ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
4 ಬಾಲ್ಗಳಿಗೆ 92 ರನ್ಗಳನ್ನು ನೀಡಿದ ಬೌಲರ್ ಸುಜೊನ್ ಮಹಮ್ಮದ್ ಅವರ ಮೇಲೆ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ 10 ವರ್ಷಗಳ ಕಾಲ ನಿಷೇಧ ಹೇರಿ ಆದೇಶ ಹೊರಡಿಸಿದೆ.
ಅಂದು ನಡೆದ ಮ್ಯಾಚ್ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.
ಢಾಕಾ ಸೆಕೆಂಡ್ ಡಿವಿಶನ್ ಲೀಗ್ ನಲ್ಲಿ ನಡೆದ 50 ಓವರ್ ಗಳ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಾಲ್ಮಾಟಿಯಾ ಕ್ಲಬ್ 14 ಓವರ್ ಗಳಲ್ಲಿ ಕೇವಲ 88 ರನ್ ಗಳಿಸಿ ಆಲೌಟಾಯ್ತು. 89 ರನ್ ಗಳ ಗೆಲುವಿನ ಗುರಿ ಪಡೆದ ಎದುರಾಳಿ ತಂಡ ಅಕ್ಸಿಯೋಮ್ ಕ್ರಿಕೆಟರ್ಸ್ ಕೇವಲ 4 ಬಾಲ್ ಗಳಲ್ಲಿ 92 ರನ್ ಬಾರಿಸಿತ್ತು. ಲಾಲ್ಮಾಟಿಯಾ ತಂಡದ ಬೌಲರ್ ಸುಜೊನ್ ಮಹಮ್ಮದ್ 13 ವೈಡ್ ಮತ್ತು 3 ನೋಬಾಲ್ ಎಸೆಯುವ ಮೂಲಕ ವಿರೋಧಿ ತಂಡದ ಗೆಲುವಿಗೆ ಕಾರಣರಾಗಿದ್ದರು.
ಮೊದಲ ಓವರ್ ನಲ್ಲಿ ಬೌಲರ್ ಎಸೆದ 13 ವೈಡ್ ಗಳನ್ನು ಕೀಪರ್ ಹಿಡಿಯುವ ಪ್ರಯತ್ನವನ್ನೇ ಮಾಡದೇ ಅವೆಲ್ಲವೂ ಬೌಂಡರಿ ಗೆರೆ ದಾಟಿತ್ತು. ಪರಿಣಾಮ ವೈಡ್ ಗಳಿಂದ 65 ರನ್ಗಳು ಹರಿದು ಬಂದರೆ, ಅದೇ ಓವರ್ ನಲ್ಲಿ ಬಂದ 3 ನೋಬಾಲ್ ಕೂಡ ಬೌಂಡರಿ ಗೆರೆ ದಾಟಿತ್ತು. ಇದರಿಂದಲೂ 15 ರನ್ ಗಳು ಖಾತೆಗೆ ಸೇರಿತ್ತು. ಈ ರನ್ ಗಳ ತಂಡ ಆರಂಭಿಕ ಬ್ಯಾಟ್ಸ್ಮನ್ ಮೂರು ಎಸೆತಗಳಲ್ಲಿ ಸತತ ಮೂರು ಬೌಂಡರಿ ಹೊಡೆದ್ದರು. ಇದರಿಂದ ತಂಡಕ್ಕೆ 12 ರನ್ ಬಂದಿತ್ತು. ಅಂತಿಮವಾಗಿ ಆಕ್ಸಿಯಮ್ ಕ್ರಿಕೆಟರ್ಸ್ ತಂಡ ಕೇವಲ 4 ಎಸೆತಗಳಲ್ಲಿ 92 ಪೇರಿಸಿ 10 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿತ್ತು.
ಎಂಥ ಬೌಲರ್’ನೇ ಆದರೂ ಇಷ್ಟೊಂದು ಪ್ರಮಾಣದಲ್ಲಿ ವೈಡ್ ಮತ್ತು ನೋಬಾಲ್’ಗಳನ್ನು ಎಸೆಯಲು ಸಾಧ್ಯವಿಲ್ಲ. ಆಕ್ಸಿಯಾಮ್ ಮತ್ತು ಲಾಲ್ಮಾಟಿಯಾ ನಡುವಿನ ಈ ಪಂದ್ಯ ಹಲವು ವಿವಾದಗಳಿಂದ ಕೂಡಿತ್ತು. ಪಂದ್ಯ ಅಂಪೈರ್’ಗಳು ಆರಂಭದಿಂದಲೂ ಪಕ್ಷಪಾತಿ ಧೋರಣೆ ಹೊಂದಿದ್ದರು ಎಂಬುದು ಲಾಲ್ಮಾಟಿಯಾ ತಂಡದ ಆರೋಪಿಸಿತ್ತು.
ಟಾಸ್ ವೇಳೆ ತಮ್ಮ ತಂಡದ ಕ್ಯಾಪ್ಟನ್’ಗೆ ಕಾಯಿನ್ ನೋಡಲೂ ಅವಕಾಶ ಕೊಡದೇ ಮೊದಲು ಬ್ಯಾಟಿಂಗ್ ಕಳುಹಿಸಲಾಯಿತು. 14 ಓವರ್’ಗಳ ಇನ್ನಿಂಗ್ಸಲ್ಲಿ ಅಂಪೈರ್’ಗಳು ತಮ್ಮ ತಂಡದ ವಿರುದ್ಧ ಅನೇಕ ತೀರ್ಪುಗಳನ್ನು ಕೊಟ್ಟು ಎಂದು ಲಾಲ್ಮಾಟಿಯಾ ಆಟಗಾರರ ಆರೋಪ ಮಾಡಿದ್ದರು.
ಇಡೀ ಸರಣಿಯಲ್ಲಿ ಲಾಲ್ಮಾಟಿಯಾ ತಂಡದ ವಿರುದ್ಧ ಅಂಪೈರ್ ಗಳು ತಪ್ಪು ನಿರ್ಣಯ ನೀಡಿದ್ದಾರೆ ಎಂದು ಆರೋಪಗಳು ಎಲ್ಲಡೆಯಿಂದ ಕೇಳಿ ಬಂದಿದ್ದವು. ಈ ಬಗ್ಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನಿಖೆಗೆ ಮುಂದಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ
ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…
ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.
ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…