ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
4 ಬಾಲ್ಗಳಿಗೆ 92 ರನ್ಗಳನ್ನು ನೀಡಿದ ಬೌಲರ್ ಸುಜೊನ್ ಮಹಮ್ಮದ್ ಅವರ ಮೇಲೆ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ 10 ವರ್ಷಗಳ ಕಾಲ ನಿಷೇಧ ಹೇರಿ ಆದೇಶ ಹೊರಡಿಸಿದೆ.
ಅಂದು ನಡೆದ ಮ್ಯಾಚ್ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.
ಢಾಕಾ ಸೆಕೆಂಡ್ ಡಿವಿಶನ್ ಲೀಗ್ ನಲ್ಲಿ ನಡೆದ 50 ಓವರ್ ಗಳ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಾಲ್ಮಾಟಿಯಾ ಕ್ಲಬ್ 14 ಓವರ್ ಗಳಲ್ಲಿ ಕೇವಲ 88 ರನ್ ಗಳಿಸಿ ಆಲೌಟಾಯ್ತು. 89 ರನ್ ಗಳ ಗೆಲುವಿನ ಗುರಿ ಪಡೆದ ಎದುರಾಳಿ ತಂಡ ಅಕ್ಸಿಯೋಮ್ ಕ್ರಿಕೆಟರ್ಸ್ ಕೇವಲ 4 ಬಾಲ್ ಗಳಲ್ಲಿ 92 ರನ್ ಬಾರಿಸಿತ್ತು. ಲಾಲ್ಮಾಟಿಯಾ ತಂಡದ ಬೌಲರ್ ಸುಜೊನ್ ಮಹಮ್ಮದ್ 13 ವೈಡ್ ಮತ್ತು 3 ನೋಬಾಲ್ ಎಸೆಯುವ ಮೂಲಕ ವಿರೋಧಿ ತಂಡದ ಗೆಲುವಿಗೆ ಕಾರಣರಾಗಿದ್ದರು.
ಮೊದಲ ಓವರ್ ನಲ್ಲಿ ಬೌಲರ್ ಎಸೆದ 13 ವೈಡ್ ಗಳನ್ನು ಕೀಪರ್ ಹಿಡಿಯುವ ಪ್ರಯತ್ನವನ್ನೇ ಮಾಡದೇ ಅವೆಲ್ಲವೂ ಬೌಂಡರಿ ಗೆರೆ ದಾಟಿತ್ತು. ಪರಿಣಾಮ ವೈಡ್ ಗಳಿಂದ 65 ರನ್ಗಳು ಹರಿದು ಬಂದರೆ, ಅದೇ ಓವರ್ ನಲ್ಲಿ ಬಂದ 3 ನೋಬಾಲ್ ಕೂಡ ಬೌಂಡರಿ ಗೆರೆ ದಾಟಿತ್ತು. ಇದರಿಂದಲೂ 15 ರನ್ ಗಳು ಖಾತೆಗೆ ಸೇರಿತ್ತು. ಈ ರನ್ ಗಳ ತಂಡ ಆರಂಭಿಕ ಬ್ಯಾಟ್ಸ್ಮನ್ ಮೂರು ಎಸೆತಗಳಲ್ಲಿ ಸತತ ಮೂರು ಬೌಂಡರಿ ಹೊಡೆದ್ದರು. ಇದರಿಂದ ತಂಡಕ್ಕೆ 12 ರನ್ ಬಂದಿತ್ತು. ಅಂತಿಮವಾಗಿ ಆಕ್ಸಿಯಮ್ ಕ್ರಿಕೆಟರ್ಸ್ ತಂಡ ಕೇವಲ 4 ಎಸೆತಗಳಲ್ಲಿ 92 ಪೇರಿಸಿ 10 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿತ್ತು.
ಎಂಥ ಬೌಲರ್’ನೇ ಆದರೂ ಇಷ್ಟೊಂದು ಪ್ರಮಾಣದಲ್ಲಿ ವೈಡ್ ಮತ್ತು ನೋಬಾಲ್’ಗಳನ್ನು ಎಸೆಯಲು ಸಾಧ್ಯವಿಲ್ಲ. ಆಕ್ಸಿಯಾಮ್ ಮತ್ತು ಲಾಲ್ಮಾಟಿಯಾ ನಡುವಿನ ಈ ಪಂದ್ಯ ಹಲವು ವಿವಾದಗಳಿಂದ ಕೂಡಿತ್ತು. ಪಂದ್ಯ ಅಂಪೈರ್’ಗಳು ಆರಂಭದಿಂದಲೂ ಪಕ್ಷಪಾತಿ ಧೋರಣೆ ಹೊಂದಿದ್ದರು ಎಂಬುದು ಲಾಲ್ಮಾಟಿಯಾ ತಂಡದ ಆರೋಪಿಸಿತ್ತು.
ಟಾಸ್ ವೇಳೆ ತಮ್ಮ ತಂಡದ ಕ್ಯಾಪ್ಟನ್’ಗೆ ಕಾಯಿನ್ ನೋಡಲೂ ಅವಕಾಶ ಕೊಡದೇ ಮೊದಲು ಬ್ಯಾಟಿಂಗ್ ಕಳುಹಿಸಲಾಯಿತು. 14 ಓವರ್’ಗಳ ಇನ್ನಿಂಗ್ಸಲ್ಲಿ ಅಂಪೈರ್’ಗಳು ತಮ್ಮ ತಂಡದ ವಿರುದ್ಧ ಅನೇಕ ತೀರ್ಪುಗಳನ್ನು ಕೊಟ್ಟು ಎಂದು ಲಾಲ್ಮಾಟಿಯಾ ಆಟಗಾರರ ಆರೋಪ ಮಾಡಿದ್ದರು.
ಇಡೀ ಸರಣಿಯಲ್ಲಿ ಲಾಲ್ಮಾಟಿಯಾ ತಂಡದ ವಿರುದ್ಧ ಅಂಪೈರ್ ಗಳು ತಪ್ಪು ನಿರ್ಣಯ ನೀಡಿದ್ದಾರೆ ಎಂದು ಆರೋಪಗಳು ಎಲ್ಲಡೆಯಿಂದ ಕೇಳಿ ಬಂದಿದ್ದವು. ಈ ಬಗ್ಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನಿಖೆಗೆ ಮುಂದಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.
ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ
ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು