ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಕೀಯ, ರಾಜಕಾರಣಿಗಳು ಎಂದರೆ ಸಾಕು, ಎಲ್ಲರೂ ಹೇಳುವುದು ಒಂದೇ…ಇವರೆಲ್ಲಾ ಎಷ್ಟು ಸಾಚಾ ಅಂತ ಯಾರಿಗೆ ತಾನೇ ಗೊತ್ತಿಲ್ಲಾ ಅಂತಲೇ ಹೇಳುತ್ತಾರೆ.ಯಾಕಂದ್ರೆ ಸ್ವತಹ ರಾಜಕಾರಣಿಗಳೇ ಒಬ್ಬರ ಮೇಲೆ ಒಬ್ಬರು, ಅವರು ಅಷ್ಟು ಆಸ್ತಿ ಮಾಡಿದ್ದಾರೆ, ಇವರು ಇಷ್ಟು ಕೋಟಿ ಹೊಡೆದಿದ್ದಾರೆ ಅಂತ ಅಪಾದನೆ ಮಾಡುವವರು ತುಂಬಿ ಹೋಗಿದ್ದಾರೆ.

ಇದೆರೆಲ್ಲದರ ನಡುವೆ ಇಂತಹ ಕಾಲದಲ್ಲಿಯೂ ಪ್ರಾಮಾಣಿಕ ರಾಜಕಾರಣಿಗಳು ಇದ್ದಾರೆಯೇ ಎಂಬ ಪ್ರಶ್ನೆ ಮೂಡುವುದು ಸಹಜ.ಆದರೆ ಅಂತಹ ವ್ಯಕ್ತಿಗಳು ಇದ್ದಾರೆ. ಅವ್ರು ಬೇರೆ ಯಾರೂ ಅಲ್ಲ 20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್.
ಇವ್ರು ತ್ರಿಪುರಾ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.ಆದರೆ ಇತ್ತೀಚಿಗೆ ತಾನೇ ನಡೆದ ಚುನಾವಣೆಯಲ್ಲಿ ಕಮ್ಯುನಿಸ್ಟ್ ಪಕ್ಷದ ಮಾಣಿಕ್ ಸರ್ಕಾರ್ ಸೋತು, ಈಗ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ.

ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.ಹಾಗಾಗಿ ಇವರು ತಾವು ಮುಖ್ಯಮಂತ್ರಿಯಾಗಿದ್ದಾಗ ಇದ್ದ ಮನೆಯನ್ನು ಖಾಲಿ ಮಾಡಿ,ಈಗ ತಮ್ಮ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯಹೂಡಿದ್ದಾರೆ.

ಸಿಪಿಎಂ ಪಕ್ಷದ ನಾಯಕ ಬಿಜನ್ ಧಾರ್ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಮತ್ತು ಅವರ ಪತ್ನಿ ಪಾಂಚಾಲಿ ಭಟ್ಟಾಚಾರ್ಯರೊಂದಿಗೆ ಪಕ್ಷದ ಕಚೇರಿ ಅತಿಥಿ ಗೃಹದಲ್ಲಿ ವಾಸಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ತಮ್ಮ ಇಡೀ ಜೀವನದಲ್ಲಿ ಕೇವಲ 900 ಚದರ ಅಡಿ ಆಸ್ತಿಯನ್ನ ಮಾತ್ರ ಸಂಪಾದನೆ ಮಾಡಿದ್ದು, ಅದನ್ನೂ ಕೂಡ ತಮಗೆ ಮಕ್ಕಳಿಲ್ಲದ ಕಾರಣ ತಮ್ಮ ಬಂದುಗಳಿಗೆ ಕೊಟ್ಟುಬಿಟ್ಟಿದ್ದಾರೆ.

ಯಾವುದೇ ಕಾರ್ ಮತ್ತು ಮೊಬೈಲ್ ಕೂಡ ಹೊಂದಿಲ್ಲದ ಇವರು ತನಗೆ ಸರ್ಕಾರದಿಂದ ಬರುತ್ತಿದ್ದ ಸಂಬಳವನ್ನು ಪಕ್ಷಕ್ಕೆ ನೀಡಿ ಪಕ್ಷದಿಂದ ಕೊಡುವ ಸುಮಾರು 10 ಸಾವಿರ ರೂಪಾಯಿಗಳಿಂದ ಜೀವನ ನಡೆಸುತ್ತಿದ್ದರು.
ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಆಸ್ತಿ ವಿವರದ ಪ್ರಕಾರ ಇವರು ಯಾವುದೇ ಬಂಗಲೆ,ಕಾರು,ಆಸ್ತಿ,ಮನೆಯನ್ನು ಹೊಂದಿಲ್ಲದ ಇವರ ಬಳಿ 1,520 ರೂ. ಹಣವಿದ್ದು ಮತ್ತು 2,410 ರೂ. ಎಸ್ಬಿಐ ಬ್ಯಾಂಕ್ ಖಾತೆಯಲ್ಲಿ ಇದೆ ಎಂದು ಚುನಾವಣಾ ಸಮಯದಲ್ಲಿ ಅಫಿಡೆವಿಟ್ ಸಲ್ಲಿಸಿದ್ದರು. 2013 ರಲ್ಲಿ ಬ್ಯಾಂಕ್ ಖಾತೆಯಲ್ಲಿ 9,720 ರೂ. ಇತ್ತು ಎಂದು ಉಲ್ಲೇಖಿಸಿದ್ದರು.
ಏನೇ ಆದರೂ ಒಂದು ಅಂತೂ ಸತ್ಯ ಆಗಿದೆ.ಪ್ರಾಮಾಣಿಕರಿಗೆ ಇದು ಕಾಲ ಅಲ್ಲ….

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.
ಆನ್ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್ಮಿ ನೋಟ್ 4 ಸ್ಮಾರ್ಟ್ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….
ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…