ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.

ದಿನದ 24 ಗಂಟೆಯೂ ವಿದ್ಯುತ್ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ಹಮ್ಮಿಕೊಂಡಿದೆ. ವಿದ್ಯುತ್ ಖೋತಾ ಮಾಡಿದಲ್ಲಿ 2019ರ ಏಪ್ರಿಲ್ ನಿಂದ ವಿತರಕರಿಗೇ ದಂಡ ಹಾಕಲಾಗುತ್ತದೆ. ಅಷ್ಟೇ ಅಲ್ಲ ವಿದ್ಯುತ್ ಕಳವು ತಡೆಯಲು ಸ್ಮಾರ್ಟ್ ಮೀಟರ್ ಗಳನ್ನು ಅಳವಡಿಸಲು ಚಿಂತನೆ ನಡೆದಿದೆ.

2018ರ ಅಂತ್ಯದ ವೇಳೆಗೆ ಸರ್ವರಿಗೂ ವಿದ್ಯುತ್ ಪೂರೈಸಲು 16,000 ಕೋಟಿ ರೂ. ವೆಚ್ಚದಲ್ಲಿ ಸೌಭಾಗ್ಯ ಸ್ಕೀಮ್ ಅನ್ನು ಕೂಡ ಲಾಂಚ್ ಮಾಡಲಾಗಿತ್ತು. 2019ರ ಮಾರ್ಚ್ ವೇಳೆಗೆ ದೇಶಾದ್ಯಂತ ದಿನದ 24 ಗಂಟೆಯೂ ವಿದ್ಯುತ್ ನೀಡುವುದು ನಮ್ಮ ಉದ್ದೇಶ. ಮಾರ್ಚ್ ಬಳಿಕ ವಿನಾಕಾರಣ ಲೋಡ್ ಶೆಡ್ಡಿಂಗ್ ಮಾಡಿದ್ರೆ ವಿತರಕರಿಗೆ ದಂಡ ಹಾಕುವುದಾಗಿ ಇಂಧನ ಸಚಿವ ಆರ್.ಕೆ.ಸಿಂಗ್ ಈ ವಿಷಯವನ್ನು ತಿಳಿಸಿದ್ದಾರೆ.

ತಾಂತ್ರಿಕ ದೋಷ ಅಥವಾ ಪ್ರಕೃತಿ ವಿಕೋಪಗಳ ಕಾರಣಗಳನ್ನು ಹೊರತುಪಡಿಸಿ, ಸುಖಾ ಸುಮ್ಮನೆ ವಿದ್ಯುತ್ ಕಡಿತಗೊಳಿಸಿದರೆ, ವಿದ್ಯುತ್ ಪೂರೈಕೆದಾರರಿಗೆ ದಂಡ ವಿಧಿಸಲಾಗುತ್ತದೆ.ವಿದ್ಯುತ್ ಮೀಟರ್, ಬಿಲ್ ಪಾವತಿ ಎಲ್ಲವನ್ನೂ ಡಿಜಿಟಲೀಕರಣ ಮಾಡುವ ಉದ್ದೇಶ ಸರ್ಕಾರಕ್ಕಿದೆ. ಅದಕ್ಕಾಗಿ ಪ್ರಿ ಪೇಯ್ಡ್ ಮೀಟರ್ ಅಳವಡಿಸಲು ಎಲ್ಲಾ ರಾಜ್ಯಗಳು ಇದಕ್ಕೆ ಸಮ್ಮತಿಸಿವೆ. ವಿದ್ಯುತ್ ಪೂರೈಕೆಗೆ ತಕ್ಕಂತೆ ಶುಲ್ಕ ವಸೂಲಿ ಆಗುತ್ತಿಲ್ಲ. ಹಾಗಾಗಿ ಈ ಕ್ರಮ ಅನಿವಾರ್ಯ ಅಂತಾ ಸಚಿವರು ತಿಳಿಸಿದ್ದಾರೆ.

ಪ್ರೀ ಪೇಯ್ಡ್ ಮೀಟರ್ ಅಳವಡಿಕೆ ಹಾಗೂ ಫಲಾನುಭವಿಗಳಿಗೆ ನೇರ ಲಾಭ ವರ್ಗಾಯಿಸಲು ಹಾಗೂ 24×7 ವಿದ್ಯುತ್ ಪೂರೈಸಲು ದೇಶದ ಬಹುತೇಕ ರಾಜ್ಯಗಳು ಒಪ್ಪಿವೆ, ಎಂದು ಸಚಿವರು ತಿಳಿಸಿದ್ದಾರೆ.

ಇನ್ನು ಮುಂದೆ ಮೀಟರಿಂಗ್, ಬಿಲ್ ಸಂಗ್ರಹಕ್ಕೆ ಸಂಬಂಧಿಸಿದಂತೆ ಮಾನವ ಸಂಪರ್ಕವಿಲ್ಲದಂತೆ ಮಾಡಲಾಗುವುದು. ಮೊಬೈಲ್ ಮೂಲಕವೇ ವಿದ್ಯುತ್ ಬಿಲ್ ಕಟ್ಟುವ ವ್ಯವಸ್ಥೆ ಮಾಡಲಾಗುವುದು. ಆದರೆ, ಈ ಕಾರ್ಯಕ್ಕೆ ಯಾವುದೇ ಕಾಲ ಮಿತಿ ನಿಗದಿಗೊಳಿಸಿಲ್ಲ. ಅಲ್ಲದೇ ಪೂರೈಕೆದಾರರಿಗೆ ಆಗುವ ನಷ್ಟವನ್ನು ಸರಿದೂಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ, ಸಚಿವರು ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು…
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(16 ಡಿಸೆಂಬರ್, 2018) ನೀವು ಇತರರಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನುಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ….
ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.
ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…