ಕ್ರೀಡೆ

4 ಬಾಲ್‍ಗಳಿಗೆ ಬರೋಬ್ಬರಿ 92 ರನ್ ನೀಡಿದ್ದ ಬೌಲರ್‍ಗೆ 10 ವರ್ಷ ನಿಷೇಧ..!ಇದು ಹೇಗಾಯ್ತು ಗೊತ್ತಾ..?

3065

4 ಬಾಲ್‍ಗಳಿಗೆ 92 ರನ್‍ಗಳನ್ನು ನೀಡಿದ ಬೌಲರ್ ಸುಜೊನ್ ಮಹಮ್ಮದ್ ಅವರ ಮೇಲೆ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ 10 ವರ್ಷಗಳ ಕಾಲ ನಿಷೇಧ ಹೇರಿ ಆದೇಶ ಹೊರಡಿಸಿದೆ.

ಅಂದು ನಡೆದ ಮ್ಯಾಚ್‍ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.

                            ಮೂಲ

ಅಂದು ನಡೆದಿದ್ದೇನು?

ಢಾಕಾ ಸೆಕೆಂಡ್ ಡಿವಿಶನ್ ಲೀಗ್ ನಲ್ಲಿ ನಡೆದ 50 ಓವರ್ ಗಳ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಾಲ್ಮಾಟಿಯಾ ಕ್ಲಬ್ 14 ಓವರ್ ಗಳಲ್ಲಿ ಕೇವಲ 88 ರನ್ ಗಳಿಸಿ ಆಲೌಟಾಯ್ತು. 89 ರನ್ ಗಳ ಗೆಲುವಿನ ಗುರಿ ಪಡೆದ ಎದುರಾಳಿ ತಂಡ ಅಕ್ಸಿಯೋಮ್ ಕ್ರಿಕೆಟರ್ಸ್ ಕೇವಲ 4 ಬಾಲ್ ಗಳಲ್ಲಿ 92 ರನ್ ಬಾರಿಸಿತ್ತು. ಲಾಲ್ಮಾಟಿಯಾ ತಂಡದ ಬೌಲರ್ ಸುಜೊನ್ ಮಹಮ್ಮದ್ 13 ವೈಡ್ ಮತ್ತು 3 ನೋಬಾಲ್ ಎಸೆಯುವ ಮೂಲಕ ವಿರೋಧಿ ತಂಡದ ಗೆಲುವಿಗೆ ಕಾರಣರಾಗಿದ್ದರು.

ಮೊದಲ ಓವರ್ ನಲ್ಲಿ ಬೌಲರ್ ಎಸೆದ 13 ವೈಡ್ ಗಳನ್ನು ಕೀಪರ್ ಹಿಡಿಯುವ ಪ್ರಯತ್ನವನ್ನೇ ಮಾಡದೇ ಅವೆಲ್ಲವೂ ಬೌಂಡರಿ ಗೆರೆ ದಾಟಿತ್ತು. ಪರಿಣಾಮ ವೈಡ್ ಗಳಿಂದ 65 ರನ್‍ಗಳು ಹರಿದು ಬಂದರೆ, ಅದೇ ಓವರ್ ನಲ್ಲಿ ಬಂದ 3 ನೋಬಾಲ್ ಕೂಡ ಬೌಂಡರಿ ಗೆರೆ ದಾಟಿತ್ತು. ಇದರಿಂದಲೂ 15 ರನ್ ಗಳು ಖಾತೆಗೆ ಸೇರಿತ್ತು. ಈ ರನ್ ಗಳ ತಂಡ ಆರಂಭಿಕ ಬ್ಯಾಟ್ಸ್‍ಮನ್ ಮೂರು ಎಸೆತಗಳಲ್ಲಿ ಸತತ ಮೂರು ಬೌಂಡರಿ ಹೊಡೆದ್ದರು. ಇದರಿಂದ ತಂಡಕ್ಕೆ 12 ರನ್ ಬಂದಿತ್ತು. ಅಂತಿಮವಾಗಿ ಆಕ್ಸಿಯಮ್ ಕ್ರಿಕೆಟರ್ಸ್ ತಂಡ ಕೇವಲ 4 ಎಸೆತಗಳಲ್ಲಿ 92 ಪೇರಿಸಿ 10 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿತ್ತು.

ಲಾಲ್ಮಾಟಿಯಾ ತಂಡದ ಆರೋಪ ಏನು?

