ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ.
ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ.
2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳುವಂತೆ ಎಲ್ಲರಿಗೂ ಸೂಚನೆ.
ಸದ್ಯ 2,000 ರೂ ನೋಟು ಹೊಂದಿದ್ದರೆ ಅವರು ಮೇ 23ರ ನಂತರ ಸಮೀಪದ ಬ್ಯಾಂಕ್ಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬಹುದು.
2 ಸಾವಿರ ರೂ. ನೋಟ್ ಬ್ಯಾನ್: ಚಲಾವಣೆ ಸ್ಥಗಿತಗೊಳಿಸಿದ RBI, ಸೆ. 30 ರವರೆಗೆ ಕರೆನ್ಸಿ ಬದಲಾವಣೆಗೆ ಅವಕಾಶ
2000 ರೂ. ನೋಟು ನೀಡದಂತೆ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ.
ಹಾಲಿ ಇರುವ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಲು ಸಲಹೆ ನೀಡಲಾಗಿದೆ
ಬ್ಯಾಂಕುಗಳಲ್ಲಿ 2000 ರೂ. ನೋಟುಗಳ ಬದಲಾವಣೆ ಮಾಡಿಕೊಳ್ಳಬಹುದಾಗಿದೆ.
2018 ರಲ್ಲಿ 2000 ನೋಟು ಮುದ್ರಣ ಸ್ಥಗಿತಗೊಳಿಸಲಾಗಿತ್ತು.
2000 ನೋಟು ಚಲಾವಣೆಯನ್ನು ಆರ್ಬಿಐ ವಾಪಸ್ ಪಡೆದುಕೊಂಡಿದೆ.
2016ರ ನವೆಂಬರ್ ನಲ್ಲಿ 2000 ರೂ. ನೋಟು ಚಲಾವಣೆಗೆ ತರಲಾಗಿತ್ತು.
ಸೆಪ್ಟೆಂಬರ್ 30ರವರೆಗೆ ನೋಟು ಬದಲಾವಣೆಗೆ ಅವಕಾಶ ನೀಡಲಾಗಿದೆ.
ಬ್ಯಾಂಕುಗಳಲ್ಲಿ 2000 ರೂ. ನೋಟು ಬದಲಾವಣೆ ಮಾಡಿಕೊಳ್ಳಬಹುದಾಗಿದ್ದು, ಸೆ. 30ರವರೆಗೂ ಅವಕಾಶ ಕಲ್ಪಿಸಲಾಗಿದೆ.
ನವದೆಹಲಿ : ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳುವಂತೆ ಎಲ್ಲರಿಗೂ ತಿಳಿಸಿದೆ.
ಶುಕ್ರವಾರ ಬಿಡುಗಡೆ ಪ್ರಕಟಣೆಯಲ್ಲಿ ಭಾರತೀಯ ರಿಸರ್ವರ್ ಬ್ಯಾಂಕ್ ಮಾಹಿತಿ ನೀಡಿದ್ದು,” 2000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಲಾಗಿದೆ. ಅಕ್ಟೋಬರ್ 1 ರಿಂದ ಈ ನೋಟುಗಳು ಚಲಾವಣೆಯಲ್ಲಿ ಇರುವುದಿಲ್ಲ. ಹೀಗಾಗಿ, ಸೆ.30ರ ಒಳಗೆ ಸಾರ್ವಜನಿಕರು ಬ್ಯಾಂಕ್ಗಳಿಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬೇಕು ” ಎಂದು ಸೂಚನೆ ನೀಡಿದೆ.
ಮೇ 23 ರಿಂದ ಬದಲಾವಣೆಗೆ ಅವಕಾಶ
ಸದ್ಯ 2,000 ರೂಪಾಯಿ ನೋಟು ಹೊಂದಿದ್ದರೆ ಮೇ 23ರ ನಂತರ ಸಮೀಪದ ಬ್ಯಾಂಕ್ಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬಹುದು. ಆದರೆ, ಒಮ್ಮೆಗೆ 10 ನೋಟುಗಳ ಅಂದರೆ 20 ಸಾವಿರ ರೂಪಾಯಿ ಮಾತ್ರ ಬದಲಾವಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.
2016 ರಲ್ಲಿ 500 ಹಾಗೂ 1000 ನೋಟ್ ಬ್ಯಾನ್ ಆಗಿತ್ತು
2016ರ ನವೆಂಬರ್ 8 ರಂದು 500 ಹಾಗೂ 1000 ಮುಖಬೆಲೆಯ ನೋಟು ಅಮಾನ್ಯೀಕರಣದ ನಂತರ ಹೊಸದಾಗಿ 2000 ರೂ. ನೋಟುಗಳನ್ನು ಪರಿಚಯಿಸಲಾಗಿತ್ತು. ಸದ್ಯ ಆ ನೋಟಿನ ಚಲಾವಣೆ ನಿಲ್ಲಿಸಿ ವಾಪಸ್ ಪಡೆಯುವುದಾಗಿ ಆರ್ಬಿಐ ತಿಳಿಸಿದೆ.
