ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ ಐದನೇ ತರಗತಿಯ ತನಕ ಮಾತ್ರ ಶಾಲೆಗಳು ಇದ್ದ ಕಾರಣ ಹೈ ಸ್ಕೂಲ್ ಓದಲು ದಿನಾಲೂ ಆರು ಕಿಲೋ ಮೀಟರ್ ನಡೆದುಕೊಂಡು ಹೋಗಬೇಕಾಗಿತ್ತು. ಇನ್ನು ಮುಸ್ತಫಾ ಅವರ ತಂದೆ ಮತ್ತು ತಾಯಿ ಕಾಫಿ ತೋಟದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದರು, ಇನ್ನು ತಂದೆ ತಾಯಿಯ ಜೊತೆ ಕೆಲಸಕ್ಕೆ ಹೋಗುತ್ತಿದ್ದ ಮುಸ್ತಫಾ ಆರನೇ ತರಗತಿಯಲ್ಲಿ ಫೇಲ್ ಆಗಿ ಮನೆಯಲ್ಲಿ ಇದ್ದ.

ಕೆಲವು ಸಮಯದ ನಂತರ ಒಬ್ಬ ಒಳ್ಳೆಯ ಶಿಕ್ಷಕರ ಕಣ್ಣು ಈ ಮುಸ್ತಫಾನ ಮೇಲೆ ಬೀಳುತ್ತದೆ ಮತ್ತು ಆ ಶಿಕ್ಷಕ ಮುಸ್ತಫಾನನ್ನ ಮನೆಗೆ ಕರೆದುಕೊಂಡು ಹೋಗಿ ಪಾಠವನ್ನ ಹೇಳಿಕೊಡುತ್ತಿದ್ದರು ಮತ್ತು ಇದರಿಂದ ಮುಸ್ತಫಾ ಹತ್ತನೇ ತರಗತಿಯಲ್ಲಿ ಒಳ್ಳೆಯ ಅಂಕ ಪಡೆದು ಪಾಸ್ ಆದನು. ನಂತರ ಹೇಗೋ ಕಷ್ಟಪಟ್ಟು ಉನ್ನತ ಶಿಕ್ಷಣವನ್ನ ಮಾಡಿದ ಮುಸ್ತಫಾ ಇಂಜಿನಿಯರಿಂಗ್ ಓದುತ್ತಾನೆ ಮತ್ತು ಮತ್ತು ಒಳ್ಳೆಯ ಪ್ರತಿಭೆ ಇವರಲ್ಲಿ ಇದ್ದ ಕಾರಣ ಮುಸ್ತಫಾಗೆ ಅಮೇರಿಕಾದಲ್ಲಿ ಉದ್ಯೋಗ ಸಿಕ್ಕಿತು. ಸುಮಾರು ಐದು ವರ್ಷ ಅಮೇರಿಕಾದಲ್ಲಿ ಕೆಲಸ ಮಾಡಿದ ಮುಸ್ತಫಾ ತಂದೆ ತಾಯಿಯನ್ನ ಬಿಟ್ಟಿರಲು ಮನಸ್ಸಿಲ್ಲದೆ ಊರಿಗೆ ವಾಪಾಸ್ ಬಂದು ಕೆಲಸಕ್ಕಾಗಿ ಹುಡುಕಾಡುತ್ತಾನೆ, ಆದರೆ ಎಲ್ಲಿಯೂ ಕೆಲಸ ಸಿಗಲಿಲ್ಲ.
ಕೆಲಸ ಇಲ್ಲದೆ ಮನೆಯಲ್ಲಿ ಇದ್ದ ಮುಸ್ತಫಾ ಒಂದು ದಿನ ತನ್ನ ಮಾವನ ಮನೆಗೆ ಹೋಗುತ್ತಾನೆ, ಇನ್ನು ಮಾವನ ಮನೆಗೆ ಹೋದಾಗ ಮಾವ ಪಕ್ಕದಲ್ಲಿ ಇದ್ದ ಅಂಗಡಿಯಿಂದ ದೋಸೆ ಹಿಟ್ಟಿನ ಪ್ಯಾಕೆಟ್ ತಂದು ಮುಸ್ತಫಾಗೆ ದೋಸೆ ಮಾಡಿಕೊಟ್ಟರು. ಇನ್ನು ದೋಸೆ ತಿನ್ನುವಾಗ ಮುಸ್ತಫಾಗೆ ಒಂದು ಒಳ್ಳೆಯ ಉಪಾಯ ಹೊಳೆಯುತ್ತದೆ, ಹಾಗಾದರೆ ಆ ಉಪಾಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ದೋಸೆ ತಿನ್ನುವಾಗ ಮುಸ್ತಫಾಗೆ ನಾನು ಏಕೆ ದೋಸೆ ಮತ್ತು ಇಡ್ಲಿ ಹಿಟ್ಟುಗಳನ್ನ ತಯಾರಿಸಿ ಮಾರಾಟ ಮಾಡಬಾರದು ಎಂದು ಮುಸ್ತಫಾಗೆ ಅನಿಸಿತು.

