ವಿಚಿತ್ರ ಆದರೂ ಸತ್ಯ

27 ವರ್ಷದ ಈ ಯುವಕ ಐಶ್ವರ್ಯಾ ರೈ ಮಗನಂತೆ..!ತಿಳಿಯಲು ಇದನ್ನು ಓದಿ..

787

ನಾನು ವಿಶ್ವ ಸುಂದರಿ , ಬಾಲಿವುಡ್ ತಾರೆ ಐಶ್ವರ್ಯ ರೈ ಅವರ ಮಗ ಪ್ಲೀಸ್ ಇದನ್ನು ನಂಬಿ ಎಂದು ಹೇಳಿಕೊಂಡು ಯುವಕನೋರ್ವ ಸಂಚಲನ ಮೂಡಿಸಿದ್ದಾನೆ .27 ವರ್ಷದ ಯುವಕನೊಬ್ಬ ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಮಗನೆಂದು ಹೇಳಿಕೊಂಡು ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ.

ಸಂಗೀತ್ ಕುಮಾರ್ ರೈ ಹೆಸರಿನ ಈ ಯುವಕ ಮಂಗಳೂರಿಗೆ ಬಂದು ಮಾಧ್ಯಮಗಳ ಎದುರು ಈ ಹೇಳಿಕೆ ನೀಡಿದ್ದಾನೆ. ಈತ ಹೇಳುವ ಪ್ರಕಾರ 1988ರಲ್ಲಿ ಈತನ ಜನನವಾಗಿದ್ದು, ಐಶ್ವರ್ಯ‌ ಕೃಷ್ಣರಾಜ ರೈ ತನ್ನ ತಾಯಿ ಎಂದು ಹೇಳುತ್ತಿದ್ದಾನೆ.ಐಶ್ವರ್ಯ ರೈಯ ಇಡೀ ಕುಟುಂಬ ಬಗ್ಗೆ ಹಾಗೂ ಐಶ್ವರ್ಯ ರೈ ಯಾವ ವರ್ಷದಲ್ಲಿ ಸಿನೆಮಾ ಕ್ಷೇತ್ರಕ್ಕೆ ಕಾಲಿಟ್ಟರು ಮತ್ತು ಆಕೆ ನಟಿಸಿದ ಚಿತ್ರಗಳ ಬಗ್ಗೆಯೂ ಈತ ಮಾಹಿತಿ ಹೊಂದಿದ್ದಾನೆ.

ತನ್ನ ತಂದೆ ವಿಶಾಖಪಟ್ಟಣ ಮೂಲದ ಮವುಲು ಆದಿರೆಡ್ಡಿಯಾಗಿದ್ದು ಐಶ್ವರ್ಯಾ ರೈ ನೆರವಿನಿಂದ ಟೆಸ್ಟ್ ಟ್ಯೂಬ್ ಮೂಲಕ ಮಗು ಪಡೆದಿದ್ದರು. ಆರಂಭದ ಎರಡು ವರ್ಷ ಲಂಡನ್ ನಲ್ಲಿ ಐಶ್ವರ್ಯಾ ಕುಟುಂಬದ ಜೊತೆಗೆ ವಾಸಿಸುತ್ತಿದ್ದೆ. ಅನಂತರ ನನ್ನ ತಂದೆ ತನ್ನನ್ನು ಆಂಧ್ರಪ್ರದೇಶಕ್ಕೆ ತಂದು ಸಾಕಿದ್ದಾರೆ ಅಂತ ಹೇಳಿಕೊಂಡಿದ್ದಾನೆ.

ಸಂಗೀತ್ ಕುಮಾರ್ ಬಳಿ ತಾನೂ ಐಶ್ವರ್ಯ ಪುತ್ರನೆಂದು ಹೇಳಿಕೊಳ್ಳಲು ಯಾವುದೇ ದಾಖಲೆಗಳಿಲ್ಲ. ಐಶ್ವರ್ಯಾ ಕುಟುಂಬಸ್ಥರು ನನ್ನನ್ನು ನೋಡಿದರೆ ಒಪ್ಪಿಕೊಳ್ಳುತ್ತಾರೆ. ತಾನು ಐಶ್ವರ್ಯಾ ಬಳಿ ಹೋಗಬೇಕು. ತುಳು ಚಿತ್ರವೊಂದರ ಶೂಟಿಂಗ್ ಕಾರ್ಯಕ್ಕೆಂದು ಮಂಗಳೂರಿಗೆ ಬಂದಿದ್ದೇನೆ.

ಚೆನ್ನೈ ಯಲ್ಲಿ ಸೌಂಡ್ ಇಂಜಿನಿಯರ್ ಆಗಿದ್ದೇನೆ ಅಂತಾ ಹೇಳಿಕೊಂಡಿರುವ ಈತ ತನಗೆ ಬಚ್ಚನ್ ಕುಟುಂಬ ಇಷ್ಟವಿಲ್ಲ. ಅಭಿಷೇಕ್ ಬಚ್ಚನ್ ತನ್ನ ತಾಯಿಯ ಜತೆ ಇರೋದು ಇಷ್ಟವಿಲ್ಲ.

ತಾನು ತಾಯಿ ಬಳಿ ಹೋಗಬೇಕಿದ್ದು, ತಾಯಿ ಐಶ್ವರ್ಯ ರೈ ಜತೆಯೇ ಇರಬೇಕೆಂದಿದ್ದೇನೆ ಎಂದು ಹೇಳಿಕೆ ನೀಡಿದ್ದಾನೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಗಜಕೇಸರಿ, ಐರಾವತ ಬಂದ್ರೂ ಗೆಲ್ಲೋದು ‘ಅಭಿಮನ್ಯು’?ದಚ್ಚು ಪ್ರಚಾರ ಮಾಡಿದ್ರೆ ಸೋಲ್ತಾರೆ ಎಂದ್ರು..?

    ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….

  • ಸ್ಪೂರ್ತಿ

    6 ನೇ ತರಗತಿ ಫೈಲ್ ಆಗಿದ್ದ ಈ ಹುಡುಗ ಈಗ ಕೋಟಿ ಕೋಟಿ ಅಧಿಪತಿ, ಮಾಡುವ ಕೆಲಸ ಏನು.

    ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ…

  • ಕ್ರೀಡೆ

    ರಾತ್ರೋ ರಾತ್ರಿ ಇಂಟರ್ ನೆಟ್ ಸ್ಟಾರ್ ಆದ RCB ಗರ್ಲ್..!

    ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್‍ಸ್ಟಾಗ್ರಾಮ್‍ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…

  • ಸುದ್ದಿ

    ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಟ್ರೈಲರ್ ಗೆ ಸ್ಟಾರ್ ನಟರ ಅಭಿಪ್ರಾಯವೇನು ಗೊತ್ತಾ,.!

    ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….

  • ಆರೋಗ್ಯ

    ಅಶ್ವಗಂಧದ ರೋಗನಿರೋಧಕ ಶಕ್ತಿಯ ಉಪಯೋಗಗಳನ್ನು ತಿಳಿಯ ಬೇಕಾ …? ಹಾಗದ್ರೆ ಈ ಲೇಖನವನ್ನು ಓದಿ …

    ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.

    ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.

  • ಸುದ್ದಿ

    ಮನೆ ಬಾಗಿಲಿಗೆ ʼಈರುಳ್ಳಿʼಯನ್ನು ಅತಿ ಕಡಿಮೆ ದರದಲ್ಲಿ ತಲುಪಿಸಲು ಮುಂದಾದ ಸರ್ಕಾರ….!

    ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…