ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.

ದಿನದ 24 ಗಂಟೆಯೂ ವಿದ್ಯುತ್ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ಹಮ್ಮಿಕೊಂಡಿದೆ. ವಿದ್ಯುತ್ ಖೋತಾ ಮಾಡಿದಲ್ಲಿ 2019ರ ಏಪ್ರಿಲ್ ನಿಂದ ವಿತರಕರಿಗೇ ದಂಡ ಹಾಕಲಾಗುತ್ತದೆ. ಅಷ್ಟೇ ಅಲ್ಲ ವಿದ್ಯುತ್ ಕಳವು ತಡೆಯಲು ಸ್ಮಾರ್ಟ್ ಮೀಟರ್ ಗಳನ್ನು ಅಳವಡಿಸಲು ಚಿಂತನೆ ನಡೆದಿದೆ.

2018ರ ಅಂತ್ಯದ ವೇಳೆಗೆ ಸರ್ವರಿಗೂ ವಿದ್ಯುತ್ ಪೂರೈಸಲು 16,000 ಕೋಟಿ ರೂ. ವೆಚ್ಚದಲ್ಲಿ ಸೌಭಾಗ್ಯ ಸ್ಕೀಮ್ ಅನ್ನು ಕೂಡ ಲಾಂಚ್ ಮಾಡಲಾಗಿತ್ತು. 2019ರ ಮಾರ್ಚ್ ವೇಳೆಗೆ ದೇಶಾದ್ಯಂತ ದಿನದ 24 ಗಂಟೆಯೂ ವಿದ್ಯುತ್ ನೀಡುವುದು ನಮ್ಮ ಉದ್ದೇಶ. ಮಾರ್ಚ್ ಬಳಿಕ ವಿನಾಕಾರಣ ಲೋಡ್ ಶೆಡ್ಡಿಂಗ್ ಮಾಡಿದ್ರೆ ವಿತರಕರಿಗೆ ದಂಡ ಹಾಕುವುದಾಗಿ ಇಂಧನ ಸಚಿವ ಆರ್.ಕೆ.ಸಿಂಗ್ ಈ ವಿಷಯವನ್ನು ತಿಳಿಸಿದ್ದಾರೆ.

ತಾಂತ್ರಿಕ ದೋಷ ಅಥವಾ ಪ್ರಕೃತಿ ವಿಕೋಪಗಳ ಕಾರಣಗಳನ್ನು ಹೊರತುಪಡಿಸಿ, ಸುಖಾ ಸುಮ್ಮನೆ ವಿದ್ಯುತ್ ಕಡಿತಗೊಳಿಸಿದರೆ, ವಿದ್ಯುತ್ ಪೂರೈಕೆದಾರರಿಗೆ ದಂಡ ವಿಧಿಸಲಾಗುತ್ತದೆ.ವಿದ್ಯುತ್ ಮೀಟರ್, ಬಿಲ್ ಪಾವತಿ ಎಲ್ಲವನ್ನೂ ಡಿಜಿಟಲೀಕರಣ ಮಾಡುವ ಉದ್ದೇಶ ಸರ್ಕಾರಕ್ಕಿದೆ. ಅದಕ್ಕಾಗಿ ಪ್ರಿ ಪೇಯ್ಡ್ ಮೀಟರ್ ಅಳವಡಿಸಲು ಎಲ್ಲಾ ರಾಜ್ಯಗಳು ಇದಕ್ಕೆ ಸಮ್ಮತಿಸಿವೆ. ವಿದ್ಯುತ್ ಪೂರೈಕೆಗೆ ತಕ್ಕಂತೆ ಶುಲ್ಕ ವಸೂಲಿ ಆಗುತ್ತಿಲ್ಲ. ಹಾಗಾಗಿ ಈ ಕ್ರಮ ಅನಿವಾರ್ಯ ಅಂತಾ ಸಚಿವರು ತಿಳಿಸಿದ್ದಾರೆ.

ಪ್ರೀ ಪೇಯ್ಡ್ ಮೀಟರ್ ಅಳವಡಿಕೆ ಹಾಗೂ ಫಲಾನುಭವಿಗಳಿಗೆ ನೇರ ಲಾಭ ವರ್ಗಾಯಿಸಲು ಹಾಗೂ 24×7 ವಿದ್ಯುತ್ ಪೂರೈಸಲು ದೇಶದ ಬಹುತೇಕ ರಾಜ್ಯಗಳು ಒಪ್ಪಿವೆ, ಎಂದು ಸಚಿವರು ತಿಳಿಸಿದ್ದಾರೆ.

ಇನ್ನು ಮುಂದೆ ಮೀಟರಿಂಗ್, ಬಿಲ್ ಸಂಗ್ರಹಕ್ಕೆ ಸಂಬಂಧಿಸಿದಂತೆ ಮಾನವ ಸಂಪರ್ಕವಿಲ್ಲದಂತೆ ಮಾಡಲಾಗುವುದು. ಮೊಬೈಲ್ ಮೂಲಕವೇ ವಿದ್ಯುತ್ ಬಿಲ್ ಕಟ್ಟುವ ವ್ಯವಸ್ಥೆ ಮಾಡಲಾಗುವುದು. ಆದರೆ, ಈ ಕಾರ್ಯಕ್ಕೆ ಯಾವುದೇ ಕಾಲ ಮಿತಿ ನಿಗದಿಗೊಳಿಸಿಲ್ಲ. ಅಲ್ಲದೇ ಪೂರೈಕೆದಾರರಿಗೆ ಆಗುವ ನಷ್ಟವನ್ನು ಸರಿದೂಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ, ಸಚಿವರು ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.
ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ. ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು…
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.
ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…