ಐದು ವರ್ಷಗಳ ಹಿಂದೆಯೇ ನೋಟು ಮುದ್ರಣ ಸ್ಥಗಿತ
2018ರಲ್ಲಿಯೇ 2000 ರೂಪಾಯಿ ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಲಾಗಿತ್ತು. ಈ ಕುರಿತಾಗಿ ಸದನಕ್ಕೆ ಕೇಂದ್ರ ಸರ್ಕಾರ ಮಾಹಿತಿ ನೀಡಲಾಗಿತ್ತು. ಇದೀಗ ಕ್ಲೀನ್ ನೋಟ್ ಅಭಿಯಾನದಡಿ ನೋಟ್ಗಳನ್ನು ಹಿಂಪಡೆಯಲು ಆರ್ಬಿಐ ಮುಂದಾಗಿದೆ. ಮೇ 23, 2023ರಿಂದ ಯಾವುದೇ ಬ್ಯಾಂಕ್ನಲ್ಲಿ 2000 ನೋಟುಗಳನ್ನು ಇತರ ಮುಖಬೆಲೆಯ ನೋಟುಗಳಾಗಿ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್ಬಿಐ ಸೂಚಿಸಿದೆ.
ಸೆಪ್ಟೆಂಬರ್ 30 ನಂತರವೂ ಕಾನೂನು ಬದ್ದವಾಗಿರುತ್ತವೆ
ಜನರು ಬ್ಯಾಂಕ್ಗಳೊಂದಿಗೆ ನೋಟುಗಳನ್ನು ಬದಲಾಯಿಸಿಕೊಳ್ಳಲು 4 ತಿಂಗಳ ಸಮಯ ಸಾಕು. ಚಲಾವಣೆಯಲ್ಲಿರುವ ಹೆಚ್ಚಿನ ರೂ 2000 ನೋಟುಗಳು ಸೆಪ್ಟೆಂಬರ್ 30 ರ ನಿರ್ದಿಷ್ಟ ಸಮಯದ ಚೌಕಟ್ಟಿನೊಳಗೆ ಬ್ಯಾಂಕ್ಗಳಿಗೆ ಹಿಂತಿರುಗುತ್ತವೆ ಎಂದು ಆರ್ಬಿಐ ಹೇಳಿದೆ. ಸೆಪ್ಟೆಂಬರ್ 30 ರ ನಂತರವೂ ಕಾನೂನುಬದ್ಧವಾಗಿ ಉಳಿಯುತ್ತದೆ. ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.
2,000 ರೂ ನೋಟು ವಿನಿಮಯಕ್ಕೆ ಏನಿವೆ ನಿಯಮಗಳು?
ಸಾರ್ವಜನಿಕರು ಒಮ್ಮೆಗೆ 20,000 ರೂ ಮೊತ್ತದ ನೋಟುಗಳನ್ನು ವಿನಿಯಮ ಮಾಡಿಕೊಳ್ಳಲು ಅವಕಾಶ ಇದೆ. ಅಂದರೆ 2,000 ರೂ ಮುಖಬೆಲೆಯ 10 ನೋಟುಗಳನ್ನು ಮಾತ್ರ ಎಕ್ಸ್ಚೇಂಜ್ ಮಾಡಬಹುದು.
ಬ್ಯಾಂಕ್ ಖಾತೆ ಹೊಂದಿಲ್ಲದಿದ್ದವರೂ ಕೂಡ ಯಾವುದೇ ಬ್ಯಾಂಕ್ ಕಚೇರಿಗೆ ಹೋಗಿ ಏಕಕಾಲದಲ್ಲಿ 2,000 ರೂ ಮುಖಬೆಲೆಯ 10 ನೋಟುಗಳನ್ನು ವಿನಿಯಮ ಮಾಡಿಕೊಳ್ಳಬಹುದು.
ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲು ಯಾವುದೇ ಮಿತಿ ಇಲ್ಲ. 2,000 ರೂ ಮುಖಬೆಲೆಯ ಎಷ್ಟು ಬೇಕಾದರೂ ನೋಟುಗಳನ್ನು ಅಕೌಂಟ್ಗೆ ಡೆಪಾಸಿಟ್ ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…
ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಏಪ್ರಿಲ್, 2019) ಜೀವನದಲ್ಲಿ ಒತ್ತಡದ ಮನೋಭಾವವನ್ನು ತಪ್ಪಿಸಿ ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ….
ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ. ಅಂಬರೀಶ್ ಅವರ ಹಾಗೆ…
ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.