ರಾಜಕೀಯ

20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ..!ಇವರು ಭಾರತದ ಪರಿಶುದ್ಧ ಬಡ ಮುಖ್ಯಮಂತ್ರಿ..!

6021

ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.

“ಸೆವೆನ್ ಸಿಸ್ಟರ್ಸ್” ಎಂದೇ ಹೆಸರಾಗಿರುವ ಭಾರತದ ಈಶಾನ್ಯ ರಾಜ್ಯಗಳ ಪೈಕಿ ಅತ್ಯಂತ ಪುಟ್ಟ ಮತ್ತು ಕೊನೆಯ ರಾಜ್ಯ ತ್ರಿಪುರ. ಉತ್ತರ, ದಕ್ಷಿಣ ಮತ್ತು ಪಶ್ಚಿಮದಲ್ಲಿ ಬಾಂಗ್ಲಾದೇಶದಿಂದ ಸುತ್ತುವರಿಯಲ್ಪಟ್ಟಿರುವ ತ್ರಿಪುರದ ಪೂರ್ವಕ್ಕೆ ಅಸ್ಸಾಂ ಮತ್ತು ಮಿಝೊರಾಮ್‌ಗಳಿವೆ.

ಮಾಣಿಕ್ ಸರ್ಕಾರ್ ಇವರು 1998 ರಿಂದ ಇಲ್ಲಿಯ ವರೆಗೂ ಸೋತಿದ್ದೆ ಇಲ್ಲ ಮತ್ತು ಅಧಿಕಾರದಿಂದ ಕೆಳಗೆ ಇಳಿದೇಯಿಲ್ಲ ತನಗೆ ಬರುವ ಸಂಭಳವನ್ನು ಪಕ್ಷಕ್ಕೆ ನೀಡಿ ಪಕ್ಷದಿಂದ ಕೊಡುವ 5 ಸಾವಿರ ರೂಪಾಯಿಗಳಿಂದ ಜೀವನ ನಡೆಸುತ್ತಿರುವ ಇವರು ಭಾರತ ದೇಶದ 3ನೇ ಸಣ್ಣ ರಾಜ್ಯ ತ್ರಿಪುರಾದ ಮುಖ್ಯಮಂತ್ರಿ.

ಇವರು ಕಮ್ಯುನಿಸ್ಟ್ (Marxist) ಪಾರ್ಟಿಯವರು, 2013 ರಲ್ಲಿ ನಡೆದ ಚುನಾವಣೆಯಲ್ಲಿ ಗೆದ್ದು 4ನೇ ಭಾರಿಗೆ ಮುಖ್ಯಮಂತ್ರಿ ಆದರು.

ಮಾಣಿಕ್ ಸರ್ಕಾರ್ ರವರ ವೈಯಕ್ತಿಕ ಜೀವನ:-

ಮಾಣಿಕ್ ಸರ್ಕಾರ್ 1949 ಜನವರಿ 22 ರಂದು, ರಾಧಕಿಶೋರ್ ಪುರದಲ್ಲಿ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ ಜನಿಸಿದರು. ಅವರ ತಂದೆ ಅಮೂಲ್ಯ ಸರ್ಕಾರ್ ಒಬ್ಬ ಟೈಲರ್. ತಾಯಿ ಅಂಜಲಿ ಸರ್ಕಾರ್ ರಾಜ್ಯ ಸರ್ಕಾರದ ನೌಕರಿಯಲ್ಲಿದ್ದರು. ಮಾಣಿಕ್ ಸರ್ಕಾರ್ ಎಮ್ ಬಿ ಬಿ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದಾರೆ. ಅವರು ವಿದ್ಯಾರ್ಥಿ ಜೀವನದಲ್ಲಿ ವಿಧ್ಯಾರ್ಥಿ ಸಂಘಟನೆಯ ಚಟುವಟಿಕೆಯಲ್ಲಿ ಭಾಗವಹಿಸುತ್ತಿದ್ದರು. ಎಮ್ ಬಿ ಬಿ ಕಾಲೇಜಿನ ವಿದ್ಯಾರ್ಥಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಎಸ್ ಎಪ್ ಐ (ಸ್ಟುಡೆಂಟ್ ಫೆಡರೇಶನ್ ಆಫ್ ಇಂಡಿಯಾ) ಸಂಘಟನೆಯ ಅಖಿಲ ಭಾರತ ಉಪಾದ್ಯಕ್ಷರಾಗಿದ್ದರು.

