ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
“ಸೆವೆನ್ ಸಿಸ್ಟರ್ಸ್” ಎಂದೇ ಹೆಸರಾಗಿರುವ ಭಾರತದ ಈಶಾನ್ಯ ರಾಜ್ಯಗಳ ಪೈಕಿ ಅತ್ಯಂತ ಪುಟ್ಟ ಮತ್ತು ಕೊನೆಯ ರಾಜ್ಯ ತ್ರಿಪುರ. ಉತ್ತರ, ದಕ್ಷಿಣ ಮತ್ತು ಪಶ್ಚಿಮದಲ್ಲಿ ಬಾಂಗ್ಲಾದೇಶದಿಂದ ಸುತ್ತುವರಿಯಲ್ಪಟ್ಟಿರುವ ತ್ರಿಪುರದ ಪೂರ್ವಕ್ಕೆ ಅಸ್ಸಾಂ ಮತ್ತು ಮಿಝೊರಾಮ್ಗಳಿವೆ.
ಮಾಣಿಕ್ ಸರ್ಕಾರ್ ಇವರು 1998 ರಿಂದ ಇಲ್ಲಿಯ ವರೆಗೂ ಸೋತಿದ್ದೆ ಇಲ್ಲ ಮತ್ತು ಅಧಿಕಾರದಿಂದ ಕೆಳಗೆ ಇಳಿದೇಯಿಲ್ಲ ತನಗೆ ಬರುವ ಸಂಭಳವನ್ನು ಪಕ್ಷಕ್ಕೆ ನೀಡಿ ಪಕ್ಷದಿಂದ ಕೊಡುವ 5 ಸಾವಿರ ರೂಪಾಯಿಗಳಿಂದ ಜೀವನ ನಡೆಸುತ್ತಿರುವ ಇವರು ಭಾರತ ದೇಶದ 3ನೇ ಸಣ್ಣ ರಾಜ್ಯ ತ್ರಿಪುರಾದ ಮುಖ್ಯಮಂತ್ರಿ.
ಇವರು ಕಮ್ಯುನಿಸ್ಟ್ (Marxist) ಪಾರ್ಟಿಯವರು, 2013 ರಲ್ಲಿ ನಡೆದ ಚುನಾವಣೆಯಲ್ಲಿ ಗೆದ್ದು 4ನೇ ಭಾರಿಗೆ ಮುಖ್ಯಮಂತ್ರಿ ಆದರು.
ಮಾಣಿಕ್ ಸರ್ಕಾರ್ ರವರ ವೈಯಕ್ತಿಕ ಜೀವನ:-
ಮಾಣಿಕ್ ಸರ್ಕಾರ್ 1949 ಜನವರಿ 22 ರಂದು, ರಾಧಕಿಶೋರ್ ಪುರದಲ್ಲಿ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ ಜನಿಸಿದರು. ಅವರ ತಂದೆ ಅಮೂಲ್ಯ ಸರ್ಕಾರ್ ಒಬ್ಬ ಟೈಲರ್. ತಾಯಿ ಅಂಜಲಿ ಸರ್ಕಾರ್ ರಾಜ್ಯ ಸರ್ಕಾರದ ನೌಕರಿಯಲ್ಲಿದ್ದರು. ಮಾಣಿಕ್ ಸರ್ಕಾರ್ ಎಮ್ ಬಿ ಬಿ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದಾರೆ. ಅವರು ವಿದ್ಯಾರ್ಥಿ ಜೀವನದಲ್ಲಿ ವಿಧ್ಯಾರ್ಥಿ ಸಂಘಟನೆಯ ಚಟುವಟಿಕೆಯಲ್ಲಿ ಭಾಗವಹಿಸುತ್ತಿದ್ದರು. ಎಮ್ ಬಿ ಬಿ ಕಾಲೇಜಿನ ವಿದ್ಯಾರ್ಥಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಎಸ್ ಎಪ್ ಐ (ಸ್ಟುಡೆಂಟ್ ಫೆಡರೇಶನ್ ಆಫ್ ಇಂಡಿಯಾ) ಸಂಘಟನೆಯ ಅಖಿಲ ಭಾರತ ಉಪಾದ್ಯಕ್ಷರಾಗಿದ್ದರು.
ತನ್ನ 19 ನೇ ವಯಸ್ಸಿನಲ್ಲೇ ಅಂದರೆ 1968 ರಲ್ಲಿ ಸಿಪಿಐ(ಎಂ) ಪಕ್ಷದ ಸದಸ್ಯರಾದರು. 1972 ರಲ್ಲಿ ತನ್ನ 23ನೇ ವಯಸ್ಸಿನಲ್ಲಿ, ಸಿಪಿಐ(ಎಂ) ಪಕ್ಷದ ರಾಜ್ಯ ಸಮಿತಿ ಸದಸ್ಯರಾದರು. ರಾಜ್ಯ ಸಮಿತಿ ಸದಸ್ಯರಾದ 6 ವರ್ಷಗಳ ನಂತರ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದರು. ತಮ್ಮ 31 ನೇ ವಯಸ್ಸಿನಲ್ಲಿ ಅಂದರೆ, 1980 ರಲ್ಲಿ, ಅಗರ್ತಲಾ ಕ್ಷೇತ್ರದಿಂದ ವಿದಾನ ಸಭೆಗೆ ಆಯ್ಕೆಯಾದರು. 1993 ರಲ್ಲಿ ರಾಜ್ಯದಲ್ಲಿ ಎಡರಂಗ ಸರ್ಕಾರ ಅಧಿಕಾರದಲ್ಲಿದ್ದಾಗ, ಸರ್ಕಾರ್, ಪಕ್ಷದ ರಾಜ್ಯ ಕಾರ್ಯದರ್ಶಿಯಾದರು. 1998 ರಲ್ಲಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿ ಮಾಣಿಕ್ ಸರ್ಕಾರ್ ತ್ರಿಪುರಾ ರಾಜ್ಯದ ಮುಖ್ಯಮಂತ್ರಿಯಾದರು. ಆಗ ಅವರ ವಯಸ್ಸು 49 ವರ್ಷ. ಅದೇ ವರ್ಷದಲ್ಲಿ ಅವರು ಸಿಪಿಐ(ಎಂ) ಪಕ್ಷದ ಪೊಲಿಟ್ ಭ್ಯೂರೋ ಸದಸ್ಯರಾದರು.
