News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

3 ತಿಂಗಳೊಳಗೆ ಮನೆ ಖಾಲಿ ಮಾಡುವಂತೆ, ನಟ ಯಶ್’ಗೆ ಕೋರ್ಟ್ ಆದೇಶ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

1050

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ.

ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ.

ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಮನೆ ಮಾಲೀಕ ಮುನಿಪ್ರಸಾದ್ ಅವರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

3 ವರ್ಷಗಳಿಂದ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದು, ಬೆಂಗಳೂರಿನ 42 ನೇ ಸಿಟಿ ಸಿವಿಲ್ ಕೋರ್ಟ್ ಮನೆ ಖಾಲಿ ಮಾಡುವಂತೆ ಯಶ್ ಅವರ ತಾಯಿ ಪುಷ್ಪಾ ಅವರಿಗೆ ಸೂಚಿಸಿದೆ.

9.60 ಲಕ್ಷ ರೂ. ಪಾವತಿಯೊಂದಿಗೆ 3 ತಿಂಗಳಲ್ಲಿ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿರುವ ಮನೆ ಖಾಲಿ ಮಾಡುವಂತೆ ಯಶ್ ತಾಯಿ ಪುಷ್ಪಾ ಅವರಿಗೆ ಸೂಚಿಸಲಾಗಿದೆ. ಇದರೊಂದಿಗೆ ಮನೆ ಅಡ್ವಾನ್ಸ್ 4 ಲಕ್ಷ ರೂ. ವಾಪಸ್ ಕೊಡುವಂತೆ ಕತ್ರಿಗುಪ್ಪೆ ನಿವಾಸಿ ಮನೆ ಮಾಲೀಕ ಮುನಿಪ್ರಸಾದ್ ಅವರಿಗೆ ಸೂಚಿಸಲಾಗಿದೆ.

ಯಶ್ ತಾಯಿಯಿಂದ ನಮಗೆ 21.37 ಲಕ್ಷ ರು ಬಾಡಿಗೆ ಹಣ ಬರಬೇಕಿದೆ ಎಂದು ಮನೆ ಮಾಲೀಕರು ತಮ್ಮ ದೂರಿನಲ್ಲಿ ತಿಳಿಸಿದ್ದರು.

ಯಶ್ ಅವರ ಕುಟುಂಬ ಬಾಡಿಗೆ ನೀಡಿಲ್ಲ. ಅಲ್ಲದೇ ಅವರು ಬೇರೆ ಮನೆಯಲ್ಲಿ ವಾಸವಾಗಿದ್ದರೂ, ಬೀಗವನ್ನು ಹಾಕಿ ಬಾಡಿಗೆ ಮನೆಯನ್ನು ತಮ್ಮ ಸುಪರ್ದಿಯಲ್ಲಿಯೇ ಇಟ್ಟುಕೊಂಡಿದ್ದಾರೆ. ಮನೆ ಖಾಲಿ ಮಾಡಿಸಲು ಮನೆ ಮಾಲೀಕರು ಕೋರ್ಟ್ ಮೊರೆ ಹೋಗಿದ್ದರು.

ಹೀಗಾಗಿ ವಾದ ವಿವಾದಗಳನ್ನು ಆಲಿಸಿದ ಕೋರ್ಟ್ ಮೂರೂ ತಿಂಗಳೊಳಗೆ ಮನೆ ಖಾಲಿ ಮಾಡುವುದರ ಜೊತೆಗೆ, ಬಾಡಿಗೆ ಕೊಡದೆ ಉಳಿಸಿಕೊಂಡಿರುವ ಹಣವನ್ನು ಮನೆ ಮಾಲೀಕರಿಗೆ ಕೊಡಬೇಕೆಂದು ಯಶ್ ತಾಯಿ ಪುಷ್ಪ ಅವರಿಗೆ ಕೋರ್ಟ್ ಆದೇಶ ಮಾಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿನಿಮ್ಮ ಸಂಜೆ…

  • ಸುದ್ದಿ

    ಕುಮಾರಣ್ಣ ಬಜೆಟ್ ನಲ್ಲಿ ರೈತರಿಗಾಗಿ ಮತ್ತೊಂದು ಭರ್ಜರಿ ಆಫರ್…

    ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…

  • inspirational, ಸುದ್ದಿ

    ವಾರಣಾಸಿಯಲ್ಲಿ ಮೋದಿ ಎದುರಾಗಿ ತೊಡೆ ತಟ್ಟಿರುವ ಈ ಅಜಯ್‍ ರಾಯ್‍ ಯಾರು ಗೊತ್ತಾ..?

    ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‍ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್‍ ನ ಅಜಯ್ ರಾಯ್‍ ಕಣಕ್ಕಿಳಿಯುವುದು ಕನ್‍ಫರ್ಮ್‍ ಆಗಿದೆ. ಹಾಗಾದ್ರೆ ಈ ಅಜಯ್‍ ರಾಯ್‍ ಯಾರು ಅಂದ್ರಾ? ಇವರು ಕಾಂಗ್ರೆಸ್‍ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…

  • ಆರೋಗ್ಯ

    ಪುದೀನಾ ಎಲೆಗಳಲ್ಲಿ ಇರುವ ಆರೋಗ್ಯಕಾರಿ ಲಾಭಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.