ಸುದ್ದಿ

5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

33

ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ.

ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ ಅಪಾರ್ಟ್‌ಮೆಂಟ್ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂಬ ಚಿಂತನೆ ನಡೆದಿದೆ. ಈ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಚೆನ್ನೈನಲ್ಲಿ ವಿಕೋಪ: ಈಗಾಗಲೇ ನೆರೆಯ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗಿ ಸಮಸ್ಯೆಯಾಗಿತ್ತು. ಈಗಲೂ ಅಲ್ಲಿನ ಜನ ನೀರಿಗಾಗಿ ದಿನಗಟ್ಟಲೇ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಗ್ರಾಂ. ಬಂಗಾರಕ್ಕಿಂತಲೂ ನೀರಿನ ದರವೇ ಅಧಿಕ ಎಂಬ ಮಾತೂ ಚಾಲ್ತಿಯಲ್ಲಿದೆ. ಹೀಗಾಗಿ ಬೆಂಗಳೂರಿಗೆ ಮುಂದೆ ಇಂಥ ಪರಿಸ್ಥಿತಿ ಬರುವುದು ಬೇಡ ಎಂಬ ಕಾರಣಕ್ಕಾಗಿ ಈ ಕುರಿತು ಸರ್ಕಾರ ಚಿಂತನೆ ನಡೆಸಿದೆ.

ಕೇಪ್‌ಟೌನ್‌ ಉದಾಹರಣೆ : ದಕ್ಷಿಣ ಆಫ್ರಿಕಾದ ಪ್ರಮುಖ ನಗರಿ ಕೇಪ್‌ಟೌನ್‌ನಲ್ಲಿ 2017ರಲ್ಲಿ ಇಂಥದ್ದೇ ಪರಿಸ್ಥಿತಿ ಉದ್ಭವವಾಗಿತ್ತು. ಇಡೀ ನಗರ ಡ್ರೈ ಸ್ಥಿತಿಗೆ ತಲುಪಿತ್ತು. ಒಂದು ಬಕೆಟ್ ನೀರಿಗೂ ಪಡಬಾರದ ಕಷ್ಟ ಅನುಭವಿಸಿತ್ತು.

ಏಕೆ ಈ ಕ್ರಮ?
ಜೂ.5 ರಂದೇ ಮುಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಮಾಡುತ್ತದೆ ಎಂದು ಹೇಳಲಾಗಿತ್ತಾದರೂ, ಇದುವರೆಗೆ ಸರಿಯಾಗಿ ಮಳೆಯೇ ಬಂದಿಲ್ಲ. ಅಲ್ಲದೆ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಕೆಆರ್‌ಎಸ್‌ ಜಲಾನಯ ಪ್ರದೇಶದ ನಾಲ್ಕೂ ಜಲಾಶಯಗಳಿಗೂ ನೀರು ಬಂದಿಲ್ಲ. ಜೂನ್‌ ಮುಗಿಯುತ್ತಾ ಬಂದಿದ್ದರೂ, ಸರಿಯಾಗದ ಮಳೆಯಿಂದಾಗಿ ಜನ ಸಂಕಷ್ಟಕ್ಕೆ ಈಡಾಗಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ಕೆಆರ್‌ಎಸ್‌, ಕಬಿನಿ ಜಲಾಶಯದಿಂದ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವುದು ಕಷ್ಟವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಕಾಲದಲ್ಲೂ ಈ ಜನ ವರ್ಷ ಪೂರ್ತಿ ನೀರಿನಲ್ಲೇ ವಾಸ ಮಾಡುತ್ತಾರೆ!

    ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.

  • ಸುದ್ದಿ

    ಬಾರಿ ಟ್ರಾಫಿಕ್ ದಂಡದಿಂದ ಆಗುತ್ತಿರುವ ಬದಲಾವಣೆಗಳೇನು ಗೊತ್ತಾ..?

    ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…

  • ಸಿನಿಮಾ

    ಟಾಲಿವುಡ್ ಸ್ಟಾರ್ ಮಹೇಶ್ ಬಾಬು ಚಿತ್ರದ ಆಫರ್ ತಿರಸ್ಕರಿಸಿದ ರಿಯಲ್ ಸ್ಟಾರ್?ಈ ಸುದ್ದಿ ನೋಡಿ

    ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ. ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ…

  • ಸುದ್ದಿ

    ಅಂದ ಹೆಚ್ಚಿಸಿಕೊಳ್ಳಲು ಹೋದ ವೈದ್ಯೆ ಆಸ್ಪತ್ರೆ ಪಾಲು ….! ಬ್ಯೂಟಿಪಾರ್ಲರ್​ಗೆ ಹೋಗುವ ಹೆಂಗಸರೇ ಎಚ್ಚರ…ಎಚ್ಚರ!!

    ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್​ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್​ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್​ ರಸ್ತೆಯಲ್ಲಿರುವ ಕ್ಲಬ್​ ಸಿಟ್ರಸ್​​ ಸಲೂನ್​ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್​ಗೆ ತೆರಳಿದ್ದರು. ಈ ವೇಳೆ…

  • ಉಪಯುಕ್ತ ಮಾಹಿತಿ

    ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ,ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…

    ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ

    ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…