ಸುದ್ದಿ, ಸ್ಪೂರ್ತಿ

ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ 19ರ ಯುವಕ ಟ್ರಂಪ್ ಆಹ್ವಾನಿಸಿದರೂ ಅಮೆರಿಕಕ್ಕೆ ತೆರಳಲಿಲ್ಲ, ಭಾರತದಲ್ಲೇ ರಿಸರ್ಚ್ ಮಾಡ್ತೇನೆ ಎಂದ ಗೋಪಾಲ್.

77

ಬಿಹಾರದ ಬಾಗಲ್‍ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ.

19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ. ಸದ್ಯ ಗೋಪಾಲ್ ಈ ಡೆಹ್ರಾಡೂನ್ ಸರ್ಕಾರಿ ಗ್ರಾಫಿಕ್ ಏರಾ ಇನ್‍ಸ್ಟಿಟ್ಯೂಟ್‍ನ ಲ್ಯಾಬ್‍ನಲ್ಲಿ ಟೆಸ್ಟಿಂಗ್ ಮಾಡುತ್ತಿದ್ದಾರೆ. ಅಲ್ಲದೆ ಜಾರ್ಖಂಡ್‍ನಲ್ಲಿ ಲ್ಯಾಬ್ ತೆರೆದು ಅಲ್ಲಿ ರಿಸರ್ಚ್ ಮಾಡಲಿದ್ದಾರೆ.

ಗೋಪಾಲ್ ತುಳಸಿಪುರದ ಮಾಡೆಲ್ ಹೈಸ್ಕೂಲ್‍ನಲ್ಲಿ 12ನೇ ತರಗತಿವರೆಗೂ ವಿದ್ಯಾಭ್ಯಾಸ ಮಾಡಿದ್ದಾರೆ. 2013-14ರಲ್ಲಿ ಬಯೋಸೆಲ್ ಆವಿಷ್ಕಾರಕ್ಕಾಗಿ ಗೋಪಾಲ್ ಅವರು ಇನ್‍ಸ್ಪೈಯರ್ಡ್ ಅವಾರ್ಡ್ ಕೂಡ ಪಡೆದಿದ್ದಾರೆ. ಪ್ರಶಸ್ತಿ ಪಡೆಯುವಾಗ ಅವರು ಹತ್ತನೇ ತರಗತಿಯಲ್ಲಿ ಓದುತ್ತಿದ್ದರು. 2008ರಲ್ಲಿ ಗೋಪಾಲ್ ಅವರ ಗ್ರಾಮದಲ್ಲಿ ಪ್ರವಾಹ ಬಂದಿದ್ದು, ಈ ವೇಳೆ ಸಾಕಷ್ಟು ಹಾನಿಯಾಗಿತ್ತು.

ಪ್ರವಾಹ ಬಂದ ಸಂದರ್ಭದಲ್ಲಿ ಗೋಪಾಲ್ ಅವರ ತಂದೆ ಪ್ರೇಮ್‍ರಂಜನ್ ಕುಮಾರ್ ಅವರು ತಮ್ಮ ಮಗನಿಗೆ 10ನೇ ತರಗತಿ ನಂತರ ಮುಂದೆ ಓದಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಆದರೆ ಗೋಪಾಲ್ ತಮ್ಮ ಛಲವನ್ನು ಬಿಟ್ಟು ಕೊಡಲಿಲ್ಲ. ಸ್ಕಾಲರ್‍ಶಿಪ್ ಪಡೆಯಲು ಏನಾದರೂ ಮಾಡಬೇಕು ಎಂದು ಗೋಪಾಲ್ ಯೋಚಿಸುತ್ತಿದ್ದರು.

2017, ಅಗಸ್ಟ್ 31ರಂದು ಗೋಪಾಲ್ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದರು. ಆಗ ಮೋದಿ ಅವರು ಗೋಪಾಲ್‍ರನ್ನು ಅಹಮದಾಬಾದ್‍ನ ಎನ್‍ಐಎಫ್‍ಗೆ ಕಳುಹಿಸಿಕೊಟ್ಟರು. ಈ ವೇಳೆ ಗೋಪಾಲ್ 6 ಆವಿಷ್ಕಾರವನ್ನು ಮಾಡಿದ್ದರು. ಈಗ ಗೋಪಾಲ್ ಅವರ ಹೆಸರು ವಿಶ್ವದ 30 ಸ್ಟಾರ್ಟಪ್ ವಿಜ್ಞಾನಿಗಳ ಪಟ್ಟಿಯಲ್ಲಿದೆ. ಏಪ್ರಿಲ್‍ನಲ್ಲಿ ಅಬುಧಾಬಿಯಲ್ಲಿ ನಡೆಯುವ ವಿಶ್ವದ ಅತಿ ದೊಡ್ಡ ಸೈನ್ಸ್ ಫೇರ್ ನಡೆಯಲಿದೆ. ಇದರಲ್ಲಿ 6 ಸಾವಿರ ವಿಜ್ಞಾನಿಗಳು ಭಾಗವಹಿಸುತ್ತಿದ್ದು, ಗೋಪಾಲ್ ಚೀಫ್ ಸ್ಪೀಕರ್ ಆಗಿ ಭಾಗವಹಿಸಲಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದೇಶದ 2 ನೇ ಅತಿ ದೊಡ್ಡ ರೈಲ್ವೆ ಬ್ರಿಡ್ಜ್ ಉದ್ಘಾಟನೆಗೆ ಸಿದ್ಧ….!

    ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…

  • ಆಧ್ಯಾತ್ಮ

    ಪೂಜೆಗೆ ತೆಂಗಿನಕಾಯಿಯನ್ನೇ ಏಕೆ ಅರ್ಪಿಸುತ್ತಾರೆ?ಅದರ ಹಿಂದಿನ ಉದ್ದೇಶ ಏನು ಗೊತ್ತಾ ನಿಮ್ಗೆ?

    ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.

  • ಸಿನಿಮಾ

    ಬಿಚ್ಚಮ್ಮ ಸನ್ನಿ ಲಿಯೋನ್ ಮೇಲೆ ಎಫ್‍ಐಆರ್!ಅಸಲಿ ಕಾರಣ ಏನು ಗೊತ್ತಾ?

    ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್‍ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್‍ಮೆಂಟ್ (ಪಿಎಚ್‍ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…

  • ಆಧ್ಯಾತ್ಮ, ವಿಜ್ಞಾನ

    ವ್ಯಾಸ ಮಹರ್ಷಿಗಳು ಆ ಕಾಲದಲ್ಲೇ ಹೇಳಿದ್ದನ್ನು, ಕಂಡುಹಿಡಿಯುತ್ತಿರುವ ವಿಜ್ಞಾನಿಗಳು..!ನಿಜ..!ತಿಳಿಯಲು ಈ ಲೇಖನ ಓದಿ…

    ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.

  • ಸುದ್ದಿ

    ಪನ್ನೀರ್ ಪರೋಟಾದಲ್ಲಿ ಸಿಕ್ಕ ವಸ್ತು ನೋಡಿ ಮೂರ್ಚೆ ಬಿದ್ದ ವ್ಯಕ್ತಿ…!

    ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…

  • ಆರೋಗ್ಯ

    ಬೆಳ್ಳುಳ್ಳಿಯಲ್ಲಿರುವ ಪ್ರಮುಖ ಆರೋಗ್ಯಗುಣಗಳು ತಿಳಿಯಲು…! ಈ ಲೇಖನವನ್ನು ಓದಿ…

    ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.