ಸರಳ ಜೀವನ:-
ಮಾಣಿಕ್ ಸರ್ಕಾರ್ ರವರ ವೈಯಕ್ತಿಕ ಜೀವನವನ್ನು ನೋಡಿದರೆ ಮತ್ತಷ್ಟು ಅಚ್ಚರಿಗೊಳಗಾಗುತ್ತೇವೆ! ಭಾರತದ ಪರಿಶುದ್ಧ ಮತ್ತು ಅತಿ ಬಡ ಮುಖ್ಯಮಂತ್ರಿ (ಬಹುಶಃ ಬಡ ರಾಜಕಾರಣಿ!) ಮಾಣಿಕ್ ಸರ್ಕಾರ್! ಅವರು ಘೋಷಿಸಿಕೊಂಡಿರುವ ಆಸ್ತಿಯ ಒಟ್ಟು ಮೌಲ್ಯ ಎರಡೂವರೆ ಲಕ್ಷಕ್ಕಿಂತಲೂ ಕಡಿಮೆ. ಅದರಲ್ಲಿ ಅವರ ತಾಯಿಯಿಂದ ಬಂದ ಒಂದು ಮನೆ ಕೂಡ ಸೇರಿದೆ. 2013ರ ಚುನಾವಣೆಗೆ ನಾಮಪತ್ರ ಸಲ್ಲಿಸುವ ದಿನ ಅವರ ಬಳಿಇದ್ದ ಹಣ 1080 ಮಾತ್ರ, ಬ್ಯಾಂಕಿನಲ್ಲಿದ್ದ ಠೇವಣಿ 9720/-! ದೇಶದಲ್ಲಿ ಅತಿ ಕಡಿಮೆ ಸಂಬಳ (9200/-) ಪಡೆಯುತ್ತಿರುವ ಮಾಣಿಕ್ ಸರ್ಕಾರ್ ಆ ಸಂಬಳವನ್ನೂ ಪಕ್ಷಕ್ಕೆ ನೀಡಿ ಪಕ್ಷದ ಇತರೆ ಕಾರ್ಯಕರ್ತರಂತೆ ಐದು ಸಾವಿರ ರುಪಾಯಿಗಳನ್ನು ಪಡೆಯುತ್ತಿದ್ದಾರೆ.
ಇನ್ನು ಮುಖ್ಯಮಂತ್ರಿಯ ಜೀವನ ನಿರ್ವಹಣೆ ನಡೆಯುತ್ತಿರುವುದು ಸರಕಾರಿ ಕೆಲಸದಲ್ಲಿದ್ದ ಅವರ ಮಡದಿ ನಿವೃತ್ತರಾದಾಗ ಬಂದ ಪಿಎಫ್ ಮತ್ತಿತರ ಹಣವನ್ನು (24 ಲಕ್ಷ) ಬ್ಯಾಂಕಿನಲ್ಲಿ ಠೇವಣಿರೂಪದಲ್ಲಿಟ್ಟು ಅದರಿಂದ ಬರುವ ಬಡ್ಡಿಯಿಂದ!
ಈ ರಾಜ್ಯದ ಅಧಿಕಾರ ಅವಧಿ 2018ಕ್ಕೆ ಮುಗಿಯುವುದರಿಂದ ಕರ್ನಾಟಕದ ಜೊತೆಯಲ್ಲಿಯೇ ಚುನಾವಣೆ ಬರಬಹುದು. ಮಾಣಿಕ್ ಸರ್ಕಾರ್ ಅವರ ಸರ್ಕಾರವನ್ನು ಸೋಲಿಸುವ ಪ್ರಯತ್ನ ಅಲ್ಲಿನ ಪ್ರತಿಪಕ್ಷಗಳಿಗೆ ಬಾರಿ ಕಷ್ಟದ ಕೆಲಸವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…
ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…
ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್ ರೀತಿಯ ವಿಶಿಷ್ಟಗುರುತಿನ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಿರಾಸ್ತಿಗೂ ಬರಲಿದೆ ಆಧಾರ್ ರೀತಿ ವಿಶಿಷ್ಟಗುರುತಿನ ಸಂಖ್ಯೆ| ವಿಶಿಷ್ಟಗುರುತಿನ ಸಂಖ್ಯೆಯಲ್ಲಿ ಜಾಗದ ಎಲ್ಲಾ ಮಾಹಿತಿ| ಭೂ ವ್ಯವಹಾರ ಸುಲಭ ಹಾಗೂ ಪಾರದರ್ಶಕಕ್ಕೆ ನೆರವು| ಬೆರಳ ತುದಿಯಲ್ಲಿ ಭೂ ದಾಖಲೆ, ಬೇನಾಮಿ ಆಸ್ತಿಗೆ ಬ್ರೇಕ್| ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರುಗಳ ಶೀಘ್ರ…