ರಾಜಕೀಯ

20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ..!ಇವರು ಭಾರತದ ಪರಿಶುದ್ಧ ಬಡ ಮುಖ್ಯಮಂತ್ರಿ..!

6018

ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.

“ಸೆವೆನ್ ಸಿಸ್ಟರ್ಸ್” ಎಂದೇ ಹೆಸರಾಗಿರುವ ಭಾರತದ ಈಶಾನ್ಯ ರಾಜ್ಯಗಳ ಪೈಕಿ ಅತ್ಯಂತ ಪುಟ್ಟ ಮತ್ತು ಕೊನೆಯ ರಾಜ್ಯ ತ್ರಿಪುರ. ಉತ್ತರ, ದಕ್ಷಿಣ ಮತ್ತು ಪಶ್ಚಿಮದಲ್ಲಿ ಬಾಂಗ್ಲಾದೇಶದಿಂದ ಸುತ್ತುವರಿಯಲ್ಪಟ್ಟಿರುವ ತ್ರಿಪುರದ ಪೂರ್ವಕ್ಕೆ ಅಸ್ಸಾಂ ಮತ್ತು ಮಿಝೊರಾಮ್‌ಗಳಿವೆ.

ಮಾಣಿಕ್ ಸರ್ಕಾರ್ ಇವರು 1998 ರಿಂದ ಇಲ್ಲಿಯ ವರೆಗೂ ಸೋತಿದ್ದೆ ಇಲ್ಲ ಮತ್ತು ಅಧಿಕಾರದಿಂದ ಕೆಳಗೆ ಇಳಿದೇಯಿಲ್ಲ ತನಗೆ ಬರುವ ಸಂಭಳವನ್ನು ಪಕ್ಷಕ್ಕೆ ನೀಡಿ ಪಕ್ಷದಿಂದ ಕೊಡುವ 5 ಸಾವಿರ ರೂಪಾಯಿಗಳಿಂದ ಜೀವನ ನಡೆಸುತ್ತಿರುವ ಇವರು ಭಾರತ ದೇಶದ 3ನೇ ಸಣ್ಣ ರಾಜ್ಯ ತ್ರಿಪುರಾದ ಮುಖ್ಯಮಂತ್ರಿ.

ಇವರು ಕಮ್ಯುನಿಸ್ಟ್ (Marxist) ಪಾರ್ಟಿಯವರು, 2013 ರಲ್ಲಿ ನಡೆದ ಚುನಾವಣೆಯಲ್ಲಿ ಗೆದ್ದು 4ನೇ ಭಾರಿಗೆ ಮುಖ್ಯಮಂತ್ರಿ ಆದರು.

ಮಾಣಿಕ್ ಸರ್ಕಾರ್ ರವರ ವೈಯಕ್ತಿಕ ಜೀವನ:-

ಮಾಣಿಕ್ ಸರ್ಕಾರ್ 1949 ಜನವರಿ 22 ರಂದು, ರಾಧಕಿಶೋರ್ ಪುರದಲ್ಲಿ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ ಜನಿಸಿದರು. ಅವರ ತಂದೆ ಅಮೂಲ್ಯ ಸರ್ಕಾರ್ ಒಬ್ಬ ಟೈಲರ್. ತಾಯಿ ಅಂಜಲಿ ಸರ್ಕಾರ್ ರಾಜ್ಯ ಸರ್ಕಾರದ ನೌಕರಿಯಲ್ಲಿದ್ದರು. ಮಾಣಿಕ್ ಸರ್ಕಾರ್ ಎಮ್ ಬಿ ಬಿ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದಾರೆ. ಅವರು ವಿದ್ಯಾರ್ಥಿ ಜೀವನದಲ್ಲಿ ವಿಧ್ಯಾರ್ಥಿ ಸಂಘಟನೆಯ ಚಟುವಟಿಕೆಯಲ್ಲಿ ಭಾಗವಹಿಸುತ್ತಿದ್ದರು. ಎಮ್ ಬಿ ಬಿ ಕಾಲೇಜಿನ ವಿದ್ಯಾರ್ಥಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಎಸ್ ಎಪ್ ಐ (ಸ್ಟುಡೆಂಟ್ ಫೆಡರೇಶನ್ ಆಫ್ ಇಂಡಿಯಾ) ಸಂಘಟನೆಯ ಅಖಿಲ ಭಾರತ ಉಪಾದ್ಯಕ್ಷರಾಗಿದ್ದರು.

