ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.

ಇದೇ ತಿಂಗಳು ಅಂದರೆ ಜನವರಿ 31ರ ಬುಧವಾರದಂದು ಖಂಡಗ್ರಾಸ ಚಂದ್ರಗ್ರಹಣ ಇದ್ದು, ಅಶ್ಲೇಷ ನಕ್ಷತ್ರದಲ್ಲಿ ಚಂದ್ರನಿಗೆ ಪೂರ್ಣ ರಾಹು ಗ್ರಹಣವು ಗ್ರಸ್ತೋದಯವಾಗಿ ಗೋಚರವಾಗುತ್ತದೆ. ಅಂದು ಸಂಜೆ 5.17ಕ್ಕೆ ಗ್ರಹಣದ ಸ್ಪರ್ಶ ಕಾಲ ಆಗಲಿದ್ದು, ರಾತ್ರಿ 7.19ಕ್ಕೆ ಗ್ರಹಣ ಮಧ್ಯಕಾಲವಾಗಲಿದ್ದು, ರಾತ್ರಿ 8.41ಕ್ಕೆ ಗ್ರಹಣ ಮೋಕ್ಷ ಆಗಲಿದೆ.

* ಗ್ರಹಣದ ಆರಂಭ ಹಾಗೂ ಬಿಟ್ಟ ನಂತರ ಉಟ್ಟ ಬಟ್ಟೆಯಲ್ಲಿ ಸ್ನಾನ ಮಾಡಬೇಕು
* ಗ್ರಹಣ ದೋಷ ಇರುವವರು ಚಂದ್ರ ಬಿಂಬ ಹಾಗೂ ಅಕ್ಕಿಯನ್ನು ದಾನ ಮಾಡಬೇಕು
ಮೇಷ ರಾಶಿಯವರಿಗೆ ಹಲವು ಬಗೆಯಲ್ಲಿ ಸಮಸ್ಯೆಗಳು ಕಾಣುತ್ತಿವೆ. ನೀವೇ ಹುಡುಕಿಕೊಂಡು ಹೋಗಿ, ಸಮಸ್ಯೆಗೆ ಸಿಲುಕುವ ಸಂಭವವೂ ಇದೆ. ಹೊಸ ಸಾಹಸಗಳಿಗೆ ಕೈ ಹಾಕಲೇ ಬೇಡಿ.

ಎಲ್ಲವೂ ಸಮಸ್ಯೆ ಎಂಬುದನ್ನೇ ಸೂಚಿಸುತ್ತಿದೆ ಆದ್ದರಿಂದ ಈ ಲೇಖನದಲ್ಲಿ ತಿಳಿಸಿರುವಂತೆ ಪರಿಹಾರವನ್ನು ಕಡ್ಡಾಯವಾಗಿ ಅನುಸರಿಸಿ. ಅತಿ ಮುಖ್ಯವಾದ ಕೆಲಸಗಳಿಗೆ ಮಾತ್ರ ಪ್ರಾಮುಖ್ಯತೆ ಕೊಡಿರಿ. ದಿಢೀರ್ ಪ್ರಯಾಣ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವುದು.
ಈ ಗ್ರಹಣದಿಂದ ವೃಷಭ ರಾಶಿಯವರಿಗೆ ಕೆಲ ಶುಭ ಫಲಗಳನ್ನು ಹೇಳಬಹುದಾಗಿದೆ. ಅದರಲ್ಲೂ ಹಣಕಾಸಿನ ಅನುಕೂಲಗಳು ಗೋಚರಿಸುತ್ತಿವೆ. ಅಚ್ಚರಿಯ ಧನಾಗಮಗಳಿಗೆ ಸಿದ್ಧವಾಗಿರಿ. ಅನಿರೀಕ್ಷೆತ ಧನಪ್ರಾಪ್ತಿ.

ಅದು ಕೂಡ ನಿಮ್ಮ ಎಂದಿನ ಆದಾಯ ಮೂಲವಲ್ಲ. ಇದು ಹೊಸದಾದ ಆದಾಯ ಮೂಲದಿಂದ ಸಿಗುವ ಧನಲಾಭ.
ಈ ರಾಶಿಯವರಿಗೆ ಚಂದ್ರಗ್ರಹಣದ ಫಲಿತಾಂಶ ದಿಂದ ಒಳ್ಳೆಯದು ಮತ್ತು ಕೆಟ್ಟದ್ದು ಎರಡು ಸಹ ಲಭಿಸುತ್ತವೆ. ತುಂಬ ಸಾಮಾನ್ಯವಾಗಿ ಕಂಡುಬರುವುದು ಆರ್ಥಿಕ ನಷ್ಟ. ಯಾರಿಗಾದರೂ ಸಾಲ ಕೊಡಲಿಕ್ಕೆ ಹೋಗಬೇಡಿ.

