ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು ಹೊಟ್ಟೆ ಪಾಡಿಗಾಗಿ ಏನಾದರು ಮಾಡಲೇಬೇಕಲ್ವಾ ಸರ್ ಎಂದ.. ಈ ಮಾತನ್ನು ಕೇಳಿ ಬೇಸರಗೊಂಡ ಸಾಫ್ಟವೇರ್ ಉದ್ಯಮಿ, ಒಂದು ಸಮೋಸ ಮಾರಿದರೆ ನಿನಗೆ ಎಷ್ಟು ಸಿಗುತ್ತದೆ? ದಿನಕ್ಕೆ ಎಷ್ಟು ಸಮೋಸ ಮಾರ್ತ್ಯಪ್ಪ? ಎಂದು ಕೇಳಿದ. ಇದಕ್ಕೆ ಸಮೋಸ ಮಾರುವವನು, ಸಾರ್ ಒಂದು ಸಮೋಸ ಮಾರಿದರೆ 75 ಪೈಸೆ ಸಿಗುತ್ತದೆ. ಸೀಸನ್ ಸಮಯದಲ್ಲಿ ದಿನಕ್ಕೆ ಮೂರರಿಂದ ಮೂರು ವರೆ ಸಾವಿರ ಮಾರುತ್ತೇನೆ, ಸೀಸನ್ ಇಲ್ಲದಿದ್ದಾಗ ದಿನಕ್ಕೆ ಎರಡು ಸಾವಿರ ಸೇಲ್ ಮಾಡುತ್ತೇನೆ ಎಂದು ಹೇಳಿದ !

ಮನಸಲ್ಲೇ ಯೋಚಿಸದ ಆ ಉಧ್ಯಮಿ ದಿನಕ್ಕೆ ಎರಡು ಸಾವಿರ ಸಮೋಸ ಮಾರಿದರೆ, ಒಂದು ಸಾವಿರದ ಐನೂರು ರೂ ಆದಾಯ, ಅದೇ ತಿಂಗಳಿಗೆ 45 ಸಾವಿರ ! ನನ್ನ ಸಂಬಳ ತಿಂಗಳಿಗೆ ಕೇವಲ 25 ಸಾವಿರ, ನನ್ನ ಕೆಲಸದ ಒತ್ತಡದಲ್ಲಿ ನನ್ನ ನಗುವನ್ನೇ ಮರೆತು ಹೋಗಿದ್ದೇನೆ, ಆದರೆ ಈ ಹುಡುಗ ಹಾಗಲ್ಲ, ಎಂದುಕೊಂಡು ಮತ್ತೇ ಸಮೋಸ ಹುಡುಗನಿಗೆ, ನೀವೆ ಸಮೋಸವನ್ನು ತಯಾರು ಮಾಡುತ್ತೀರ ಎಂದು ಪ್ರಶ್ನಿಸಿದ? ಇದಕ್ಕೆ ಸಮೋಸ ಮಾರುವವನು, ಇಲ್ಲಾ ಸಾರ್ ನಮ್ಮ ಯಜಮಾನ ಬೇರೆಯವರ ಬಳಿ ಕೊಂಡುಕೊಂಡು ನಮಗೆ ಕೊಡುತ್ತಾನೆ ಎಂದು ಹೇಳಿದ. ಈ ಕೆಲಸ ಬಿಟ್ಟು ಬೇರೆ ಏನು ಮಾಡುತ್ತೀಯಾ? ಎಂದು ಉಧ್ಯಮಿ ಕೇಳಿದ.. ಕಳೆದ ವರ್ಷ ನನ್ನ ಅಕ್ಕನಿಗೆ ಮದುವೆ ಮಾಡಿದೆ, ನಂತರ ನಮ್ಮ ಊರಿನಲ್ಲಿ ಒಂದು ಜಮೀನು ಕೂಡ ಖರೀದಿ ಮಾಡಿದ್ದೇನೆ. ಅದರ ಬೆಲೆ ಈಗ ಸುಮಾರು 15 ಲಕ್ಷವಿದೆ. ಈ ಮಾತನ್ನು ಕೇಳಿ ಆಶ್ಚರ್ಯಚಕಿತನಾದ ಇಂಜಿನಿಯರ್ ನೀನು ಎಲ್ಲಿಯ ತನಕ ವ್ಯಾಸಾಂಗ ಮಾಡಿದ್ದೀಯಾ ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಹುಡುಗ, ಸರ್ ನಾನು ಮೂರನೇ ತರಗತಿವರೆಗೂ ಓದಿದ್ದೇನೆ, ಇದಾದ ಮೇಲೆ ಓದಲು ಸಾಧ್ಯವಾಗಲಿಲ್ಲ ಎಂದು ಹೇಳಿದ, ಇದಕ್ಕೆ ಉಧ್ಯಮಿ ಯಾಕೆ ಮುಂದೆ ಓದಬೇಕು ಅನಿಸಲಿಲ್ಲವಾ? ಸಾರ್ ನನ್ನ ವ್ಯಾಪಾರವನ್ನು ನನ್ನ ಮಕ್ಕಳಿಗೆ ಕೊಡಬಹುದು, ಆದರೆ ನಿಮ್ಮ ಉದ್ಯೋಗ ನಿಮ್ಮ ಮಕ್ಕಳಿಗೆ ಕೊಡಲು ಸಾಧ್ಯವಾಗುವುದಿಲ್ಲ ಅಲ್ಲವಾ? ಇದೇ ನನಗೆ ಜನ್ಮ ಕೊಟ್ಟ ತಂದೆ ಕಲಿಸಿದ ನೀತಿ, ಹಣವನ್ನು ಹೇಗೆ ಸಂಪಾದನೆ ಮಾಡಬೇಕು ಎಂಬುದು ನನಗೆ ಗೊತ್ತಾಗಿದೆ, ಹಾಗಾಗಿ ಓದು ನನಗೆ ಅವಶ್ಯಕತೆ ಇಲ್ಲ. ಸರ್ ನನ್ನ ಸ್ಟೇಷನ್ ಬಂತು ನಾನು ಹೊರಡುತ್ತೇನೆ ಎಂದು ಹೇಳಿ ಹೊರಟು ಬಿಟ್ಟ ಸಮೋಸ ಮಾಡುವ ಹುಡುಗ..

ನೋಡಿದ್ರಲ್ಲ ವಿದ್ಯೆ ಎಂಬುದು ಬರೀ ಜ್ಞಾನಾರ್ಜನೆಗೆ ಮತ್ತು ಒಳ್ಳೆಯ ನಾಗರೀಕನಾಗಿ ಬದುಕಲು, ದಯವಿಟ್ಟು ಓದನ್ನು ವ್ಯವಹಾರಕ್ಕೆ ಉಪಯೋಗಿಸಬೇಡಿ. ವಿದ್ಯೆ ಇಲ್ಲದವರನ್ನು ಕೀಳು ಮಟ್ಟದಲ್ಲಿ ನೋಡಬೇಡಿ, ಓದಿದವನಿಗೆ ಒಂದೇ ಕೆಲಸ, ಓದಾದೇ ಇಲ್ಲದವನಿಗೆ ಮಾಡಿದ್ದೆಲ್ಲಾ ಕೆಲಸಾನೇ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…
ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…
ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ ನಡೆದ ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…