ಬ್ಯಾಂಕ್

2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !

88

ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್‌ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್‌ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್‌ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್‌ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ.

ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ.
2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳುವಂತೆ ಎಲ್ಲರಿಗೂ ಸೂಚನೆ.
ಸದ್ಯ 2,000 ರೂ ನೋಟು ಹೊಂದಿದ್ದರೆ ಅವರು ಮೇ 23ರ ನಂತರ ಸಮೀಪದ ಬ್ಯಾಂಕ್‌ಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬಹುದು.

2 ಸಾವಿರ ರೂ. ನೋಟ್ ಬ್ಯಾನ್: ಚಲಾವಣೆ ಸ್ಥಗಿತಗೊಳಿಸಿದ RBI, ಸೆ. 30 ರವರೆಗೆ ಕರೆನ್ಸಿ ಬದಲಾವಣೆಗೆ ಅವಕಾಶ
2000 ರೂ. ನೋಟು ನೀಡದಂತೆ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ.

ಹಾಲಿ ಇರುವ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಲು ಸಲಹೆ ನೀಡಲಾಗಿದೆ

ಬ್ಯಾಂಕುಗಳಲ್ಲಿ 2000 ರೂ. ನೋಟುಗಳ ಬದಲಾವಣೆ ಮಾಡಿಕೊಳ್ಳಬಹುದಾಗಿದೆ.

2018 ರಲ್ಲಿ 2000 ನೋಟು ಮುದ್ರಣ ಸ್ಥಗಿತಗೊಳಿಸಲಾಗಿತ್ತು.

2000 ನೋಟು ಚಲಾವಣೆಯನ್ನು ಆರ್ಬಿಐ ವಾಪಸ್ ಪಡೆದುಕೊಂಡಿದೆ.

2016ರ ನವೆಂಬರ್ ನಲ್ಲಿ 2000 ರೂ. ನೋಟು ಚಲಾವಣೆಗೆ ತರಲಾಗಿತ್ತು.

ಸೆಪ್ಟೆಂಬರ್ 30ರವರೆಗೆ ನೋಟು ಬದಲಾವಣೆಗೆ ಅವಕಾಶ ನೀಡಲಾಗಿದೆ.

ಬ್ಯಾಂಕುಗಳಲ್ಲಿ 2000 ರೂ. ನೋಟು ಬದಲಾವಣೆ ಮಾಡಿಕೊಳ್ಳಬಹುದಾಗಿದ್ದು, ಸೆ. 30ರವರೆಗೂ ಅವಕಾಶ ಕಲ್ಪಿಸಲಾಗಿದೆ.

ನವದೆಹಲಿ : ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳುವಂತೆ ಎಲ್ಲರಿಗೂ ತಿಳಿಸಿದೆ.

ಶುಕ್ರವಾರ ಬಿಡುಗಡೆ ಪ್ರಕಟಣೆಯಲ್ಲಿ ಭಾರತೀಯ ರಿಸರ್ವರ್‌ ಬ್ಯಾಂಕ್ ಮಾಹಿತಿ ನೀಡಿದ್ದು,” 2000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಲಾಗಿದೆ. ಅಕ್ಟೋಬರ್‌ 1 ರಿಂದ ಈ ನೋಟುಗಳು ಚಲಾವಣೆಯಲ್ಲಿ ಇರುವುದಿಲ್ಲ. ಹೀಗಾಗಿ, ಸೆ.30ರ ಒಳಗೆ ಸಾರ್ವಜನಿಕರು ಬ್ಯಾಂಕ್‌ಗಳಿಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬೇಕು ” ಎಂದು ಸೂಚನೆ ನೀಡಿದೆ.

ಮೇ 23 ರಿಂದ ಬದಲಾವಣೆಗೆ ಅವಕಾಶ
ಸದ್ಯ 2,000 ರೂಪಾಯಿ ನೋಟು ಹೊಂದಿದ್ದರೆ ಮೇ 23ರ ನಂತರ ಸಮೀಪದ ಬ್ಯಾಂಕ್‌ಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬಹುದು. ಆದರೆ, ಒಮ್ಮೆಗೆ 10 ನೋಟುಗಳ ಅಂದರೆ 20 ಸಾವಿರ ರೂಪಾಯಿ ಮಾತ್ರ ಬದಲಾವಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.


