ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಕೆಲವೊಂದು ಸಿನಿಮಾಗಳಲ್ಲಿ ನಾಯಕಿಯರು ಮೂಗುತಿ ಧರಿಸಿ ಮತ್ತಷ್ಟು ಟ್ರೆಂಡ್ ಉಂಟು ಮಾಡಿದರು. ಮೂಗು ಚುಚ್ಚಿಕೊಳ್ಳುವಾಗ ತುಂಬಾ ಎಚ್ಚರಿಕೆ ವಹಿಸಬೇಕು. ಯಾಕೆಂದರೆ ಸ್ವಲ್ಪ ತಪ್ಪಾದರೂ ಅದರ ಕಲೆ ಜೀವಮಾನವಿಡಿ ಉಳಿದುಕೊಳ್ಳುವುದು.
ಅದೇ ರೀತಿ ಕೆಲವು ಮಂದಿ ಮೂಗುತಿ ಚುಚ್ಚಿಸಿಕೊಳ್ಳುವುದರಿಂದ ಸೋಂಕು ಉಂಟಾಗಬಹುದು. ಮೂಗುತಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆ ಬಗ್ಗೆ ಈ ಲೇಖನದಲ್ಲಿ ತಿಳಿಯುವ. ಇದನ್ನು ತಿಳಿದುಕೊಂಡರೆ ನಿಮ್ಮ ಅನುಭವ ಮತ್ತಷ್ಟು ಸುಖದಾಯಕ ಹಾಗೂ ಸೋಂಕು ರಹಿತವಾಗಲಿದೆ…
ವೃತ್ತಿಪರರಿಂದ ಮೂಗು ಚುಚ್ಚಿಸಿಕೊಳ್ಳಿ :- ಕೆಲವರು ಮನೆಯಲ್ಲಿಯೇ ಮೂಗು ಚುಚ್ಚಿಸಿಕೊಳ್ಳಲು ಇಷ್ಟಪಡುತ್ತಾರೆ. ಮನೆಯಲ್ಲಿ ಹೆಚ್ಚಿನ ಧೈರ್ಯ ಕೂಡು ಬರುವುದು. ಆದರೆ ಇದರಿಂದ ಸೋಂಕು ಅಥವಾ ಬೇರೆ ಸಮಸ್ಯೆ ಕಾಣಿಸಬಹುದು. ವೃತ್ತಿಪರರ ನೆರವು ಪಡೆದರೆ ತುಂಬಾ ಒಳ್ಳೆಯದು. ಅವರು ಕಿವಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆಯನ್ನು ನಿಮಗೆ ಹೇಳಬಹುದು.

ಒಳ್ಳೆಯ ಗುಣಮಟ್ಟದ ಕ್ಲಿನಿಕ್ಗೆ ಹೋಗಿ :- ಸಣ್ಣ ಸಲೂನ್ ಅಥವಾ ಕ್ಲಿನಿಕ್ಗಳು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದಿಲ್ಲ. ಇದರಿಂದ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ಇದರಿಂದ ಕಿವಿ ಚುಚ್ಚಿಸಿಕೊಳ್ಳಲು ಒಳ್ಳೆಯ ಗುಣಮಟ್ಟದ ಕ್ಲಿನಿಕ್ ಗಳನ್ನು ಆಯ್ಕೆ ಮಾಡಿಕೊಳ್ಳಿ. ಇದರಲ್ಲಿ ಯಾವುದೇ ಹೊಂದಾಣಿಕೆ ಮಾಡಿಕೊಳ್ಳಬೇಡಿ.

ನಿಮಗೇನು ಬೇಕು ಎನ್ನುವ ಬಗ್ಗೆ ಸ್ಪಷ್ಟತೆಯಿರಲಿ :- ಮೂಗು ಚುಚ್ಚಿಸಿಕೊಳ್ಳುವುದರಿಂದ ಅದು ಮೂಗಿನಲ್ಲಿ ಶಾಶ್ವತವಾದ ತೂತನ್ನು ಉಂಟು ಮಾಡುತ್ತದೆ. ಇದರಿಂದ ನಿಮಗೆ ಮೂಗುತಿ ಬೇಕೇ ಅಥವಾ ಬೇಡವೇ ಎನ್ನುವುದನ್ನು ನಿಧಾನವಾಗಿ ಕುಳಿತುಕೊಂಡು ಯೋಚಿಸಿ. ಮೂಗು ಚುಚ್ಚಿಸಿಕೊಂಡ ಬಳಿಕ ನಿಮಗೆ ಏನೂ ಮಾಡಲು ಸಾಧ್ಯವಾಗಲ್ಲ.

