ಆರೋಗ್ಯ

ಪಾರ್ಶ್ವವಾಯು ದೇಹದ ಭಾಗಗಳನ್ನು ನಿತ್ರಾಣಗೊಳಿಸುವ ಭಯಾನಕ ಕಾಯಿಲೆ..!ಇದನ್ನು ಹೇಗೆ ತಡೆಗಟ್ಟುವುದು ಎಂಬುದನ್ನು ತಿಳಿಯಲು ಇದನ್ನು ಓದಿ …

2078

ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.

ಪಾರ್ಶ್ವವಾಯು ಹೇಗೆ ಉಂಟಾಗುತ್ತದೆ:-

ಮೆದುಳಿಗೆ ಸಾಗುವ ರಕ್ತದ ಪರಿಚಲನೆಯಲ್ಲಿ ಹಠಾತ್‌ ಆಗಿ ಕೊರತೆಯುಂಟಾದಾಗ ಈ ರೀತಿಯ ದಾಳಿ ಉಂಟಾಗುತ್ತದೆ. ಅಪಧಮನಿ ಅಥವಾ ಶುದ್ಧ ರಕ್ತನಾಳ ಗಳಲ್ಲಿ ಅಡ್ಡಿ ಸಂಭವಿಸಿದಾಗ ಮೆದುಳಿಗೆ ಹರಿಯುತ್ತಿದ್ದ ರಕ್ತ ನಿಲ್ಲುತ್ತದೆ. ಹೃದಯದ ಅಪಧಮನಿಗಳಲ್ಲಿ ಕೊಬ್ಬು ಶೇಖರಣೆಯಾಗಿದ್ದಾಗಲೂ ರಕ್ತದ ಹರಿವಿಗೆ ತಡೆಯುಂಟಾಗಿ, ರಕ್ತದ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಇಂಥಹ ಸಂದರ್ಭದಲ್ಲಿ ಮೆದುಳಿನ ರಕ್ತನಾಳಗಳು ಒಡೆಯುವ ಸಂಭವವಿರುತ್ತದೆ. ಅಥವಾ ಮೆದುಳಿನಲ್ಲಿಯೇ ರಕ್ತನಾಳ ಒಡೆದು ರಕ್ತ ಸೋರುತ್ತಿದ್ದರೆ ಪಾರ್ಶ್ವವಾತ ಕಾಣಿಸಿಕೊಳ್ಳುತ್ತದೆ.

ಪಾರ್ಶ್ವವಾತಕ್ಕೆ ಈಡಾದ ವ್ಯಕ್ತಿ ತನ್ನ ಯಾವುದಾದರೂ ಒಂದು ಚಟುವಟಿಕೆಯನ್ನು ಕಳೆದುಕೊಳ್ಳುತ್ತಾನೆ. ಮಾತು ನಿಲ್ಲಬಹುದು, ನೆನಪಿನ ಶಕ್ತಿಯೇ ಹೊರಟುಹೋಗಬಹುದು ಅಥವಾ ಒಂದು ಬದಿಯ ದೇಹವೇ ಬಲಹೀನಗೊಳ್ಳಬಹುದು. ಹೃದಯಾಘಾತಕ್ಕೆ ಹೇಗೆ ತುರ್ತು ಚಿಕಿತ್ಸೆಯ ಅವಶ್ಯಕತೆಯಿರುವುದೋ.. ಅಷ್ಟೇ ತುರ್ತು ಚಿಕಿತ್ಸೆಯ ಅವಶ್ಯಕತೆ ಪಾರ್ಶ್ವವಾತಕ್ಕೂ ಇರುತ್ತದೆ.

ಪಾರ್ಶ್ವವಾಯು ಲಕ್ಷಣಗಳು:-

ಹಠಾತ್ ಆಗಿ ಕಾಲು ಅಥವಾ ಬುಜ ಮರಗಟ್ಟಿದಂತಾಗುವುದು. ಮಾತು ನಿಂತುಹೋಗುವುದು, ದೇಹದ ನಿರ್ದಿಷ್ಟ ಅಂಗ ಬಲಹೀನಗೊಳ್ಳುವುದು, ನಡೆಯುಲು ಸಾಧ್ಯವಾಗದಷ್ಟು ಬಲಹೀನಗೊಳ್ಳುವುದು.

