂಡ ವಿದ್ಯುತ್ ಉಪಕರಣ, ಗ್ಯಾಸ್ ಸ್ಟೌ ಇತ್ಯಾದಿಗಳ ಬಗ್ಗೆ ಎಚ್ಚರವಿರಲಿ. ಯಾವುದೇ ಅಪಾಯಕ್ಕೆ ನೀವಾಗಿಯೇ ಕೈ ಹಾಕದಿರುವುದು ಉತ್ತಮ. ತಾಳ್ಮೆಯ ವರ್ತನೆಗೆ ನಿಧಾನ ಶುಭ ವೆನಿಸಲಿದೆ.

ಮಕರ :-

ನಿಮ್ಮ ರಾಶಿಯಿಂದ ಏಳನೇ ಮನೆಯಲ್ಲಿ ಗ್ರಹಣ ಸಂಭವಿಸುತ್ತಿದೆ. ಅಂದರೆ ಅದು ಕಳತ್ರ ಸ್ಥಾನ. ಆದ್ದರಿಂದ ಬಾಳ ಸಂಗಾತಿಯೊಂದಿಗೆ ಯಾವುದೇ ವಿಚಾರದಲ್ಲಿ ಜಗಳ ಮಾಡಿಕೊಳ್ಳುವುದಕ್ಕೆ ಹೋಗಬೇಡಿ. ಅವರನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳುವುದಕ್ಕೆ ಪ್ರಯತ್ನಿಸಿ.ಆ ಮೂಲಕ ಯಾವುದೇ ಬಿಕ್ಕಟ್ಟು ಎದುರಾಗದಂತೆ ಎಚ್ಚರ ವಹಿಸಿ.

ಕುಂಭ:-

ನಿಮ್ಮ ರಾಶಿಗೆ ಸಂತೋಷದ ಫಲಿತಾಂಶ ಕೊಡುತ್ತದೆ ಚಂದ್ರ ಗ್ರಹಣ. ಹೊಸ ಉದ್ಯೋಗಿಗಳಿಗೆ ಔದ್ಯೋಗಿಕ ರಂಗದಲ್ಲಿ ಅನುಕೂಲ, ಪ್ರಗತಿ ಇದೆ. ನಿಮ್ಮ ವಯಕ್ತಿಕ ಸಂಬಂಧಗಳು ವೃದ್ಧಿಯಾಗುತ್ತವೆ. ಎಲ್ಲದರಲ್ಲೂ ಗೌರವ-ಮನ್ನಣೆಗಳು ಹೆಚ್ಚಾಗುತ್ತವೆ.

ಸಾಮಾಜಿಕ ಬದುಕಿನಲ್ಲಿ ಮಿಂಚುತ್ತೀರಿ. ಒಟ್ಟಿನಲ್ಲಿ ಈ ಗ್ರಹಣದಿಂದ ನಿಮಗೆ ಶುಭ ಫಲಗಳೇ ಜಾಸ್ತಿ.

ಮೀನ:-

ಮೀನ ರಾಶಿಯವರಿಗೆ ಈ ಬಾರಿಯ ಗ್ರಹಣ ಅಂಥ ಶುಭವಲ್ಲ. ಇದರಿಂದ ಆಗುವ ಮುಖ್ಯ ಸಮಸ್ಯೆ ಅಂದರೆ, ಮಾನಸಿಕ ಒತ್ತಡ.

ಅದರಲ್ಲೂ ನಾನಾ ಬಗೆಯ ಸಮಸ್ಯೆ ಹಾಗೂ ಸವಾಲುಗಳು ಎದುರಾಗುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಫೋಸಿಸ್ ಉದ್ಯೋಗಿಗಳಿಗೆ ಕಾದಿದೆ ಒಂದು ಶಾಕಿಂಗ್ ಸುದ್ದಿ ; 10000 ಸಿಬ್ಬಂದಿ ಕೆಲಸಕ್ಕೆ ಕತ್ತರಿ..! ಯಾಕೆ ಗೊತ್ತಾ?

    ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್‌ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….

  • ಸಿನಿಮಾ

    ಈ ನಟ ‘ಮೆಗಾ ಸ್ಟಾರ್’ ಆದ್ರೂ ಈಗಲೂ ಬೀಡಿ ಸೇದುತ್ತಾರೆ..!ಯಾರು ಗೊತ್ತಾ..?ತಿಳಿಯಲು ಈ ಲೇಖನ ಓದಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…

  • ಸುದ್ದಿ

    ಹಾಸ್ಟೆಲ್‍ನಲ್ಲಿ ಹುಡ್ಗೀರು ಸ್ನಾನ ಮಾಡೋದನ್ನು ಕದ್ದು ನೋಡಲು ಬಂದವ ಜೈಲು ಸೇರಿದ ಆರೋಪಿ……!

    ಹಾಸ್ಟೆಲ್‍ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್‍ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…

  • ಗ್ಯಾಜೆಟ್

    ಹುಷಾರ್!ನೀವು ಚೀನಾ ಮೊಬೈಲ್ ಬಳುಸುತ್ತಿದ್ದರೆ ತಪ್ಪದೆ ಈ ಲೇಖನಿ ಓದಿ…

    ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.

  • ಸುದ್ದಿ

    ‘ವಾಟ್ಸಾಪ್’:ನಿಮ್ಮ ಖಾಸಗಿ ವಿಷಯಗಳನ್ನು ಬಹಿರಂಗಪಡಿಸಬಹುದು ಎಚ್ಚರ…!

    ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…

  • ಕಾನೂನು

    ಈ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸುವ ಅಧಿಕಾರ ಭಾರತದ ಸಂಸತ್‌ಗಿಲ್ಲ.!ಈ ರಾಜ್ಯದವರು ತೆರಿಗೆ ಕಟ್ಟೋ ಆಗಿಲ್ಲ!ಯಾಕೆ ಗೊತ್ತಾ?ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ…

    ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…