ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು ಹೊಟ್ಟೆ ಪಾಡಿಗಾಗಿ ಏನಾದರು ಮಾಡಲೇಬೇಕಲ್ವಾ ಸರ್ ಎಂದ.. ಈ ಮಾತನ್ನು ಕೇಳಿ ಬೇಸರಗೊಂಡ ಸಾಫ್ಟವೇರ್ ಉದ್ಯಮಿ, ಒಂದು ಸಮೋಸ ಮಾರಿದರೆ ನಿನಗೆ ಎಷ್ಟು ಸಿಗುತ್ತದೆ? ದಿನಕ್ಕೆ ಎಷ್ಟು ಸಮೋಸ ಮಾರ್ತ್ಯಪ್ಪ? ಎಂದು ಕೇಳಿದ. ಇದಕ್ಕೆ ಸಮೋಸ ಮಾರುವವನು, ಸಾರ್ ಒಂದು ಸಮೋಸ ಮಾರಿದರೆ 75 ಪೈಸೆ ಸಿಗುತ್ತದೆ. ಸೀಸನ್ ಸಮಯದಲ್ಲಿ ದಿನಕ್ಕೆ ಮೂರರಿಂದ ಮೂರು ವರೆ ಸಾವಿರ ಮಾರುತ್ತೇನೆ, ಸೀಸನ್ ಇಲ್ಲದಿದ್ದಾಗ ದಿನಕ್ಕೆ ಎರಡು ಸಾವಿರ ಸೇಲ್ ಮಾಡುತ್ತೇನೆ ಎಂದು ಹೇಳಿದ !

ಮನಸಲ್ಲೇ ಯೋಚಿಸದ ಆ ಉಧ್ಯಮಿ ದಿನಕ್ಕೆ ಎರಡು ಸಾವಿರ ಸಮೋಸ ಮಾರಿದರೆ, ಒಂದು ಸಾವಿರದ ಐನೂರು ರೂ ಆದಾಯ, ಅದೇ ತಿಂಗಳಿಗೆ 45 ಸಾವಿರ ! ನನ್ನ ಸಂಬಳ ತಿಂಗಳಿಗೆ ಕೇವಲ 25 ಸಾವಿರ, ನನ್ನ ಕೆಲಸದ ಒತ್ತಡದಲ್ಲಿ ನನ್ನ ನಗುವನ್ನೇ ಮರೆತು ಹೋಗಿದ್ದೇನೆ, ಆದರೆ ಈ ಹುಡುಗ ಹಾಗಲ್ಲ, ಎಂದುಕೊಂಡು ಮತ್ತೇ ಸಮೋಸ ಹುಡುಗನಿಗೆ, ನೀವೆ ಸಮೋಸವನ್ನು ತಯಾರು ಮಾಡುತ್ತೀರ ಎಂದು ಪ್ರಶ್ನಿಸಿದ? ಇದಕ್ಕೆ ಸಮೋಸ ಮಾರುವವನು, ಇಲ್ಲಾ ಸಾರ್ ನಮ್ಮ ಯಜಮಾನ ಬೇರೆಯವರ ಬಳಿ ಕೊಂಡುಕೊಂಡು ನಮಗೆ ಕೊಡುತ್ತಾನೆ ಎಂದು ಹೇಳಿದ. ಈ ಕೆಲಸ ಬಿಟ್ಟು ಬೇರೆ ಏನು ಮಾಡುತ್ತೀಯಾ? ಎಂದು ಉಧ್ಯಮಿ ಕೇಳಿದ.. ಕಳೆದ ವರ್ಷ ನನ್ನ ಅಕ್ಕನಿಗೆ ಮದುವೆ ಮಾಡಿದೆ, ನಂತರ ನಮ್ಮ ಊರಿನಲ್ಲಿ ಒಂದು ಜಮೀನು ಕೂಡ ಖರೀದಿ ಮಾಡಿದ್ದೇನೆ. ಅದರ ಬೆಲೆ ಈಗ ಸುಮಾರು 15 ಲಕ್ಷವಿದೆ. ಈ ಮಾತನ್ನು ಕೇಳಿ ಆಶ್ಚರ್ಯಚಕಿತನಾದ ಇಂಜಿನಿಯರ್ ನೀನು ಎಲ್ಲಿಯ ತನಕ ವ್ಯಾಸಾಂಗ ಮಾಡಿದ್ದೀಯಾ ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಹುಡುಗ, ಸರ್ ನಾನು ಮೂರನೇ ತರಗತಿವರೆಗೂ ಓದಿದ್ದೇನೆ, ಇದಾದ ಮೇಲೆ ಓದಲು ಸಾಧ್ಯವಾಗಲಿಲ್ಲ ಎಂದು ಹೇಳಿದ, ಇದಕ್ಕೆ ಉಧ್ಯಮಿ ಯಾಕೆ ಮುಂದೆ ಓದಬೇಕು ಅನಿಸಲಿಲ್ಲವಾ? ಸಾರ್ ನನ್ನ ವ್ಯಾಪಾರವನ್ನು ನನ್ನ ಮಕ್ಕಳಿಗೆ ಕೊಡಬಹುದು, ಆದರೆ ನಿಮ್ಮ ಉದ್ಯೋಗ ನಿಮ್ಮ ಮಕ್ಕಳಿಗೆ ಕೊಡಲು ಸಾಧ್ಯವಾಗುವುದಿಲ್ಲ ಅಲ್ಲವಾ? ಇದೇ ನನಗೆ ಜನ್ಮ ಕೊಟ್ಟ ತಂದೆ ಕಲಿಸಿದ ನೀತಿ, ಹಣವನ್ನು ಹೇಗೆ ಸಂಪಾದನೆ ಮಾಡಬೇಕು ಎಂಬುದು ನನಗೆ ಗೊತ್ತಾಗಿದೆ, ಹಾಗಾಗಿ ಓದು ನನಗೆ ಅವಶ್ಯಕತೆ ಇಲ್ಲ. ಸರ್ ನನ್ನ ಸ್ಟೇಷನ್ ಬಂತು ನಾನು ಹೊರಡುತ್ತೇನೆ ಎಂದು ಹೇಳಿ ಹೊರಟು ಬಿಟ್ಟ ಸಮೋಸ ಮಾಡುವ ಹುಡುಗ..

ನೋಡಿದ್ರಲ್ಲ ವಿದ್ಯೆ ಎಂಬುದು ಬರೀ ಜ್ಞಾನಾರ್ಜನೆಗೆ ಮತ್ತು ಒಳ್ಳೆಯ ನಾಗರೀಕನಾಗಿ ಬದುಕಲು, ದಯವಿಟ್ಟು ಓದನ್ನು ವ್ಯವಹಾರಕ್ಕೆ ಉಪಯೋಗಿಸಬೇಡಿ. ವಿದ್ಯೆ ಇಲ್ಲದವರನ್ನು ಕೀಳು ಮಟ್ಟದಲ್ಲಿ ನೋಡಬೇಡಿ, ಓದಿದವನಿಗೆ ಒಂದೇ ಕೆಲಸ, ಓದಾದೇ ಇಲ್ಲದವನಿಗೆ ಮಾಡಿದ್ದೆಲ್ಲಾ ಕೆಲಸಾನೇ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶನಿವಾರ ಬೆಳಗ್ಗೆ 8ರ
ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ.
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.
ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ
ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…
ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ| 2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ| ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…