 

ಸ್ವಾದೀನ ತಪ್ಪಿದಂತಾಗಿ ಎಚ್ಚರ ತಪ್ಪುವುದು, ತೀವ್ರ ತಲೆನೋವು ಒಮ್ಮೆಲೇ ಬಂದು ಕಣ್ಣು ಕಾಣದಂತಾಗುವುದು ಮಂಪರು ಅಥವಾ ವಾಕರಿಕೆ ಬಂದಂತಾಗುವುದು ಇವೆಲ್ಲ ಪಾರ್ಶ್ವವಾಯು ರೋಗದ ಲಕ್ಷಣಗಳು.

ಪಾರ್ಶ್ವವಾಯುವನ್ನು ತಡೆಯಲು ಸಲಹೆಗಳು:- 

ಕಡಿಮೆ ಕೊಬ್ಬಿರುವ ಆಹಾರದ ಸೇವನೆ.
ಆಹಾರದಲ್ಲಿ ಹಣ್ಣು, ತರಕಾರಿಗಳನ್ನು ಹೆಚ್ಚಾಗಿ ಬಳಸುವುದು.

ತೂಕವನ್ನು ನಿಯಂತ್ರಣದಲ್ಲಿಡುವುದು.

ಒತ್ತಡದ ಬದುಕಿಗೆ ಆಗಾಗ ಸ್ಪಲ್ಫ ರಿಲೀಫ್‌ ನೀಡುತ್ತಿರಿ.

ರಕ್ತದೊತ್ತಡವನ್ನು ಆಗಾಗ ಪರೀಕ್ಷಿಸುತ್ತಿರಿ, ವೈದ್ಯರ ಸಲಹೆಯಂತೆ ಔಷಧ ತೆಗೆದುಕೊಳ್ಳಿ.

ರಕ್ತಪರೀಕ್ಷೆ ಮಾಡಿಸಿಕೊಂಡು, ಕೊಲೆಸ್ಟ್ರಾಲ್‌ ಮಟ್ಟ ಅತೀ ಹೆಚ್ಚು ಇದ್ದರೆ, ಅದನ್ನು ಆರೋಗ್ಯಕರ ರೀತಿಯಲ್ಲಿ ಕಡಿಮೆ ಮಾಡುವ ಬಗ್ಗೆ ವೈದ್ಯರ ಸಲಹೆ ಪಡೆದುಕೊಳ್ಳಿ. ಧೂಮಪಾನ ಮಾಡದಿರಿ.

.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಭವಿಷ್ಯ

    ಈ 4 ರಾಶಿಯಲ್ಲಿ ಜನಿಸಿದ ಯುವಕ ಮತ್ತು ಯುವತಿಯರು ಸುಂದವರಾಗಿ ಇರುತ್ತಾರೆ..! ನಿಮ್ಮ ರಾಶಿಯು ಇದೆಯಾ ನೋಡಿ?

    ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…

  • ಸುದ್ದಿ

    ರಾಜಕಾರಣಿಯಾ ಕಚೇರಿ ಮುಂದೆಯೆ ಗೊಬ್ಬರ ಸುರಿದ ಭೂಪ….ಕಾರಣವೇನು ಗೊತ್ತಾ?

    ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ. ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ…

  • ಸುದ್ದಿ

    18ನೇ ವೆಡ್ಡಿಂಗ್ ಡೇ ವಾರ್ಷಿಕೋತ್ಸವದಲ್ಲಿ ಸುದೀಪ್ ದಂಪತಿಯ ಸಂಭ್ರಮ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…

  • ಸುದ್ದಿ

    ವಿಶೇಷ ರೀತಿಯಲ್ಲಿ ಗಣೇಶನ ವಿಸರ್ಜನೆ ಮಾಡಿದ ಕೋಲಾರದ ಜನ..ಕಣ್ಮನ ಸೆಳೆದ ಆ ಮೆರವಣಿಗೆ ಹೇಗಿತ್ತು ಗೊತ್ತ.?

    ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…

  • ಸಿನಿಮಾ

    ಶೆಟ್ಟರ ಕಥೆಯಲ್ಲಿ, ಬರವಣಿಗೆಯೇ ರಾಜ.. ಗರುಡ ಗಮನ ವೃಷಭ ವಾಹನ ಚಿತ್ರದ ವಿಮರ್ಶೆ

    ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ‌ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ‌ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ‌ ಮಿಡಿಯುವವರು,…

  • ವಿಸ್ಮಯ ಜಗತ್ತು

    ಇವರು ನಮ್ಮ ಇಂಡಿಯನ್ ರಿಯಲ್ ಸ್ಪೈಡರ್ ಮ್ಯಾನ್!ಅಲಿಯಾಸ್ ಕೋತಿ ರಾಜ್.ಇವರ ಸಾಹಸದ ಬಗ್ಗೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ!

    ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!