ರಿಸ್ಕ್ ಇರುವಂಥ ಹೂಡಿಕೆಯಂತೂ ಮಾಡಲೇಬೇಡಿ. ಒಟ್ಟಾರೆ ಹಣಕಾಸಿನ ವ್ಯವಹಾರದಲ್ಲಿ ಬಹಳ ಎಚ್ಚರವಾಗಿರಬೇಕು.
ಎಲ್ಲದಕ್ಕೂ ಹಿರಿಯರ ಮಾರ್ಗದರ್ಶನ ಪಡೆಯುವುದರಿಂದ ಬಲಬರಲಿದೆ.ಏನಾಗುತ್ತಿದೆ ಅಂತಲೇ ಗೊತ್ತಾಗದಂಥ ಸನ್ನಿವೇಶ ನಿಮ್ಮದು.

ಏಕೆ ತೊಂದರೆ ಆಗುತ್ತಿದೆ, ಇಂಥ ಸನ್ನಿವೇಶದಲ್ಲಿ ಸಿಕ್ಕಿಬಿದ್ದಿದ್ದು ಹೇಗೆ ಎಂದು ಗೊತ್ತಾಗುವಷ್ಟರಲ್ಲಿ ತಲೆ ಹಾರಿ ಹೋಗಿರುತ್ತದೆ.
ಈ ದಿನ ವೈಯಕ್ತಿಕ ಸಮಸ್ಯೆಗಳ ನಿರ್ವಹಣೆಗೆ ಅಧಿಕ ಪ್ರಯತ್ನ ಬೇಡ ತಾನಾಗಿಯೇ ಪರಿಹಾರಗೊಳ್ಳಲಿದೆ. ಹಣಕಾಸಿನ ವಿಚಾರವಾಗಿ ಎಷ್ಟು ಹುಷಾರಾಗಿರುತ್ತೀರೋ ಅಷ್ಟು ಒಳ್ಳೆಯದು.

ದಿಢೀರ್ ನಷ್ಟ ತಂದೊಡ್ಡುವ ಗ್ರಹಣ ಇದು. ತುರ್ತು ಯೋಜನೆಗೆ ಕೈ ಹಾಕಲು ಹೋಗಬೇಡಿ. ಹಣ ಕಾಸಿನ ವಿಷಯಕ್ಕೆ ಸಂಬಂಧಿಸಿದ್ದು ಅನ್ನೋವಾಗ ಒಂದಕ್ಕೆ ಎರಡು ಸಲ ಪರಿಶೀಲಿಸಿ, ಸಹಿ ಮಾಡಿ. ಇನ್ನೊಬ್ಬರನ್ನು ಕುರುಡಾಗಿ ನಂಬಬೇಡಿ.
ಹಣ ತರುವ ಅವಕಾಶಗಳು ಬರುವಾಗ ನೀವಾಗಿಯೇ ಅದನ್ನು ನಿರಾಕರಿಸಬೇಡಿ. ಮುಖ್ಯವಾಗಿ ನಿಮ್ಮ ಪ್ರತಿಭೆ ಯಾವುದರಲ್ಲಿದೆ ಆ ವಿಚಾರವಾಗಿಯೇ ಕೆಲ ಅವಕಾಶಗಳು ಹುಡುಕಿಕೊಂಡು ಬಂದು ಬಾಗಿಲು ತಟ್ಟುತ್ತವೆ.

ಈ ಗ್ರಹಣದಿಂದ ನಿಮಗೆ ಶುಭ ಫಲಗಳು ಇವೆ. ಅದರ ಸದುಪಯೋಗ ಮಾಡಿಕೊಳ್ಳಬೇಕಷ್ಟೇ.
ಚಂದ್ರ ಗ್ರಹಣದ ಫಲಿತಾಂಶ ಶುಭವಾಗಿದೆ. ಕುಟುಂಬದಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಲಿದೆ. ಕುಟುಂಬದಲ್ಲಿನ ಹಿರಿಯರ ಸಹಕಾರ ಮತ್ತು ಸ್ನೇಹಿತರಿಂದ ದೈಹಿಕ ಬಲ, ಆರ್ಥಿಕ ಬಲ ಹೆಚ್ಚಲಿದೆ.

ಸಹಾಯ ಅನ್ನೋದರ ಜತೆಗೆ ನಿಮಗೆ ಬೇಕಾದ ಸಹಕಾರ ದೊರೆಯುತ್ತದೆ.
ವೃಶ್ಚಿಕ ರಾಶಿಯವರು ತಮ್ಮ ವರ್ಚಸ್ಸು ಹಾಗೂ ಸಮಾಜದಲ್ಲಿನ ಗೌರವದ ಬಗ್ಗೆ ಎಚ್ಚರ ವಹಿಸಬೇಕು. ಏಕೆಂದರೆ ಈ ಗ್ರಹಣವು ನಷ್ಟ ಮತ್ತು ಅವಮಾನವನ್ನು ಸೂಚಿಸುತ್ತಿದೆ. ದುಷ್ಟ ಆಲೋಚನೆ ಇರುವ ಜನರಿಂದ ದೂರ ಇರಿ.ನಿಮ್ಮ ಹೆಸರು ಹಾಳು ಮಾಡಬಹುದಾದ ಚಟುವಟಿಕೆಯಿಂದ ದೂರ ಇರಿ.

