ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್ಗೆ ರ್ತಾರಾ-ಚಿಂತನೆ ಮಾಡಲಿ

ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್ಗೆ ರ್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು.
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಇತ್ತೀಚೆಗೆ ಶಾಸಕ ರಮೇಶ್ಕುಮಾರ್ ಹೇಳಿಕೆ ನೀಡಿ, ಸಿದ್ದರಾಮಯ್ಯ ಕೋಲಾರಕ್ಕೆ ಬಂದರೆ ವರ್ತೂರು ಪ್ರಕಾಶ್ ಅಡ್ರೆಸ್ಗೆ ಇರಲ್ಲ ಎಂದು ಹೇಳಿದ್ದರ ವಿರುದ್ದ ಮಾತನಾಡಿ, ಶ್ರೀನಿವಾಸಪುರ,ಬಂಗಾರಪೇಟೆಯವರನ್ನಲ್ಲ, ಕೋಲಾರಕ್ಷೇತ್ರದ 5 ಸಾವಿರ ಜನಸೇರಿಸಿ ಸಮಾವೇಶ ಮಾಡಿ ತೋರಿಸಿ, ಎಂದು ಸವಾಲೆಸೆದರು.

ಕೋಲಾರ ಕ್ಷೇತ್ರದ ಚಿಂತೆಯನ್ನು ಘಟಬಂಧನ್ ನಾಯಕರು ಬಿಟ್ಟು ಅವರವರ ಕ್ಷೇತ್ರಗಳಲ್ಲಿ ಅವರುಗಳು ಮೊದಲು ಗೆಲ್ಲುತ್ತಾರಾ ಎಂಬುದರ ಬಗ್ಗೆ ಚಿಂತನೆ ಮಾಡಲಿ ಎಂದು ಛೇಡಿಸಿ, ಈಗಾಗಲೇ ಕೆ.ವೈ.ನಂಜೇಗೌಡ ಒಂದು ಹೆಜ್ಜೆ ಹೊರಗಿಟ್ಟಿದ್ದಾರೆ, ಬಂಗಾರಪೇಟೆಯಲ್ಲಿ ಎಸ್.ಎನ್.ನಾರಾಯಣಸ್ವಾಮಿ, ಶ್ರೀನಿವಾಸಪುರದಲ್ಲಿ ರಮೇಶ್ಕುಮಾರ್ಗೆ ಸೋಲು ಕಟ್ಟಿಟ್ಟ ಬುತ್ತಿ ಎಂದರು.
ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಕೆಲಸ ಮಾಡುವವರೇ ಇಲ್ಲ,ಹಳ್ಳಿಗಳಿಗೆ ಪ್ರವಾಸ ಮಾಡಲು ಘಟಬಂಧನ್ ನಾಯಕರಿಗೆ ಸಮಯ ಇಲ್ಲದಿರುವಾಗ ಸಿದ್ದರಾಮಯ್ಯ ಪರ ಕೆಲಸ ಮಾಡುವವರು ಯಾರು ಎಂದು ಪ್ರಶ್ನಿಸಿದರು.
ಶಾಸಕ ರಮೇಶ್ಕುಮಾರ್ಗೆ ಬಾಯಿ ಹಿಡಿತವಿಲ್ಲ, ಸಿದ್ದರಾಮಯ್ಯ ರವರು ಕೋಲಾರದಲ್ಲಿ ಸ್ಪರ್ಧೆ ಮಾಡಿದರೆ ನಾನು ಅಡ್ರೆಸ್ ಗೆ ಇರುವುದಿಲ್ಲ ಎಂದಿದ್ದಾರೆ ಅದು ಅವರ ಘನತೆಗೆ ತಕ್ಕ ಮಾತಲ್ಲ ವಾಸ್ತವವಾಗಿ ಸಿದ್ದರಾಮಯ್ಯ ನವರನ್ನು ಕೋಲಾರಕ್ಕೆ ಕರೆತರುವುದರಿಂದ ಅದು ನನ್ನ ಗೆಲುವಿನ ಮೊದಲ ಮೆಟ್ಟಿಲಾಗಲಿದೆ, ಅದಕ್ಕೆ ರಮೇಶ್ಕುಮಾರ್ಗೆ ಮಾಧ್ಯಮದ ಮೂಲಕ ಧನ್ಯವಾದ ತಿಳಿಸುವೆ ಎಂದರು.

ರಾಜಕೀಯ ಲೆಕ್ಕಾಚಾರದ ಪ್ರಕಾರ ಕ್ಷೇತ್ರದ ಮತದಾರರ ಸಂಖ್ಯೆ 2 ಲಕ್ಷ 30 ಸಾವಿರ ಇದ್ದು, ಅಲ್ಪಸಂಖ್ಯಾತರ ಮತಗಳು 50 ಸಾವಿರ, ,ಹಿಂದೂಗಳ ಮತ 1 ಲಕ್ಷ 80 ಸಾವಿರ ಇದರಲ್ಲಿ ಕನಿಷ್ಟ ಐದು ಸಾವಿರ ಜನರನ್ನು ಕಾಸು ನೀಡದೆ, ಬೇರೆ ಕ್ಷೇತ್ರದ ಜನರನ್ನು ಸೇರಿಸದೆ ಕೇವಲ ಕೋಲಾರ ವಿಧಾನ ಸಭಾಕ್ಷೇತ್ರದ ಜನರನ್ನು ಮಾತ್ರ ಸೇರಿಸಿ ಸಮಾವೇಶ ನಡೆಸಿದರೆ ಆಗ ಘಟಬಂಧನ್ ನಾಯಕರುನ್ನು ಒಪುö್ಪತ್ತೇನೆ ಎಂದರು.
ಬಿ.ಜೆ.ಪಿ ಸರ್ಕಾರದ ಅಭಿವೃದ್ಧಿ ಕೆಲಸಗಳು,ಸ್ಥಳೀಯ ಶಾಸಕರ ವಿಫಲತೆ,ಸದಾ ಸಂಘಟನೆಯಲ್ಲಿ ತೊಡಗಿರುವ ತಮಗೆ ಕನಿಷ್ಠ 50 ಸಾವಿರ ಮತಗಳ ಅಂತರದಲ್ಲಿ ಗೆಲವು ಶತಸಿದ್ಧವೆಂದರು. ಒಂದು ವೇಳೆ ಜನವರಿ 9 ರಂದು ಸಿದ್ದರಾಮಯ್ಯ ನವರು ಕೋಲಾರಕ್ಕೆ ಬರುವುದು ನಿಶ್ಚಿತವಾದರೆ ಅಂದೇ ತಾವು ನನ್ನ ಬಲ ಪ್ರದರ್ಶನ ಮಾಡುವುದಾಗಿ ಘೋಷಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…
![]()
ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…
ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…
ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಕ್ಯಾರವ್ಯಾನ್ ಖರೀದಿಸಿದ್ದು, ಅದರ ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ. ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…
ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.