ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಕೆಲವೊಂದು ಸಾರಿ ಪೋಲಿಸ್’ರ ಬಗ್ಗೆ ಅದರಲ್ಲೂ ಪೋಲಿಸ್ ಪೇದೆಗಳ ಬಗ್ಗೆ ಅವಹೇಳನವಾಗಿ ಮಾತನಾಡುವುದುಂಟು.
ಆದರೆ ಕೆಲವೊಂದು ಸಮಯಗಳಲ್ಲಿ ಅದೇ ಪೊಲೀಸರು ತಮ್ಮ ಪ್ರಾಣವನ್ನು ಲೆಕ್ಕಿಸದೆ, ಪ್ರಾಣವನ್ನೇ ಪಣಕ್ಕಿಟ್ಟು ಜನರನ್ನು ರಕ್ಷಿಸುತ್ತಾರೆ. ಹೌದು, ಇದೇ ತರ ಘಟನೆಯೊಂದು ಮಧ್ಯಪ್ರದೇಶದ ಚಿತೋರ ಎಂಬ ಹಳ್ಳಿಯಲ್ಲಿ ನಡೆದಿದೆ.
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಅಭಿಷೇಕ್ ಪಟೇಲ್ ಬಾಂಬ್ ಹೊತ್ತುಕೊಂಡು ಓಡಿದ ಪೊಲೀಸ್ ಪೇದೆ.ಶುಕ್ರವಾರ ಮಧ್ಯಪ್ರದೇಶದ, ಚಿತೋರ ಎಂಬ ಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ನಡೆದ ಘಟನೆಯಾದರೂ ಏನು ಗೊತ್ತಾ..!
ಮಧ್ಯಪ್ರದೇಶದ ಚಿತೋರಾದಲ್ಲಿರುವ ಸರ್ಕಾರಿ ಶಾಲೆಯ ಬಳಿ ಶುಕ್ರವಾರ ಬಾಂಬ್ ಪತ್ತೆಯಾಗಿತ್ತು. ಶಾಲಾ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ವಿಚಾರ ತಿಳಿದು ಪೊಲೀಸರ ಜೊತೆ ಕಾನ್ ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅಭಿಷೇಕ್ ಪಟೇಲ್ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.
ನಿಜವಾದ ಸಿಂಗಂ ಅಂದ್ರೆ ಈ ಅಭಿಷೇಕ್ ಪಟೇಲ್..!
ಬಾಂಬ್ ನೋಡಿದ ಕೂಡಲೇ ಪೊಲೀಸರು ಶಾಲೆಯನ್ನು ಮುಚ್ಚುವಂತೆ ಹೇಳಿದರು. ಈ ವೇಳೆ ಬಾಂಬ್ ನಿಷ್ಕ್ರಿಯ ದಳ ಸಹ ಸ್ಥಳಕ್ಕೆ ಆಗಮಿಸಿರಲಿಲ್ಲ. ವಿಚಾರ ತಿಳಿದು ಮಾಧ್ಯಮಗಳು ಸ್ಥಳಕ್ಕೆ ಆಗಮಿಸಿದವು. ಈ ಸಂದರ್ಭದಲ್ಲಿ ಎಲ್ಲರೂ ನೋಡುತ್ತಿದ್ದಂತೆ 40 ವರ್ಷದ ಅಭಿಷೇಕ್ ಪಟೇಲ್ 12 ಇಂಚು ಉದ್ದ ಹಾಗೂ 10ಕೆ.ಜಿ ತೂಕದ ಬಾಂಬನ್ನು ಹೊತ್ತುಕೊಂಡು ಓಡಲು ಆರಂಭಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮದ ಪ್ರತಿನಿಧಿಯೊಬ್ಬರು ವಿಡಿಯೋ ಸೆರೆ ಹಿಡಿದಿದ್ದು, ಈಗ 12 ಸೆಕೆಂಡಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಕ್ಕಳ ಪ್ರಾಣ ಉಳಿಸಲು ಒಂದು ಕಿಲೋ ಮೀಟರ್ ಓಡಿದ ರಿಯಲ್ ಸಿಗಂ!