ಎಂಥ ಬೌಲರ್’ನೇ ಆದರೂ ಇಷ್ಟೊಂದು ಪ್ರಮಾಣದಲ್ಲಿ ವೈಡ್ ಮತ್ತು ನೋಬಾಲ್’ಗಳನ್ನು ಎಸೆಯಲು ಸಾಧ್ಯವಿಲ್ಲ. ಆಕ್ಸಿಯಾಮ್ ಮತ್ತು ಲಾಲ್ಮಾಟಿಯಾ ನಡುವಿನ ಈ ಪಂದ್ಯ ಹಲವು ವಿವಾದಗಳಿಂದ ಕೂಡಿತ್ತು. ಪಂದ್ಯ ಅಂಪೈರ್’ಗಳು ಆರಂಭದಿಂದಲೂ ಪಕ್ಷಪಾತಿ ಧೋರಣೆ ಹೊಂದಿದ್ದರು ಎಂಬುದು ಲಾಲ್ಮಾಟಿಯಾ ತಂಡದ ಆರೋಪಿಸಿತ್ತು.

ಟಾಸ್ ವೇಳೆ ತಮ್ಮ ತಂಡದ ಕ್ಯಾಪ್ಟನ್’ಗೆ ಕಾಯಿನ್ ನೋಡಲೂ ಅವಕಾಶ ಕೊಡದೇ ಮೊದಲು ಬ್ಯಾಟಿಂಗ್ ಕಳುಹಿಸಲಾಯಿತು. 14 ಓವರ್’ಗಳ ಇನ್ನಿಂಗ್ಸಲ್ಲಿ ಅಂಪೈರ್’ಗಳು ತಮ್ಮ ತಂಡದ ವಿರುದ್ಧ ಅನೇಕ ತೀರ್ಪುಗಳನ್ನು ಕೊಟ್ಟು ಎಂದು ಲಾಲ್ಮಾಟಿಯಾ ಆಟಗಾರರ ಆರೋಪ ಮಾಡಿದ್ದರು.

ಇಡೀ ಸರಣಿಯಲ್ಲಿ ಲಾಲ್ಮಾಟಿಯಾ ತಂಡದ ವಿರುದ್ಧ ಅಂಪೈರ್ ಗಳು ತಪ್ಪು ನಿರ್ಣಯ ನೀಡಿದ್ದಾರೆ ಎಂದು ಆರೋಪಗಳು ಎಲ್ಲಡೆಯಿಂದ ಕೇಳಿ ಬಂದಿದ್ದವು. ಈ ಬಗ್ಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನಿಖೆಗೆ ಮುಂದಾಗಿತ್ತು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ದೊಡ್ಮನೆ ಹುಡುಗ ಅಣ್ಣಾವ್ರ ಮೊಮ್ಮಗನ ಮದುವೆ ಸಂಭ್ರಮ ಹೇಗಿತ್ತು ಯಾವೆಲ್ಲಾ ಸ್ಟಾರ್’ಗಳು ಬಂದಿದ್ದರು..ತಿಳಿಯಲು ಈ ಲೇಖನ ಓದಿ…

    ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ‌ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ‌ ತಲೆಮಾರಿನ‌ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…

  • ದೇಶ-ವಿದೇಶ

    ಪೋಷಕರೇ ಹುಷಾರ್!ಈ ಗೇಮ್ ಆಡಿದ್ರೆ ನಿಮ್ಮ ಮಕ್ಕಳು ಪ್ರಾಣ ಕಳೆದುಕೊಳ್ಳಬಹುದು!ಈ ಲೇಖನಿ ಓದಿ, ಎಲ್ಲರಿಗೂ ಶೇರ್ ಮಾಡಿ…

    ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.

  • ಸುದ್ದಿ

    ಟ್ರೆಂಡ್ ಸೃಷ್ಟಿಮಾಡಿದ ಮೋದಿ – ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಮುಗಿಬಿದ್ದ ಯಾತ್ರಿಕರು

    ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ. ಕೇದಾರನಾಥ ಗುಹೆಯಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…

  • ಸುದ್ದಿ

    50 ಸಾವಿರ ಉದ್ಯೋಗಾವಕಾಶವನ್ನು ಸೃಷ್ಟಿಸಿ ಘೋಷಣೆ ಮಾಡಿದ ಮೋದಿ ಸರ್ಕಾರ…!

    ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ.  ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು.  ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…

  • ಉಪಯುಕ್ತ ಮಾಹಿತಿ

    ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

    ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…