ಸ್ವಲ್ಪ ಅಧ್ಯಯನ ಮಾಡಿ :- ನಿಮಗೆ ಏನು ಬೇಕು ಎನ್ನುವುದು ಸ್ವಷ್ಪವಾದರೂ ನೇರವಾಗಿ ಹೋಗಿ ಮೂಗುತಿ ಚುಚ್ಚಿಸಿಕೊಳ್ಳಬೇಡಿ. ಸ್ವಲ್ಪ ಸಮಯ ತೆಗೆದುಕೊಂಡು ಮೂಗು ಚುಚ್ಚಿಸಿಕೊಳ್ಳುವ ವಿಧಾನ ಮತ್ತು ಮೂಗುತಿಯ ಆಯ್ಕೆಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡು ಅಧ್ಯಯನ ನಡೆಸಿ.
ಸ್ಥಳೀಯ ಅನಸ್ತೇಸಿಯಾ ನೆರವಾಗಬಹುದು :- ಮೂಗು ಚುಚ್ಚಿಸಿಕೊಳ್ಳಲು ನಿರ್ಧರಿಸಿದ್ದರೂ ಅದರಿಂದ ಆಗುವಂತಹ ನೋವಿನ ಬಗ್ಗೆ ನಿಮಗೆ ತುಂಬಾ ಭೀತಿ ಉಂಟಾಗಿರುತ್ತದೆ. ಆದರೆ ಇದರ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ. ಮೆಡಿಕಲ್ಗಳಲ್ಲಿ ಕೆಲವೊಂದು ಸ್ಥಳೀಯ ಅನಸ್ತೇಸಿಯಾಗಳು ಲಭ್ಯವಿದೆ. ಇದು ನಿಮಗೆ ನೆರವಾಗಬಹುದು. ಕೆಲವು ಕ್ಲಿನಿಕ್ ಗಳು ಕ್ರೀಮ್ ಗಳನ್ನು ಬಳಸುತ್ತವೆ.

ಚರ್ಚೆ ಮಾಡಿ :- ಈಗಾಗಲೇ ಮೂಗುತಿ ಚುಚ್ಚಿಸಿಕೊಂಡಿರುವವರ ಜತೆ ಅವರ ಅನುಭವನ್ನು ತಿಳಿದುಕೊಳ್ಳಬಹುದು. ನಿಮಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸುಲಭವಾಗಬಹುದು. ಇದರಿಂದ ಮೂಗು ಚುಚ್ಚಿಸಿಕೊಳ್ಳುವ ಸಲೂನ್ ಮತ್ತು ಅದರ ಬಳಿಕದ ಆರೈಕೆಯ ಬಗ್ಗೆ ತಿಳಿದುಕೊಳ್ಳಲು ಸುಲಭವಾಗುತ್ತದೆ.
ಮನೆಯಲ್ಲಿ ಪ್ರಯತ್ನಿಸಬೇಡಿ :- ಹಿಂದಿನ ಕಾಲದಲ್ಲಿ ಮನೆಯಲ್ಲಿಯೇ ಮೂಗನ್ನು ಚುಚ್ಚಿಸಿಕೊಳ್ಳಲಾಗುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಹಲವಾರು ರೀತಿಯಿಂದ ವಾತಾವರಣವು ಕಲುಷಿತವಾಗಿರುವ ಕಾರಣದಿಂದಾಗಿ ಸೋಂಕು ಹರಡುವ ಸಾಧ್ಯತೆ ತುಂಬಾ ಹೆಚ್ಚಿರುತ್ತದೆ. ಇದರಿಂದ ಮನೆಯಲ್ಲಿ ಮೂಗು ಚುಚ್ಚಿಸಿಕೊಳ್ಳಲು ಹೋಗಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…
ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖಂಡ ಸಬ್ಜಾರ್ ಅಹ್ಮದ್ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್ ವಾನಿ ನಂತರ ಸಬ್ಜಾರ್ ಅಹ್ಮದ್ ಹಿಜ್ಬುಲ್ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.
57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…
ಈ ಗೃಹೋಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.
ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…