ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ ಬೇಕು, ಆದರೆ ಈ ಹುಡುಗಿ 1800 ರೂಪಾಯಿ ಖರ್ಚು ಮಾಡಿ AC ತಯಾರಿಸಿದ್ದಾಳೆ.
ಹೌದು ಉತ್ತರ ಪ್ರದೇಶದ ಜಾನ್ಸಿ ನಗರದಲ್ಲಿ ವಾಸವಿರುವ 16 ವರ್ಷದ ಕಲ್ಯಾಣಿ ಅನ್ನುವ ಹುಡುಗಿ ಹತ್ತಿರದ ಲೋಕಮಾನ್ಯ ತಿಲಕ್ ಕಾಲೇಜಿನಲ್ಲಿ PUC ವ್ಯಾಸಂಗ ಮಾಡುತ್ತಿದ್ದಾಳೆ, ಇನ್ನು ಈ ಹುಡುಗಿಯ ತಂದೆ ಮತ್ತು ತಾಯಿ ಇಬ್ಬರು ಕೂಡ ಶಿಕ್ಷಕರಾಗಿ ಕೆಲಸವನ್ನ ಮಾಡುತ್ತಿದ್ದಾರೆ. ಇನ್ನು ಯಾವಾಗಲು ಎಲ್ಲರಿಗಿಂತ ಬಹಳ ವಿಭಿನ್ನವಾಗಿ ಆಲೋಚನೆ ಮಾಡುತ್ತಿದ್ದ ಕಲ್ಯಾಣಿ ಬಹಳ ಕಡಿಮೆ ಬೆಲೆಯಲ್ಲಿ AC ತಯಾರಿಸಬೇಕು ಅನುವ ಆಲೋಚನೆ ಮಾಡಿದಳು, ಇನ್ನು ಆಕೆ ಮಾಡಿದ ಆಲೋಚನೆಯಂತೆ 12 ವೋಲ್ಟ್ DC ಫ್ಯಾನ್, ಐಸ್ ಬಾಕ್ಸ್, ಸೋಲಾರ್ ಸಿಸ್ಟಮ್ ಹಾಗು ಥರ್ಮಾಕೋಲ್ ಬಳಸಿಕೊಂಡು ಕೇವಲ 1800 ರೂಪಾಯಿಯಲ್ಲಿ ಒಂದು AC ತಯಾರಿಸಿದಳು ಕಲ್ಯಾಣಿ.
ಇನ್ನು ಈಕೆ ತಯಾರು ಮಾಡಿದ AC ಗೆ ಯಾವುದೇ ರೀತಿಯ ಕರೆಂಟ್ ಬೇಕಾಗಿಲ್ಲ ಮತ್ತು ಸೋಲಾರ್ ಶಕ್ತಿಯಿಂದ ಈ AC ಕಾರ್ಯ ನಿರ್ವಹಿಸುತ್ತದೆ, ಇನ್ನು ರೂಮ್ ನಲ್ಲಿ ಈ AC ಯನ್ನು ಅರ್ಧ ಘಂಟೆ ಚಾಲು ಮಾಡಿದರೆ ಸಾಕು ಆ ರೂಮ್ 5 ಡಿಗ್ರಿ ತಾಪಮಾನಕ್ಕೆ ಬಂದು ರೂಮ್ ತಂಪಾಗುತ್ತದೆ. ಇನ್ನು ಕಲ್ಯಾಣಿ ತಯಾರು ಮಾಡಿದ ಈ AC ಯನ್ನು ಇನ್ನಷ್ಟು ಡೆವೆಲಪ್ ಮಾಡಿದರೆ ಬೇಸಿಗೆಯಲ್ಲಿ ಬೆವರು ಸುರಿಸುವ ಬದಲು ಈ AC ಯನ್ನು ಬಳಸಬಹುದಾಗಿದೆ. ಇನ್ನು ಈ ಹುಡುಗಿಯ ಕಾರ್ಯದಕ್ಷತೆಯನ್ನ ನೋಡಿದ ಜಪಾನ್ ಮತ್ತು ಇನ್ನಿತರೇ ದೇಶಗಳು ತಮ್ಮ ದೇಶದ ಸೆಮಿನಾರ್ ಗಳಲ್ಲಿ ಪಾಲ್ಗೊಳ್ಳುವಂತೆ ಈ ಹುಡುಗಿಗೆ ಆಮಂತ್ರಣವನ್ನ ನೀಡಿದೆ, ಇನ್ನು ಅಷ್ಟೇ ಅಲ್ಲದೆ ಕಲ್ಯಾಣಿಯ ಈ ಐಡಿಯಾ ಬಗ್ಗೆ ವಿದೇಶಿ ಕಂಪನಿಗಳು ಆಸಕ್ತಿ ತೋರಿಸುತ್ತಿವೆ ಎಂದು ಹೇಳಲಾಗುತ್ತಿದೆ.
ಒಂದು ವಸ್ತುವನ್ನ ತಯಾರು ಮಾಡಿದ ಮೇಲೆ ಇಷ್ಟೇನಾ ಎಂದು ತುಂಬಾ ಜನ ಹೇಳುತ್ತಾರೆ, ಆದರೆ ಹಾಗೆ ಹೇಳುವವರಾರು ತಯಾರಿಸುವ ಹೊಸ ವಿಧಾನವನ್ನ ಕಂಡುಹಿಡಿಯುವ ಗೋಜಿಗೆ ಹೋಗುವುದಿಲ್ಲ. ಇನ್ನು ಕಲ್ಯಾಣಿ ಕಂಡುಹಿಡಿದಿರುವ ಈ AC ನ್ಯಾಷನಲ್ ಲೆವೆಲ್ ಗೆ ಸೆಲೆಕ್ಟ್ ಆಗಿದ್ದು ಈ ವಿನೂತನ ಆಲೋಚನೆಗೆ 50 ಬಹುಮಾನಗಳು ಕಲ್ಯಾಣಿ ಕೈಗೆ ಸೇರಿದೆ. ಇನ್ನು ಈ ಹುಡುಗಿ ಬಹಳ ಒಳ್ಳೆಯ ಹಾಡುಗಾರ್ತಿ ಕೂಡ ಆಗಿದ್ದು ಇಂಡಿಯನ್ ಐಡಿಯಲ್ ನಲ್ಲಿ ಮೂರನೇ ಹಂತದ ತನಕ ಹೋಗಿದ್ದಳು, ಕಲ್ಯಾಣಿಯಂತಹ ಹುಡುಗಿಗೆ ನಮ್ಮ ಬಹುಮಾನಗಳ ಬದಲಾಗಿ ಪ್ರೋತ್ಸಹ ಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ. ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ. ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ…
ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ. ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…
ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…