News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣದಿಂದ ಯಾವ ರಾಶಿಗೆ ಏನು ಫಲ..?ತಿಳಿಯಲು ಈ ಲೇಖನ ಓದಿ..

5833

ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.

ಖಂಡಗ್ರಾಸ ಚಂದ್ರಗ್ರಹಣ ಜನವರಿ 31, 2018 ರಂದು | ಯಾವ ರಾಶಿಗೆ ಏನು ಫಲ:-

ಇದೇ ತಿಂಗಳು ಅಂದರೆ ಜನವರಿ 31ರ ಬುಧವಾರದಂದು ಖಂಡಗ್ರಾಸ ಚಂದ್ರಗ್ರಹಣ ಇದ್ದು, ಅಶ್ಲೇಷ ನಕ್ಷತ್ರದಲ್ಲಿ ಚಂದ್ರನಿಗೆ ಪೂರ್ಣ ರಾಹು ಗ್ರಹಣವು ಗ್ರಸ್ತೋದಯವಾಗಿ ಗೋಚರವಾಗುತ್ತದೆ. ಅಂದು ಸಂಜೆ 5.17ಕ್ಕೆ ಗ್ರಹಣದ ಸ್ಪರ್ಶ ಕಾಲ ಆಗಲಿದ್ದು, ರಾತ್ರಿ 7.19ಕ್ಕೆ ಗ್ರಹಣ ಮಧ್ಯಕಾಲವಾಗಲಿದ್ದು, ರಾತ್ರಿ 8.41ಕ್ಕೆ ಗ್ರಹಣ ಮೋಕ್ಷ ಆಗಲಿದೆ.

ಗ್ರಹಣ ಕಾಲದ ವಿಶೇಷ ಸೂಚನೆಗಳು:-

* ಗ್ರಹಣದ ಆರಂಭ ಹಾಗೂ ಬಿಟ್ಟ ನಂತರ ಉಟ್ಟ ಬಟ್ಟೆಯಲ್ಲಿ ಸ್ನಾನ ಮಾಡಬೇಕು

* ಗ್ರಹಣ ದೋಷ ಇರುವವರು ಚಂದ್ರ ಬಿಂಬ ಹಾಗೂ ಅಕ್ಕಿಯನ್ನು ದಾನ ಮಾಡಬೇಕು

ಮೇಷ:

ಮೇಷ ರಾಶಿಯವರಿಗೆ ಹಲವು ಬಗೆಯಲ್ಲಿ ಸಮಸ್ಯೆಗಳು ಕಾಣುತ್ತಿವೆ. ನೀವೇ ಹುಡುಕಿಕೊಂಡು ಹೋಗಿ, ಸಮಸ್ಯೆಗೆ ಸಿಲುಕುವ ಸಂಭವವೂ ಇದೆ. ಹೊಸ ಸಾಹಸಗಳಿಗೆ ಕೈ ಹಾಕಲೇ ಬೇಡಿ.

ಎಲ್ಲವೂ ಸಮಸ್ಯೆ ಎಂಬುದನ್ನೇ ಸೂಚಿಸುತ್ತಿದೆ ಆದ್ದರಿಂದ ಈ ಲೇಖನದಲ್ಲಿ ತಿಳಿಸಿರುವಂತೆ ಪರಿಹಾರವನ್ನು ಕಡ್ಡಾಯವಾಗಿ ಅನುಸರಿಸಿ.  ಅತಿ ಮುಖ್ಯವಾದ ಕೆಲಸಗಳಿಗೆ ಮಾತ್ರ ಪ್ರಾಮುಖ್ಯತೆ ಕೊಡಿರಿ. ದಿಢೀರ್‌ ಪ್ರಯಾಣ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವುದು.

ವೃಷಭ:-

ಈ ಗ್ರಹಣದಿಂದ ವೃಷಭ ರಾಶಿಯವರಿಗೆ ಕೆಲ ಶುಭ ಫಲಗಳನ್ನು ಹೇಳಬಹುದಾಗಿದೆ. ಅದರಲ್ಲೂ ಹಣಕಾಸಿನ ಅನುಕೂಲಗಳು ಗೋಚರಿಸುತ್ತಿವೆ. ಅಚ್ಚರಿಯ ಧನಾಗಮಗಳಿಗೆ ಸಿದ್ಧವಾಗಿರಿ. ಅನಿರೀಕ್ಷೆತ ಧನಪ್ರಾಪ್ತಿ.