100 ಸಂಖ್ಯೆಗೆ ಕರೆ ಬಂದ ಹಿನ್ನೆಲೆಯಲ್ಲಿ ನಾವು ಶಾಲೆಗೆ ಬಂದೆವು. ಕೆಲ ತಿಂಗಳ ಹಿಂದೆ ನಡೆದ ಪೊಲೀಸ್ ಆಪರೇಷನ್ ತರಬೇತಿ ಸಮಯದಲ್ಲಿ ಬಾಂಬ್ ಸಿಡಿದರೆ ಸುಮಾರು 500 ಮೀಟರ್ ವ್ಯಾಪ್ತಿಯ ಪ್ರದೇಶಗಳಿಗೆ ಹಾನಿ ಆಗುತ್ತದೆ ಎಂದು ತಿಳಿಸಿದ್ದರು.
ಹೀಗಾಗಿ ಮಕ್ಕಳ ಪ್ರಾಣವನ್ನು ಉಳಿಸಲು ನಾನು ಬಾಂಬ್ ಅನ್ನು ಹಿಡಿದುಕೊಂಡು ಒಂದು ಕಿ.ಮೀ ದೂರದವರೆಗೆ ಓಡಿ ಎಸೆದು ಬಂದೆ ಎಂದು ಅಭಿಷೇಕ್ ಪಟೇಲ್ ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಈ ಪ್ರದೇಶದ ಸಮೀಪವೇ ಬಾಂಬ್ ಪತ್ತೆಯಾಗಿತ್ತು. ಈ ಬಾಂಬ್ ಈ ಸ್ಥಳಕ್ಕೆ ಹೇಗೆ ಬಂದಿದೆ ಎನ್ನುವುದು ತಿಳಿದು ಬಂದಿಲ್ಲ. ಈ ಶಾಲೆ ಇರುವ ಗ್ರಾಮದಲ್ಲೇ ಸೇನೆ ಶೂಟಿಂಗ್ ನಡೆಸುವ ಸ್ಥಳವಿದೆ. ಈ ಪ್ರಕರಣ ಸಂಬಂಧ ತನಿಖೆ ನಡೆಸಲಾಗುವುದು ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್ಡೇಟ್ ವರ್ಷನ್ಗಳಲ್ಲಿ ನೂತನ ಫೀಚರ್ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್ನ ಫೀಚರ್ ಒಂದಕ್ಕೆ ಬ್ರೇಕ್ ಹಾಕಿದ್ದು, ಇದು ಐಓಎಸ್ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್ ಕಂಪನಿಯು IOS ಬೆಂಬಲಿತ ಐಫೋನ್ಗಳಲ್ಲಿ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…
ಈ ಸ್ಟೋರಿನಾ ಮೊದಲ ಬಾರಿ ನೋಡಿದವರಿಗೆ ಇದು ವಿಚಿತ್ರ ಎನ್ನಿಸಬಹುದು. ಆದ್ರೆ ಈ ಜೋಡಿಯ ಕೆಲಸದ ಹಿಂದೆ ಒಂದೊಳ್ಳೆ ಸಂದೇಶವಿದೆ. ಅದೇನು ಅನ್ನೋದನ್ನ ಈ ಸ್ಟೋರಿಯಲ್ಲಿ ಓದಿ. ಮುಂಬೈನ ಖಾಂಡಿವಾಲಿ ಸ್ಟೇಷನ್ನಲ್ಲಿ ವಿದ್ಯಾವಂತರಾದ, ಒಳ್ಳೆ ಕಂಪನಿಯಲ್ಲಿ ಒಳ್ಳೆ ಸಂಬಳಕ್ಕೆ ಕೆಲಸ ಮಾಡುವ ಜೋಡಿಯೊಂದು ಫೂಟ್ಪಾತ್ನಲ್ಲಿ ತಿಂಡಿ ಮಾರುತ್ತಾರೆ. ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯ ಒಳಗೆ ಫೂಟ್ಪಾತ್ನಲ್ಲಿ ತಿಂಡಿ ಮಾರಿ, ಇವರು ತಮ್ಮ ತಮ್ಮ ಕೆಲಸಕ್ಕೆ ತೆರಳುತ್ತಾರೆ. ಎಂಬಿಎ ಮಾಡಿರುವ ಈ ಜೋಡಿ ತಿಂಡಿ ಮಾಡೋ…
ಮೇಷ ರಾಶಿ ಭವಿಷ್ಯ (Wednesday, November 24, 2021) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಸರಿಯಾದ ಸಂಭಾಷಣೆ ಮತ್ತು ಸಹಕಾರ ಸಂಗಾತಿಯ ಜೊತೆಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ…
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು…
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…