ತನ್ನ 19 ನೇ ವಯಸ್ಸಿನಲ್ಲೇ ಅಂದರೆ 1968 ರಲ್ಲಿ ಸಿಪಿಐ(ಎಂ) ಪಕ್ಷದ ಸದಸ್ಯರಾದರು. 1972 ರಲ್ಲಿ ತನ್ನ 23ನೇ ವಯಸ್ಸಿನಲ್ಲಿ, ಸಿಪಿಐ(ಎಂ) ಪಕ್ಷದ ರಾಜ್ಯ ಸಮಿತಿ ಸದಸ್ಯರಾದರು. ರಾಜ್ಯ ಸಮಿತಿ ಸದಸ್ಯರಾದ 6 ವರ್ಷಗಳ ನಂತರ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದರು. ತಮ್ಮ 31 ನೇ ವಯಸ್ಸಿನಲ್ಲಿ ಅಂದರೆ, 1980 ರಲ್ಲಿ, ಅಗರ್ತಲಾ ಕ್ಷೇತ್ರದಿಂದ ವಿದಾನ ಸಭೆಗೆ ಆಯ್ಕೆಯಾದರು. 1993 ರಲ್ಲಿ ರಾಜ್ಯದಲ್ಲಿ ಎಡರಂಗ ಸರ್ಕಾರ ಅಧಿಕಾರದಲ್ಲಿದ್ದಾಗ, ಸರ್ಕಾರ್, ಪಕ್ಷದ ರಾಜ್ಯ ಕಾರ್ಯದರ್ಶಿಯಾದರು. 1998 ರಲ್ಲಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿ ಮಾಣಿಕ್ ಸರ್ಕಾರ್ ತ್ರಿಪುರಾ ರಾಜ್ಯದ ಮುಖ್ಯಮಂತ್ರಿಯಾದರು. ಆಗ ಅವರ ವಯಸ್ಸು 49 ವರ್ಷ. ಅದೇ ವರ್ಷದಲ್ಲಿ ಅವರು ಸಿಪಿಐ(ಎಂ) ಪಕ್ಷದ ಪೊಲಿಟ್ ಭ್ಯೂರೋ ಸದಸ್ಯರಾದರು.

ಸರಳ ಜೀವನ:-

ಮಾಣಿಕ್ ಸರ್ಕಾರ್ ರವರ ವೈಯಕ್ತಿಕ ಜೀವನವನ್ನು ನೋಡಿದರೆ ಮತ್ತಷ್ಟು ಅಚ್ಚರಿಗೊಳಗಾಗುತ್ತೇವೆ! ಭಾರತದ ಪರಿಶುದ್ಧ ಮತ್ತು ಅತಿ ಬಡ ಮುಖ್ಯಮಂತ್ರಿ (ಬಹುಶಃ ಬಡ ರಾಜಕಾರಣಿ!) ಮಾಣಿಕ್ ಸರ್ಕಾರ್! ಅವರು ಘೋಷಿಸಿಕೊಂಡಿರುವ ಆಸ್ತಿಯ ಒಟ್ಟು ಮೌಲ್ಯ ಎರಡೂವರೆ ಲಕ್ಷಕ್ಕಿಂತಲೂ ಕಡಿಮೆ. ಅದರಲ್ಲಿ ಅವರ ತಾಯಿಯಿಂದ ಬಂದ ಒಂದು ಮನೆ ಕೂಡ ಸೇರಿದೆ. 2013ರ ಚುನಾವಣೆಗೆ ನಾಮಪತ್ರ ಸಲ್ಲಿಸುವ ದಿನ ಅವರ ಬಳಿಇದ್ದ ಹಣ 1080 ಮಾತ್ರ, ಬ್ಯಾಂಕಿನಲ್ಲಿದ್ದ ಠೇವಣಿ 9720/-! ದೇಶದಲ್ಲಿ ಅತಿ ಕಡಿಮೆ ಸಂಬಳ (9200/-) ಪಡೆಯುತ್ತಿರುವ ಮಾಣಿಕ್ ಸರ್ಕಾರ್ ಆ ಸಂಬಳವನ್ನೂ ಪಕ್ಷಕ್ಕೆ ನೀಡಿ ಪಕ್ಷದ ಇತರೆ ಕಾರ್ಯಕರ್ತರಂತೆ ಐದು ಸಾವಿರ ರುಪಾಯಿಗಳನ್ನು ಪಡೆಯುತ್ತಿದ್ದಾರೆ.