ಅದು ಕೂಡ ನಿಮ್ಮ ಎಂದಿನ ಆದಾಯ ಮೂಲವಲ್ಲ. ಇದು ಹೊಸದಾದ ಆದಾಯ ಮೂಲದಿಂದ ಸಿಗುವ ಧನಲಾಭ.

ಮಿಥುನ:

ಈ ರಾಶಿಯವರಿಗೆ ಚಂದ್ರಗ್ರಹಣದ ಫಲಿತಾಂಶ ದಿಂದ ಒಳ್ಳೆಯದು ಮತ್ತು ಕೆಟ್ಟದ್ದು ಎರಡು ಸಹ ಲಭಿಸುತ್ತವೆ. ತುಂಬ ಸಾಮಾನ್ಯವಾಗಿ ಕಂಡುಬರುವುದು ಆರ್ಥಿಕ ನಷ್ಟ. ಯಾರಿಗಾದರೂ ಸಾಲ ಕೊಡಲಿಕ್ಕೆ ಹೋಗಬೇಡಿ.

ರಿಸ್ಕ್ ಇರುವಂಥ ಹೂಡಿಕೆಯಂತೂ ಮಾಡಲೇಬೇಡಿ. ಒಟ್ಟಾರೆ ಹಣಕಾಸಿನ ವ್ಯವಹಾರದಲ್ಲಿ ಬಹಳ ಎಚ್ಚರವಾಗಿರಬೇಕು.

ಕರ್ಕಾಟಕ :-

ಎಲ್ಲದಕ್ಕೂ ಹಿರಿಯರ ಮಾರ್ಗದರ್ಶನ ಪಡೆಯುವುದರಿಂದ ಬಲಬರಲಿದೆ.ಏನಾಗುತ್ತಿದೆ ಅಂತಲೇ ಗೊತ್ತಾಗದಂಥ ಸನ್ನಿವೇಶ ನಿಮ್ಮದು.

ಏಕೆ ತೊಂದರೆ ಆಗುತ್ತಿದೆ, ಇಂಥ ಸನ್ನಿವೇಶದಲ್ಲಿ ಸಿಕ್ಕಿಬಿದ್ದಿದ್ದು ಹೇಗೆ ಎಂದು ಗೊತ್ತಾಗುವಷ್ಟರಲ್ಲಿ ತಲೆ ಹಾರಿ ಹೋಗಿರುತ್ತದೆ.

 ಸಿಂಹ:

ಈ ದಿನ ವೈಯಕ್ತಿಕ ಸಮಸ್ಯೆಗಳ ನಿರ್ವಹಣೆಗೆ ಅಧಿಕ ಪ್ರಯತ್ನ ಬೇಡ ತಾನಾಗಿಯೇ ಪರಿಹಾರಗೊಳ್ಳಲಿದೆ. ಹಣಕಾಸಿನ ವಿಚಾರವಾಗಿ ಎಷ್ಟು ಹುಷಾರಾಗಿರುತ್ತೀರೋ ಅಷ್ಟು ಒಳ್ಳೆಯದು.

ದಿಢೀರ್ ನಷ್ಟ ತಂದೊಡ್ಡುವ ಗ್ರಹಣ ಇದು. ತುರ್ತು ಯೋಜನೆಗೆ ಕೈ ಹಾಕಲು ಹೋಗಬೇಡಿ. ಹಣ ಕಾಸಿನ ವಿಷಯಕ್ಕೆ ಸಂಬಂಧಿಸಿದ್ದು ಅನ್ನೋವಾಗ ಒಂದಕ್ಕೆ ಎರಡು ಸಲ ಪರಿಶೀಲಿಸಿ, ಸಹಿ ಮಾಡಿ. ಇನ್ನೊಬ್ಬರನ್ನು ಕುರುಡಾಗಿ ನಂಬಬೇಡಿ.

ಕನ್ಯಾ :-

ಹಣ ತರುವ ಅವಕಾಶಗಳು ಬರುವಾಗ ನೀವಾಗಿಯೇ ಅದನ್ನು ನಿರಾಕರಿಸಬೇಡಿ. ಮುಖ್ಯವಾಗಿ ನಿಮ್ಮ ಪ್ರತಿಭೆ ಯಾವುದರಲ್ಲಿದೆ ಆ ವಿಚಾರವಾಗಿಯೇ ಕೆಲ ಅವಕಾಶಗಳು ಹುಡುಕಿಕೊಂಡು ಬಂದು ಬಾಗಿಲು ತಟ್ಟುತ್ತವೆ.

