ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಕೆಲವೊಂದು ಸಾರಿ ಪೋಲಿಸ್’ರ ಬಗ್ಗೆ ಅದರಲ್ಲೂ ಪೋಲಿಸ್ ಪೇದೆಗಳ ಬಗ್ಗೆ ಅವಹೇಳನವಾಗಿ ಮಾತನಾಡುವುದುಂಟು.
ಆದರೆ ಕೆಲವೊಂದು ಸಮಯಗಳಲ್ಲಿ ಅದೇ ಪೊಲೀಸರು ತಮ್ಮ ಪ್ರಾಣವನ್ನು ಲೆಕ್ಕಿಸದೆ, ಪ್ರಾಣವನ್ನೇ ಪಣಕ್ಕಿಟ್ಟು ಜನರನ್ನು ರಕ್ಷಿಸುತ್ತಾರೆ. ಹೌದು, ಇದೇ ತರ ಘಟನೆಯೊಂದು ಮಧ್ಯಪ್ರದೇಶದ ಚಿತೋರ ಎಂಬ ಹಳ್ಳಿಯಲ್ಲಿ ನಡೆದಿದೆ.
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಅಭಿಷೇಕ್ ಪಟೇಲ್ ಬಾಂಬ್ ಹೊತ್ತುಕೊಂಡು ಓಡಿದ ಪೊಲೀಸ್ ಪೇದೆ.ಶುಕ್ರವಾರ ಮಧ್ಯಪ್ರದೇಶದ, ಚಿತೋರ ಎಂಬ ಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ನಡೆದ ಘಟನೆಯಾದರೂ ಏನು ಗೊತ್ತಾ..!
ಮಧ್ಯಪ್ರದೇಶದ ಚಿತೋರಾದಲ್ಲಿರುವ ಸರ್ಕಾರಿ ಶಾಲೆಯ ಬಳಿ ಶುಕ್ರವಾರ ಬಾಂಬ್ ಪತ್ತೆಯಾಗಿತ್ತು. ಶಾಲಾ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ವಿಚಾರ ತಿಳಿದು ಪೊಲೀಸರ ಜೊತೆ ಕಾನ್ ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅಭಿಷೇಕ್ ಪಟೇಲ್ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.
ನಿಜವಾದ ಸಿಂಗಂ ಅಂದ್ರೆ ಈ ಅಭಿಷೇಕ್ ಪಟೇಲ್..!
ಬಾಂಬ್ ನೋಡಿದ ಕೂಡಲೇ ಪೊಲೀಸರು ಶಾಲೆಯನ್ನು ಮುಚ್ಚುವಂತೆ ಹೇಳಿದರು. ಈ ವೇಳೆ ಬಾಂಬ್ ನಿಷ್ಕ್ರಿಯ ದಳ ಸಹ ಸ್ಥಳಕ್ಕೆ ಆಗಮಿಸಿರಲಿಲ್ಲ. ವಿಚಾರ ತಿಳಿದು ಮಾಧ್ಯಮಗಳು ಸ್ಥಳಕ್ಕೆ ಆಗಮಿಸಿದವು. ಈ ಸಂದರ್ಭದಲ್ಲಿ ಎಲ್ಲರೂ ನೋಡುತ್ತಿದ್ದಂತೆ 40 ವರ್ಷದ ಅಭಿಷೇಕ್ ಪಟೇಲ್ 12 ಇಂಚು ಉದ್ದ ಹಾಗೂ 10ಕೆ.ಜಿ ತೂಕದ ಬಾಂಬನ್ನು ಹೊತ್ತುಕೊಂಡು ಓಡಲು ಆರಂಭಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮದ ಪ್ರತಿನಿಧಿಯೊಬ್ಬರು ವಿಡಿಯೋ ಸೆರೆ ಹಿಡಿದಿದ್ದು, ಈಗ 12 ಸೆಕೆಂಡಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಕ್ಕಳ ಪ್ರಾಣ ಉಳಿಸಲು ಒಂದು ಕಿಲೋ ಮೀಟರ್ ಓಡಿದ ರಿಯಲ್ ಸಿಗಂ!
100 ಸಂಖ್ಯೆಗೆ ಕರೆ ಬಂದ ಹಿನ್ನೆಲೆಯಲ್ಲಿ ನಾವು ಶಾಲೆಗೆ ಬಂದೆವು. ಕೆಲ ತಿಂಗಳ ಹಿಂದೆ ನಡೆದ ಪೊಲೀಸ್ ಆಪರೇಷನ್ ತರಬೇತಿ ಸಮಯದಲ್ಲಿ ಬಾಂಬ್ ಸಿಡಿದರೆ ಸುಮಾರು 500 ಮೀಟರ್ ವ್ಯಾಪ್ತಿಯ ಪ್ರದೇಶಗಳಿಗೆ ಹಾನಿ ಆಗುತ್ತದೆ ಎಂದು ತಿಳಿಸಿದ್ದರು.
ಹೀಗಾಗಿ ಮಕ್ಕಳ ಪ್ರಾಣವನ್ನು ಉಳಿಸಲು ನಾನು ಬಾಂಬ್ ಅನ್ನು ಹಿಡಿದುಕೊಂಡು ಒಂದು ಕಿ.ಮೀ ದೂರದವರೆಗೆ ಓಡಿ ಎಸೆದು ಬಂದೆ ಎಂದು ಅಭಿಷೇಕ್ ಪಟೇಲ್ ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಈ ಪ್ರದೇಶದ ಸಮೀಪವೇ ಬಾಂಬ್ ಪತ್ತೆಯಾಗಿತ್ತು. ಈ ಬಾಂಬ್ ಈ ಸ್ಥಳಕ್ಕೆ ಹೇಗೆ ಬಂದಿದೆ ಎನ್ನುವುದು ತಿಳಿದು ಬಂದಿಲ್ಲ. ಈ ಶಾಲೆ ಇರುವ ಗ್ರಾಮದಲ್ಲೇ ಸೇನೆ ಶೂಟಿಂಗ್ ನಡೆಸುವ ಸ್ಥಳವಿದೆ. ಈ ಪ್ರಕರಣ ಸಂಬಂಧ ತನಿಖೆ ನಡೆಸಲಾಗುವುದು ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು
ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…
ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…
ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.