News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

35

ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ.

ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ ಅಪಾರ್ಟ್‌ಮೆಂಟ್ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂಬ ಚಿಂತನೆ ನಡೆದಿದೆ. ಈ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಚೆನ್ನೈನಲ್ಲಿ ವಿಕೋಪ: ಈಗಾಗಲೇ ನೆರೆಯ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗಿ ಸಮಸ್ಯೆಯಾಗಿತ್ತು. ಈಗಲೂ ಅಲ್ಲಿನ ಜನ ನೀರಿಗಾಗಿ ದಿನಗಟ್ಟಲೇ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಗ್ರಾಂ. ಬಂಗಾರಕ್ಕಿಂತಲೂ ನೀರಿನ ದರವೇ ಅಧಿಕ ಎಂಬ ಮಾತೂ ಚಾಲ್ತಿಯಲ್ಲಿದೆ. ಹೀಗಾಗಿ ಬೆಂಗಳೂರಿಗೆ ಮುಂದೆ ಇಂಥ ಪರಿಸ್ಥಿತಿ ಬರುವುದು ಬೇಡ ಎಂಬ ಕಾರಣಕ್ಕಾಗಿ ಈ ಕುರಿತು ಸರ್ಕಾರ ಚಿಂತನೆ ನಡೆಸಿದೆ.

ಕೇಪ್‌ಟೌನ್‌ ಉದಾಹರಣೆ : ದಕ್ಷಿಣ ಆಫ್ರಿಕಾದ ಪ್ರಮುಖ ನಗರಿ ಕೇಪ್‌ಟೌನ್‌ನಲ್ಲಿ 2017ರಲ್ಲಿ ಇಂಥದ್ದೇ ಪರಿಸ್ಥಿತಿ ಉದ್ಭವವಾಗಿತ್ತು. ಇಡೀ ನಗರ ಡ್ರೈ ಸ್ಥಿತಿಗೆ ತಲುಪಿತ್ತು. ಒಂದು ಬಕೆಟ್ ನೀರಿಗೂ ಪಡಬಾರದ ಕಷ್ಟ ಅನುಭವಿಸಿತ್ತು.

ಏಕೆ ಈ ಕ್ರಮ?
ಜೂ.5 ರಂದೇ ಮುಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಮಾಡುತ್ತದೆ ಎಂದು ಹೇಳಲಾಗಿತ್ತಾದರೂ, ಇದುವರೆಗೆ ಸರಿಯಾಗಿ ಮಳೆಯೇ ಬಂದಿಲ್ಲ. ಅಲ್ಲದೆ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಕೆಆರ್‌ಎಸ್‌ ಜಲಾನಯ ಪ್ರದೇಶದ ನಾಲ್ಕೂ ಜಲಾಶಯಗಳಿಗೂ ನೀರು ಬಂದಿಲ್ಲ. ಜೂನ್‌ ಮುಗಿಯುತ್ತಾ ಬಂದಿದ್ದರೂ, ಸರಿಯಾಗದ ಮಳೆಯಿಂದಾಗಿ ಜನ ಸಂಕಷ್ಟಕ್ಕೆ ಈಡಾಗಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ಕೆಆರ್‌ಎಸ್‌, ಕಬಿನಿ ಜಲಾಶಯದಿಂದ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವುದು ಕಷ್ಟವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    IMA ವಿರುದ್ಧ 11 ಸಾವಿರಕ್ಕು ಹೆಚ್ಚು ದಾಕಲಾದ ಕಂಪ್ಲೆಂಟ್…..!

    ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್‍ಗಟ್ಟೆ ಕಂಪ್ಲೆಂಟ್‍ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್‍ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…

  • ಉಪಯುಕ್ತ ಮಾಹಿತಿ

    ಸರ್ಕಾರದಿಂದ ಮಹಿಳೆಯರಿಗೆ 3 ಲಕ್ಷ ಹಣದ ಭಾಗ್ಯ.!ಪಡೆದುಕೊಳ್ಳೋದು ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ. ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ. ಏನಿದು ‘ಉದ್ಯೋಗಿನಿ’ ಯೋಜನೆ.. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ…

  • ಸುದ್ದಿ

    ಸೆಕೆಯನ್ನು ತಡೆಯಲಾಗದೆ ಬೆತ್ತಲೆಯಾಗಿ Scooty ಓಡಿಸಿಕೊಂಡು ರಸ್ತೆಗಿಳಿದ…!

    ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೀ-ಕಾಫಿ ಕುಡಿಯುವ ಮುಂಚೆ ನೀರು ಕುಡಿದರೆ ಏನಾಗುತ್ತೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು.  ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…

  • ಸುದ್ದಿ

    ಹಾಸ್ಟೆಲ್‍ನಲ್ಲಿ ಹುಡ್ಗೀರು ಸ್ನಾನ ಮಾಡೋದನ್ನು ಕದ್ದು ನೋಡಲು ಬಂದವ ಜೈಲು ಸೇರಿದ ಆರೋಪಿ……!

    ಹಾಸ್ಟೆಲ್‍ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್‍ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…

  • ಸುದ್ದಿ

    ಗ್ರಾಹಕರಿಗೊಂದು ಸಿಹಿ ಸುದ್ದಿ ನಿಡಿದ SBI ಬ್ಯಾಂಕ್….!

    ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್‌ ಮತ್ತು ಎನ್‌ಇಎಫ್‌ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್‌ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್‌ಬಿಐ ಜು.1ರಿಂದ ಅನ್ವಯವಾಗುವಂತೆ ಎನ್‌ಇಎಫ್‌ಟಿ ಮತ್ತು ಆರ್‌ಟಿಜಿಎಸ್‌ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್‌ ಮತ್ತು ಎನ್‌ಇಎಫ್‌ಟಿ ಮೂಲಕ…