ಈ ಆಲೋಚನೆ ಬಂದಿದ್ದೆ ತಡ ಮುಸ್ತಫಾ ಅವರು ತನ್ನ ಸಂಬಂಧಿಕರನ್ನ ತನ್ನ ಜೊತೆ ಸೇರಿಸಿಕೊಂಡು 25 ಸಾವಿರ ರೂಪಾಯಿಯನ್ನ ಹೂಡಿಕೆ ಮಾಡಿ ID ಅನ್ನುವ ಕಂಪನಿಯ ಹೆಸರಿನಲ್ಲಿ ದೋಸೆ ಮತ್ತು ಇಡ್ಲಿ ಹಿಟ್ಟನ್ನ ತಯಾರು ಮಾಡಲು ಶುರು ಮಾಡಿದರು. ಸ್ನೇಹಿತರೆ ID ಅಂದರೆ ಇಡ್ಲಿ ಮತ್ತು ದೋಸೆ ಎಂದು ಅರ್ಥ, ನಿರ್ದಿಷ್ಟ ಗುರಿಯನ್ನ ಇಟ್ಟುಕೊಂಡು ಅದನ್ನ ಸಾಧಿಸಲು ಕಷ್ಟಪಟ್ಟ ಮುಸ್ತಫಾ ಈಗ 10 ಸಾವಿರ ಶಾಪ್ ಗಳಿಗೆ ಇಡ್ಲಿ ಮತ್ತು ದೋಸೆ ಹಿಟ್ಟನ್ನ ಸಪ್ಲೈ ಮಾಡುತ್ತಿದ್ದು ಸುಮಾರು ಒಂದು ಸಾವಿರ ಜನರಿಗೆ ಕೆಲಸವನ್ನ ಕೊಟ್ಟಿದ್ದಾರೆ. ಮೊದಲ ವರ್ಷ ಸುಮಾರು ನೂರು ಕೋಟಿ ರೂಪಾಯಿ ವ್ಯವಹಾರ ಮಾಡಿದ ಮುಸ್ತಫಾ 2019 ರಲ್ಲಿ 400 ಕೋಟಿ ರೂಪಾಯಿ ವ್ಯವಹಾರ ಮಾಡಿ ಈಗ ಕೋಟಿ ಕೋಟಿ ಸಂಪಾದನೆಯನ್ನ ಮಾಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ. ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…
ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.
ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ. ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು…
ಗುಮ್ಮಡಿ ನರಸಯ್ಯ ಎಂಬ ವ್ಯಕ್ತಿ ನಮ್ಮ ಭಾರತ ದೇಶದಲ್ಲಿ ಒಬ್ಬರು ಒಮ್ಮೆ ರಾಜಕೀಯಕ್ಕೆ ಬಂದರೆ ಒಮ್ಮೆ ಗೆದ್ದ ನಂತರ ಮತ್ತೆ ಗೆಲ್ಲುತ್ತಾರೆ ಎಂಬ ನಂಬಿಕೆ ಇರುವುದಿಲ್ಲ. ಆದರೆ ರಾಜಕೀಯದಲ್ಲಿ ಕೆಲವರ ಅದೃಷ್ಟ ಚೆನ್ನಾಗಿದೆ. ಹೌದು.. ರಾಜಕೀಯ ಕ್ಷೇತ್ರದಲ್ಲಿ ಶಾಸಕರಾದರೆ ಮತ್ತೆ ಮತ್ತೆ ಎಂಎಲ್ ಎ ಆಗುತ್ತಾರೆ.
ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್ ಫಂಡ್ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್ಒ ಉದ್ಯೋಗಿಗಳಿಗೆ ಪಿಎಫ್ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್ ಹಣವನ್ನು ಪಡೆಯಬಹುದಾಗಿದೆ. ಇನ್ನು, ಪಿಎಫ್ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ…