ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು ಹೊಟ್ಟೆ ಪಾಡಿಗಾಗಿ ಏನಾದರು ಮಾಡಲೇಬೇಕಲ್ವಾ ಸರ್ ಎಂದ.. ಈ ಮಾತನ್ನು ಕೇಳಿ ಬೇಸರಗೊಂಡ ಸಾಫ್ಟವೇರ್ ಉದ್ಯಮಿ, ಒಂದು ಸಮೋಸ ಮಾರಿದರೆ ನಿನಗೆ ಎಷ್ಟು ಸಿಗುತ್ತದೆ? ದಿನಕ್ಕೆ ಎಷ್ಟು ಸಮೋಸ ಮಾರ್ತ್ಯಪ್ಪ? ಎಂದು ಕೇಳಿದ. ಇದಕ್ಕೆ ಸಮೋಸ ಮಾರುವವನು, ಸಾರ್ ಒಂದು ಸಮೋಸ ಮಾರಿದರೆ 75 ಪೈಸೆ ಸಿಗುತ್ತದೆ. ಸೀಸನ್ ಸಮಯದಲ್ಲಿ ದಿನಕ್ಕೆ ಮೂರರಿಂದ ಮೂರು ವರೆ ಸಾವಿರ ಮಾರುತ್ತೇನೆ, ಸೀಸನ್ ಇಲ್ಲದಿದ್ದಾಗ ದಿನಕ್ಕೆ ಎರಡು ಸಾವಿರ ಸೇಲ್ ಮಾಡುತ್ತೇನೆ ಎಂದು ಹೇಳಿದ !

ಮನಸಲ್ಲೇ ಯೋಚಿಸದ ಆ ಉಧ್ಯಮಿ ದಿನಕ್ಕೆ ಎರಡು ಸಾವಿರ ಸಮೋಸ ಮಾರಿದರೆ, ಒಂದು ಸಾವಿರದ ಐನೂರು ರೂ ಆದಾಯ, ಅದೇ ತಿಂಗಳಿಗೆ 45 ಸಾವಿರ ! ನನ್ನ ಸಂಬಳ ತಿಂಗಳಿಗೆ ಕೇವಲ 25 ಸಾವಿರ, ನನ್ನ ಕೆಲಸದ ಒತ್ತಡದಲ್ಲಿ ನನ್ನ ನಗುವನ್ನೇ ಮರೆತು ಹೋಗಿದ್ದೇನೆ, ಆದರೆ ಈ ಹುಡುಗ ಹಾಗಲ್ಲ, ಎಂದುಕೊಂಡು ಮತ್ತೇ ಸಮೋಸ ಹುಡುಗನಿಗೆ, ನೀವೆ ಸಮೋಸವನ್ನು ತಯಾರು ಮಾಡುತ್ತೀರ ಎಂದು ಪ್ರಶ್ನಿಸಿದ? ಇದಕ್ಕೆ ಸಮೋಸ ಮಾರುವವನು, ಇಲ್ಲಾ ಸಾರ್ ನಮ್ಮ ಯಜಮಾನ ಬೇರೆಯವರ ಬಳಿ ಕೊಂಡುಕೊಂಡು ನಮಗೆ ಕೊಡುತ್ತಾನೆ ಎಂದು ಹೇಳಿದ. ಈ ಕೆಲಸ ಬಿಟ್ಟು ಬೇರೆ ಏನು ಮಾಡುತ್ತೀಯಾ? ಎಂದು ಉಧ್ಯಮಿ ಕೇಳಿದ.. ಕಳೆದ ವರ್ಷ ನನ್ನ ಅಕ್ಕನಿಗೆ ಮದುವೆ ಮಾಡಿದೆ, ನಂತರ ನಮ್ಮ ಊರಿನಲ್ಲಿ ಒಂದು ಜಮೀನು ಕೂಡ ಖರೀದಿ ಮಾಡಿದ್ದೇನೆ. ಅದರ ಬೆಲೆ ಈಗ ಸುಮಾರು 15 ಲಕ್ಷವಿದೆ. ಈ ಮಾತನ್ನು ಕೇಳಿ ಆಶ್ಚರ್ಯಚಕಿತನಾದ ಇಂಜಿನಿಯರ್ ನೀನು ಎಲ್ಲಿಯ ತನಕ ವ್ಯಾಸಾಂಗ ಮಾಡಿದ್ದೀಯಾ ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಹುಡುಗ, ಸರ್ ನಾನು ಮೂರನೇ ತರಗತಿವರೆಗೂ ಓದಿದ್ದೇನೆ, ಇದಾದ ಮೇಲೆ ಓದಲು ಸಾಧ್ಯವಾಗಲಿಲ್ಲ ಎಂದು ಹೇಳಿದ, ಇದಕ್ಕೆ ಉಧ್ಯಮಿ ಯಾಕೆ ಮುಂದೆ ಓದಬೇಕು ಅನಿಸಲಿಲ್ಲವಾ? ಸಾರ್ ನನ್ನ ವ್ಯಾಪಾರವನ್ನು ನನ್ನ ಮಕ್ಕಳಿಗೆ ಕೊಡಬಹುದು, ಆದರೆ ನಿಮ್ಮ ಉದ್ಯೋಗ ನಿಮ್ಮ ಮಕ್ಕಳಿಗೆ ಕೊಡಲು ಸಾಧ್ಯವಾಗುವುದಿಲ್ಲ ಅಲ್ಲವಾ? ಇದೇ ನನಗೆ ಜನ್ಮ ಕೊಟ್ಟ ತಂದೆ ಕಲಿಸಿದ ನೀತಿ, ಹಣವನ್ನು ಹೇಗೆ ಸಂಪಾದನೆ ಮಾಡಬೇಕು ಎಂಬುದು ನನಗೆ ಗೊತ್ತಾಗಿದೆ, ಹಾಗಾಗಿ ಓದು ನನಗೆ ಅವಶ್ಯಕತೆ ಇಲ್ಲ. ಸರ್ ನನ್ನ ಸ್ಟೇಷನ್ ಬಂತು ನಾನು ಹೊರಡುತ್ತೇನೆ ಎಂದು ಹೇಳಿ ಹೊರಟು ಬಿಟ್ಟ ಸಮೋಸ ಮಾಡುವ ಹುಡುಗ..

