ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
“ಸೆವೆನ್ ಸಿಸ್ಟರ್ಸ್” ಎಂದೇ ಹೆಸರಾಗಿರುವ ಭಾರತದ ಈಶಾನ್ಯ ರಾಜ್ಯಗಳ ಪೈಕಿ ಅತ್ಯಂತ ಪುಟ್ಟ ಮತ್ತು ಕೊನೆಯ ರಾಜ್ಯ ತ್ರಿಪುರ. ಉತ್ತರ, ದಕ್ಷಿಣ ಮತ್ತು ಪಶ್ಚಿಮದಲ್ಲಿ ಬಾಂಗ್ಲಾದೇಶದಿಂದ ಸುತ್ತುವರಿಯಲ್ಪಟ್ಟಿರುವ ತ್ರಿಪುರದ ಪೂರ್ವಕ್ಕೆ ಅಸ್ಸಾಂ ಮತ್ತು ಮಿಝೊರಾಮ್ಗಳಿವೆ.
ಮಾಣಿಕ್ ಸರ್ಕಾರ್ ಇವರು 1998 ರಿಂದ ಇಲ್ಲಿಯ ವರೆಗೂ ಸೋತಿದ್ದೆ ಇಲ್ಲ ಮತ್ತು ಅಧಿಕಾರದಿಂದ ಕೆಳಗೆ ಇಳಿದೇಯಿಲ್ಲ ತನಗೆ ಬರುವ ಸಂಭಳವನ್ನು ಪಕ್ಷಕ್ಕೆ ನೀಡಿ ಪಕ್ಷದಿಂದ ಕೊಡುವ 5 ಸಾವಿರ ರೂಪಾಯಿಗಳಿಂದ ಜೀವನ ನಡೆಸುತ್ತಿರುವ ಇವರು ಭಾರತ ದೇಶದ 3ನೇ ಸಣ್ಣ ರಾಜ್ಯ ತ್ರಿಪುರಾದ ಮುಖ್ಯಮಂತ್ರಿ.
ಇವರು ಕಮ್ಯುನಿಸ್ಟ್ (Marxist) ಪಾರ್ಟಿಯವರು, 2013 ರಲ್ಲಿ ನಡೆದ ಚುನಾವಣೆಯಲ್ಲಿ ಗೆದ್ದು 4ನೇ ಭಾರಿಗೆ ಮುಖ್ಯಮಂತ್ರಿ ಆದರು.
ಮಾಣಿಕ್ ಸರ್ಕಾರ್ ರವರ ವೈಯಕ್ತಿಕ ಜೀವನ:-
ಮಾಣಿಕ್ ಸರ್ಕಾರ್ 1949 ಜನವರಿ 22 ರಂದು, ರಾಧಕಿಶೋರ್ ಪುರದಲ್ಲಿ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ ಜನಿಸಿದರು. ಅವರ ತಂದೆ ಅಮೂಲ್ಯ ಸರ್ಕಾರ್ ಒಬ್ಬ ಟೈಲರ್. ತಾಯಿ ಅಂಜಲಿ ಸರ್ಕಾರ್ ರಾಜ್ಯ ಸರ್ಕಾರದ ನೌಕರಿಯಲ್ಲಿದ್ದರು. ಮಾಣಿಕ್ ಸರ್ಕಾರ್ ಎಮ್ ಬಿ ಬಿ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದಾರೆ. ಅವರು ವಿದ್ಯಾರ್ಥಿ ಜೀವನದಲ್ಲಿ ವಿಧ್ಯಾರ್ಥಿ ಸಂಘಟನೆಯ ಚಟುವಟಿಕೆಯಲ್ಲಿ ಭಾಗವಹಿಸುತ್ತಿದ್ದರು. ಎಮ್ ಬಿ ಬಿ ಕಾಲೇಜಿನ ವಿದ್ಯಾರ್ಥಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಎಸ್ ಎಪ್ ಐ (ಸ್ಟುಡೆಂಟ್ ಫೆಡರೇಶನ್ ಆಫ್ ಇಂಡಿಯಾ) ಸಂಘಟನೆಯ ಅಖಿಲ ಭಾರತ ಉಪಾದ್ಯಕ್ಷರಾಗಿದ್ದರು.
