ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಕೀಯ, ರಾಜಕಾರಣಿಗಳು ಎಂದರೆ ಸಾಕು, ಎಲ್ಲರೂ ಹೇಳುವುದು ಒಂದೇ…ಇವರೆಲ್ಲಾ ಎಷ್ಟು ಸಾಚಾ ಅಂತ ಯಾರಿಗೆ ತಾನೇ ಗೊತ್ತಿಲ್ಲಾ ಅಂತಲೇ ಹೇಳುತ್ತಾರೆ.ಯಾಕಂದ್ರೆ ಸ್ವತಹ ರಾಜಕಾರಣಿಗಳೇ ಒಬ್ಬರ ಮೇಲೆ ಒಬ್ಬರು, ಅವರು ಅಷ್ಟು ಆಸ್ತಿ ಮಾಡಿದ್ದಾರೆ, ಇವರು ಇಷ್ಟು ಕೋಟಿ ಹೊಡೆದಿದ್ದಾರೆ ಅಂತ ಅಪಾದನೆ ಮಾಡುವವರು ತುಂಬಿ ಹೋಗಿದ್ದಾರೆ.

ಇದೆರೆಲ್ಲದರ ನಡುವೆ ಇಂತಹ ಕಾಲದಲ್ಲಿಯೂ ಪ್ರಾಮಾಣಿಕ ರಾಜಕಾರಣಿಗಳು ಇದ್ದಾರೆಯೇ ಎಂಬ ಪ್ರಶ್ನೆ ಮೂಡುವುದು ಸಹಜ.ಆದರೆ ಅಂತಹ ವ್ಯಕ್ತಿಗಳು ಇದ್ದಾರೆ. ಅವ್ರು ಬೇರೆ ಯಾರೂ ಅಲ್ಲ 20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್.
ಇವ್ರು ತ್ರಿಪುರಾ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.ಆದರೆ ಇತ್ತೀಚಿಗೆ ತಾನೇ ನಡೆದ ಚುನಾವಣೆಯಲ್ಲಿ ಕಮ್ಯುನಿಸ್ಟ್ ಪಕ್ಷದ ಮಾಣಿಕ್ ಸರ್ಕಾರ್ ಸೋತು, ಈಗ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ.

ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.ಹಾಗಾಗಿ ಇವರು ತಾವು ಮುಖ್ಯಮಂತ್ರಿಯಾಗಿದ್ದಾಗ ಇದ್ದ ಮನೆಯನ್ನು ಖಾಲಿ ಮಾಡಿ,ಈಗ ತಮ್ಮ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯಹೂಡಿದ್ದಾರೆ.

ಸಿಪಿಎಂ ಪಕ್ಷದ ನಾಯಕ ಬಿಜನ್ ಧಾರ್ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಮತ್ತು ಅವರ ಪತ್ನಿ ಪಾಂಚಾಲಿ ಭಟ್ಟಾಚಾರ್ಯರೊಂದಿಗೆ ಪಕ್ಷದ ಕಚೇರಿ ಅತಿಥಿ ಗೃಹದಲ್ಲಿ ವಾಸಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ತಮ್ಮ ಇಡೀ ಜೀವನದಲ್ಲಿ ಕೇವಲ 900 ಚದರ ಅಡಿ ಆಸ್ತಿಯನ್ನ ಮಾತ್ರ ಸಂಪಾದನೆ ಮಾಡಿದ್ದು, ಅದನ್ನೂ ಕೂಡ ತಮಗೆ ಮಕ್ಕಳಿಲ್ಲದ ಕಾರಣ ತಮ್ಮ ಬಂದುಗಳಿಗೆ ಕೊಟ್ಟುಬಿಟ್ಟಿದ್ದಾರೆ.

ಯಾವುದೇ ಕಾರ್ ಮತ್ತು ಮೊಬೈಲ್ ಕೂಡ ಹೊಂದಿಲ್ಲದ ಇವರು ತನಗೆ ಸರ್ಕಾರದಿಂದ ಬರುತ್ತಿದ್ದ ಸಂಬಳವನ್ನು ಪಕ್ಷಕ್ಕೆ ನೀಡಿ ಪಕ್ಷದಿಂದ ಕೊಡುವ ಸುಮಾರು 10 ಸಾವಿರ ರೂಪಾಯಿಗಳಿಂದ ಜೀವನ ನಡೆಸುತ್ತಿದ್ದರು.
ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಆಸ್ತಿ ವಿವರದ ಪ್ರಕಾರ ಇವರು ಯಾವುದೇ ಬಂಗಲೆ,ಕಾರು,ಆಸ್ತಿ,ಮನೆಯನ್ನು ಹೊಂದಿಲ್ಲದ ಇವರ ಬಳಿ 1,520 ರೂ. ಹಣವಿದ್ದು ಮತ್ತು 2,410 ರೂ. ಎಸ್ಬಿಐ ಬ್ಯಾಂಕ್ ಖಾತೆಯಲ್ಲಿ ಇದೆ ಎಂದು ಚುನಾವಣಾ ಸಮಯದಲ್ಲಿ ಅಫಿಡೆವಿಟ್ ಸಲ್ಲಿಸಿದ್ದರು. 2013 ರಲ್ಲಿ ಬ್ಯಾಂಕ್ ಖಾತೆಯಲ್ಲಿ 9,720 ರೂ. ಇತ್ತು ಎಂದು ಉಲ್ಲೇಖಿಸಿದ್ದರು.
ಏನೇ ಆದರೂ ಒಂದು ಅಂತೂ ಸತ್ಯ ಆಗಿದೆ.ಪ್ರಾಮಾಣಿಕರಿಗೆ ಇದು ಕಾಲ ಅಲ್ಲ….

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…
ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.
ಸ್ಯಾಂಡಲ್ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…
ಅಭಿಮಾನಿಗಳೇ ಹಾಗೆ ತಮ್ಮ ನೆಚ್ಚನ ನಟನಿಗಾಗಿ ಏನಾದ್ರೂ ಮಾಡಲು ತಯಾರಿರುತ್ತಾರೆ.ತಮ್ಮ ನೆಚ್ಚಿನ ನಟನ ಚಿತ್ರಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುತ್ತಾರೆ. ಒಂದು ವೇಳೆ ತಮ್ಮ ನೆಚ್ಚಿನ ನಟನನ್ನು ಒಂದು ಬಾರಿ ಭೇಟಿ ಮಾಡಿಬಿಟ್ಟರೆ ಅವರ ಜೀವನ ಸಾರ್ಥಕ ಆದಂತೆ ಅನ್ನುವಷ್ಟು ಮಟ್ಟಿಗೆ ಇಷ್ಟಪಡುವವರಿದ್ದಾರೆ. ಆದರೆ ಆಂಧ್ರದ ವಿಜಯವಾಡದ ತಮ್ಮ ನೆಚ್ಚಿನ ನಟನ ಅಭಿಮಾನಿಯೊಬ್ಬ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಇದಕ್ಕೆ ಹುಚ್ಚು ಅಭಿಮಾನ ಅನ್ನಬೇಕೋ, ಅತಿರೇಕದ ಅಭಿಮಾನ ಅನ್ನಬೇಕೋ ಗೊತ್ತಿಲ್ಲ.ತಾವು ಪ್ರೀತಿಸೋ ಆರಾಧಿಸುವ ಸ್ಟಾರ್…
ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.
1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…