ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
“ಸೆವೆನ್ ಸಿಸ್ಟರ್ಸ್” ಎಂದೇ ಹೆಸರಾಗಿರುವ ಭಾರತದ ಈಶಾನ್ಯ ರಾಜ್ಯಗಳ ಪೈಕಿ ಅತ್ಯಂತ ಪುಟ್ಟ ಮತ್ತು ಕೊನೆಯ ರಾಜ್ಯ ತ್ರಿಪುರ. ಉತ್ತರ, ದಕ್ಷಿಣ ಮತ್ತು ಪಶ್ಚಿಮದಲ್ಲಿ ಬಾಂಗ್ಲಾದೇಶದಿಂದ ಸುತ್ತುವರಿಯಲ್ಪಟ್ಟಿರುವ ತ್ರಿಪುರದ ಪೂರ್ವಕ್ಕೆ ಅಸ್ಸಾಂ ಮತ್ತು ಮಿಝೊರಾಮ್ಗಳಿವೆ.
ಮಾಣಿಕ್ ಸರ್ಕಾರ್ ಇವರು 1998 ರಿಂದ ಇಲ್ಲಿಯ ವರೆಗೂ ಸೋತಿದ್ದೆ ಇಲ್ಲ ಮತ್ತು ಅಧಿಕಾರದಿಂದ ಕೆಳಗೆ ಇಳಿದೇಯಿಲ್ಲ ತನಗೆ ಬರುವ ಸಂಭಳವನ್ನು ಪಕ್ಷಕ್ಕೆ ನೀಡಿ ಪಕ್ಷದಿಂದ ಕೊಡುವ 5 ಸಾವಿರ ರೂಪಾಯಿಗಳಿಂದ ಜೀವನ ನಡೆಸುತ್ತಿರುವ ಇವರು ಭಾರತ ದೇಶದ 3ನೇ ಸಣ್ಣ ರಾಜ್ಯ ತ್ರಿಪುರಾದ ಮುಖ್ಯಮಂತ್ರಿ.
ಇವರು ಕಮ್ಯುನಿಸ್ಟ್ (Marxist) ಪಾರ್ಟಿಯವರು, 2013 ರಲ್ಲಿ ನಡೆದ ಚುನಾವಣೆಯಲ್ಲಿ ಗೆದ್ದು 4ನೇ ಭಾರಿಗೆ ಮುಖ್ಯಮಂತ್ರಿ ಆದರು.
ಮಾಣಿಕ್ ಸರ್ಕಾರ್ ರವರ ವೈಯಕ್ತಿಕ ಜೀವನ:-
ಮಾಣಿಕ್ ಸರ್ಕಾರ್ 1949 ಜನವರಿ 22 ರಂದು, ರಾಧಕಿಶೋರ್ ಪುರದಲ್ಲಿ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ ಜನಿಸಿದರು. ಅವರ ತಂದೆ ಅಮೂಲ್ಯ ಸರ್ಕಾರ್ ಒಬ್ಬ ಟೈಲರ್. ತಾಯಿ ಅಂಜಲಿ ಸರ್ಕಾರ್ ರಾಜ್ಯ ಸರ್ಕಾರದ ನೌಕರಿಯಲ್ಲಿದ್ದರು. ಮಾಣಿಕ್ ಸರ್ಕಾರ್ ಎಮ್ ಬಿ ಬಿ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದಾರೆ. ಅವರು ವಿದ್ಯಾರ್ಥಿ ಜೀವನದಲ್ಲಿ ವಿಧ್ಯಾರ್ಥಿ ಸಂಘಟನೆಯ ಚಟುವಟಿಕೆಯಲ್ಲಿ ಭಾಗವಹಿಸುತ್ತಿದ್ದರು. ಎಮ್ ಬಿ ಬಿ ಕಾಲೇಜಿನ ವಿದ್ಯಾರ್ಥಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಎಸ್ ಎಪ್ ಐ (ಸ್ಟುಡೆಂಟ್ ಫೆಡರೇಶನ್ ಆಫ್ ಇಂಡಿಯಾ) ಸಂಘಟನೆಯ ಅಖಿಲ ಭಾರತ ಉಪಾದ್ಯಕ್ಷರಾಗಿದ್ದರು.