ಈ ಗ್ರಹಣದಿಂದ ನಿಮಗೆ ಶುಭ ಫಲಗಳು ಇವೆ. ಅದರ ಸದುಪಯೋಗ ಮಾಡಿಕೊಳ್ಳಬೇಕಷ್ಟೇ.

ತುಲಾ:

ಚಂದ್ರ ಗ್ರಹಣದ ಫಲಿತಾಂಶ ಶುಭವಾಗಿದೆ. ಕುಟುಂಬದಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಲಿದೆ. ಕುಟುಂಬದಲ್ಲಿನ ಹಿರಿಯರ ಸಹಕಾರ ಮತ್ತು ಸ್ನೇಹಿತರಿಂದ ದೈಹಿಕ ಬಲ, ಆರ್ಥಿಕ ಬಲ ಹೆಚ್ಚಲಿದೆ.

ಸಹಾಯ ಅನ್ನೋದರ ಜತೆಗೆ ನಿಮಗೆ ಬೇಕಾದ ಸಹಕಾರ ದೊರೆಯುತ್ತದೆ.

ವೃಶ್ಚಿಕ :-

ವೃಶ್ಚಿಕ ರಾಶಿಯವರು ತಮ್ಮ ವರ್ಚಸ್ಸು ಹಾಗೂ ಸಮಾಜದಲ್ಲಿನ ಗೌರವದ ಬಗ್ಗೆ ಎಚ್ಚರ ವಹಿಸಬೇಕು. ಏಕೆಂದರೆ ಈ ಗ್ರಹಣವು ನಷ್ಟ ಮತ್ತು ಅವಮಾನವನ್ನು ಸೂಚಿಸುತ್ತಿದೆ. ದುಷ್ಟ ಆಲೋಚನೆ ಇರುವ ಜನರಿಂದ ದೂರ ಇರಿ.ನಿಮ್ಮ ಹೆಸರು ಹಾಳು ಮಾಡಬಹುದಾದ ಚಟುವಟಿಕೆಯಿಂದ ದೂರ ಇರಿ.

ಧನಸ್ಸು:

ಈ ಗ್ರಹಣವು ಅತ್ಯಂತ ಕೆಡಕು ತರುವುದು ನಿಮ್ಮ ರಾಶಿಗೆ ಎಚ್ಚರ ಎಚ್ಚರ!. ಆದ್ದರಿಂದ ಈ ತಿಂಗಳಿಡೀ ದೂರ ಪ್ರಯಾಣ ಮಾಡಲೇಬೇಡಿ.

ಮನೆಯಲ್ಲಿ ಕೂಡ ವಿದ್ಯುತ್ ಉಪಕರಣ, ಗ್ಯಾಸ್ ಸ್ಟೌ ಇತ್ಯಾದಿಗಳ ಬಗ್ಗೆ ಎಚ್ಚರವಿರಲಿ. ಯಾವುದೇ ಅಪಾಯಕ್ಕೆ ನೀವಾಗಿಯೇ ಕೈ ಹಾಕದಿರುವುದು ಉತ್ತಮ. ತಾಳ್ಮೆಯ ವರ್ತನೆಗೆ ನಿಧಾನ ಶುಭ ವೆನಿಸಲಿದೆ.

ಮಕರ :-

ನಿಮ್ಮ ರಾಶಿಯಿಂದ ಏಳನೇ ಮನೆಯಲ್ಲಿ ಗ್ರಹಣ ಸಂಭವಿಸುತ್ತಿದೆ. ಅಂದರೆ ಅದು ಕಳತ್ರ ಸ್ಥಾನ. ಆದ್ದರಿಂದ ಬಾಳ ಸಂಗಾತಿಯೊಂದಿಗೆ ಯಾವುದೇ ವಿಚಾರದಲ್ಲಿ ಜಗಳ ಮಾಡಿಕೊಳ್ಳುವುದಕ್ಕೆ ಹೋಗಬೇಡಿ. ಅವರನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳುವುದಕ್ಕೆ ಪ್ರಯತ್ನಿಸಿ.ಆ ಮೂಲಕ ಯಾವುದೇ ಬಿಕ್ಕಟ್ಟು ಎದುರಾಗದಂತೆ ಎಚ್ಚರ ವಹಿಸಿ.