ತನ್ನ 19 ನೇ ವಯಸ್ಸಿನಲ್ಲೇ ಅಂದರೆ 1968 ರಲ್ಲಿ ಸಿಪಿಐ(ಎಂ) ಪಕ್ಷದ ಸದಸ್ಯರಾದರು. 1972 ರಲ್ಲಿ ತನ್ನ 23ನೇ ವಯಸ್ಸಿನಲ್ಲಿ, ಸಿಪಿಐ(ಎಂ) ಪಕ್ಷದ ರಾಜ್ಯ ಸಮಿತಿ ಸದಸ್ಯರಾದರು. ರಾಜ್ಯ ಸಮಿತಿ ಸದಸ್ಯರಾದ 6 ವರ್ಷಗಳ ನಂತರ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದರು. ತಮ್ಮ 31 ನೇ ವಯಸ್ಸಿನಲ್ಲಿ ಅಂದರೆ, 1980 ರಲ್ಲಿ, ಅಗರ್ತಲಾ ಕ್ಷೇತ್ರದಿಂದ ವಿದಾನ ಸಭೆಗೆ ಆಯ್ಕೆಯಾದರು. 1993 ರಲ್ಲಿ ರಾಜ್ಯದಲ್ಲಿ ಎಡರಂಗ ಸರ್ಕಾರ ಅಧಿಕಾರದಲ್ಲಿದ್ದಾಗ, ಸರ್ಕಾರ್, ಪಕ್ಷದ ರಾಜ್ಯ ಕಾರ್ಯದರ್ಶಿಯಾದರು. 1998 ರಲ್ಲಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿ ಮಾಣಿಕ್ ಸರ್ಕಾರ್ ತ್ರಿಪುರಾ ರಾಜ್ಯದ ಮುಖ್ಯಮಂತ್ರಿಯಾದರು. ಆಗ ಅವರ ವಯಸ್ಸು 49 ವರ್ಷ. ಅದೇ ವರ್ಷದಲ್ಲಿ ಅವರು ಸಿಪಿಐ(ಎಂ) ಪಕ್ಷದ ಪೊಲಿಟ್ ಭ್ಯೂರೋ ಸದಸ್ಯರಾದರು.

ಸರಳ ಜೀವನ:-

ಮಾಣಿಕ್ ಸರ್ಕಾರ್ ರವರ ವೈಯಕ್ತಿಕ ಜೀವನವನ್ನು ನೋಡಿದರೆ ಮತ್ತಷ್ಟು ಅಚ್ಚರಿಗೊಳಗಾಗುತ್ತೇವೆ! ಭಾರತದ ಪರಿಶುದ್ಧ ಮತ್ತು ಅತಿ ಬಡ ಮುಖ್ಯಮಂತ್ರಿ (ಬಹುಶಃ ಬಡ ರಾಜಕಾರಣಿ!) ಮಾಣಿಕ್ ಸರ್ಕಾರ್! ಅವರು ಘೋಷಿಸಿಕೊಂಡಿರುವ ಆಸ್ತಿಯ ಒಟ್ಟು ಮೌಲ್ಯ ಎರಡೂವರೆ ಲಕ್ಷಕ್ಕಿಂತಲೂ ಕಡಿಮೆ. ಅದರಲ್ಲಿ ಅವರ ತಾಯಿಯಿಂದ ಬಂದ ಒಂದು ಮನೆ ಕೂಡ ಸೇರಿದೆ. 2013ರ ಚುನಾವಣೆಗೆ ನಾಮಪತ್ರ ಸಲ್ಲಿಸುವ ದಿನ ಅವರ ಬಳಿಇದ್ದ ಹಣ 1080 ಮಾತ್ರ, ಬ್ಯಾಂಕಿನಲ್ಲಿದ್ದ ಠೇವಣಿ 9720/-! ದೇಶದಲ್ಲಿ ಅತಿ ಕಡಿಮೆ ಸಂಬಳ (9200/-) ಪಡೆಯುತ್ತಿರುವ ಮಾಣಿಕ್ ಸರ್ಕಾರ್ ಆ ಸಂಬಳವನ್ನೂ ಪಕ್ಷಕ್ಕೆ ನೀಡಿ ಪಕ್ಷದ ಇತರೆ ಕಾರ್ಯಕರ್ತರಂತೆ ಐದು ಸಾವಿರ ರುಪಾಯಿಗಳನ್ನು ಪಡೆಯುತ್ತಿದ್ದಾರೆ.

