ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
4 ಬಾಲ್ಗಳಿಗೆ 92 ರನ್ಗಳನ್ನು ನೀಡಿದ ಬೌಲರ್ ಸುಜೊನ್ ಮಹಮ್ಮದ್ ಅವರ ಮೇಲೆ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ 10 ವರ್ಷಗಳ ಕಾಲ ನಿಷೇಧ ಹೇರಿ ಆದೇಶ ಹೊರಡಿಸಿದೆ.
ಅಂದು ನಡೆದ ಮ್ಯಾಚ್ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.
ಢಾಕಾ ಸೆಕೆಂಡ್ ಡಿವಿಶನ್ ಲೀಗ್ ನಲ್ಲಿ ನಡೆದ 50 ಓವರ್ ಗಳ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಾಲ್ಮಾಟಿಯಾ ಕ್ಲಬ್ 14 ಓವರ್ ಗಳಲ್ಲಿ ಕೇವಲ 88 ರನ್ ಗಳಿಸಿ ಆಲೌಟಾಯ್ತು. 89 ರನ್ ಗಳ ಗೆಲುವಿನ ಗುರಿ ಪಡೆದ ಎದುರಾಳಿ ತಂಡ ಅಕ್ಸಿಯೋಮ್ ಕ್ರಿಕೆಟರ್ಸ್ ಕೇವಲ 4 ಬಾಲ್ ಗಳಲ್ಲಿ 92 ರನ್ ಬಾರಿಸಿತ್ತು. ಲಾಲ್ಮಾಟಿಯಾ ತಂಡದ ಬೌಲರ್ ಸುಜೊನ್ ಮಹಮ್ಮದ್ 13 ವೈಡ್ ಮತ್ತು 3 ನೋಬಾಲ್ ಎಸೆಯುವ ಮೂಲಕ ವಿರೋಧಿ ತಂಡದ ಗೆಲುವಿಗೆ ಕಾರಣರಾಗಿದ್ದರು.
ಮೊದಲ ಓವರ್ ನಲ್ಲಿ ಬೌಲರ್ ಎಸೆದ 13 ವೈಡ್ ಗಳನ್ನು ಕೀಪರ್ ಹಿಡಿಯುವ ಪ್ರಯತ್ನವನ್ನೇ ಮಾಡದೇ ಅವೆಲ್ಲವೂ ಬೌಂಡರಿ ಗೆರೆ ದಾಟಿತ್ತು. ಪರಿಣಾಮ ವೈಡ್ ಗಳಿಂದ 65 ರನ್ಗಳು ಹರಿದು ಬಂದರೆ, ಅದೇ ಓವರ್ ನಲ್ಲಿ ಬಂದ 3 ನೋಬಾಲ್ ಕೂಡ ಬೌಂಡರಿ ಗೆರೆ ದಾಟಿತ್ತು. ಇದರಿಂದಲೂ 15 ರನ್ ಗಳು ಖಾತೆಗೆ ಸೇರಿತ್ತು. ಈ ರನ್ ಗಳ ತಂಡ ಆರಂಭಿಕ ಬ್ಯಾಟ್ಸ್ಮನ್ ಮೂರು ಎಸೆತಗಳಲ್ಲಿ ಸತತ ಮೂರು ಬೌಂಡರಿ ಹೊಡೆದ್ದರು. ಇದರಿಂದ ತಂಡಕ್ಕೆ 12 ರನ್ ಬಂದಿತ್ತು. ಅಂತಿಮವಾಗಿ ಆಕ್ಸಿಯಮ್ ಕ್ರಿಕೆಟರ್ಸ್ ತಂಡ ಕೇವಲ 4 ಎಸೆತಗಳಲ್ಲಿ 92 ಪೇರಿಸಿ 10 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿತ್ತು.
ಎಂಥ ಬೌಲರ್’ನೇ ಆದರೂ ಇಷ್ಟೊಂದು ಪ್ರಮಾಣದಲ್ಲಿ ವೈಡ್ ಮತ್ತು ನೋಬಾಲ್’ಗಳನ್ನು ಎಸೆಯಲು ಸಾಧ್ಯವಿಲ್ಲ. ಆಕ್ಸಿಯಾಮ್ ಮತ್ತು ಲಾಲ್ಮಾಟಿಯಾ ನಡುವಿನ ಈ ಪಂದ್ಯ ಹಲವು ವಿವಾದಗಳಿಂದ ಕೂಡಿತ್ತು. ಪಂದ್ಯ ಅಂಪೈರ್’ಗಳು ಆರಂಭದಿಂದಲೂ ಪಕ್ಷಪಾತಿ ಧೋರಣೆ ಹೊಂದಿದ್ದರು ಎಂಬುದು ಲಾಲ್ಮಾಟಿಯಾ ತಂಡದ ಆರೋಪಿಸಿತ್ತು.
ಟಾಸ್ ವೇಳೆ ತಮ್ಮ ತಂಡದ ಕ್ಯಾಪ್ಟನ್’ಗೆ ಕಾಯಿನ್ ನೋಡಲೂ ಅವಕಾಶ ಕೊಡದೇ ಮೊದಲು ಬ್ಯಾಟಿಂಗ್ ಕಳುಹಿಸಲಾಯಿತು. 14 ಓವರ್’ಗಳ ಇನ್ನಿಂಗ್ಸಲ್ಲಿ ಅಂಪೈರ್’ಗಳು ತಮ್ಮ ತಂಡದ ವಿರುದ್ಧ ಅನೇಕ ತೀರ್ಪುಗಳನ್ನು ಕೊಟ್ಟು ಎಂದು ಲಾಲ್ಮಾಟಿಯಾ ಆಟಗಾರರ ಆರೋಪ ಮಾಡಿದ್ದರು.
ಇಡೀ ಸರಣಿಯಲ್ಲಿ ಲಾಲ್ಮಾಟಿಯಾ ತಂಡದ ವಿರುದ್ಧ ಅಂಪೈರ್ ಗಳು ತಪ್ಪು ನಿರ್ಣಯ ನೀಡಿದ್ದಾರೆ ಎಂದು ಆರೋಪಗಳು ಎಲ್ಲಡೆಯಿಂದ ಕೇಳಿ ಬಂದಿದ್ದವು. ಈ ಬಗ್ಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನಿಖೆಗೆ ಮುಂದಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್ನಲ್ಲಿ ನೋಟುಗಳನ್ನು ತೆಗೆದುಕೊಂಡು…
ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ
ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…
ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು…
ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….
ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಜೋಸ್ ಬಟ್ಲರ್, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.