ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಕೀಯ, ರಾಜಕಾರಣಿಗಳು ಎಂದರೆ ಸಾಕು, ಎಲ್ಲರೂ ಹೇಳುವುದು ಒಂದೇ…ಇವರೆಲ್ಲಾ ಎಷ್ಟು ಸಾಚಾ ಅಂತ ಯಾರಿಗೆ ತಾನೇ ಗೊತ್ತಿಲ್ಲಾ ಅಂತಲೇ ಹೇಳುತ್ತಾರೆ.ಯಾಕಂದ್ರೆ ಸ್ವತಹ ರಾಜಕಾರಣಿಗಳೇ ಒಬ್ಬರ ಮೇಲೆ ಒಬ್ಬರು, ಅವರು ಅಷ್ಟು ಆಸ್ತಿ ಮಾಡಿದ್ದಾರೆ, ಇವರು ಇಷ್ಟು ಕೋಟಿ ಹೊಡೆದಿದ್ದಾರೆ ಅಂತ ಅಪಾದನೆ ಮಾಡುವವರು ತುಂಬಿ ಹೋಗಿದ್ದಾರೆ.

ಇದೆರೆಲ್ಲದರ ನಡುವೆ ಇಂತಹ ಕಾಲದಲ್ಲಿಯೂ ಪ್ರಾಮಾಣಿಕ ರಾಜಕಾರಣಿಗಳು ಇದ್ದಾರೆಯೇ ಎಂಬ ಪ್ರಶ್ನೆ ಮೂಡುವುದು ಸಹಜ.ಆದರೆ ಅಂತಹ ವ್ಯಕ್ತಿಗಳು ಇದ್ದಾರೆ. ಅವ್ರು ಬೇರೆ ಯಾರೂ ಅಲ್ಲ 20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್.
ಇವ್ರು ತ್ರಿಪುರಾ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.ಆದರೆ ಇತ್ತೀಚಿಗೆ ತಾನೇ ನಡೆದ ಚುನಾವಣೆಯಲ್ಲಿ ಕಮ್ಯುನಿಸ್ಟ್ ಪಕ್ಷದ ಮಾಣಿಕ್ ಸರ್ಕಾರ್ ಸೋತು, ಈಗ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ.

ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.ಹಾಗಾಗಿ ಇವರು ತಾವು ಮುಖ್ಯಮಂತ್ರಿಯಾಗಿದ್ದಾಗ ಇದ್ದ ಮನೆಯನ್ನು ಖಾಲಿ ಮಾಡಿ,ಈಗ ತಮ್ಮ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯಹೂಡಿದ್ದಾರೆ.

ಸಿಪಿಎಂ ಪಕ್ಷದ ನಾಯಕ ಬಿಜನ್ ಧಾರ್ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಮತ್ತು ಅವರ ಪತ್ನಿ ಪಾಂಚಾಲಿ ಭಟ್ಟಾಚಾರ್ಯರೊಂದಿಗೆ ಪಕ್ಷದ ಕಚೇರಿ ಅತಿಥಿ ಗೃಹದಲ್ಲಿ ವಾಸಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ತಮ್ಮ ಇಡೀ ಜೀವನದಲ್ಲಿ ಕೇವಲ 900 ಚದರ ಅಡಿ ಆಸ್ತಿಯನ್ನ ಮಾತ್ರ ಸಂಪಾದನೆ ಮಾಡಿದ್ದು, ಅದನ್ನೂ ಕೂಡ ತಮಗೆ ಮಕ್ಕಳಿಲ್ಲದ ಕಾರಣ ತಮ್ಮ ಬಂದುಗಳಿಗೆ ಕೊಟ್ಟುಬಿಟ್ಟಿದ್ದಾರೆ.

ಯಾವುದೇ ಕಾರ್ ಮತ್ತು ಮೊಬೈಲ್ ಕೂಡ ಹೊಂದಿಲ್ಲದ ಇವರು ತನಗೆ ಸರ್ಕಾರದಿಂದ ಬರುತ್ತಿದ್ದ ಸಂಬಳವನ್ನು ಪಕ್ಷಕ್ಕೆ ನೀಡಿ ಪಕ್ಷದಿಂದ ಕೊಡುವ ಸುಮಾರು 10 ಸಾವಿರ ರೂಪಾಯಿಗಳಿಂದ ಜೀವನ ನಡೆಸುತ್ತಿದ್ದರು.
ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಆಸ್ತಿ ವಿವರದ ಪ್ರಕಾರ ಇವರು ಯಾವುದೇ ಬಂಗಲೆ,ಕಾರು,ಆಸ್ತಿ,ಮನೆಯನ್ನು ಹೊಂದಿಲ್ಲದ ಇವರ ಬಳಿ 1,520 ರೂ. ಹಣವಿದ್ದು ಮತ್ತು 2,410 ರೂ. ಎಸ್ಬಿಐ ಬ್ಯಾಂಕ್ ಖಾತೆಯಲ್ಲಿ ಇದೆ ಎಂದು ಚುನಾವಣಾ ಸಮಯದಲ್ಲಿ ಅಫಿಡೆವಿಟ್ ಸಲ್ಲಿಸಿದ್ದರು. 2013 ರಲ್ಲಿ ಬ್ಯಾಂಕ್ ಖಾತೆಯಲ್ಲಿ 9,720 ರೂ. ಇತ್ತು ಎಂದು ಉಲ್ಲೇಖಿಸಿದ್ದರು.
ಏನೇ ಆದರೂ ಒಂದು ಅಂತೂ ಸತ್ಯ ಆಗಿದೆ.ಪ್ರಾಮಾಣಿಕರಿಗೆ ಇದು ಕಾಲ ಅಲ್ಲ….

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…
ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್ಶಿಪ್ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್ಶಿಪ್ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.
ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.
ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…
ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್ನಲ್ಲಿ:ಐಸ್ ಟ್ರೇ ಅಥವಾ ಏರ್ಟೈಟ್ ಡಬ್ಬಿಯಲ್ಲಿ…