ಸ್ಪೂರ್ತಿ

ತಿಂಗಳಿಗೆ 35 ಸಾವಿರ ದುಡಿಯುತ್ತಿರುವ 3 ನೇ ತರಗತಿ ಓದಿರುವ ಹುಡುಗ, ಹೇಗೆ ಗೊತ್ತಾ.

95

ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು ಹೊಟ್ಟೆ ಪಾಡಿಗಾಗಿ ಏನಾದರು ಮಾಡಲೇಬೇಕಲ್ವಾ ಸರ್ ಎಂದ.. ಈ ಮಾತನ್ನು ಕೇಳಿ ಬೇಸರಗೊಂಡ ಸಾಫ್ಟವೇರ್ ಉದ್ಯಮಿ, ಒಂದು ಸಮೋಸ ಮಾರಿದರೆ ನಿನಗೆ ಎಷ್ಟು ಸಿಗುತ್ತದೆ? ದಿನಕ್ಕೆ ಎಷ್ಟು ಸಮೋಸ ಮಾರ್ತ್ಯಪ್ಪ? ಎಂದು ಕೇಳಿದ. ಇದಕ್ಕೆ ಸಮೋಸ ಮಾರುವವನು, ಸಾರ್ ಒಂದು ಸಮೋಸ ಮಾರಿದರೆ 75 ಪೈಸೆ ಸಿಗುತ್ತದೆ. ಸೀಸನ್ ಸಮಯದಲ್ಲಿ ದಿನಕ್ಕೆ ಮೂರರಿಂದ ಮೂರು ವರೆ ಸಾವಿರ ಮಾರುತ್ತೇನೆ, ಸೀಸನ್ ಇಲ್ಲದಿದ್ದಾಗ ದಿನಕ್ಕೆ ಎರಡು ಸಾವಿರ ಸೇಲ್ ಮಾಡುತ್ತೇನೆ ಎಂದು ಹೇಳಿದ !

ಮನಸಲ್ಲೇ ಯೋಚಿಸದ ಆ ಉಧ್ಯಮಿ ದಿನಕ್ಕೆ ಎರಡು ಸಾವಿರ ಸಮೋಸ ಮಾರಿದರೆ, ಒಂದು ಸಾವಿರದ ಐನೂರು ರೂ ಆದಾಯ, ಅದೇ ತಿಂಗಳಿಗೆ 45 ಸಾವಿರ ! ನನ್ನ ಸಂಬಳ ತಿಂಗಳಿಗೆ ಕೇವಲ 25 ಸಾವಿರ, ನನ್ನ ಕೆಲಸದ ಒತ್ತಡದಲ್ಲಿ ನನ್ನ ನಗುವನ್ನೇ ಮರೆತು ಹೋಗಿದ್ದೇನೆ, ಆದರೆ ಈ ಹುಡುಗ ಹಾಗಲ್ಲ, ಎಂದುಕೊಂಡು ಮತ್ತೇ ಸಮೋಸ ಹುಡುಗನಿಗೆ, ನೀವೆ ಸಮೋಸವನ್ನು ತಯಾರು ಮಾಡುತ್ತೀರ ಎಂದು ಪ್ರಶ್ನಿಸಿದ? ಇದಕ್ಕೆ ಸಮೋಸ ಮಾರುವವನು, ಇಲ್ಲಾ ಸಾರ್ ನಮ್ಮ ಯಜಮಾನ ಬೇರೆಯವರ ಬಳಿ ಕೊಂಡುಕೊಂಡು ನಮಗೆ ಕೊಡುತ್ತಾನೆ ಎಂದು ಹೇಳಿದ.  ಈ ಕೆಲಸ ಬಿಟ್ಟು ಬೇರೆ ಏನು ಮಾಡುತ್ತೀಯಾ? ಎಂದು ಉಧ್ಯಮಿ ಕೇಳಿದ.. ಕಳೆದ ವರ್ಷ ನನ್ನ ಅಕ್ಕನಿಗೆ ಮದುವೆ ಮಾಡಿದೆ, ನಂತರ ನಮ್ಮ ಊರಿನಲ್ಲಿ ಒಂದು ಜಮೀನು ಕೂಡ ಖರೀದಿ ಮಾಡಿದ್ದೇನೆ. ಅದರ ಬೆಲೆ ಈಗ ಸುಮಾರು 15 ಲಕ್ಷವಿದೆ. ಈ ಮಾತನ್ನು ಕೇಳಿ ಆಶ್ಚರ್ಯಚಕಿತನಾದ ಇಂಜಿನಿಯರ್ ನೀನು ಎಲ್ಲಿಯ ತನಕ ವ್ಯಾಸಾಂಗ ಮಾಡಿದ್ದೀಯಾ ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಹುಡುಗ, ಸರ್ ನಾನು ಮೂರನೇ ತರಗತಿವರೆಗೂ ಓದಿದ್ದೇನೆ, ಇದಾದ ಮೇಲೆ ಓದಲು ಸಾಧ್ಯವಾಗಲಿಲ್ಲ ಎಂದು ಹೇಳಿದ, ಇದಕ್ಕೆ ಉಧ್ಯಮಿ ಯಾಕೆ ಮುಂದೆ ಓದಬೇಕು ಅನಿಸಲಿಲ್ಲವಾ? ಸಾರ್ ನನ್ನ ವ್ಯಾಪಾರವನ್ನು ನನ್ನ ಮಕ್ಕಳಿಗೆ ಕೊಡಬಹುದು, ಆದರೆ ನಿಮ್ಮ ಉದ್ಯೋಗ ನಿಮ್ಮ ಮಕ್ಕಳಿಗೆ ಕೊಡಲು ಸಾಧ್ಯವಾಗುವುದಿಲ್ಲ ಅಲ್ಲವಾ? ಇದೇ ನನಗೆ ಜನ್ಮ ಕೊಟ್ಟ ತಂದೆ ಕಲಿಸಿದ ನೀತಿ, ಹಣವನ್ನು ಹೇಗೆ ಸಂಪಾದನೆ ಮಾಡಬೇಕು ಎಂಬುದು ನನಗೆ ಗೊತ್ತಾಗಿದೆ, ಹಾಗಾಗಿ ಓದು ನನಗೆ ಅವಶ್ಯಕತೆ ಇಲ್ಲ. ಸರ್ ನನ್ನ ಸ್ಟೇಷನ್ ಬಂತು ನಾನು ಹೊರಡುತ್ತೇನೆ ಎಂದು ಹೇಳಿ ಹೊರಟು ಬಿಟ್ಟ ಸಮೋಸ ಮಾಡುವ ಹುಡುಗ..