ಇನ್ನು ಮುಖ್ಯಮಂತ್ರಿಯ ಜೀವನ ನಿರ್ವಹಣೆ ನಡೆಯುತ್ತಿರುವುದು ಸರಕಾರಿ ಕೆಲಸದಲ್ಲಿದ್ದ ಅವರ ಮಡದಿ ನಿವೃತ್ತರಾದಾಗ ಬಂದ ಪಿಎಫ್ ಮತ್ತಿತರ ಹಣವನ್ನು (24 ಲಕ್ಷ) ಬ್ಯಾಂಕಿನಲ್ಲಿ ಠೇವಣಿರೂಪದಲ್ಲಿಟ್ಟು ಅದರಿಂದ ಬರುವ ಬಡ್ಡಿಯಿಂದ!

ಈ ರಾಜ್ಯದ ಅಧಿಕಾರ ಅವಧಿ 2018ಕ್ಕೆ ಮುಗಿಯುವುದರಿಂದ ಕರ್ನಾಟಕದ ಜೊತೆಯಲ್ಲಿಯೇ ಚುನಾವಣೆ ಬರಬಹುದು. ಮಾಣಿಕ್ ಸರ್ಕಾರ್ ಅವರ ಸರ್ಕಾರವನ್ನು ಸೋಲಿಸುವ ಪ್ರಯತ್ನ ಅಲ್ಲಿನ ಪ್ರತಿಪಕ್ಷಗಳಿಗೆ ಬಾರಿ ಕಷ್ಟದ ಕೆಲಸವಾಗಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • budget, karnataka

    6ನೇ ವೇತನ ಆಯೋಗದ ಗಾಳಿಸುದ್ದಿಗೆ ಕಿವಿ ಕೊಡಬೇಡಿ – ಇಲ್ಲಿದೆ ನಿಜವಾದ ಭಜೆಟ್ನ ಸುದ್ದಿ

    ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.

  • Health

    ನೆನೆಸಿಟ್ಟ ಒಣದ್ರಾಕ್ಷಿ ದಿನಾ ಒಂದೆರಡು ತಿಂದ್ರೆ, ಏನೆಲ್ಲಾ ಲಾಭವಿದೆ ಗೊತ್ತಾ?

    ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…

  • ಸುದ್ದಿ

    ಮೀನುಗಾರರ 60 ಕೋಟಿ ಸಾಲ ಮನ್ನಾ ಮಾಡಿ ಬಂಪರ್ ಖುಷಿ ನೀಡಿದ ಯಡಿಯೂರಪ್ಪ…!

    ಬೆಂಗಳೂರು, ಜುಲೈ 29  ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ  ಕರಾವಳಿಯ 3 ಜಿಲ್ಲೆಗಳಲ್ಲಿ  ಒಟ್ಟು 23507 ಮೀನುಗಾರರು  ವಾಣಿಜ್ಯ  ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಫೆಬ್ರವರಿ, 2019) ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಸಂಜೆ ಸ್ನೇಹಿತರೊಡನೆ ಹೋಗಿ, ಇದುತುಂಬ ಒಳ್ಳೆಯದನ್ನು…

  • inspirational

    ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸಬೇಕಾಗಿದ್ದ ಆ ಸಿನಿಮಾ ನಿಂತಿದ್ದೇಕೆ? ಇಂದ್ರಜಿತ್ ಬಿಚ್ಚಿಟ್ರು ಮೂಲ ಕಾರಣ.

    ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…