ನೋಡಿದ್ರಲ್ಲ ವಿದ್ಯೆ ಎಂಬುದು ಬರೀ ಜ್ಞಾನಾರ್ಜನೆಗೆ ಮತ್ತು ಒಳ್ಳೆಯ ನಾಗರೀಕನಾಗಿ ಬದುಕಲು, ದಯವಿಟ್ಟು ಓದನ್ನು ವ್ಯವಹಾರಕ್ಕೆ ಉಪಯೋಗಿಸಬೇಡಿ. ವಿದ್ಯೆ ಇಲ್ಲದವರನ್ನು ಕೀಳು ಮಟ್ಟದಲ್ಲಿ ನೋಡಬೇಡಿ, ಓದಿದವನಿಗೆ ಒಂದೇ ಕೆಲಸ, ಓದಾದೇ ಇಲ್ಲದವನಿಗೆ ಮಾಡಿದ್ದೆಲ್ಲಾ ಕೆಲಸಾನೇ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯರು ಅಡುಗೆ ಮಾಡುವಾಗ ಚಿಕ್ಕ ಪುಟ್ಟ ಸುಟ್ಟ ಗಾಯಗಳಾಗುವುದು ಸಾಮಾನ್ಯದ ಸಂಗತಿ. ಇಂತಹ ಚಿಕ್ಕ ಸುಟ್ಟ ಗಾಯಗಳನ್ನು ಕಡಿಮೆಗೊಳಿಸುವಂತ ಔಷಧಗಳು ನಮ್ಮ ಮನೆಯಲ್ಲೇ ಇರುತ್ತವೆ. ಅಂತಹ ಕೆಲವು ಮನೆಮದ್ದು ಇಲ್ಲಿವೆ.. ಸುಟ್ಟ ಗಾಯಕ್ಕೆ ತಕ್ಷಣವೇ ಟೂತ್ ಪೇಸ್ಟ್ ಹಚ್ಚಿಕೊಂಡಲ್ಲಿ ಸುಟ್ಟ ಗಾಯದಿಂದಾಗುವ ಉರಿ ಶಮನವಾಗುತ್ತದೆ.ಶರೀರದ ಭಾಗ ಸುಟ್ಟ ತಕ್ಷಣವೇ ಹಸಿ ಮಣ್ಣನ್ನು ಆ ಭಾಗಕ್ಕೆ ಹಚ್ಚುವುದರಿಂದ ಉರಿ ಕಡಿಮೆಯಾಗುತ್ತದೆ ಮತ್ತು ಗುಳ್ಳೆಗಳು ಏಳುವುದಿಲ್ಲ. ಸುಟ್ಟ ಭಾಗಕ್ಕೆ ಸತತವಾಗಿ ನೀರು ಬಿಡುತ್ತಿದ್ದಲ್ಲಿ ಗಾಯದ ಉರಿ ಕಡಿಮೆಯಾಗುತ್ತದೆ.ಚರ್ಮ ಸುಟ್ಟಿದ್ದ ಭಾಗಕ್ಕೆ…
ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು ಖಂಡಿತ. ಓದಿ ನೋಡಿ. ಎಷ್ಟು ನೀರು ಕುಡಿದ್ರೂ ಇನ್ನೂ ಕುಡೀತಾನೇ ಇರ್ಬೇಕು ಅನ್ಸುತ್ತೆ :- ನಿಂತು ನೀರು ಕುಡಿದ್ರೆ ಬಾಯಾರಿಕೆ ಹೋಗೋದಿಲ್ಲ. ಆಗಾಗ ನೀರು ಕುಡೀತಾನೇ ಇರ್ಬೇಕು ಅನ್ಸುತ್ತೆ. ಎಷ್ಟು ಕುಡಿದ್ರೂ ಉಪಯೋಗ ಇಲ್ಲ. ಅಜೀರ್ಣ ಆಗುತ್ತೆ :- ಕೂತು ನೀರು ಕುಡೀವಾಗ ನಿಮ್ ದೇಹ ರಿಲ್ಯಾಕ್ಸ್ ಆಗಿರುತ್ತೆ, ಆಗ ತಿಂದಿದ್ದು, ಕುಡ್ದಿದ್ದು ಸುಲಭವಾಗಿ ಜೀರ್ಣ ಆಗುತ್ತೆ….
ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…
ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..
ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…