ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ.
ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ.
2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳುವಂತೆ ಎಲ್ಲರಿಗೂ ಸೂಚನೆ.
ಸದ್ಯ 2,000 ರೂ ನೋಟು ಹೊಂದಿದ್ದರೆ ಅವರು ಮೇ 23ರ ನಂತರ ಸಮೀಪದ ಬ್ಯಾಂಕ್ಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬಹುದು.
2 ಸಾವಿರ ರೂ. ನೋಟ್ ಬ್ಯಾನ್: ಚಲಾವಣೆ ಸ್ಥಗಿತಗೊಳಿಸಿದ RBI, ಸೆ. 30 ರವರೆಗೆ ಕರೆನ್ಸಿ ಬದಲಾವಣೆಗೆ ಅವಕಾಶ
2000 ರೂ. ನೋಟು ನೀಡದಂತೆ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ.
ಹಾಲಿ ಇರುವ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಲು ಸಲಹೆ ನೀಡಲಾಗಿದೆ
ಬ್ಯಾಂಕುಗಳಲ್ಲಿ 2000 ರೂ. ನೋಟುಗಳ ಬದಲಾವಣೆ ಮಾಡಿಕೊಳ್ಳಬಹುದಾಗಿದೆ.
2018 ರಲ್ಲಿ 2000 ನೋಟು ಮುದ್ರಣ ಸ್ಥಗಿತಗೊಳಿಸಲಾಗಿತ್ತು.
2000 ನೋಟು ಚಲಾವಣೆಯನ್ನು ಆರ್ಬಿಐ ವಾಪಸ್ ಪಡೆದುಕೊಂಡಿದೆ.
2016ರ ನವೆಂಬರ್ ನಲ್ಲಿ 2000 ರೂ. ನೋಟು ಚಲಾವಣೆಗೆ ತರಲಾಗಿತ್ತು.
ಸೆಪ್ಟೆಂಬರ್ 30ರವರೆಗೆ ನೋಟು ಬದಲಾವಣೆಗೆ ಅವಕಾಶ ನೀಡಲಾಗಿದೆ.
ಬ್ಯಾಂಕುಗಳಲ್ಲಿ 2000 ರೂ. ನೋಟು ಬದಲಾವಣೆ ಮಾಡಿಕೊಳ್ಳಬಹುದಾಗಿದ್ದು, ಸೆ. 30ರವರೆಗೂ ಅವಕಾಶ ಕಲ್ಪಿಸಲಾಗಿದೆ.

ನವದೆಹಲಿ : ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳುವಂತೆ ಎಲ್ಲರಿಗೂ ತಿಳಿಸಿದೆ.
ಶುಕ್ರವಾರ ಬಿಡುಗಡೆ ಪ್ರಕಟಣೆಯಲ್ಲಿ ಭಾರತೀಯ ರಿಸರ್ವರ್ ಬ್ಯಾಂಕ್ ಮಾಹಿತಿ ನೀಡಿದ್ದು,” 2000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಲಾಗಿದೆ. ಅಕ್ಟೋಬರ್ 1 ರಿಂದ ಈ ನೋಟುಗಳು ಚಲಾವಣೆಯಲ್ಲಿ ಇರುವುದಿಲ್ಲ. ಹೀಗಾಗಿ, ಸೆ.30ರ ಒಳಗೆ ಸಾರ್ವಜನಿಕರು ಬ್ಯಾಂಕ್ಗಳಿಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬೇಕು ” ಎಂದು ಸೂಚನೆ ನೀಡಿದೆ.
ಮೇ 23 ರಿಂದ ಬದಲಾವಣೆಗೆ ಅವಕಾಶ
ಸದ್ಯ 2,000 ರೂಪಾಯಿ ನೋಟು ಹೊಂದಿದ್ದರೆ ಮೇ 23ರ ನಂತರ ಸಮೀಪದ ಬ್ಯಾಂಕ್ಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬಹುದು. ಆದರೆ, ಒಮ್ಮೆಗೆ 10 ನೋಟುಗಳ ಅಂದರೆ 20 ಸಾವಿರ ರೂಪಾಯಿ ಮಾತ್ರ ಬದಲಾವಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.