ತನ್ನ 19 ನೇ ವಯಸ್ಸಿನಲ್ಲೇ ಅಂದರೆ 1968 ರಲ್ಲಿ ಸಿಪಿಐ(ಎಂ) ಪಕ್ಷದ ಸದಸ್ಯರಾದರು. 1972 ರಲ್ಲಿ ತನ್ನ 23ನೇ ವಯಸ್ಸಿನಲ್ಲಿ, ಸಿಪಿಐ(ಎಂ) ಪಕ್ಷದ ರಾಜ್ಯ ಸಮಿತಿ ಸದಸ್ಯರಾದರು. ರಾಜ್ಯ ಸಮಿತಿ ಸದಸ್ಯರಾದ 6 ವರ್ಷಗಳ ನಂತರ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದರು. ತಮ್ಮ 31 ನೇ ವಯಸ್ಸಿನಲ್ಲಿ ಅಂದರೆ, 1980 ರಲ್ಲಿ, ಅಗರ್ತಲಾ ಕ್ಷೇತ್ರದಿಂದ ವಿದಾನ ಸಭೆಗೆ ಆಯ್ಕೆಯಾದರು. 1993 ರಲ್ಲಿ ರಾಜ್ಯದಲ್ಲಿ ಎಡರಂಗ ಸರ್ಕಾರ ಅಧಿಕಾರದಲ್ಲಿದ್ದಾಗ, ಸರ್ಕಾರ್, ಪಕ್ಷದ ರಾಜ್ಯ ಕಾರ್ಯದರ್ಶಿಯಾದರು. 1998 ರಲ್ಲಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿ ಮಾಣಿಕ್ ಸರ್ಕಾರ್ ತ್ರಿಪುರಾ ರಾಜ್ಯದ ಮುಖ್ಯಮಂತ್ರಿಯಾದರು. ಆಗ ಅವರ ವಯಸ್ಸು 49 ವರ್ಷ. ಅದೇ ವರ್ಷದಲ್ಲಿ ಅವರು ಸಿಪಿಐ(ಎಂ) ಪಕ್ಷದ ಪೊಲಿಟ್ ಭ್ಯೂರೋ ಸದಸ್ಯರಾದರು.
ಸರಳ ಜೀವನ:-
ಮಾಣಿಕ್ ಸರ್ಕಾರ್ ರವರ ವೈಯಕ್ತಿಕ ಜೀವನವನ್ನು ನೋಡಿದರೆ ಮತ್ತಷ್ಟು ಅಚ್ಚರಿಗೊಳಗಾಗುತ್ತೇವೆ! ಭಾರತದ ಪರಿಶುದ್ಧ ಮತ್ತು ಅತಿ ಬಡ ಮುಖ್ಯಮಂತ್ರಿ (ಬಹುಶಃ ಬಡ ರಾಜಕಾರಣಿ!) ಮಾಣಿಕ್ ಸರ್ಕಾರ್! ಅವರು ಘೋಷಿಸಿಕೊಂಡಿರುವ ಆಸ್ತಿಯ ಒಟ್ಟು ಮೌಲ್ಯ ಎರಡೂವರೆ ಲಕ್ಷಕ್ಕಿಂತಲೂ ಕಡಿಮೆ. ಅದರಲ್ಲಿ ಅವರ ತಾಯಿಯಿಂದ ಬಂದ ಒಂದು ಮನೆ ಕೂಡ ಸೇರಿದೆ. 2013ರ ಚುನಾವಣೆಗೆ ನಾಮಪತ್ರ ಸಲ್ಲಿಸುವ ದಿನ ಅವರ ಬಳಿಇದ್ದ ಹಣ 1080 ಮಾತ್ರ, ಬ್ಯಾಂಕಿನಲ್ಲಿದ್ದ ಠೇವಣಿ 9720/-! ದೇಶದಲ್ಲಿ ಅತಿ ಕಡಿಮೆ ಸಂಬಳ (9200/-) ಪಡೆಯುತ್ತಿರುವ ಮಾಣಿಕ್ ಸರ್ಕಾರ್ ಆ ಸಂಬಳವನ್ನೂ ಪಕ್ಷಕ್ಕೆ ನೀಡಿ ಪಕ್ಷದ ಇತರೆ ಕಾರ್ಯಕರ್ತರಂತೆ ಐದು ಸಾವಿರ ರುಪಾಯಿಗಳನ್ನು ಪಡೆಯುತ್ತಿದ್ದಾರೆ.
ಇನ್ನು ಮುಖ್ಯಮಂತ್ರಿಯ ಜೀವನ ನಿರ್ವಹಣೆ ನಡೆಯುತ್ತಿರುವುದು ಸರಕಾರಿ ಕೆಲಸದಲ್ಲಿದ್ದ ಅವರ ಮಡದಿ ನಿವೃತ್ತರಾದಾಗ ಬಂದ ಪಿಎಫ್ ಮತ್ತಿತರ ಹಣವನ್ನು (24 ಲಕ್ಷ) ಬ್ಯಾಂಕಿನಲ್ಲಿ ಠೇವಣಿರೂಪದಲ್ಲಿಟ್ಟು ಅದರಿಂದ ಬರುವ ಬಡ್ಡಿಯಿಂದ!
ಈ ರಾಜ್ಯದ ಅಧಿಕಾರ ಅವಧಿ 2018ಕ್ಕೆ ಮುಗಿಯುವುದರಿಂದ ಕರ್ನಾಟಕದ ಜೊತೆಯಲ್ಲಿಯೇ ಚುನಾವಣೆ ಬರಬಹುದು. ಮಾಣಿಕ್ ಸರ್ಕಾರ್ ಅವರ ಸರ್ಕಾರವನ್ನು ಸೋಲಿಸುವ ಪ್ರಯತ್ನ ಅಲ್ಲಿನ ಪ್ರತಿಪಕ್ಷಗಳಿಗೆ ಬಾರಿ ಕಷ್ಟದ ಕೆಲಸವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್ನಿಂದ…
ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…
‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,.. ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…
ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…
ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…
ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.