News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸೌಂದರ್ಯ

ಮಹಿಳಾಮಣಿಗಳೆ “ಮೂಗುತಿ” ಚುಚ್ಚಿಸಿಕೊಳ್ಳುವ ಮುನ್ನ ಈ ಲೇಖನಿ ಓದಿ, ತಪ್ಪದೆ ಶೇರ್ ಮಾಡಿ

3381

ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.

ಕೆಲವೊಂದು ಸಿನಿಮಾಗಳಲ್ಲಿ ನಾಯಕಿಯರು ಮೂಗುತಿ ಧರಿಸಿ ಮತ್ತಷ್ಟು ಟ್ರೆಂಡ್ ಉಂಟು ಮಾಡಿದರು. ಮೂಗು ಚುಚ್ಚಿಕೊಳ್ಳುವಾಗ ತುಂಬಾ ಎಚ್ಚರಿಕೆ ವಹಿಸಬೇಕು. ಯಾಕೆಂದರೆ ಸ್ವಲ್ಪ ತಪ್ಪಾದರೂ ಅದರ ಕಲೆ ಜೀವಮಾನವಿಡಿ ಉಳಿದುಕೊಳ್ಳುವುದು.

ಅದೇ ರೀತಿ ಕೆಲವು ಮಂದಿ ಮೂಗುತಿ ಚುಚ್ಚಿಸಿಕೊಳ್ಳುವುದರಿಂದ ಸೋಂಕು ಉಂಟಾಗಬಹುದು. ಮೂಗುತಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆ ಬಗ್ಗೆ ಈ ಲೇಖನದಲ್ಲಿ ತಿಳಿಯುವ. ಇದನ್ನು ತಿಳಿದುಕೊಂಡರೆ ನಿಮ್ಮ ಅನುಭವ ಮತ್ತಷ್ಟು ಸುಖದಾಯಕ ಹಾಗೂ ಸೋಂಕು ರಹಿತವಾಗಲಿದೆ…

ವೃತ್ತಿಪರರಿಂದ ಮೂಗು ಚುಚ್ಚಿಸಿಕೊಳ್ಳಿ :-  ಕೆಲವರು ಮನೆಯಲ್ಲಿಯೇ ಮೂಗು ಚುಚ್ಚಿಸಿಕೊಳ್ಳಲು ಇಷ್ಟಪಡುತ್ತಾರೆ. ಮನೆಯಲ್ಲಿ ಹೆಚ್ಚಿನ ಧೈರ್ಯ ಕೂಡು ಬರುವುದು. ಆದರೆ ಇದರಿಂದ ಸೋಂಕು ಅಥವಾ ಬೇರೆ ಸಮಸ್ಯೆ ಕಾಣಿಸಬಹುದು. ವೃತ್ತಿಪರರ ನೆರವು ಪಡೆದರೆ ತುಂಬಾ ಒಳ್ಳೆಯದು. ಅವರು ಕಿವಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆಯನ್ನು ನಿಮಗೆ ಹೇಳಬಹುದು.

ಒಳ್ಳೆಯ ಗುಣಮಟ್ಟದ ಕ್ಲಿನಿಕ್‌ಗೆ ಹೋಗಿ :- ಸಣ್ಣ ಸಲೂನ್ ಅಥವಾ ಕ್ಲಿನಿಕ್‌ಗಳು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದಿಲ್ಲ. ಇದರಿಂದ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ಇದರಿಂದ ಕಿವಿ ಚುಚ್ಚಿಸಿಕೊಳ್ಳಲು ಒಳ್ಳೆಯ ಗುಣಮಟ್ಟದ ಕ್ಲಿನಿಕ್ ಗಳನ್ನು ಆಯ್ಕೆ ಮಾಡಿಕೊಳ್ಳಿ. ಇದರಲ್ಲಿ ಯಾವುದೇ ಹೊಂದಾಣಿಕೆ ಮಾಡಿಕೊಳ್ಳಬೇಡಿ.

ನಿಮಗೇನು ಬೇಕು ಎನ್ನುವ ಬಗ್ಗೆ ಸ್ಪಷ್ಟತೆಯಿರಲಿ :- ಮೂಗು ಚುಚ್ಚಿಸಿಕೊಳ್ಳುವುದರಿಂದ ಅದು ಮೂಗಿನಲ್ಲಿ ಶಾಶ್ವತವಾದ ತೂತನ್ನು ಉಂಟು ಮಾಡುತ್ತದೆ. ಇದರಿಂದ ನಿಮಗೆ ಮೂಗುತಿ ಬೇಕೇ ಅಥವಾ ಬೇಡವೇ ಎನ್ನುವುದನ್ನು ನಿಧಾನವಾಗಿ ಕುಳಿತುಕೊಂಡು ಯೋಚಿಸಿ. ಮೂಗು ಚುಚ್ಚಿಸಿಕೊಂಡ ಬಳಿಕ ನಿಮಗೆ ಏನೂ ಮಾಡಲು ಸಾಧ್ಯವಾಗಲ್ಲ.

ಸ್ವಲ್ಪ ಅಧ್ಯಯನ ಮಾಡಿ :- ನಿಮಗೆ ಏನು ಬೇಕು ಎನ್ನುವುದು ಸ್ವಷ್ಪವಾದರೂ ನೇರವಾಗಿ ಹೋಗಿ ಮೂಗುತಿ ಚುಚ್ಚಿಸಿಕೊಳ್ಳಬೇಡಿ. ಸ್ವಲ್ಪ ಸಮಯ ತೆಗೆದುಕೊಂಡು ಮೂಗು ಚುಚ್ಚಿಸಿಕೊಳ್ಳುವ ವಿಧಾನ ಮತ್ತು ಮೂಗುತಿಯ ಆಯ್ಕೆಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡು ಅಧ್ಯಯನ ನಡೆಸಿ.