2016 ರಲ್ಲಿ 500 ಹಾಗೂ 1000 ನೋಟ್ ಬ್ಯಾನ್ ಆಗಿತ್ತು
2016ರ ನವೆಂಬರ್ 8 ರಂದು 500 ಹಾಗೂ 1000 ಮುಖಬೆಲೆಯ ನೋಟು ಅಮಾನ್ಯೀಕರಣದ ನಂತರ ಹೊಸದಾಗಿ 2000 ರೂ. ನೋಟುಗಳನ್ನು ಪರಿಚಯಿಸಲಾಗಿತ್ತು. ಸದ್ಯ ಆ ನೋಟಿನ ಚಲಾವಣೆ ನಿಲ್ಲಿಸಿ ವಾಪಸ್ ಪಡೆಯುವುದಾಗಿ ಆರ್ಬಿಐ ತಿಳಿಸಿದೆ.
ಐದು ವರ್ಷಗಳ ಹಿಂದೆಯೇ ನೋಟು ಮುದ್ರಣ ಸ್ಥಗಿತ
2018ರಲ್ಲಿಯೇ 2000 ರೂಪಾಯಿ ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಲಾಗಿತ್ತು. ಈ ಕುರಿತಾಗಿ ಸದನಕ್ಕೆ ಕೇಂದ್ರ ಸರ್ಕಾರ ಮಾಹಿತಿ ನೀಡಲಾಗಿತ್ತು. ಇದೀಗ ಕ್ಲೀನ್ ನೋಟ್ ಅಭಿಯಾನದಡಿ ನೋಟ್ಗಳನ್ನು ಹಿಂಪಡೆಯಲು ಆರ್ಬಿಐ ಮುಂದಾಗಿದೆ. ಮೇ 23, 2023ರಿಂದ ಯಾವುದೇ ಬ್ಯಾಂಕ್ನಲ್ಲಿ 2000 ನೋಟುಗಳನ್ನು ಇತರ ಮುಖಬೆಲೆಯ ನೋಟುಗಳಾಗಿ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್ಬಿಐ ಸೂಚಿಸಿದೆ.
ಸೆಪ್ಟೆಂಬರ್ 30 ನಂತರವೂ ಕಾನೂನು ಬದ್ದವಾಗಿರುತ್ತವೆ
ಜನರು ಬ್ಯಾಂಕ್ಗಳೊಂದಿಗೆ ನೋಟುಗಳನ್ನು ಬದಲಾಯಿಸಿಕೊಳ್ಳಲು 4 ತಿಂಗಳ ಸಮಯ ಸಾಕು. ಚಲಾವಣೆಯಲ್ಲಿರುವ ಹೆಚ್ಚಿನ ರೂ 2000 ನೋಟುಗಳು ಸೆಪ್ಟೆಂಬರ್ 30 ರ ನಿರ್ದಿಷ್ಟ ಸಮಯದ ಚೌಕಟ್ಟಿನೊಳಗೆ ಬ್ಯಾಂಕ್ಗಳಿಗೆ ಹಿಂತಿರುಗುತ್ತವೆ ಎಂದು ಆರ್ಬಿಐ ಹೇಳಿದೆ. ಸೆಪ್ಟೆಂಬರ್ 30 ರ ನಂತರವೂ ಕಾನೂನುಬದ್ಧವಾಗಿ ಉಳಿಯುತ್ತದೆ. ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.

2,000 ರೂ ನೋಟು ವಿನಿಮಯಕ್ಕೆ ಏನಿವೆ ನಿಯಮಗಳು?
ಸಾರ್ವಜನಿಕರು ಒಮ್ಮೆಗೆ 20,000 ರೂ ಮೊತ್ತದ ನೋಟುಗಳನ್ನು ವಿನಿಯಮ ಮಾಡಿಕೊಳ್ಳಲು ಅವಕಾಶ ಇದೆ. ಅಂದರೆ 2,000 ರೂ ಮುಖಬೆಲೆಯ 10 ನೋಟುಗಳನ್ನು ಮಾತ್ರ ಎಕ್ಸ್ಚೇಂಜ್ ಮಾಡಬಹುದು.
ಬ್ಯಾಂಕ್ ಖಾತೆ ಹೊಂದಿಲ್ಲದಿದ್ದವರೂ ಕೂಡ ಯಾವುದೇ ಬ್ಯಾಂಕ್ ಕಚೇರಿಗೆ ಹೋಗಿ ಏಕಕಾಲದಲ್ಲಿ 2,000 ರೂ ಮುಖಬೆಲೆಯ 10 ನೋಟುಗಳನ್ನು ವಿನಿಯಮ ಮಾಡಿಕೊಳ್ಳಬಹುದು.
ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲು ಯಾವುದೇ ಮಿತಿ ಇಲ್ಲ. 2,000 ರೂ ಮುಖಬೆಲೆಯ ಎಷ್ಟು ಬೇಕಾದರೂ ನೋಟುಗಳನ್ನು ಅಕೌಂಟ್ಗೆ ಡೆಪಾಸಿಟ್ ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….
ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ…
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್ಹಟನ್ನ ಬರ್ಗ್ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ. ಆಗ ಟ್ರಂಪ್ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ…
ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.