ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
“ಸೆವೆನ್ ಸಿಸ್ಟರ್ಸ್” ಎಂದೇ ಹೆಸರಾಗಿರುವ ಭಾರತದ ಈಶಾನ್ಯ ರಾಜ್ಯಗಳ ಪೈಕಿ ಅತ್ಯಂತ ಪುಟ್ಟ ಮತ್ತು ಕೊನೆಯ ರಾಜ್ಯ ತ್ರಿಪುರ. ಉತ್ತರ, ದಕ್ಷಿಣ ಮತ್ತು ಪಶ್ಚಿಮದಲ್ಲಿ ಬಾಂಗ್ಲಾದೇಶದಿಂದ ಸುತ್ತುವರಿಯಲ್ಪಟ್ಟಿರುವ ತ್ರಿಪುರದ ಪೂರ್ವಕ್ಕೆ ಅಸ್ಸಾಂ ಮತ್ತು ಮಿಝೊರಾಮ್ಗಳಿವೆ.
ಮಾಣಿಕ್ ಸರ್ಕಾರ್ ಇವರು 1998 ರಿಂದ ಇಲ್ಲಿಯ ವರೆಗೂ ಸೋತಿದ್ದೆ ಇಲ್ಲ ಮತ್ತು ಅಧಿಕಾರದಿಂದ ಕೆಳಗೆ ಇಳಿದೇಯಿಲ್ಲ ತನಗೆ ಬರುವ ಸಂಭಳವನ್ನು ಪಕ್ಷಕ್ಕೆ ನೀಡಿ ಪಕ್ಷದಿಂದ ಕೊಡುವ 5 ಸಾವಿರ ರೂಪಾಯಿಗಳಿಂದ ಜೀವನ ನಡೆಸುತ್ತಿರುವ ಇವರು ಭಾರತ ದೇಶದ 3ನೇ ಸಣ್ಣ ರಾಜ್ಯ ತ್ರಿಪುರಾದ ಮುಖ್ಯಮಂತ್ರಿ.
ಇವರು ಕಮ್ಯುನಿಸ್ಟ್ (Marxist) ಪಾರ್ಟಿಯವರು, 2013 ರಲ್ಲಿ ನಡೆದ ಚುನಾವಣೆಯಲ್ಲಿ ಗೆದ್ದು 4ನೇ ಭಾರಿಗೆ ಮುಖ್ಯಮಂತ್ರಿ ಆದರು.
ಮಾಣಿಕ್ ಸರ್ಕಾರ್ ರವರ ವೈಯಕ್ತಿಕ ಜೀವನ:-
ಮಾಣಿಕ್ ಸರ್ಕಾರ್ 1949 ಜನವರಿ 22 ರಂದು, ರಾಧಕಿಶೋರ್ ಪುರದಲ್ಲಿ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ ಜನಿಸಿದರು. ಅವರ ತಂದೆ ಅಮೂಲ್ಯ ಸರ್ಕಾರ್ ಒಬ್ಬ ಟೈಲರ್. ತಾಯಿ ಅಂಜಲಿ ಸರ್ಕಾರ್ ರಾಜ್ಯ ಸರ್ಕಾರದ ನೌಕರಿಯಲ್ಲಿದ್ದರು. ಮಾಣಿಕ್ ಸರ್ಕಾರ್ ಎಮ್ ಬಿ ಬಿ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದಾರೆ. ಅವರು ವಿದ್ಯಾರ್ಥಿ ಜೀವನದಲ್ಲಿ ವಿಧ್ಯಾರ್ಥಿ ಸಂಘಟನೆಯ ಚಟುವಟಿಕೆಯಲ್ಲಿ ಭಾಗವಹಿಸುತ್ತಿದ್ದರು. ಎಮ್ ಬಿ ಬಿ ಕಾಲೇಜಿನ ವಿದ್ಯಾರ್ಥಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಎಸ್ ಎಪ್ ಐ (ಸ್ಟುಡೆಂಟ್ ಫೆಡರೇಶನ್ ಆಫ್ ಇಂಡಿಯಾ) ಸಂಘಟನೆಯ ಅಖಿಲ ಭಾರತ ಉಪಾದ್ಯಕ್ಷರಾಗಿದ್ದರು.