ಸ್ಥಳೀಯ ಅನಸ್ತೇಸಿಯಾ ನೆರವಾಗಬಹುದು :- ಮೂಗು ಚುಚ್ಚಿಸಿಕೊಳ್ಳಲು ನಿರ್ಧರಿಸಿದ್ದರೂ ಅದರಿಂದ ಆಗುವಂತಹ ನೋವಿನ ಬಗ್ಗೆ ನಿಮಗೆ ತುಂಬಾ ಭೀತಿ ಉಂಟಾಗಿರುತ್ತದೆ. ಆದರೆ ಇದರ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ. ಮೆಡಿಕಲ್‌ಗಳಲ್ಲಿ ಕೆಲವೊಂದು ಸ್ಥಳೀಯ ಅನಸ್ತೇಸಿಯಾಗಳು ಲಭ್ಯವಿದೆ. ಇದು ನಿಮಗೆ ನೆರವಾಗಬಹುದು. ಕೆಲವು ಕ್ಲಿನಿಕ್ ಗಳು ಕ್ರೀಮ್ ಗಳನ್ನು ಬಳಸುತ್ತವೆ.

ಚರ್ಚೆ ಮಾಡಿ :- ಈಗಾಗಲೇ ಮೂಗುತಿ ಚುಚ್ಚಿಸಿಕೊಂಡಿರುವವರ ಜತೆ ಅವರ ಅನುಭವನ್ನು ತಿಳಿದುಕೊಳ್ಳಬಹುದು. ನಿಮಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸುಲಭವಾಗಬಹುದು. ಇದರಿಂದ ಮೂಗು ಚುಚ್ಚಿಸಿಕೊಳ್ಳುವ ಸಲೂನ್ ಮತ್ತು ಅದರ ಬಳಿಕದ ಆರೈಕೆಯ ಬಗ್ಗೆ ತಿಳಿದುಕೊಳ್ಳಲು ಸುಲಭವಾಗುತ್ತದೆ.

ಮನೆಯಲ್ಲಿ ಪ್ರಯತ್ನಿಸಬೇಡಿ :- ಹಿಂದಿನ ಕಾಲದಲ್ಲಿ ಮನೆಯಲ್ಲಿಯೇ ಮೂಗನ್ನು ಚುಚ್ಚಿಸಿಕೊಳ್ಳಲಾಗುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಹಲವಾರು ರೀತಿಯಿಂದ ವಾತಾವರಣವು ಕಲುಷಿತವಾಗಿರುವ ಕಾರಣದಿಂದಾಗಿ ಸೋಂಕು ಹರಡುವ ಸಾಧ್ಯತೆ ತುಂಬಾ ಹೆಚ್ಚಿರುತ್ತದೆ. ಇದರಿಂದ ಮನೆಯಲ್ಲಿ ಮೂಗು ಚುಚ್ಚಿಸಿಕೊಳ್ಳಲು ಹೋಗಬೇಡಿ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅರ್ಜುನ್ ಸರ್ಜಾ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಈಗ ರಾಜಕೀಯ ಪ್ರವೇಶ..!

    ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್‍ಎಸ್‍ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…

  • ಸುದ್ದಿ

    ತನ್ನ ಹೆಂಡತಿಯ ರೂಮಿನಲ್ಲಿ ಆಕೆಯ ಪ್ರಿಯತಮನನ್ನು ನೋಡಿದ ಗಂಡ ಮಾಡಿದ್ದೇನು ಗೊತ್ತಾ?

    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ.  ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…

  • ಆಧ್ಯಾತ್ಮ

    ಕೃಷ್ಣನ ಜನ್ಮದ ಹಿಂದೆ ಅಡಗಿರುವ ಆ ರಹಸ್ಯ ಏನು ಗೊತ್ತಾ?ಕೃಷ್ಣ ಕಾರಾಗೃಹದಲ್ಲೇ ಜನಿದಿದ್ದು ಏಕೆ?ತಿಳಿಯಲು ಈ ಲೇಖನಿ ಓದಿ…

    ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ

  • ರಾಜಕೀಯ

    ಅಬ್ಬಾ! ಬೃಹತ್ ಸೇಬಿನ ಹಾರ ಹಾಕಿ ಹೆಚ್.ಡಿ.ಕೆ ಅವರಿಗೆ ಸ್ವಾಗತ…ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ…ನೀವೂ ನೋಡಿ…

    ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ  ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು  ಅದ್ಧೂರಿ ಬೈಕ್ ರ‍್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…

  • ಸುದ್ದಿ

    ಮೂತ್ರ ವಿಸರ್ಜನೆ ಮಾಡುವುದಕ್ಕಾಗಿ ಚಲಿಸುತ್ತಿದ್ದ ರೈಲನ್ನೇ ನಿಲ್ಲಿಸಿದ ಚಾಲಕ- ಕ್ರಮಕ್ಕೆ ಆಗ್ರಹ….!

    ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್‌ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…

  • ವಿಸ್ಮಯ ಜಗತ್ತು, ಸುದ್ದಿ

    ಇದು ನೋಡಲು ಜಲಪಾತದಂತೆ ಕಾಣುತ್ತದೆ..ಆದರೆ, ಜಲಪಾತ ಅಲ್ಲ …!ಮತ್ತಿನ್ನೇನು ಗೊತ್ತಾ?

    ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು  ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ  ಹಾರುತ್ತದೆ ಎಂದರೆ  ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…