ತನ್ನ 19 ನೇ ವಯಸ್ಸಿನಲ್ಲೇ ಅಂದರೆ 1968 ರಲ್ಲಿ ಸಿಪಿಐ(ಎಂ) ಪಕ್ಷದ ಸದಸ್ಯರಾದರು. 1972 ರಲ್ಲಿ ತನ್ನ 23ನೇ ವಯಸ್ಸಿನಲ್ಲಿ, ಸಿಪಿಐ(ಎಂ) ಪಕ್ಷದ ರಾಜ್ಯ ಸಮಿತಿ ಸದಸ್ಯರಾದರು. ರಾಜ್ಯ ಸಮಿತಿ ಸದಸ್ಯರಾದ 6 ವರ್ಷಗಳ ನಂತರ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದರು. ತಮ್ಮ 31 ನೇ ವಯಸ್ಸಿನಲ್ಲಿ ಅಂದರೆ, 1980 ರಲ್ಲಿ, ಅಗರ್ತಲಾ ಕ್ಷೇತ್ರದಿಂದ ವಿದಾನ ಸಭೆಗೆ ಆಯ್ಕೆಯಾದರು. 1993 ರಲ್ಲಿ ರಾಜ್ಯದಲ್ಲಿ ಎಡರಂಗ ಸರ್ಕಾರ ಅಧಿಕಾರದಲ್ಲಿದ್ದಾಗ, ಸರ್ಕಾರ್, ಪಕ್ಷದ ರಾಜ್ಯ ಕಾರ್ಯದರ್ಶಿಯಾದರು. 1998 ರಲ್ಲಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿ ಮಾಣಿಕ್ ಸರ್ಕಾರ್ ತ್ರಿಪುರಾ ರಾಜ್ಯದ ಮುಖ್ಯಮಂತ್ರಿಯಾದರು. ಆಗ ಅವರ ವಯಸ್ಸು 49 ವರ್ಷ. ಅದೇ ವರ್ಷದಲ್ಲಿ ಅವರು ಸಿಪಿಐ(ಎಂ) ಪಕ್ಷದ ಪೊಲಿಟ್ ಭ್ಯೂರೋ ಸದಸ್ಯರಾದರು.
ಸರಳ ಜೀವನ:-
ಮಾಣಿಕ್ ಸರ್ಕಾರ್ ರವರ ವೈಯಕ್ತಿಕ ಜೀವನವನ್ನು ನೋಡಿದರೆ ಮತ್ತಷ್ಟು ಅಚ್ಚರಿಗೊಳಗಾಗುತ್ತೇವೆ! ಭಾರತದ ಪರಿಶುದ್ಧ ಮತ್ತು ಅತಿ ಬಡ ಮುಖ್ಯಮಂತ್ರಿ (ಬಹುಶಃ ಬಡ ರಾಜಕಾರಣಿ!) ಮಾಣಿಕ್ ಸರ್ಕಾರ್! ಅವರು ಘೋಷಿಸಿಕೊಂಡಿರುವ ಆಸ್ತಿಯ ಒಟ್ಟು ಮೌಲ್ಯ ಎರಡೂವರೆ ಲಕ್ಷಕ್ಕಿಂತಲೂ ಕಡಿಮೆ. ಅದರಲ್ಲಿ ಅವರ ತಾಯಿಯಿಂದ ಬಂದ ಒಂದು ಮನೆ ಕೂಡ ಸೇರಿದೆ. 2013ರ ಚುನಾವಣೆಗೆ ನಾಮಪತ್ರ ಸಲ್ಲಿಸುವ ದಿನ ಅವರ ಬಳಿಇದ್ದ ಹಣ 1080 ಮಾತ್ರ, ಬ್ಯಾಂಕಿನಲ್ಲಿದ್ದ ಠೇವಣಿ 9720/-! ದೇಶದಲ್ಲಿ ಅತಿ ಕಡಿಮೆ ಸಂಬಳ (9200/-) ಪಡೆಯುತ್ತಿರುವ ಮಾಣಿಕ್ ಸರ್ಕಾರ್ ಆ ಸಂಬಳವನ್ನೂ ಪಕ್ಷಕ್ಕೆ ನೀಡಿ ಪಕ್ಷದ ಇತರೆ ಕಾರ್ಯಕರ್ತರಂತೆ ಐದು ಸಾವಿರ ರುಪಾಯಿಗಳನ್ನು ಪಡೆಯುತ್ತಿದ್ದಾರೆ.