2016 ರಲ್ಲಿ 500 ಹಾಗೂ 1000 ನೋಟ್‌ ಬ್ಯಾನ್‌ ಆಗಿತ್ತು
2016ರ ನವೆಂಬರ್‌ 8 ರಂದು 500 ಹಾಗೂ 1000 ಮುಖಬೆಲೆಯ ನೋಟು ಅಮಾನ್ಯೀಕರಣದ ನಂತರ ಹೊಸದಾಗಿ 2000 ರೂ. ನೋಟುಗಳನ್ನು ಪರಿಚಯಿಸಲಾಗಿತ್ತು. ಸದ್ಯ ಆ ನೋಟಿನ ಚಲಾವಣೆ ನಿಲ್ಲಿಸಿ ವಾಪಸ್ ಪಡೆಯುವುದಾಗಿ ಆರ್‌ಬಿಐ ತಿಳಿಸಿದೆ.

ಐದು ವರ್ಷಗಳ ಹಿಂದೆಯೇ ನೋಟು ಮುದ್ರಣ ಸ್ಥಗಿತ
2018ರಲ್ಲಿಯೇ 2000 ರೂಪಾಯಿ ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಲಾಗಿತ್ತು. ಈ ಕುರಿತಾಗಿ ಸದನಕ್ಕೆ ಕೇಂದ್ರ ಸರ್ಕಾರ ಮಾಹಿತಿ ನೀಡಲಾಗಿತ್ತು. ಇದೀಗ ಕ್ಲೀನ್ ನೋಟ್ ಅಭಿಯಾನದಡಿ ನೋಟ್‌ಗಳನ್ನು ಹಿಂಪಡೆಯಲು ಆರ್‌ಬಿಐ ಮುಂದಾಗಿದೆ. ಮೇ 23, 2023ರಿಂದ ಯಾವುದೇ ಬ್ಯಾಂಕ್‌ನಲ್ಲಿ 2000 ನೋಟುಗಳನ್ನು ಇತರ ಮುಖಬೆಲೆಯ ನೋಟುಗಳಾಗಿ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್‌ಬಿಐ ಸೂಚಿಸಿದೆ.

ಸೆಪ್ಟೆಂಬರ್‌ 30 ನಂತರವೂ ಕಾನೂನು ಬದ್ದವಾಗಿರುತ್ತವೆ
ಜನರು ಬ್ಯಾಂಕ್‌ಗಳೊಂದಿಗೆ ನೋಟುಗಳನ್ನು ಬದಲಾಯಿಸಿಕೊಳ್ಳಲು 4 ತಿಂಗಳ ಸಮಯ ಸಾಕು. ಚಲಾವಣೆಯಲ್ಲಿರುವ ಹೆಚ್ಚಿನ ರೂ 2000 ನೋಟುಗಳು ಸೆಪ್ಟೆಂಬರ್ 30 ರ ನಿರ್ದಿಷ್ಟ ಸಮಯದ ಚೌಕಟ್ಟಿನೊಳಗೆ ಬ್ಯಾಂಕ್‌ಗಳಿಗೆ ಹಿಂತಿರುಗುತ್ತವೆ ಎಂದು ಆರ್‌ಬಿಐ ಹೇಳಿದೆ. ಸೆಪ್ಟೆಂಬರ್ 30 ರ ನಂತರವೂ ಕಾನೂನುಬದ್ಧವಾಗಿ ಉಳಿಯುತ್ತದೆ. ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.


2,000 ರೂ ನೋಟು ವಿನಿಮಯಕ್ಕೆ ಏನಿವೆ ನಿಯಮಗಳು?
ಸಾರ್ವಜನಿಕರು ಒಮ್ಮೆಗೆ 20,000 ರೂ ಮೊತ್ತದ ನೋಟುಗಳನ್ನು ವಿನಿಯಮ ಮಾಡಿಕೊಳ್ಳಲು ಅವಕಾಶ ಇದೆ. ಅಂದರೆ 2,000 ರೂ ಮುಖಬೆಲೆಯ 10 ನೋಟುಗಳನ್ನು ಮಾತ್ರ ಎಕ್ಸ್​ಚೇಂಜ್ ಮಾಡಬಹುದು.
ಬ್ಯಾಂಕ್ ಖಾತೆ ಹೊಂದಿಲ್ಲದಿದ್ದವರೂ ಕೂಡ ಯಾವುದೇ ಬ್ಯಾಂಕ್ ಕಚೇರಿಗೆ ಹೋಗಿ ಏಕಕಾಲದಲ್ಲಿ 2,000 ರೂ ಮುಖಬೆಲೆಯ 10 ನೋಟುಗಳನ್ನು ವಿನಿಯಮ ಮಾಡಿಕೊಳ್ಳಬಹುದು.
ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲು ಯಾವುದೇ ಮಿತಿ ಇಲ್ಲ. 2,000 ರೂ ಮುಖಬೆಲೆಯ ಎಷ್ಟು ಬೇಕಾದರೂ ನೋಟುಗಳನ್ನು ಅಕೌಂಟ್​ಗೆ ಡೆಪಾಸಿಟ್ ಮಾಡಬಹುದು.

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಗೊರಕೆ ಸಮಸ್ಯೆಯಿಂದ ನೀವೂ ಬಳಲುತ್ತಿದ್ದರೆ,ಈ ಕ್ರಮಗಳನ್ನು ಪಾಲಿಸಿ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ? ತೂಕ ನಷ್ಟ ಮತ್ತು ವ್ಯಾಯಾಮ :- ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ.   ಮಲಗುವ ಸ್ಥಿತಿ ಬದಲಿಸಿ :- ಒಂದು ಬದಿಯಲ್ಲಿ ನಿದ್ರಿಸುವುದನ್ನು…

  • ಸುದ್ದಿ

    ಯಾವುದೇ ರಸಗೊಬ್ಬರ ಬಳಕೆ ಮಾಡದೇ. ಅತೀ ಕಡಿಮೆ ಬೆಲೆಯಲ್ಲಿ, ಬೆಳೆಯನ್ನ ತೆಗೆದ ನಟ ಉಪೇಂದ್ರ.

    ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ…

  • ಸುದ್ದಿ

    ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟನನ್ನು ನೋಡಲು ಆಗಲಿಲ್ಲವೆಂದು ಡೆತ್ ನೋಟ್ ಬರೆದಿತ್ತು ಆತ್ಮಹತ್ಯ!ಆ ಡೆತ್ ನೋಟ್ ನಲ್ಲಿ ಏನಿದೆ ಗೊತ್ತಾ..?

    ಅಭಿಮಾನಿಗಳೇ ಹಾಗೆ ತಮ್ಮ ನೆಚ್ಚನ ನಟನಿಗಾಗಿ ಏನಾದ್ರೂ ಮಾಡಲು ತಯಾರಿರುತ್ತಾರೆ.ತಮ್ಮ ನೆಚ್ಚಿನ ನಟನ ಚಿತ್ರಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುತ್ತಾರೆ. ಒಂದು ವೇಳೆ ತಮ್ಮ ನೆಚ್ಚಿನ ನಟನನ್ನು ಒಂದು ಬಾರಿ ಭೇಟಿ ಮಾಡಿಬಿಟ್ಟರೆ ಅವರ ಜೀವನ ಸಾರ್ಥಕ ಆದಂತೆ ಅನ್ನುವಷ್ಟು ಮಟ್ಟಿಗೆ ಇಷ್ಟಪಡುವವರಿದ್ದಾರೆ. ಆದರೆ ಆಂಧ್ರದ ವಿಜಯವಾಡದ ತಮ್ಮ ನೆಚ್ಚಿನ ನಟನ ಅಭಿಮಾನಿಯೊಬ್ಬ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಇದಕ್ಕೆ ಹುಚ್ಚು ಅಭಿಮಾನ ಅನ್ನಬೇಕೋ, ಅತಿರೇಕದ ಅಭಿಮಾನ ಅನ್ನಬೇಕೋ ಗೊತ್ತಿಲ್ಲ.ತಾವು ಪ್ರೀತಿಸೋ ಆರಾಧಿಸುವ ಸ್ಟಾರ್…

  • ಜ್ಯೋತಿಷ್ಯ

    ನಿಮ್ಮ ಮಂಗಳವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…

  • ಸುದ್ದಿ

    ಶ್ರೀಗಳು ಸಾಯುವ ಮುನ್ನ ಕೇಳಿದ ಕೊನೆಯ ಆಸೆ ಏನು ಗೊತ್ತಾ..?ಈ ಕಣ್ಣೀರಿನ ಸುದ್ದಿ ನೋಡಿ…

    ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…

  • ಸುದ್ದಿ

    ಸಲ್ಮಾನ್ ಖಾನ್ ಆಸೆ ತಿಳಿದರೆ ಕನ್ನಡಿಗರು ಶಾಕ್ ಆಗುವುದು ಖಚಿತ..!ಅಷ್ಟಕ್ಕೂ ಆ ಆಸೆ ಏನು ಗೊತ್ತಾ.?

    ಬಾಲಿವುಡ್‍ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…