ಇನ್ನು ಮುಖ್ಯಮಂತ್ರಿಯ ಜೀವನ ನಿರ್ವಹಣೆ ನಡೆಯುತ್ತಿರುವುದು ಸರಕಾರಿ ಕೆಲಸದಲ್ಲಿದ್ದ ಅವರ ಮಡದಿ ನಿವೃತ್ತರಾದಾಗ ಬಂದ ಪಿಎಫ್ ಮತ್ತಿತರ ಹಣವನ್ನು (24 ಲಕ್ಷ) ಬ್ಯಾಂಕಿನಲ್ಲಿ ಠೇವಣಿರೂಪದಲ್ಲಿಟ್ಟು ಅದರಿಂದ ಬರುವ ಬಡ್ಡಿಯಿಂದ!

ಈ ರಾಜ್ಯದ ಅಧಿಕಾರ ಅವಧಿ 2018ಕ್ಕೆ ಮುಗಿಯುವುದರಿಂದ ಕರ್ನಾಟಕದ ಜೊತೆಯಲ್ಲಿಯೇ ಚುನಾವಣೆ ಬರಬಹುದು. ಮಾಣಿಕ್ ಸರ್ಕಾರ್ ಅವರ ಸರ್ಕಾರವನ್ನು ಸೋಲಿಸುವ ಪ್ರಯತ್ನ ಅಲ್ಲಿನ ಪ್ರತಿಪಕ್ಷಗಳಿಗೆ ಬಾರಿ ಕಷ್ಟದ ಕೆಲಸವಾಗಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ, ಸುದ್ದಿ, ಸ್ಪೂರ್ತಿ

    ಆಟೋ ಓಡಿಸುತ್ತಿರುವ ಈ ಮಹಿಳೆ ನಿಜಾಂಶ ಹೊರಬರುತ್ತಿದ್ದಂತೆ ಎಲ್ಲರೂ ಶಾಕ್. ಅಸಲಿಗೆ ಈ ಮಹಿಳೆ ಯಾರು?

    ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ದೇವರ ಕೃಪೆಯಿಂದ ಈ ರಾಶಿಗಳಿಗೆ ಇಂದು ವಿಪರೀತ ಧನಲಾಭವಿದೆ..!ನಿಮ್ಮ ರಾಶಿಗೂ ಧನ ಲಾಭ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(17 ನವೆಂಬರ್, 2018) ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ಸ್ನೇಹಿತರು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಈದಿನ…

  • ಆರೋಗ್ಯ

    ATM ನಿಂದ ಬರಲಿದೆ ಕರೋನ ವೈರಸ್, ಹೇಗೆ ಮತ್ತು WHO ಹೇಳಿದ್ದೇನು ನೋಡಿ.

    ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…

  • ಉಪಯುಕ್ತ ಮಾಹಿತಿ

    ಕೇಂದ್ರ ಸರ್ಕಾರದಿಂದ ದಿಟ್ಟ ನಿರ್ಧಾರ, ವೋಟರ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ ಸಿಹಿಸುದ್ದಿ.

    ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • Sports

    ರಣಜಿ ಟ್ರೋಫಿ ಸಿಕೆ ನಾಯ್ಡು ಟ್ರೋಫಿ ಸೀನೀಯರ್ ವುಮೆನ್ಸ್ ಲೀಗ್ ಮುಂದೂಡಲಾಗಿದೆ

    ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್‌ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…

    Loading

  • ಸುದ್ದಿ

    ಈ ವರ್ಷ ಭಾರತೀಯರು ಗೂಗಲ್ ನಲ್ಲಿ ಅತೀ ಹೆಚ್ಚಾಗಿ ಸರ್ಚ್ ಮಾಡಿ ನೋಡಿದ್ದು ಏನ್ ಗೊತ್ತಾ..?

    ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….