ಈ ಗ್ರಹಣವು ಅತ್ಯಂತ ಕೆಡಕು ತರುವುದು ನಿಮ್ಮ ರಾಶಿಗೆ ಎಚ್ಚರ ಎಚ್ಚರ!. ಆದ್ದರಿಂದ ಈ ತಿಂಗಳಿಡೀ ದೂರ ಪ್ರಯಾಣ ಮಾಡಲೇಬೇಡಿ.

ಮನೆಯಲ್ಲಿ ಕೂಡ ವಿದ್ಯುತ್ ಉಪಕರಣ, ಗ್ಯಾಸ್ ಸ್ಟೌ ಇತ್ಯಾದಿಗಳ ಬಗ್ಗೆ ಎಚ್ಚರವಿರಲಿ. ಯಾವುದೇ ಅಪಾಯಕ್ಕೆ ನೀವಾಗಿಯೇ ಕೈ ಹಾಕದಿರುವುದು ಉತ್ತಮ. ತಾಳ್ಮೆಯ ವರ್ತನೆಗೆ ನಿಧಾನ ಶುಭ ವೆನಿಸಲಿದೆ.
ನಿಮ್ಮ ರಾಶಿಯಿಂದ ಏಳನೇ ಮನೆಯಲ್ಲಿ ಗ್ರಹಣ ಸಂಭವಿಸುತ್ತಿದೆ. ಅಂದರೆ ಅದು ಕಳತ್ರ ಸ್ಥಾನ. ಆದ್ದರಿಂದ ಬಾಳ ಸಂಗಾತಿಯೊಂದಿಗೆ ಯಾವುದೇ ವಿಚಾರದಲ್ಲಿ ಜಗಳ ಮಾಡಿಕೊಳ್ಳುವುದಕ್ಕೆ ಹೋಗಬೇಡಿ. ಅವರನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳುವುದಕ್ಕೆ ಪ್ರಯತ್ನಿಸಿ.ಆ ಮೂಲಕ ಯಾವುದೇ ಬಿಕ್ಕಟ್ಟು ಎದುರಾಗದಂತೆ ಎಚ್ಚರ ವಹಿಸಿ.

ನಿಮ್ಮ ರಾಶಿಗೆ ಸಂತೋಷದ ಫಲಿತಾಂಶ ಕೊಡುತ್ತದೆ ಚಂದ್ರ ಗ್ರಹಣ. ಹೊಸ ಉದ್ಯೋಗಿಗಳಿಗೆ ಔದ್ಯೋಗಿಕ ರಂಗದಲ್ಲಿ ಅನುಕೂಲ, ಪ್ರಗತಿ ಇದೆ. ನಿಮ್ಮ ವಯಕ್ತಿಕ ಸಂಬಂಧಗಳು ವೃದ್ಧಿಯಾಗುತ್ತವೆ. ಎಲ್ಲದರಲ್ಲೂ ಗೌರವ-ಮನ್ನಣೆಗಳು ಹೆಚ್ಚಾಗುತ್ತವೆ.

ಸಾಮಾಜಿಕ ಬದುಕಿನಲ್ಲಿ ಮಿಂಚುತ್ತೀರಿ. ಒಟ್ಟಿನಲ್ಲಿ ಈ ಗ್ರಹಣದಿಂದ ನಿಮಗೆ ಶುಭ ಫಲಗಳೇ ಜಾಸ್ತಿ.
ಮೀನ ರಾಶಿಯವರಿಗೆ ಈ ಬಾರಿಯ ಗ್ರಹಣ ಅಂಥ ಶುಭವಲ್ಲ. ಇದರಿಂದ ಆಗುವ ಮುಖ್ಯ ಸಮಸ್ಯೆ ಅಂದರೆ, ಮಾನಸಿಕ ಒತ್ತಡ.

ಅದರಲ್ಲೂ ನಾನಾ ಬಗೆಯ ಸಮಸ್ಯೆ ಹಾಗೂ ಸವಾಲುಗಳು ಎದುರಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…
ಈ ಮೊಸಳೆಗಳು, ಅವು ತನ್ನದೇ ಮರಿಗಳ ದ್ವನಿಯಿಂದ ನಿಖರವಾಗಿ ಗ್ರಹಿಸುತ್ತವೆ. ಇನ್ನೊಂದು ಮೊಸಳೆಯ ಮರಿಗಳನ್ನ ಹೊತ್ತೊಯ್ಯುವುದಿಲ್ಲ .
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.
ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..
ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ. ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ….