ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ.
ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ.
2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳುವಂತೆ ಎಲ್ಲರಿಗೂ ಸೂಚನೆ.
ಸದ್ಯ 2,000 ರೂ ನೋಟು ಹೊಂದಿದ್ದರೆ ಅವರು ಮೇ 23ರ ನಂತರ ಸಮೀಪದ ಬ್ಯಾಂಕ್ಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬಹುದು.
2 ಸಾವಿರ ರೂ. ನೋಟ್ ಬ್ಯಾನ್: ಚಲಾವಣೆ ಸ್ಥಗಿತಗೊಳಿಸಿದ RBI, ಸೆ. 30 ರವರೆಗೆ ಕರೆನ್ಸಿ ಬದಲಾವಣೆಗೆ ಅವಕಾಶ
2000 ರೂ. ನೋಟು ನೀಡದಂತೆ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ.
ಹಾಲಿ ಇರುವ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಲು ಸಲಹೆ ನೀಡಲಾಗಿದೆ
ಬ್ಯಾಂಕುಗಳಲ್ಲಿ 2000 ರೂ. ನೋಟುಗಳ ಬದಲಾವಣೆ ಮಾಡಿಕೊಳ್ಳಬಹುದಾಗಿದೆ.
2018 ರಲ್ಲಿ 2000 ನೋಟು ಮುದ್ರಣ ಸ್ಥಗಿತಗೊಳಿಸಲಾಗಿತ್ತು.
2000 ನೋಟು ಚಲಾವಣೆಯನ್ನು ಆರ್ಬಿಐ ವಾಪಸ್ ಪಡೆದುಕೊಂಡಿದೆ.
2016ರ ನವೆಂಬರ್ ನಲ್ಲಿ 2000 ರೂ. ನೋಟು ಚಲಾವಣೆಗೆ ತರಲಾಗಿತ್ತು.
ಸೆಪ್ಟೆಂಬರ್ 30ರವರೆಗೆ ನೋಟು ಬದಲಾವಣೆಗೆ ಅವಕಾಶ ನೀಡಲಾಗಿದೆ.
ಬ್ಯಾಂಕುಗಳಲ್ಲಿ 2000 ರೂ. ನೋಟು ಬದಲಾವಣೆ ಮಾಡಿಕೊಳ್ಳಬಹುದಾಗಿದ್ದು, ಸೆ. 30ರವರೆಗೂ ಅವಕಾಶ ಕಲ್ಪಿಸಲಾಗಿದೆ.

ನವದೆಹಲಿ : ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳುವಂತೆ ಎಲ್ಲರಿಗೂ ತಿಳಿಸಿದೆ.
ಶುಕ್ರವಾರ ಬಿಡುಗಡೆ ಪ್ರಕಟಣೆಯಲ್ಲಿ ಭಾರತೀಯ ರಿಸರ್ವರ್ ಬ್ಯಾಂಕ್ ಮಾಹಿತಿ ನೀಡಿದ್ದು,” 2000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಲಾಗಿದೆ. ಅಕ್ಟೋಬರ್ 1 ರಿಂದ ಈ ನೋಟುಗಳು ಚಲಾವಣೆಯಲ್ಲಿ ಇರುವುದಿಲ್ಲ. ಹೀಗಾಗಿ, ಸೆ.30ರ ಒಳಗೆ ಸಾರ್ವಜನಿಕರು ಬ್ಯಾಂಕ್ಗಳಿಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬೇಕು ” ಎಂದು ಸೂಚನೆ ನೀಡಿದೆ.
ಮೇ 23 ರಿಂದ ಬದಲಾವಣೆಗೆ ಅವಕಾಶ
ಸದ್ಯ 2,000 ರೂಪಾಯಿ ನೋಟು ಹೊಂದಿದ್ದರೆ ಮೇ 23ರ ನಂತರ ಸಮೀಪದ ಬ್ಯಾಂಕ್ಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬಹುದು. ಆದರೆ, ಒಮ್ಮೆಗೆ 10 ನೋಟುಗಳ ಅಂದರೆ 20 ಸಾವಿರ ರೂಪಾಯಿ ಮಾತ್ರ ಬದಲಾವಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.

2016 ರಲ್ಲಿ 500 ಹಾಗೂ 1000 ನೋಟ್ ಬ್ಯಾನ್ ಆಗಿತ್ತು
2016ರ ನವೆಂಬರ್ 8 ರಂದು 500 ಹಾಗೂ 1000 ಮುಖಬೆಲೆಯ ನೋಟು ಅಮಾನ್ಯೀಕರಣದ ನಂತರ ಹೊಸದಾಗಿ 2000 ರೂ. ನೋಟುಗಳನ್ನು ಪರಿಚಯಿಸಲಾಗಿತ್ತು. ಸದ್ಯ ಆ ನೋಟಿನ ಚಲಾವಣೆ ನಿಲ್ಲಿಸಿ ವಾಪಸ್ ಪಡೆಯುವುದಾಗಿ ಆರ್ಬಿಐ ತಿಳಿಸಿದೆ.
ಐದು ವರ್ಷಗಳ ಹಿಂದೆಯೇ ನೋಟು ಮುದ್ರಣ ಸ್ಥಗಿತ
2018ರಲ್ಲಿಯೇ 2000 ರೂಪಾಯಿ ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಲಾಗಿತ್ತು. ಈ ಕುರಿತಾಗಿ ಸದನಕ್ಕೆ ಕೇಂದ್ರ ಸರ್ಕಾರ ಮಾಹಿತಿ ನೀಡಲಾಗಿತ್ತು. ಇದೀಗ ಕ್ಲೀನ್ ನೋಟ್ ಅಭಿಯಾನದಡಿ ನೋಟ್ಗಳನ್ನು ಹಿಂಪಡೆಯಲು ಆರ್ಬಿಐ ಮುಂದಾಗಿದೆ. ಮೇ 23, 2023ರಿಂದ ಯಾವುದೇ ಬ್ಯಾಂಕ್ನಲ್ಲಿ 2000 ನೋಟುಗಳನ್ನು ಇತರ ಮುಖಬೆಲೆಯ ನೋಟುಗಳಾಗಿ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್ಬಿಐ ಸೂಚಿಸಿದೆ.
ಸೆಪ್ಟೆಂಬರ್ 30 ನಂತರವೂ ಕಾನೂನು ಬದ್ದವಾಗಿರುತ್ತವೆ
ಜನರು ಬ್ಯಾಂಕ್ಗಳೊಂದಿಗೆ ನೋಟುಗಳನ್ನು ಬದಲಾಯಿಸಿಕೊಳ್ಳಲು 4 ತಿಂಗಳ ಸಮಯ ಸಾಕು. ಚಲಾವಣೆಯಲ್ಲಿರುವ ಹೆಚ್ಚಿನ ರೂ 2000 ನೋಟುಗಳು ಸೆಪ್ಟೆಂಬರ್ 30 ರ ನಿರ್ದಿಷ್ಟ ಸಮಯದ ಚೌಕಟ್ಟಿನೊಳಗೆ ಬ್ಯಾಂಕ್ಗಳಿಗೆ ಹಿಂತಿರುಗುತ್ತವೆ ಎಂದು ಆರ್ಬಿಐ ಹೇಳಿದೆ. ಸೆಪ್ಟೆಂಬರ್ 30 ರ ನಂತರವೂ ಕಾನೂನುಬದ್ಧವಾಗಿ ಉಳಿಯುತ್ತದೆ. ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.

2,000 ರೂ ನೋಟು ವಿನಿಮಯಕ್ಕೆ ಏನಿವೆ ನಿಯಮಗಳು?
ಸಾರ್ವಜನಿಕರು ಒಮ್ಮೆಗೆ 20,000 ರೂ ಮೊತ್ತದ ನೋಟುಗಳನ್ನು ವಿನಿಯಮ ಮಾಡಿಕೊಳ್ಳಲು ಅವಕಾಶ ಇದೆ. ಅಂದರೆ 2,000 ರೂ ಮುಖಬೆಲೆಯ 10 ನೋಟುಗಳನ್ನು ಮಾತ್ರ ಎಕ್ಸ್ಚೇಂಜ್ ಮಾಡಬಹುದು.
ಬ್ಯಾಂಕ್ ಖಾತೆ ಹೊಂದಿಲ್ಲದಿದ್ದವರೂ ಕೂಡ ಯಾವುದೇ ಬ್ಯಾಂಕ್ ಕಚೇರಿಗೆ ಹೋಗಿ ಏಕಕಾಲದಲ್ಲಿ 2,000 ರೂ ಮುಖಬೆಲೆಯ 10 ನೋಟುಗಳನ್ನು ವಿನಿಯಮ ಮಾಡಿಕೊಳ್ಳಬಹುದು.
ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲು ಯಾವುದೇ ಮಿತಿ ಇಲ್ಲ. 2,000 ರೂ ಮುಖಬೆಲೆಯ ಎಷ್ಟು ಬೇಕಾದರೂ ನೋಟುಗಳನ್ನು ಅಕೌಂಟ್ಗೆ ಡೆಪಾಸಿಟ್ ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…
ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…
ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್ಮ್ಯಾನ್ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್ಮ್ಯಾನ್ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ. ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…
ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…