ತನ್ನ 19 ನೇ ವಯಸ್ಸಿನಲ್ಲೇ ಅಂದರೆ 1968 ರಲ್ಲಿ ಸಿಪಿಐ(ಎಂ) ಪಕ್ಷದ ಸದಸ್ಯರಾದರು. 1972 ರಲ್ಲಿ ತನ್ನ 23ನೇ ವಯಸ್ಸಿನಲ್ಲಿ, ಸಿಪಿಐ(ಎಂ) ಪಕ್ಷದ ರಾಜ್ಯ ಸಮಿತಿ ಸದಸ್ಯರಾದರು. ರಾಜ್ಯ ಸಮಿತಿ ಸದಸ್ಯರಾದ 6 ವರ್ಷಗಳ ನಂತರ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದರು. ತಮ್ಮ 31 ನೇ ವಯಸ್ಸಿನಲ್ಲಿ ಅಂದರೆ, 1980 ರಲ್ಲಿ, ಅಗರ್ತಲಾ ಕ್ಷೇತ್ರದಿಂದ ವಿದಾನ ಸಭೆಗೆ ಆಯ್ಕೆಯಾದರು. 1993 ರಲ್ಲಿ ರಾಜ್ಯದಲ್ಲಿ ಎಡರಂಗ ಸರ್ಕಾರ ಅಧಿಕಾರದಲ್ಲಿದ್ದಾಗ, ಸರ್ಕಾರ್, ಪಕ್ಷದ ರಾಜ್ಯ ಕಾರ್ಯದರ್ಶಿಯಾದರು. 1998 ರಲ್ಲಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿ ಮಾಣಿಕ್ ಸರ್ಕಾರ್ ತ್ರಿಪುರಾ ರಾಜ್ಯದ ಮುಖ್ಯಮಂತ್ರಿಯಾದರು. ಆಗ ಅವರ ವಯಸ್ಸು 49 ವರ್ಷ. ಅದೇ ವರ್ಷದಲ್ಲಿ ಅವರು ಸಿಪಿಐ(ಎಂ) ಪಕ್ಷದ ಪೊಲಿಟ್ ಭ್ಯೂರೋ ಸದಸ್ಯರಾದರು.
ಸರಳ ಜೀವನ:-
ಮಾಣಿಕ್ ಸರ್ಕಾರ್ ರವರ ವೈಯಕ್ತಿಕ ಜೀವನವನ್ನು ನೋಡಿದರೆ ಮತ್ತಷ್ಟು ಅಚ್ಚರಿಗೊಳಗಾಗುತ್ತೇವೆ! ಭಾರತದ ಪರಿಶುದ್ಧ ಮತ್ತು ಅತಿ ಬಡ ಮುಖ್ಯಮಂತ್ರಿ (ಬಹುಶಃ ಬಡ ರಾಜಕಾರಣಿ!) ಮಾಣಿಕ್ ಸರ್ಕಾರ್! ಅವರು ಘೋಷಿಸಿಕೊಂಡಿರುವ ಆಸ್ತಿಯ ಒಟ್ಟು ಮೌಲ್ಯ ಎರಡೂವರೆ ಲಕ್ಷಕ್ಕಿಂತಲೂ ಕಡಿಮೆ. ಅದರಲ್ಲಿ ಅವರ ತಾಯಿಯಿಂದ ಬಂದ ಒಂದು ಮನೆ ಕೂಡ ಸೇರಿದೆ. 2013ರ ಚುನಾವಣೆಗೆ ನಾಮಪತ್ರ ಸಲ್ಲಿಸುವ ದಿನ ಅವರ ಬಳಿಇದ್ದ ಹಣ 1080 ಮಾತ್ರ, ಬ್ಯಾಂಕಿನಲ್ಲಿದ್ದ ಠೇವಣಿ 9720/-! ದೇಶದಲ್ಲಿ ಅತಿ ಕಡಿಮೆ ಸಂಬಳ (9200/-) ಪಡೆಯುತ್ತಿರುವ ಮಾಣಿಕ್ ಸರ್ಕಾರ್ ಆ ಸಂಬಳವನ್ನೂ ಪಕ್ಷಕ್ಕೆ ನೀಡಿ ಪಕ್ಷದ ಇತರೆ ಕಾರ್ಯಕರ್ತರಂತೆ ಐದು ಸಾವಿರ ರುಪಾಯಿಗಳನ್ನು ಪಡೆಯುತ್ತಿದ್ದಾರೆ.
ಇನ್ನು ಮುಖ್ಯಮಂತ್ರಿಯ ಜೀವನ ನಿರ್ವಹಣೆ ನಡೆಯುತ್ತಿರುವುದು ಸರಕಾರಿ ಕೆಲಸದಲ್ಲಿದ್ದ ಅವರ ಮಡದಿ ನಿವೃತ್ತರಾದಾಗ ಬಂದ ಪಿಎಫ್ ಮತ್ತಿತರ ಹಣವನ್ನು (24 ಲಕ್ಷ) ಬ್ಯಾಂಕಿನಲ್ಲಿ ಠೇವಣಿರೂಪದಲ್ಲಿಟ್ಟು ಅದರಿಂದ ಬರುವ ಬಡ್ಡಿಯಿಂದ!
ಈ ರಾಜ್ಯದ ಅಧಿಕಾರ ಅವಧಿ 2018ಕ್ಕೆ ಮುಗಿಯುವುದರಿಂದ ಕರ್ನಾಟಕದ ಜೊತೆಯಲ್ಲಿಯೇ ಚುನಾವಣೆ ಬರಬಹುದು. ಮಾಣಿಕ್ ಸರ್ಕಾರ್ ಅವರ ಸರ್ಕಾರವನ್ನು ಸೋಲಿಸುವ ಪ್ರಯತ್ನ ಅಲ್ಲಿನ ಪ್ರತಿಪಕ್ಷಗಳಿಗೆ ಬಾರಿ ಕಷ್ಟದ ಕೆಲಸವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.
ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ. ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ…
ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…
ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್…