ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
4 ಬಾಲ್ಗಳಿಗೆ 92 ರನ್ಗಳನ್ನು ನೀಡಿದ ಬೌಲರ್ ಸುಜೊನ್ ಮಹಮ್ಮದ್ ಅವರ ಮೇಲೆ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ 10 ವರ್ಷಗಳ ಕಾಲ ನಿಷೇಧ ಹೇರಿ ಆದೇಶ ಹೊರಡಿಸಿದೆ.
ಅಂದು ನಡೆದ ಮ್ಯಾಚ್ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.
ಢಾಕಾ ಸೆಕೆಂಡ್ ಡಿವಿಶನ್ ಲೀಗ್ ನಲ್ಲಿ ನಡೆದ 50 ಓವರ್ ಗಳ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಾಲ್ಮಾಟಿಯಾ ಕ್ಲಬ್ 14 ಓವರ್ ಗಳಲ್ಲಿ ಕೇವಲ 88 ರನ್ ಗಳಿಸಿ ಆಲೌಟಾಯ್ತು. 89 ರನ್ ಗಳ ಗೆಲುವಿನ ಗುರಿ ಪಡೆದ ಎದುರಾಳಿ ತಂಡ ಅಕ್ಸಿಯೋಮ್ ಕ್ರಿಕೆಟರ್ಸ್ ಕೇವಲ 4 ಬಾಲ್ ಗಳಲ್ಲಿ 92 ರನ್ ಬಾರಿಸಿತ್ತು. ಲಾಲ್ಮಾಟಿಯಾ ತಂಡದ ಬೌಲರ್ ಸುಜೊನ್ ಮಹಮ್ಮದ್ 13 ವೈಡ್ ಮತ್ತು 3 ನೋಬಾಲ್ ಎಸೆಯುವ ಮೂಲಕ ವಿರೋಧಿ ತಂಡದ ಗೆಲುವಿಗೆ ಕಾರಣರಾಗಿದ್ದರು.
ಮೊದಲ ಓವರ್ ನಲ್ಲಿ ಬೌಲರ್ ಎಸೆದ 13 ವೈಡ್ ಗಳನ್ನು ಕೀಪರ್ ಹಿಡಿಯುವ ಪ್ರಯತ್ನವನ್ನೇ ಮಾಡದೇ ಅವೆಲ್ಲವೂ ಬೌಂಡರಿ ಗೆರೆ ದಾಟಿತ್ತು. ಪರಿಣಾಮ ವೈಡ್ ಗಳಿಂದ 65 ರನ್ಗಳು ಹರಿದು ಬಂದರೆ, ಅದೇ ಓವರ್ ನಲ್ಲಿ ಬಂದ 3 ನೋಬಾಲ್ ಕೂಡ ಬೌಂಡರಿ ಗೆರೆ ದಾಟಿತ್ತು. ಇದರಿಂದಲೂ 15 ರನ್ ಗಳು ಖಾತೆಗೆ ಸೇರಿತ್ತು. ಈ ರನ್ ಗಳ ತಂಡ ಆರಂಭಿಕ ಬ್ಯಾಟ್ಸ್ಮನ್ ಮೂರು ಎಸೆತಗಳಲ್ಲಿ ಸತತ ಮೂರು ಬೌಂಡರಿ ಹೊಡೆದ್ದರು. ಇದರಿಂದ ತಂಡಕ್ಕೆ 12 ರನ್ ಬಂದಿತ್ತು. ಅಂತಿಮವಾಗಿ ಆಕ್ಸಿಯಮ್ ಕ್ರಿಕೆಟರ್ಸ್ ತಂಡ ಕೇವಲ 4 ಎಸೆತಗಳಲ್ಲಿ 92 ಪೇರಿಸಿ 10 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿತ್ತು.
ಎಂಥ ಬೌಲರ್’ನೇ ಆದರೂ ಇಷ್ಟೊಂದು ಪ್ರಮಾಣದಲ್ಲಿ ವೈಡ್ ಮತ್ತು ನೋಬಾಲ್’ಗಳನ್ನು ಎಸೆಯಲು ಸಾಧ್ಯವಿಲ್ಲ. ಆಕ್ಸಿಯಾಮ್ ಮತ್ತು ಲಾಲ್ಮಾಟಿಯಾ ನಡುವಿನ ಈ ಪಂದ್ಯ ಹಲವು ವಿವಾದಗಳಿಂದ ಕೂಡಿತ್ತು. ಪಂದ್ಯ ಅಂಪೈರ್’ಗಳು ಆರಂಭದಿಂದಲೂ ಪಕ್ಷಪಾತಿ ಧೋರಣೆ ಹೊಂದಿದ್ದರು ಎಂಬುದು ಲಾಲ್ಮಾಟಿಯಾ ತಂಡದ ಆರೋಪಿಸಿತ್ತು.
ಟಾಸ್ ವೇಳೆ ತಮ್ಮ ತಂಡದ ಕ್ಯಾಪ್ಟನ್’ಗೆ ಕಾಯಿನ್ ನೋಡಲೂ ಅವಕಾಶ ಕೊಡದೇ ಮೊದಲು ಬ್ಯಾಟಿಂಗ್ ಕಳುಹಿಸಲಾಯಿತು. 14 ಓವರ್’ಗಳ ಇನ್ನಿಂಗ್ಸಲ್ಲಿ ಅಂಪೈರ್’ಗಳು ತಮ್ಮ ತಂಡದ ವಿರುದ್ಧ ಅನೇಕ ತೀರ್ಪುಗಳನ್ನು ಕೊಟ್ಟು ಎಂದು ಲಾಲ್ಮಾಟಿಯಾ ಆಟಗಾರರ ಆರೋಪ ಮಾಡಿದ್ದರು.
ಇಡೀ ಸರಣಿಯಲ್ಲಿ ಲಾಲ್ಮಾಟಿಯಾ ತಂಡದ ವಿರುದ್ಧ ಅಂಪೈರ್ ಗಳು ತಪ್ಪು ನಿರ್ಣಯ ನೀಡಿದ್ದಾರೆ ಎಂದು ಆರೋಪಗಳು ಎಲ್ಲಡೆಯಿಂದ ಕೇಳಿ ಬಂದಿದ್ದವು. ಈ ಬಗ್ಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನಿಖೆಗೆ ಮುಂದಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…
ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.