ಕುಂಭ:-

ನಿಮ್ಮ ರಾಶಿಗೆ ಸಂತೋಷದ ಫಲಿತಾಂಶ ಕೊಡುತ್ತದೆ ಚಂದ್ರ ಗ್ರಹಣ. ಹೊಸ ಉದ್ಯೋಗಿಗಳಿಗೆ ಔದ್ಯೋಗಿಕ ರಂಗದಲ್ಲಿ ಅನುಕೂಲ, ಪ್ರಗತಿ ಇದೆ. ನಿಮ್ಮ ವಯಕ್ತಿಕ ಸಂಬಂಧಗಳು ವೃದ್ಧಿಯಾಗುತ್ತವೆ. ಎಲ್ಲದರಲ್ಲೂ ಗೌರವ-ಮನ್ನಣೆಗಳು ಹೆಚ್ಚಾಗುತ್ತವೆ.

ಸಾಮಾಜಿಕ ಬದುಕಿನಲ್ಲಿ ಮಿಂಚುತ್ತೀರಿ. ಒಟ್ಟಿನಲ್ಲಿ ಈ ಗ್ರಹಣದಿಂದ ನಿಮಗೆ ಶುಭ ಫಲಗಳೇ ಜಾಸ್ತಿ.

ಮೀನ:-

ಮೀನ ರಾಶಿಯವರಿಗೆ ಈ ಬಾರಿಯ ಗ್ರಹಣ ಅಂಥ ಶುಭವಲ್ಲ. ಇದರಿಂದ ಆಗುವ ಮುಖ್ಯ ಸಮಸ್ಯೆ ಅಂದರೆ, ಮಾನಸಿಕ ಒತ್ತಡ.

ಅದರಲ್ಲೂ ನಾನಾ ಬಗೆಯ ಸಮಸ್ಯೆ ಹಾಗೂ ಸವಾಲುಗಳು ಎದುರಾಗುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಜನರ ಮನ ಗೆದ್ದಿರುವ ಸರಿಗಪಮ ಲಕ್ಷ್ಮಿ ರಾಮಪ್ಪರವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ಸತ್ಯ ಏನು ಗೊತ್ತಾ..?

    ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.

  • ರಾಜಕೀಯ

    ಇಲ್ಲಿದೆ ಬಿಜೆಪಿ ಎರಡನೇ ಪಟ್ಟಿ..!ನಿಮ್ಮ ಕ್ಷೇತ್ರದ ಯಾರಿಗೆ ಟಿಕೆಟ್ ಸಿಕ್ಕಿದೆ?ಯಾರಿಗಿಲ್ಲ?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…

  • ಸುದ್ದಿ

    ವಿದ್ಯುತ್ ದರ ಪ್ರತಿ ಯೂನಿಟ್ ಗೆ 33 ಪೈಸೆ ಏರಿಕೆ…ಕಾರಣ?

    ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್‍ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್‍ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….

  • ಉಪಯುಕ್ತ ಮಾಹಿತಿ

    ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲಿರುವ ಈ ಐದು ಡಿಜಿಟ್‌ ನಂಬರ್‌’ನ ಹಿಂದಿರುವ ರಹಸ್ಯ ಏನ್ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್‌ನ ಪ್ರತಿ ಕಂಪಾರ್ಟ್‌ಮೆಂಟ್‌ನ ಮೇಲೆ ಐದು ಡಿಜಿಟ್‌ ಹೊಂದಿರುವ ಒಂದು ನಂಬರ್‌ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್‌ ನಂಬರ್‌ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್‌ ಏನು..? ಯಾಕೆ ಈ ನಂಬರ್‌ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲೆಯೂ ಐದು ಡಿಜಿಟ್‌ನ ಈ ನಂಬರ್‌ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲೆಯೂ…

  • ಸರ್ಕಾರದ ಯೋಜನೆಗಳು

    ರಾಜಕಾರಣಿಗಳ ಮತ್ತು ಸರಕಾರಿ ಅಧಿಕಾರಿಗಳ ಮಕ್ಕಳು ಸರಕಾರಿ ಶಾಲೆಗೆ..! ತಿಳಿಯಲು ಈ ಲೇಖನ ಓದಿ ..

    ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.

  • ಸುದ್ದಿ

    2 ದಿನಗಳ ಭೇಟಿಗಾಗಿ ಕೇದಾರನಾಥಕ್ಕೆ ಬಂದಿಳಿದ ಪ್ರಧಾನಿ ಮೋದಿ, ಪುನರ್ನಿರ್ಮಾಣ….

    ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್‌ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು. ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಶನಿವಾರ ಆಗಮಿಸಿದರು. ಸಾರ್ವತ್ರಿಕ ಚುನಾವಣೆಯ ಪ್ರಚಾರ ಕೊನೆಗೊಂಡ ಮರುದಿನವೇ ಪ್ರಧಾನಿ…