ನೋಡಿದ್ರಲ್ಲ ವಿದ್ಯೆ ಎಂಬುದು ಬರೀ ಜ್ಞಾನಾರ್ಜನೆಗೆ ಮತ್ತು ಒಳ್ಳೆಯ ನಾಗರೀಕನಾಗಿ ಬದುಕಲು, ದಯವಿಟ್ಟು ಓದನ್ನು ವ್ಯವಹಾರಕ್ಕೆ ಉಪಯೋಗಿಸಬೇಡಿ. ವಿದ್ಯೆ ಇಲ್ಲದವರನ್ನು ಕೀಳು ಮಟ್ಟದಲ್ಲಿ ನೋಡಬೇಡಿ, ಓದಿದವನಿಗೆ ಒಂದೇ ಕೆಲಸ, ಓದಾದೇ ಇಲ್ಲದವನಿಗೆ ಮಾಡಿದ್ದೆಲ್ಲಾ ಕೆಲಸಾನೇ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ, ಸುದ್ದಿ, ಸ್ಪೂರ್ತಿ

    ಆಟೋ ಓಡಿಸುತ್ತಿರುವ ಈ ಮಹಿಳೆ ನಿಜಾಂಶ ಹೊರಬರುತ್ತಿದ್ದಂತೆ ಎಲ್ಲರೂ ಶಾಕ್. ಅಸಲಿಗೆ ಈ ಮಹಿಳೆ ಯಾರು?

    ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…

  • ಸುದ್ದಿ

    ನಿಮ್ಮ ಬ್ಯಾಂಕ್ ಖಾತೆಯಲ್ಲಿ ಇರುವ ಹಣ ಎಷ್ಟು ಎಂದು ಅಕ್ಷಯ್ ಕುಮಾರ್ ಕೇಳಿದ ಪ್ರಶ್ನೆಗೆ ಮೋದಿ ಹೇಳಿದ್ದೇನು ಗೊತ್ತಾ?

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…

  • ಸುದ್ದಿ

    750 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿಗೆ ಶಾಶ್ವತ ಕುಡಿಯವ ನೀರು ಯೋಜನೆ…!

    ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್‍ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…

  • ದೇಗುಲ ದರ್ಶನ

    ಮಾಯವಾಗುವ ಶಿವಾಲಯ, ಈ ವಿಸ್ಮಯ ದೇವಾಲಯ ಬಗ್ಗೆ ತಿಳಿಯಿರಿ.

    ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ…

  • ಆರೋಗ್ಯ

    ಚಹಾ ಮತ್ತು ಕಾಫಿ ಪ್ರಿಯರಿಗೆ ಶಾಕಿಂಗ್ ಸುದ್ದಿ, ಓದಿ ಆರೋಗ್ಯ ಕಾಪಾಡಿಕೊಳ್ಳಿ.

    ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…