ಇನ್ನು ಮುಖ್ಯಮಂತ್ರಿಯ ಜೀವನ ನಿರ್ವಹಣೆ ನಡೆಯುತ್ತಿರುವುದು ಸರಕಾರಿ ಕೆಲಸದಲ್ಲಿದ್ದ ಅವರ ಮಡದಿ ನಿವೃತ್ತರಾದಾಗ ಬಂದ ಪಿಎಫ್ ಮತ್ತಿತರ ಹಣವನ್ನು (24 ಲಕ್ಷ) ಬ್ಯಾಂಕಿನಲ್ಲಿ ಠೇವಣಿರೂಪದಲ್ಲಿಟ್ಟು ಅದರಿಂದ ಬರುವ ಬಡ್ಡಿಯಿಂದ!
ಈ ರಾಜ್ಯದ ಅಧಿಕಾರ ಅವಧಿ 2018ಕ್ಕೆ ಮುಗಿಯುವುದರಿಂದ ಕರ್ನಾಟಕದ ಜೊತೆಯಲ್ಲಿಯೇ ಚುನಾವಣೆ ಬರಬಹುದು. ಮಾಣಿಕ್ ಸರ್ಕಾರ್ ಅವರ ಸರ್ಕಾರವನ್ನು ಸೋಲಿಸುವ ಪ್ರಯತ್ನ ಅಲ್ಲಿನ ಪ್ರತಿಪಕ್ಷಗಳಿಗೆ ಬಾರಿ ಕಷ್ಟದ ಕೆಲಸವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…
ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.
ದಿನ ನಿತ್ಯದ ಜೀವನದಲ್ಲಿ ನಾವು ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ ಅನೇಕ ವಸ್ತುಗಳನ್ನು ನಾವು ಬಳಸುತ್ತಿರುತ್ತೇವೆ.ನಾವು ಹೀಗೆ ಬಳಸುವ ವಸ್ತುಗಳು ನಮ್ಮ ಜೀವನದ ಮೇಲೆ ಒಳ್ಳೆಯ ಮತ್ತು ಕೆಟ್ಟ ಪ್ರಭಾವವನ್ನು ಬೀರುತ್ತವೆ. ನಾವು ಸಾಮಾನ್ಯವಾಗಿ ನಮ್ಮ ಸ್ನೇಹಿತರ,ಸಂಭಂದಿಕರ ವಸ್ತುಗಳನ್ನು ಅದಲು ಬದಲು ಮಾಡಿಕೊಂಡು ಉಪಯೋಗಿಸುತ್ತಿರುತ್ತೇವೆ.ಆದರೆ ಜ್ಯೋತಿಷ್ಯದಲ್ಲಿ ಹೇಳಿರುವ ಪ್ರಖಾರ ಬೇರೆಯವರ ಕೆಲವೊಂದು ವಸ್ತುಗಳನ್ನು ಉಪಯೋಗಿಸುವುದರಿಂದ ಅವರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಅಂತ ಹೇಳಲಾಗಿದೆ. ಹಾಗಾದ್ರೆ ಬೇರೆಯವರ ಯಾವ ವಸ್ತುಗಳನ್ನು ಉಪಯೋಗಿಸುವುದರಿಂದ ನಮ್ಮ ಮೇಲೆ ಕೆಟ್ಟ…
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…
ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…